Homeಮುಖಪುಟ‘ಅಫ್ತಾಬ್‌ ಕೊಲೆ ಬೆದರಿಕೆ ಹಾಕಿದ್ದಾನೆಂದು ಶ್ರದ್ಧಾ 2 ವರ್ಷಗಳ ಹಿಂದೆಯೇ ಪೊಲೀಸರಿಗೆ ದೂರು ನೀಡಿದ್ದರು’

‘ಅಫ್ತಾಬ್‌ ಕೊಲೆ ಬೆದರಿಕೆ ಹಾಕಿದ್ದಾನೆಂದು ಶ್ರದ್ಧಾ 2 ವರ್ಷಗಳ ಹಿಂದೆಯೇ ಪೊಲೀಸರಿಗೆ ದೂರು ನೀಡಿದ್ದರು’

- Advertisement -
- Advertisement -

ಹೊಸದಿಲ್ಲಿ: ತನ್ನ ಪ್ರಿಯಕರ ಅಫ್ತಾಬ್ ಪೂನಾವಾಲಾನಿಂದ ಕೊಲೆಯಾದ ಶ್ರದ್ಧಾ ವಾಕರ್ ಎರಡು ವರ್ಷಗಳ ಹಿಂದೆಯೇ ತನಗಿರುವ ಕೊಲೆ ಬೆದರಿಕೆಯ ಕುರಿತು ದೂರು ನೀಡಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.

“ನಿನ್ನನ್ನು ಕೊಂದು ಹಾಕುತ್ತೇನೆ, ಕತ್ತರಿಸಿ ಹಾಕುತ್ತೇನೆ” ಎಂದು ಅಫ್ತಾಬ್‌ ಎಚ್ಚರಿಸಿದ್ದ ಎಂದು ಶ್ರದ್ಧಾ ವಾಕರ್‌, ನವೆಂಬರ್ 23, 2020ರಂದು ತನ್ನ ತವರೂರಾದ ವಸಾಯಿಯಲ್ಲಿರುವ ತಿಲುಂಜ್‌ನಲ್ಲಿ ಪೊಲೀಸರಿಗೆ ದೂರು ನೀಡಿದ್ದರು ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

“ಇಂದು ಅವನು ನನ್ನನ್ನು ಉಸಿರುಗಟ್ಟಿಸಿ ಕೊಲ್ಲಲು ಪ್ರಯತ್ನಿಸಿದನು. ಅವನು ನನ್ನನ್ನು ಹೆದರಿಸಿದನು. ನಿನ್ನನ್ನು ಕೊಲ್ಲುತ್ತೇನೆ, ತುಂಡುಗಳಾಗಿ ಕತ್ತರಿಸಿ ಎಸೆಯುತ್ತೇನೆ ಎಂದು ನನಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಅವನು ನನ್ನನ್ನು ಆರು ತಿಂಗಳಿಂದ ಹೊಡೆದಿದ್ದಾರೆ. ಆದರೆ ಪೊಲೀಸರ ಬಳಿ ಹೋಗಲು ಧೈರ್ಯವಿರಲಿಲ್ಲ. ಏಕೆಂದರೆ ಅವನು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾನೆ” ಎಂಬುದು ವಾಕರ್ ಅವರ ಪತ್ರದಲ್ಲಿ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೂನಾವಾಲಾ ಜೊತೆಯಲ್ಲಿ ಇನ್ನು ಮುಂದೆ ಬದುಕಲು ಬಯಸುವುದಿಲ್ಲ” ಎಂಬ ಘೋಷಣೆಯನ್ನೂ ಶ್ರದ್ಧಾ ಮಾಡಿರುವುದನ್ನು ಪತ್ರದಲ್ಲಿ ಕಾಣಬಹುದು. “ಆತ ನನ್ನನ್ನು ಕೊಲ್ಲವುದಾಗಿ ನೋಯಿಸುವುದಾಗಿ ಬ್ಲ್ಯಾಕ್‌ಮೇಲ್ ಮಾಡಿರುವುದರಿಂದಾಗಿ ಅವನು ನನ್ನನ್ನು ಎಲ್ಲಿಯಾದರೂ ನೋಡಿದರೆ ನನಗಾಗುವ ದೈಹಿಕ ಹಲ್ಲೆಯೆಂದು ಪರಿಗಣಿಸಬೇಕು” ಎಂದು ಶ್ರದ್ಧಾ ಕೋರಿದ್ದರು.

ಶ್ರದ್ಧಾ ಅವರ ಕುಟುಂಬವು ಈ ಸಂಬಂಧವನ್ನು ಒಪ್ಪರಲಿಲ್ಲ. ಹೀಗಾಗಿ ಕುಟುಂಬ ಮತ್ತು ಶ್ರದ್ಧಾ ಸಂಪರ್ಕವನ್ನು ಕಳೆಕೊಂಡಿದ್ದರು.

