Homeರಾಜಕೀಯಗುಜರಾತ್‌: BJP ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ 60 ಲಕ್ಷ ಜನಸಂಖ್ಯೆಯ ಮಾಲ್ಧಾರಿ ಸಮುದಾಯ!

ಗುಜರಾತ್‌: BJP ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ 60 ಲಕ್ಷ ಜನಸಂಖ್ಯೆಯ ಮಾಲ್ಧಾರಿ ಸಮುದಾಯ!

ಸಮುದಾಯದ ಪ್ರತಿಭಟನೆಗೆ ಬೆದರಿದ್ದ ಬಿಜೆಪಿ ಸರ್ಕಾರ ಮಂಡನೆಯಾಗಿದ್ದ ಮಸೂದೆಯೊಂದನ್ನು 2 ತಿಂಗಳ ಹಿಂದೆಯಷ್ಟೆ ವಾಪಾಸು ಪಡೆದಿತ್ತು

- Advertisement -
- Advertisement -

ಆಡಳಿತಾರೂಢ ಬಿಜೆಪಿ ಸರ್ಕಾರವು ತಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ ಗುಜರಾತ್ ಮಾಲ್ಧಾರಿ ಮಹಾಪಂಚಾಯತ್ (ಜಿಎಂಎಂ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸುವಂತೆ ಸಮುದಾಯಕ್ಕೆ ಕರೆ ನೀಡಿದೆ. ಜಿಎಂಎಂ ರಾಜ್ಯದ ಜಾನುವಾರು ಸಾಕಣೆದಾರರ ಒಕ್ಕೂಟ ಸಂಘಟನೆಯಾದ್ದು, ಗುಜರಾತ್‌‌ನಲ್ಲಿ ಮಾಲ್ಧಾರಿ ಜನಸಂಖ್ಯೆ ಸುಮಾರು 61 ಲಕ್ಷ ಇದೆ ಎಂದು ಸಂಘಟನೆ ಪ್ರತಿಪಾದಿಸಿದೆ.

ಮೆಹ್ಸಾನಾದಲ್ಲಿ ಸೋಮವಾರ ಸಭೆ ನಡೆಸಿದ ಗುಜರಾತ್ ಮಾಲ್ಧಾರಿ ಮಹಾಪಂಚಾಯತ್‌ನ ವಕ್ತಾರ ನಾಗಜಿಭಾಯ್ ದೇಸಾಯಿ ನೀಡಿದ ಹೇಳಿಕೆಯಲ್ಲಿ, ಕಳೆದ ಒಂದೂವರೆ ವರ್ಷಗಳಿಂದ ಬಿಜೆಪಿ ಸರ್ಕಾರದ ಬಗ್ಗೆ ಸಮುದಾಯವು ತೀವ್ರ ಅಸಮಾಧಾನ ಹೊಂದಿರುವುದರಿಂದ ಅದನ್ನು ಒಗ್ಗೂಡಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಶಕ್ತಿಯನ್ನು ತೋರಿಸುತ್ತೇವೆ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಸೆಂಬರ್ 1 ಮತ್ತು 5 ರಂದು ನಡೆಯುವ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮಾಲ್ಧಾರಿ ಸಮುದಾಯದ ಎಲ್ಲಾ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಮಾಲ್ಧಾರಿ ಮಹಾಪಂಚಾಯತ್ ಮನವಿ ಮಾಡಿದೆ. ಸಮುದಾಯಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಗದೀಶ್ ಠಾಕೂರ್ ಮತ್ತು ಕಾಂಗ್ರೆಸ್ ಶಾಸಕರಿಗೆ ನಾವು ಕೃತಜ್ಞರಾಗಿರುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

