Homeಅಂತರಾಷ್ಟ್ರೀಯವರ್ಜೀನಿಯಾ: ಗುಂಡಿನ ದಾಳಿ ನಡೆಸಿ 10 ಜನರ ಹತ್ಯೆ

ವರ್ಜೀನಿಯಾ: ಗುಂಡಿನ ದಾಳಿ ನಡೆಸಿ 10 ಜನರ ಹತ್ಯೆ

- Advertisement -
- Advertisement -

ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಹಾಗೂ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಶೂಟರ್ ಕೂಡ ಸಾವನ್ನಪ್ಪಿದ್ದಾನೆ ಎಂದು ಚೆಸಾಪೀಕ್ ನಗರದ ಅಧಿಕಾರಿಗಳು ಮಂಗಳವಾರ ಟ್ವೀಟ್ ಮಾಡಿದ್ದಾರೆ. “ಸ್ಯಾಮ್ಸ್ ಸರ್ಕಲ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ಸಾವುನೋವುಗಳಾಗುವಂತೆ ಗುಂಡಿನ ದಾಳಿ ನಡೆಸಿರುವುದನ್ನು ಚೆಸಾಪೀಕ್ ಪೊಲೀಸರು ಖಚಿತಪಡಿಸಿದ್ದಾರೆ. ಶೂಟರ್ ಸತ್ತಿದ್ದಾನೆ” ಎಂದು ಟ್ವೀಟರ್‌ನಲ್ಲಿ ಪ್ರತಿಕ್ರಿಯಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸ್ ಇಲಾಖೆಯ ವಕ್ತಾರರಾದ ಲಿಯೋ ಕೊಸಿನ್ಸ್ಕಿ ಅವರು ಸಂಕ್ಷಿಪ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ರಾತ್ರಿ 10 ಗಂಟೆಯ ವೇಳೆಗೆ ಗುಂಡಿನ ದಾಳಿಯ ಕುರಿತ ಮಾಹಿತಿ ಸಿಕ್ಕಿತು. ಅನೇಕ ಸಾವುನೋವುಗಳ ಸ್ಥಳಕ್ಕೆ ತಕ್ಷಣವೇ ತೆರಳಲಾಯಿತು” ಎಂದಿದ್ದಾರೆ.

“ಪೊಲೀಸರು ಆಗಮಿಸಿದ ನಂತರ ಗುಂಡಿನ ದಾಳಿ ನಿಲ್ಲಿಸಲಾಗಿದೆ ಎಂದು ಭಾವಿಸಲಾಗಿದೆ” ಎಂದು ಕೊಸಿನ್ಸ್ಕಿ ಹೇಳಿದ್ದಾರೆ. “ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗುವುದಿಲ್ಲ, ಆದರೆ ಶೂಟರ್ ಸ್ವಯಂ ಪ್ರೇರಿತ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆಯೇ ಎಂದು ಹೇಳಲೂ ಸಾಧ್ಯವಿಲ್ಲ” ಎಂದಿದ್ದಾರೆ.

ಎಷ್ಟು ಜನರು ಸತ್ತರು ಎಂಬುದು ಸ್ಪಷ್ಟವಾಗಿಲ್ಲ, ಆದರೆ ಕೊಸಿನ್ಸ್ಕಿಯವರು, “10ಕ್ಕಿಂತ ಹೆಚ್ಚು ಜನರನ್ನು ಹತ್ಯೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

“ನಮ್ಮ ಚೆಸಾಪೀಕ್‌ನ ವರ್ಜೀನಿಯಾ ಅಂಗಡಿಯಲ್ಲಿ ನಡೆದ ಈ ದುರಂತ ಘಟನೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ” ಎಂದು ವಾಲ್ಮಾರ್ಟ್ ಬುಧವಾರ ಮುಂಜಾನೆ ಟ್ವೀಟ್ ಮಾಡಿದೆ.

“ತೊಂದರೆಗೊಳಗಾದ ಜನರಿಗಾಗಿ, ಸಮುದಾಯಕ್ಕಾಗಿ, ಸಹವರ್ತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇವೆ. ನಾವು ಕಾನೂನು ಕ್ರಮ ಜರುಗಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಸಹವರ್ತಿಗಳನ್ನು ಬೆಂಬಲಿಸುವತ್ತ ನಾವು ಗಮನಹರಿಸಿದ್ದೇವೆ” ಎಂದು ವಾಲ್ಮಾರ್ಟ್ ತಿಳಿಸಿದೆ.