ಪೋಲೀಸರು ವಾಕರ್‌ನಿಂದ ಲಿಖಿತ ಹೇಳಿಕೆಯನ್ನು ಸ್ವೀಕರಿಸಿದ್ದರು. ಆ ಹೇಳಿಕೆಯಲ್ಲಿ “ಅಫ್ತಾಬ್‌ ಪೂನಾವಾಲಾ ಅವರ ಪೋಷಕರು ನನ್ನೊಂದಿಗೆ ಮಾತನಾಡಿದ್ದಾರೆ. ಇನ್ನು ಮುಂದೆ ಇಬ್ಬರಿಗೂ ಯಾವುದೇ ಜಗಳವಿರುವುದಿಲ್ಲ ಎಂದಿದ್ದಾರೆ” ಎಂಬುದು ಉಲ್ಲೇಖಗೊಂಡಿದೆ.

ಯಾವುದೇ ಕ್ರಮ ಕೈಗೊಳ್ಳಲು ವಾಕರ್ ಕೋರಿದ್ದರು. ಇದಾದ ನಂತರ ಈ ವರ್ಷ ಇಬ್ಬರೂ ದೆಹಲಿಗೆ ತೆರಳಿದ್ದರು. 2019ರಲ್ಲಿ ಡೇಟಿಂಗ್ ಅಪ್ಲಿಕೇಶನ್ ಬಂಬಲ್ (Bumbl) ಮೂಲಕ, ವಸಾಯ್‌ನಲ್ಲಿ ವಾಸಿಸುತ್ತಿದ್ದ ಅಫ್ತಾಬ್‌ನನ್ನು ಶ್ರದ್ಧಾ ಭೇಟಿಯಾಗಿದ್ದರು. ಶ್ರದ್ಧಾ ಕುಟುಂಬವು ಈ ಸಂಬಂಧವನ್ನು ಒಪ್ಪಿಕೊಳ್ಳಲಿಲ್ಲ. ಆದ್ದರಿಂದ ಶ್ರದ್ಧಾ ಅಫ್ತಾಬ್‌ನೊಂದಿಗೆ ವಾಸಿಸಲೆಂದು ತನ್ನ ಕುಟುಂಬವನ್ನು ತೊರೆದರು. ಮೊದಲು ಮುಂಬೈನಲ್ಲಿ ವಾಸವಿದ್ದರು. ನಂತರ ಮೇ 2022ರಿಂದ ದೆಹಲಿಯಲ್ಲಿ ಜೀವಿಸುತ್ತಿದ್ದರು.

“2019ರಲ್ಲಿ ಶ್ರದ್ಧಾ-ಅಫ್ತಾಬ್ ಜೊತೆಯಲ್ಲಿ ವಾಸಿಸಲು ಆರಂಭಿಸಿದ್ದರು” ಎಂದು ಶ್ರದ್ಧಾ ಸಂಪರ್ಕದಲ್ಲಿದ್ದ ಆಕೆಯ ಸ್ನೇಹಿತ ಲಕ್ಷ್ಮಣ್ ನಾಡಾರ್ ಹೇಳುತ್ತಾರೆ. “ಶ್ರದ್ಧಾ ಆತನನ್ನು ಮದುವೆಯಾಗಲು ಬಯಸಿದ್ದಳು. ಆದರೆ ಅವಳ ತಾಯಿ ವಿರೋಧಿಸಿದರು. ಆದ್ದರಿಂದ ಆಕೆ ಮನೆ ಬಿಟ್ಟಿದ್ದರು”.

ಶ್ರದ್ಧಾ ಮನೆಯಿಂದ ಹೊರಬಂದ ನಂತರ ಇಡೀ ಕುಟುಂಬದಲ್ಲಿ ಆಕೆಯ ತಾಯಿ ಮಾತ್ರ ಶ್ರದ್ಧಾ ಜೊತೆಯಲ್ಲಿ ಸಂಪರ್ಕದಲ್ಲಿದ್ದರು ಎನ್ನುತ್ತಾರೆ ಲಕ್ಷ್ಮಣ್. ಶ್ರದ್ಧಾ ಅವರ ತಾಯಿ 2020ರಲ್ಲಿ ನಿಧನರಾದರು. ಶ್ರದ್ಧಾ ಅವರ ಕುಟುಂಬದೊಂದಿಗಿನ ಏಕೈಕ ಸಂಪರ್ಕ ಲಕ್ಷ್ಮಣ್ ಮಾತ್ರ ಆಗಿದ್ದರು. ಆಕೆ ದೆಹಲಿಗೆ ತೆರಳಿ, ಸಂಪರ್ಕ ಕಡಿತವಾಗುವವರೆಗೂ ಲಕ್ಷ್ಮಣ್ ಮಾತನಾಡಿದ್ದರು. ಶ್ರದ್ಧಾ ಅವರ ತಂದೆ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಮಗಳ ಮೇಲೆ ನಿಗಾ ಇಟ್ಟಿದ್ದರು.

