Homeಮುಖಪುಟಗಾಂಧಿ ಕೊಲ್ಲಲು ಗೋಡ್ಸೆಗೆ ಬಂದೂಕು ಕೊಟ್ಟಿದ್ದೇ ಸಾವರ್ಕರ್‌: ಬಾಪು ಮೊಮ್ಮಗ ಹೇಳಿಕೆ

ಗಾಂಧಿ ಕೊಲ್ಲಲು ಗೋಡ್ಸೆಗೆ ಬಂದೂಕು ಕೊಟ್ಟಿದ್ದೇ ಸಾವರ್ಕರ್‌: ಬಾಪು ಮೊಮ್ಮಗ ಹೇಳಿಕೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಯಲ್ಲಿ ಆರ್‌ಎಸ್‌ಎಸ್‌ ನಾಯಕ ವಿ.ಡಿ.ಸಾವರ್ಕರ್‌ ನೇರವಾಗಿ ಪಾತ್ರ ವಹಿಸಿದ್ದರು ಎಂಬ ಆರೋಪವನ್ನು ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್‌ ಗಾಂಧಿ ಮಾಡಿದ್ದಾರೆ.

“ಗಾಂಧಿ ಹತ್ಯೆಯಲ್ಲಿ ಸಾವರ್ಕರ್‌ ಪಾತ್ರವಿಲ್ಲ” ಎಂಬ ವಾದವನ್ನು ಸಂಘಪರಿವಾರ ಮಾಡುತ್ತಾ ಬಂದಿದೆ. ಆದರೆ ಅನೇಕ ಚರಿತ್ರಾಕಾರರು ಈ ಕೃತ್ಯದಲ್ಲಿ ಸಾವರ್ಕರ್‌‌ ಪಾತ್ರವನ್ನು ಉಲ್ಲೇಖಿಸಿ ಬರೆದಿದ್ದಾರೆ. ಈಗ ತುಷಾರ್‌ ಗಾಂಧಿಯವರು ಸಾವರ್ಕರ್‌ ಪಾತ್ರದ ಕುರಿತು ಮಾತನಾಡಿದ್ದಾರೆ.

“ವಿ.ಡಿ.ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದ್ದು ಮಾತ್ರವಲ್ಲದೆ, ಮಹಾತ್ಮ ಗಾಂಧೀಜಿ ಹತ್ಯೆಯಲ್ಲೂ ನಾಥೂರಾಮ್‌ ಗೋಡ್ಸೆಗೆ ಸಹಾಯ ಮಾಡಿದ್ದರು” ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಾವರ್ಕರ್‌ ವಿಷಯ ಪ್ರಸ್ತಾಪಿಸಿದ್ದರು. “ಬ್ರಿಟಿಷರಿಗೆ ಸಾವರ್ಕರ್‌ ಪತ್ರ ಬರೆದಿದ್ದರು. ಗಾಂಧೀಜಿ, ನೆಹರೂ, ಪಟೇಲ್‌ ಮತ್ತಿತರ ನಾಯಕರು ಜೈಲು ವಾಸ ಅನುಭವಿಸಿದರು” ಎಂದು ರಾಹುಲ್ ಗಾಂಧಿಯವರು ಮಹಾರಾಷ್ಟ್ರದಲ್ಲಿ ಹೇಳಿದ್ದು ಮಹಾ ವಿಕಾಸ್ ಅಘಾಡಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯ ಮೂಡಲೂ ಕಾರಣವಾಗಿತ್ತು. ಮೈತ್ರಿ ಪಕ್ಷವಾದ ಉದ್ಧವ್‌ ನೇತೃತ್ವದ ಶಿವಸೇನಾ ಬಣದ ನಾಯಕರು, ರಾಹುಲ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿತ್ತು.

ವಿವಾದದ ಬೆನ್ನಲ್ಲೇ ಮಹಾತ್ಮ ಗಾಂಧಿಜೀಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು ಸಾವರ್ಕರ್ ವಿಷಯ ಕೈಗೆತ್ತಿಕೊಂಡಿದ್ದಾರೆ.

