Homeರಾಷ್ಟ್ರೀಯಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

ಕೋಮುಗಲಭೆಗೆ ಹುನ್ನಾರ: ತನ್ನ ಮನೆಗೆ ತಾನೇ ಬಾಂಬ್ ಎಸೆದ RSS ಅಂಗಸಂಸ್ಥೆ ಹಿಂದೂ ಮುನ್ನಣಿಯ ನಾಯಕ

- Advertisement -
- Advertisement -

ಆರೆಸ್ಸೆಸ್‌‌‌‌ನ ಅಂಗಸಂಸ್ಥೆಯಾದ ‘ಹಿಂದೂ ಮುನ್ನಣಿ’ಯ ದುಷ್ಕರ್ಮಿಯೊಬ್ಬ ಕೋಮು ಗಲಭೆ ನಡಸುವ ಉದ್ದೇಶದಿಂದ ತನ್ನ ಮನೆಗೆ ತಾನೇ ಬಾಂಬ್ ಎಸೆದು ತಮಿಳುನಾಡು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾನೆ. ಕೋಮು ಗಲಭೆ ನಡೆಸುವುದಕ್ಕಾಗಿ ‘ತನ್ನ ಮನೆಯ ಮೇಲೆ ಬಾಂಬ್ ದಾಳಿ’ ನಡೆದಿದೆ ಎಂದು ದುಷ್ಕರ್ಮಿಯು ಸುಳ್ಳು ದೂರು ನೀಡಿದ್ದನು.

ಘಟನೆಯು ತಮಿಳುನಾಡಿನ ಕುಂಭಕೋಣಂನಲ್ಲಿ ನವೆಂಬರ್ 21 ರ ಸೋಮವಾರ ನಡೆದಿದ್ದು, ಬಂಧನಕ್ಕೊಳಗಾದ ದುಷ್ಕರ್ಮಿಯನ್ನು ಹಿಂದೂ ಮುನ್ನಣಿ ಕುಂಭಕೋಣಂ ನಗರದ ಕಾರ್ಯದರ್ಶಿಯಾದ ಸಕ್ಕರೆಪಾಣಿ (40) ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ಬೆಳಿಗ್ಗೆ ಅಪರಿಚಿತ ದುಷ್ಕರ್ಮಿಗಳು ತಮ್ಮ ಮನೆ ಮುಂದೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ದುಷ್ಕರ್ಮಿ ಕುಂಭಕೋಣಂ ಪೂರ್ವ ಪೊಲೀಸ್ ಠಾಣೆಗೆ ಕರೆ ಮಾಡಿದ್ದನು. ಮನೆಯ ಮುಂದೆ ದೊಡ್ಡ ಶಬ್ದ ಉಂಟಾಗಿದ್ದು, ಮನೆಯ ಹೊರಗೆ ಒಡೆದ ಗಾಜಿನ ತುಂಡುಗಳು ಕಂಡುಬಂದಿವೆ ಎಂದು ದೂರಿದ್ದನು.

ಇದನ್ನೂ ಓದಿ: ಪಕ್ಷದ ಮಹಿಳಾ ನಾಯಕಿಗೆ ಅಶ್ಲೀಲ ನಿಂದನೆ, ಕೊಲೆ ಬೆದರಿಕೆ ಹಾಕಿದ ತಮಿಳುನಾಡು ಬಿಜೆಪಿ ನಾಯಕ

ಘಟನೆಯ ಬಗ್ಗೆ ತಿಳಿದ ಕುಂಭಕೋಣಂ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರವಳಿ ಪ್ರಿಯಾ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಗಳಾದ (ಎಡಿಎಸ್‌ಪಿ) ಜಯಚಂದ್ರನ್ ಮತ್ತು ಸ್ವಾಮಿನಾಥನ್ ಮತ್ತು ವಿಧಿವಿಜ್ಞಾನ ಇಲಾಖೆಯ ಸಹಾಯಕ ನಿರ್ದೇಶಕ ರಾಮಚಂದ್ರನ್ ಅವರು ಸಕ್ಕರೆಪಾಣಿ ಮನೆಗೆ ಆಗಮಿಸಿ ತನಿಖೆ ಆರಂಭಿಸಿದ್ದರು

ಇದೇ ವೇಳೆ ಉತ್ತರ ತಂಜಾವೂರಿನ ಬಿಜೆಪಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಇತರ ಹಿಂದೂ ಮುನ್ನಣಿ ಪದಾಧಿಕಾರಿಗಳು ಕೂಡಾ ಸಕ್ಕರೆಪಾಣಿ ಮನೆಗೆ ಭೇಟಿ ನೀಡಿ, ಪೊಲೀಸರೊಂದಿಗೆ ಸಂವಾದ ನಡೆಸಿದ್ದು, ತಕ್ಷಣದ ಕ್ರಮಕ್ಕೆ ಒತ್ತಾಯಿಸಿದ್ದರು.