ಶ್ರದ್ಧಾ ಅವರ ತಂದೆ ತಾಯಿ ನಾಲ್ಕು ವರ್ಷಗಳ ಹಿಂದೆ ಬೇರೆಯಾಗಿದ್ದರು. ಶ್ರದ್ಧಾ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದರು. 2018ರಲ್ಲಿ ಅವರು ವಸೈನಲ್ಲಿನ ಕಾಲ್ ಸೆಂಟರ್‌ನಲ್ಲಿ ಉದ್ಯೋಗ ಆರಂಭಿಸಿದ್ದರು.

ಇದನ್ನೂ ಓದಿರಿ: ಊನಾ ಪ್ರಕರಣದ ಆರೋಪಿಗಳಿಂದ ದಲಿತ ಸಂತ್ರಸ್ತರಿಗೆ ಜೀವ ಬೆದರಿಕೆ; ಎಫ್‌ಐಆರ್‌

ಶ್ರದ್ಧಾರನ್ನು ಮಾತನಾಡಿಸಲು ಲಕ್ಷ್ಮಣ್ ಪ್ರಯತ್ನಿಸುತ್ತಲೇ ಇದ್ದರು. ಅವರು ಜೂನ್ ಮತ್ತು ಜುಲೈನಲ್ಲಿ ಸಾಕಷ್ಟು ಸಲ ಆಕೆಗೆ ಕರೆ ಮಾಡಿದರು. ಆದರೆ ಆಕೆಯ ಮೊಬೈಲ್‌ ಸಂಖ್ಯೆ ಸ್ವಿಚ್ ಆಫ್ ಆಗಿತ್ತು. ಲಕ್ಷ್ಮಣ್ ಕಳುಹಿಸಿದ ಸಂದೇಶಗಳಿಗೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.

ಶ್ರದ್ಧಾ ಅವರ ಸಹೋದರ ಶ್ರೀಜಯ್ ವಾಕರ್ ಅವರಿಗೆ ಸೆಪ್ಟೆಂಬರ್ 14ರಂದು ಕರೆ ಮಾಡಿದ ಲಕ್ಷ್ಮಣ್, ಎರಡು ತಿಂಗಳಿನಿಂದ ಶ್ರದ್ಧಾ ಅವರ ಫೋನ್ ಆಫ್ ಆಗಿದೆ ಎಂದು ತಿಳಿಸಿದ್ದರು. ಶ್ರೀಜಯ್ ತನ್ನ ತಂದೆ ವಿಕಾಸ್ ವಾಕರ್‌ಗೆ ಮಾಹಿತಿ ನೀಡಿದ್ದು, ಅವರು ಮಹಾರಾಷ್ಟ್ರದ ಮಾಣಿಕ್‌ಪುರದಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದರು.

ಕೆಲವು ದಿನಗಳ ನಂತರ, ವಿಕಾಸ್‌ ವಾಕರ್‌ ಅವರಿಗೆ ಮಾಣಿಕ್‌ಪುರ ಪೊಲೀಸರು ಪ್ರತಿಕ್ರಿಯಿಸಿ, “ದೆಹಲಿಯ ಛತ್ತರ್‌ಪುರದಲ್ಲಿ ನಿಮ್ಮ ಮಗಳು ಆಕೆಯ ಗೆಳೆಯ ಅಫ್ತಾಬ್‌ನೊಂದಿಗೆ ವಾಸಿಸುತ್ತಿದ್ದಳು” ಎಂದು ಮಾಹಿತಿ ನೀಡಿದರು. ವಿಕಾಸ್ ನವೆಂಬರ್ 8ರಂದು ಶ್ರದ್ಧಾ ಅವರ ಫ್ಲಾಟ್‌ಗೆ ಬಂದರು. ಆದರೆ ಅದು ಲಾಕ್ ಆಗಿತ್ತು. ದೆಹಲಿಯ ಮೆಹ್ರೌಲಿ ಪೊಲೀಸ್ ಠಾಣೆಯಲ್ಲಿ ಮಗಳ ಅಪಹರಣದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದರು. ಆ ನಂತರ ಕೊಲೆ ಪ್ರಕರಣ ಬಯಲಿಗೆ ಬಂದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...