ಬುಲ್ಧಾನಾ ಜಿಲ್ಲೆಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿರುವ ತುಷಾರ್ ಗಾಂಧಿ, ಸಾವರ್ಕರ್ ವಿರುದ್ಧ ಮಾತನಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ತುಷಾರ್‌ ಗಾಂಧಿ, “ಸಾವರ್ಕರ್ ಬ್ರಿಟಿಷರಿಗೆ ಮಾತ್ರ ಸಹಾಯ ಮಾಡಿಲ್ಲ. ಬಾಪು ಕೊಲೆಗೆ ನಾಥೂರಾಮ್‌ ಗೋಡ್ಸೆಗೂ ಸಹಾಯ ಮಾಡಿದ್ದಾರೆ. ಗಾಂಧೀಜಿಯನ್ನು ಕೊಲೆ ಮಾಡಲು ಸಮರ್ಥ ಬಂದೂಕು ಒದಗಿಸುವಲ್ಲಿ ಸಾವರ್ಕರ್ ಸಹಾಯ ಮಾಡಿದ್ದಾರೆ. ಗಾಂಧೀಜಿ ಕೊಲೆಗೂ ಮುನ್ನ ಗೋಡ್ಸೆ ಸಮರ್ಥವಾದ ಆಯುಧ ಹೊಂದಿರಲಿಲ್ಲ” ಎಂದು ತಿಳಿಸಿದ್ದಾರೆ.

“1930ರ ದಶಕದಲ್ಲಿ ಬಾಪು ಅವರ ವಿರುದ್ಧ ಅನೇಕ ಪ್ರಯತ್ನಗಳು ನಡೆದವು. ವಿದರ್ಭದ ಅಕೋಲಾದಲ್ಲಿ ಬಾಪುವನ್ನು ಕೊಲ್ಲುವ ಸಂಚಿನ ಬಗ್ಗೆ ಪ್ರಬೋಧಂಕರ್ ಠಾಕ್ರೆ ಅವರು ಬಾಪು ಅವರ ಸಹಚರರಿಗೆ ಮುಂಚಿತವಾಗಿ ಎಚ್ಚರಿಕೆ ನೀಡಿದ್ದರು. ಆದ್ದರಿಂದ ಆ ಸಂದರ್ಭದಲ್ಲಿ ಬಾಪುವಿನ ಜೀವ ಉಳಿದಿತ್ತು. ಸನಾತನಿ ಹಿಂದೂ ಸಂಘಟನೆಗಳು ಮತ್ತು ಮಹಾರಾಷ್ಟ್ರದ ಅವರ ನಾಯಕತ್ವಕ್ಕೆ ಬಾಪು ಅವರ ಹತ್ಯೆಯ ದಾಳಿಯಿಂದ ದೂರವಿರುವಂತೆ ಸಾರ್ವಜನಿಕ ಎಚ್ಚರಿಕೆ ನೀಡಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

“ಎರಡನೆಯ ಮಹಾಯುದ್ಧದ ಸಮಯದಲ್ಲಿ ಸಾವರ್ಕರ್ ಬ್ರಿಟಿಷರಿಗೆ ಸಕ್ರಿಯವಾಗಿ ಸಹಾಯ ಮಾಡಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಅವರ ಐಎನ್‌ಎ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದಾರೆ ಎಂದು ತಿಳಿದ ನಂತರವೂ ಸಹಾಯ ಮುಂದುವರೆಸಿದ್ದರು. ಇದು ನಿರಾಕರಿಸಲಾಗದ ಐತಿಹಾಸಿಕ ಸತ್ಯ” ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರ ಸಾವರ್ಕರ್ ಹೇಳಿಕೆಗೆ ಉದ್ಧವ್ ಠಾಕ್ರೆ ಬಣ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು. ಆ ಕುರಿತು ಮಾತನಾಡಿರುವ ತುಷಾರ್ ಗಾಂಧಿ, “ಸಾವರ್ಕರ್ ಮತ್ತು ಹೆಡ್ಗೇವಾರ್ ಅವರು ಸನಾತನ ಹಿಂದೂಗಳ ನಾಯಕರಾಗಿದ್ದರು. ಪ್ರಬೋಧನಕರ್ ಅವರ ನೀಡಿದ ಎಚ್ಚರಿಕೆಯು ಈ ನಾಯಕರನ್ನುದ್ದೇಶಿಸಿಯೇ ನೀಡಲಾಗಿತ್ತು. ಶಿವಸೇನೆಯ ಉದ್ಧವ್ ಠಾಕ್ರೆಯವರು, ಅವರ ಈ ಇತಿಹಾಸವನ್ನು ನೆನಪಿಸಿಕೊಳ್ಳಬೇಕು” ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....