Homeಅಂತರಾಷ್ಟ್ರೀಯವರ್ಜೀನಿಯಾ: ಗುಂಡಿನ ದಾಳಿ ನಡೆಸಿ 10 ಜನರ ಹತ್ಯೆ

ವರ್ಜೀನಿಯಾ: ಗುಂಡಿನ ದಾಳಿ ನಡೆಸಿ 10 ಜನರ ಹತ್ಯೆ

- Advertisement -
- Advertisement -

ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಹಾಗೂ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಶೂಟರ್ ಕೂಡ ಸಾವನ್ನಪ್ಪಿದ್ದಾನೆ ಎಂದು ಚೆಸಾಪೀಕ್ ನಗರದ ಅಧಿಕಾರಿಗಳು ಮಂಗಳವಾರ ಟ್ವೀಟ್ ಮಾಡಿದ್ದಾರೆ. “ಸ್ಯಾಮ್ಸ್ ಸರ್ಕಲ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ಸಾವುನೋವುಗಳಾಗುವಂತೆ ಗುಂಡಿನ ದಾಳಿ ನಡೆಸಿರುವುದನ್ನು ಚೆಸಾಪೀಕ್ ಪೊಲೀಸರು ಖಚಿತಪಡಿಸಿದ್ದಾರೆ. ಶೂಟರ್ ಸತ್ತಿದ್ದಾನೆ” ಎಂದು ಟ್ವೀಟರ್‌ನಲ್ಲಿ ಪ್ರತಿಕ್ರಿಯಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸ್ ಇಲಾಖೆಯ ವಕ್ತಾರರಾದ ಲಿಯೋ ಕೊಸಿನ್ಸ್ಕಿ ಅವರು ಸಂಕ್ಷಿಪ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ರಾತ್ರಿ 10 ಗಂಟೆಯ ವೇಳೆಗೆ ಗುಂಡಿನ ದಾಳಿಯ ಕುರಿತ ಮಾಹಿತಿ ಸಿಕ್ಕಿತು. ಅನೇಕ ಸಾವುನೋವುಗಳ ಸ್ಥಳಕ್ಕೆ ತಕ್ಷಣವೇ ತೆರಳಲಾಯಿತು” ಎಂದಿದ್ದಾರೆ.

“ಪೊಲೀಸರು ಆಗಮಿಸಿದ ನಂತರ ಗುಂಡಿನ ದಾಳಿ ನಿಲ್ಲಿಸಲಾಗಿದೆ ಎಂದು ಭಾವಿಸಲಾಗಿದೆ” ಎಂದು ಕೊಸಿನ್ಸ್ಕಿ ಹೇಳಿದ್ದಾರೆ. “ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗುವುದಿಲ್ಲ, ಆದರೆ ಶೂಟರ್ ಸ್ವಯಂ ಪ್ರೇರಿತ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆಯೇ ಎಂದು ಹೇಳಲೂ ಸಾಧ್ಯವಿಲ್ಲ” ಎಂದಿದ್ದಾರೆ.

ಎಷ್ಟು ಜನರು ಸತ್ತರು ಎಂಬುದು ಸ್ಪಷ್ಟವಾಗಿಲ್ಲ, ಆದರೆ ಕೊಸಿನ್ಸ್ಕಿಯವರು, “10ಕ್ಕಿಂತ ಹೆಚ್ಚು ಜನರನ್ನು ಹತ್ಯೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

“ನಮ್ಮ ಚೆಸಾಪೀಕ್‌ನ ವರ್ಜೀನಿಯಾ ಅಂಗಡಿಯಲ್ಲಿ ನಡೆದ ಈ ದುರಂತ ಘಟನೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ” ಎಂದು ವಾಲ್ಮಾರ್ಟ್ ಬುಧವಾರ ಮುಂಜಾನೆ ಟ್ವೀಟ್ ಮಾಡಿದೆ.

“ತೊಂದರೆಗೊಳಗಾದ ಜನರಿಗಾಗಿ, ಸಮುದಾಯಕ್ಕಾಗಿ, ಸಹವರ್ತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇವೆ. ನಾವು ಕಾನೂನು ಕ್ರಮ ಜರುಗಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಸಹವರ್ತಿಗಳನ್ನು ಬೆಂಬಲಿಸುವತ್ತ ನಾವು ಗಮನಹರಿಸಿದ್ದೇವೆ” ಎಂದು ವಾಲ್ಮಾರ್ಟ್ ತಿಳಿಸಿದೆ.