ಆದರೆ, ತನಿಖಾಧಿಕಾರಿಗಳು ಸಕ್ಕರೆಪಾಣಿ ಮತ್ತು ಅವನ ಹೇಳಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ವೇಳೆ ಅವನ ಮನೆಯನ್ನೂ ಶೋಧಿಸಿದ್ದರು. ಆತನನ್ನು ಕೂಡಾ ವಿಚಾರಣೆಗೊಳಪಡಿಸಿದ ನಂತರ, ಆತನ ಮನೆಗೆ ಎಸೆದಿದ್ದ ಬಾಟಲಿಯಲ್ಲಿ ಬಳಸಲಾದ ವಿಕ್ಸ್ ಮತ್ತು ಪೊಲೀಸರು ಆತನ ಮನೆಯಿಂದ ವಶಪಡಿಸಿದ ಬಟ್ಟೆಗೆ ಹೊಂದಿಕೆಯಾಗಿರುವುದನ್ನು ಪೊಲೀಸರು ಕಂಡುಕೊಂಡಿದ್ದರು. ಈ ಮಾಹಿತಿಯನ್ನು ಬಳಸಿಕೊಂಡು ಪೊಲೀಸರು ಆತನನ್ನು ಮತ್ತೆ ವಿಚಾರಣೆಗೆ ಒಳಪಡಿಸಿದಾಗ, ಪ್ರಚಾರಕ್ಕಾಗಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ ಎಂದು ಬಿಂಬಿಸಿದ್ದಾಗಿ ಸಕ್ಕರೆರಾಣಿ ತಪ್ಪೊಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಪಡೆಯುವ ಉದ್ದೇಶವು ಈ ಬಾಂಬ್ ದಾಳಿಯಲ್ಲಿ ಇತ್ತು ಎಂದು ವರದಿಗಳು ಉಲ್ಲೇಖಿಸಿವೆ. ಜೀವ ಬೆದರಿಕೆ ಇದೆ ಎಂದು ಈ ಹಿಂದೆ ಹಲವಾರು ಮುಖಂಡರಿಗೆ ಮತ್ತು ಬಲಪಂಥೀಯ ಹಿಂದೂ ಸಂಘಟನೆಗಳ ಸದಸ್ಯರಿಗೆ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಒದಗಿಸಲಾಗಿತ್ತು.

ತಪ್ಪೊಪ್ಪಿಕೊಂಡ ನಂತರ ಮೆಲಕಾವೇರಿ ಗ್ರಾಮ ಆಡಳಿತಾಧಿಕಾರಿ (ವಿಎಒ) ತಿರುಜ್ಞಾನಸಂಬಂಧಮ್ ಅವರು ಸಕ್ಕರೆಪಾಣಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದರ ನಂತರ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್ 436 (ಬೆಂಕಿ ಅಥವಾ ಸ್ಫೋಟಕ ವಸ್ತುವಿನಿಂದ ಕಿಡಿಗೇಡಿತನ), 53 (ಕಠಿಣ ಸೆರೆವಾಸ), 153 (ಗಲಭೆಗೆ ಪ್ರಚೋದನೆ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿರುವುದು), 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶಪೂರ್ವಕ ಕೃತ್ಯ) ಮತ್ತು 505(2) (ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಅವರನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಕ್ಷನ್ ಹತ್ತಿರ ಬರುವಾಗ ಇಂತಹ ಪ್ರಚೋದೀತ ಘಟನೆಗಳು ಸರ್ವೇಸಾಮಾನ್ಯ ಅದು ನಿಗದಿತವಾಗಿ ಇಂತಹ ಸಂಘಟನೆಗಳೇ ಹೆಚ್ಚಾಗಿ ಮಾಡುವುದು ಅಂತ ಸಾಮಾನ್ಯವಾಗಿ ಗೊತ್ತಿದೆ . ಹಾಗಾಗಿ ಮೊದಲು ಮತದಾರರು ಇದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಾರೆ ಅವರಿಗೆ ಇವೆಲ್ಲ ಹೆಚ್ಚಿನ ಕೆಲಸ ಇಂಥವರ ಮೇಲೆ ಮೊದಲೇ ಪೊಲೀಸ್ ನವರು ಒಂದು ಕಣ್ಣು ಇಡುವುದೇ ಒಳ್ಳೆಯದು.

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...