ವಾಲ್‌ಮಾರ್ಟ್‌ಗೆ ಸೇರಿದ ಐವರು ನಾರ್ಫೋಕ್ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೆಂಟಾರಾ ಹೆಲ್ತ್‌ಕೇರ್‌ನ ವಕ್ತಾರ ಮೈಕ್ ಕಾಫ್ಕಾ ಹೇಳಿದ್ದಾರೆ. ಅವರ ಪರಿಸ್ಥಿತಿಯ ಬಗ್ಗೆ ಸರಿಯಾದ ಮಾಹಿತಿ ದೊರೆತಿಲ್ಲ.

ವರ್ಜೀನಿಯಾ ರಾಜ್ಯದ ಸೆನೆಟರ್ ಲೂಯಿಸ್ ಲ್ಯೂಕಾಸ್, “ಅಮೆರಿಕದ ಇತ್ತೀಚಿನ ಸಾಮೂಹಿಕ ಗುಂಡಿನ ದಾಳಿಯು ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ನಡೆದಿರುವುದು ಸಂಪೂರ್ಣವಾಗಿ ಎದೆಗುಂದುವಂತೆ ಮಾಡಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿಯ ಸಮರ್ಥನೆ ಮತ್ತು ವೈಭವೀಕರಣ’ ದಿನವಾಗಿ ಆಚರಿಸಲು ತಯಾರಿ ನಡೆಸುತ್ತಿರುವ ಸರ್ಕಾರ!

“ನಮ್ಮ ದೇಶದಲ್ಲಿ ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡ ಈ ಬಂದೂಕು ಹಿಂಸಾಚಾರದ ಸಾಂಕ್ರಾಮಿಕವನ್ನು ಕೊನೆಗೊಳಿಸಲು ನಾವು ಪರಿಹಾರಗಳನ್ನು ಕಂಡುಕೊಳ್ಳುವವರೆಗೆ ನಾನು ವಿಶ್ರಾಂತಿ ಪಡೆಯುವುದಿಲ್ಲ” ಎಂದಿದ್ದಾರೆ.

ಕೊಲೊರಾಡೋದಲ್ಲಿನ ಸಲಿಂಗಿಗಳ ನೈಟ್‌ಕ್ಲಬ್‌ನಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಐದು ಜನರನ್ನು ಕೊಂದು 17 ಜನರನ್ನು ಗಾಯಗೊಳಿಸಿದ ಮೂರು ದಿನಗಳ ನಂತರ ವರ್ಜೀನಿಯಾದಲ್ಲಿ ಈ ಘಟನೆ ನಡೆದಿದೆ. ಶೂಟರ್‌ನನ್ನು ಬಂಧಿಸಲಾಗಿತ್ತು. ಟೆಕ್ಸಾಸ್‌ನ ಉವಾಲ್ಡೆಯಲ್ಲಿ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ಮಂದಿ ಸಾವಿಗೀಡಾದ ಘಟನೆ ನಡೆದಿತ್ತು. ಒಂದೇ ವರ್ಷದ ಅವಧಿಯಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ.

ಮಂಗಳವಾರದ ಗುಂಡಿನ ದಾಳಿಯು 2019ರಲ್ಲಿ ವಾಲ್‌ಮಾರ್ಟ್‌ನಲ್ಲಿ ನಡೆದ ಮತ್ತೊಂದು ಗುಂಡಿನ ದಾಳಿಯ ನೆನಪುಗಳನ್ನು ತಂದಿತು. ಮೆಕ್ಸಿಕನ್ನರನ್ನು ಗುರಿಯಾಗಿಸಿಕೊಂಡು ಬಂದೂಕುಧಾರಿಯು ಎಲ್ ಪಾಸೊದಲ್ಲಿನ ಅಂಗಡಿಯೊಂದರಲ್ಲಿ ಗುಂಡು ಹಾರಿಸಿ 22 ಜನರನ್ನು ಕೊಂದಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...