ವಾಲ್‌ಮಾರ್ಟ್‌ಗೆ ಸೇರಿದ ಐವರು ನಾರ್ಫೋಕ್ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೆಂಟಾರಾ ಹೆಲ್ತ್‌ಕೇರ್‌ನ ವಕ್ತಾರ ಮೈಕ್ ಕಾಫ್ಕಾ ಹೇಳಿದ್ದಾರೆ. ಅವರ ಪರಿಸ್ಥಿತಿಯ ಬಗ್ಗೆ ಸರಿಯಾದ ಮಾಹಿತಿ ದೊರೆತಿಲ್ಲ.

ವರ್ಜೀನಿಯಾ ರಾಜ್ಯದ ಸೆನೆಟರ್ ಲೂಯಿಸ್ ಲ್ಯೂಕಾಸ್, “ಅಮೆರಿಕದ ಇತ್ತೀಚಿನ ಸಾಮೂಹಿಕ ಗುಂಡಿನ ದಾಳಿಯು ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ನಡೆದಿರುವುದು ಸಂಪೂರ್ಣವಾಗಿ ಎದೆಗುಂದುವಂತೆ ಮಾಡಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿಯ ಸಮರ್ಥನೆ ಮತ್ತು ವೈಭವೀಕರಣ’ ದಿನವಾಗಿ ಆಚರಿಸಲು ತಯಾರಿ ನಡೆಸುತ್ತಿರುವ ಸರ್ಕಾರ!

“ನಮ್ಮ ದೇಶದಲ್ಲಿ ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡ ಈ ಬಂದೂಕು ಹಿಂಸಾಚಾರದ ಸಾಂಕ್ರಾಮಿಕವನ್ನು ಕೊನೆಗೊಳಿಸಲು ನಾವು ಪರಿಹಾರಗಳನ್ನು ಕಂಡುಕೊಳ್ಳುವವರೆಗೆ ನಾನು ವಿಶ್ರಾಂತಿ ಪಡೆಯುವುದಿಲ್ಲ” ಎಂದಿದ್ದಾರೆ.

ಕೊಲೊರಾಡೋದಲ್ಲಿನ ಸಲಿಂಗಿಗಳ ನೈಟ್‌ಕ್ಲಬ್‌ನಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಐದು ಜನರನ್ನು ಕೊಂದು 17 ಜನರನ್ನು ಗಾಯಗೊಳಿಸಿದ ಮೂರು ದಿನಗಳ ನಂತರ ವರ್ಜೀನಿಯಾದಲ್ಲಿ ಈ ಘಟನೆ ನಡೆದಿದೆ. ಶೂಟರ್‌ನನ್ನು ಬಂಧಿಸಲಾಗಿತ್ತು. ಟೆಕ್ಸಾಸ್‌ನ ಉವಾಲ್ಡೆಯಲ್ಲಿ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ಮಂದಿ ಸಾವಿಗೀಡಾದ ಘಟನೆ ನಡೆದಿತ್ತು. ಒಂದೇ ವರ್ಷದ ಅವಧಿಯಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ.

ಮಂಗಳವಾರದ ಗುಂಡಿನ ದಾಳಿಯು 2019ರಲ್ಲಿ ವಾಲ್‌ಮಾರ್ಟ್‌ನಲ್ಲಿ ನಡೆದ ಮತ್ತೊಂದು ಗುಂಡಿನ ದಾಳಿಯ ನೆನಪುಗಳನ್ನು ತಂದಿತು. ಮೆಕ್ಸಿಕನ್ನರನ್ನು ಗುರಿಯಾಗಿಸಿಕೊಂಡು ಬಂದೂಕುಧಾರಿಯು ಎಲ್ ಪಾಸೊದಲ್ಲಿನ ಅಂಗಡಿಯೊಂದರಲ್ಲಿ ಗುಂಡು ಹಾರಿಸಿ 22 ಜನರನ್ನು ಕೊಂದಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...