ಮಾಲಧಾರಿ ಸಮುದಾಯದ ಬಾಕಿ ಉಳಿದಿರುವ ಬೇಡಿಕೆಗಳನ್ನು ಪಟ್ಟಿ ಮಾಡಿರುವ ದೇಸಾಯಿ, “ಕಳೆದ ವಾರದಿಂದ ಮಹಾಪಂಚಾಯತ್ ಸಮುದಾಯದ ಕಡಯಿಂದ ಅಭಿಪ್ರಾಯಗಳನ್ನು ಕೇಳಿದೆ. ನಿನ್ನೆ (ಸೋಮವಾರ) ನಡೆದ ಪ್ರತಿನಿಧಿಗಳ ಸಭೆಯಲ್ಲಿ ಬಿಜೆಪಿ ವಿರುದ್ಧ ಮತ ಹಾಕಲು ನಿರ್ಧರಿಸಲಾಯಿತು. ಮತ ಎಂಬ ಅಸ್ತ್ರ ಬಳಸಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಸಮುದಾಯವು ಮನವಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಮಾಲ್ಧಾರಿ ವಸಾಹತ್ (ವಸತಿ ಪ್ರದೇಶ) ಸ್ಥಾಪಿಸುವುದು, ಸಮುದಾಯದ ಸದಸ್ಯರ ವಿರುದ್ಧ ಸುಳ್ಳು ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು, ರೈತರಾಗಿರುವ ಹಕ್ಕು ಮತ್ತು ಗಿರ್, ಬರ್ದಾ ಮತ್ತು ಅಲೆಚ್ ಅರಣ್ಯ ಪ್ರದೇಶದಲ್ಲಿ ವಾಸಿಸುವ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಸೇರಿದಂತೆ ಹಲವು ಬೇಡಿಕೆಗಳನ್ನು ಸಮುದಾಯ ಮುಂದಿಟ್ಟಿದೆ ಎಂದು ದೇಸಾಯಿ ಹೇಳಿದ್ದಾರೆ.

“ಗುಜರಾತ್ ನಗರ ಪ್ರದೇಶಗಳಲ್ಲಿ ಜಾನುವಾರು ನಿಯಂತ್ರಣ (ಕೀಪಿಂಗ್ ಮತ್ತು ಮೂವಿಂಗ್) ಮಸೂದೆ-2022” ಯನ್ನು ಅಂಗೀಕರಿಸಿದ್ದಕ್ಕಾಗಿ ಬಿಜೆಪಿ ಸರ್ಕಾರದ ವಿರುದ್ಧ ಸಮುದಾಯವು ಈಗಾಗಲೇ ಭಾರಿ ವಿರೋಧವನ್ನು ಹೊಂದಿದೆ. ಈ ವರ್ಷ ಸೆಪ್ಟೆಂಬರ್ 18 ರಂದು, ಮಸೂದೆಯನ್ನು ರದ್ದುಗೊಳಿಸುವಂತೆ ಕೋರಿ, ಮಾಲ್ಧಾರಿ ಸಮುದಾಯದ ಮುಖಂಡರು ಮಹಾಪಂಚಾಯತ್ ಅನ್ನು ಆಯೋಜಿಸಿದರು. ಗಾಂಧಿನಗರ ಜಿಲ್ಲೆಯ ಶೇರ್ತಾ ಗ್ರಾಮದಲ್ಲಿ ನಡೆದ ಈ ಮಹಾಪಂಚಾಯತ್‌ನಲ್ಲಿ ಸುಮಾರು 50,000 ಸದಸ್ಯರು ಭಾಗವಹಿಸಿದ್ದರು.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ಈ ಪ್ರತಿಭಟನೆ ನಡೆದು ಒಂದು ದಿನದ ನಂತರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಮಸೂದೆಯನ್ನು ಮರುಪರಿಶೀಲನೆಗಾಗಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಹೀಗಾಗಿ ಸೆಪ್ಟೆಂಬರ್ 21 ರಂದು ವಿಧಾನಸಭೆಯು ಅವಿರೋಧವಾಗಿ ಮಸೂದೆಯನ್ನು ಹಿಂತೆಗೆದುಕೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...