Homeರಾಜಕೀಯಗುಜರಾತ್‌: BJP ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ 60 ಲಕ್ಷ ಜನಸಂಖ್ಯೆಯ ಮಾಲ್ಧಾರಿ ಸಮುದಾಯ!

ಗುಜರಾತ್‌: BJP ವಿರುದ್ಧ ಮತ ಚಲಾಯಿಸಲು ನಿರ್ಧರಿಸಿದ 60 ಲಕ್ಷ ಜನಸಂಖ್ಯೆಯ ಮಾಲ್ಧಾರಿ ಸಮುದಾಯ!

ಸಮುದಾಯದ ಪ್ರತಿಭಟನೆಗೆ ಬೆದರಿದ್ದ ಬಿಜೆಪಿ ಸರ್ಕಾರ ಮಂಡನೆಯಾಗಿದ್ದ ಮಸೂದೆಯೊಂದನ್ನು 2 ತಿಂಗಳ ಹಿಂದೆಯಷ್ಟೆ ವಾಪಾಸು ಪಡೆದಿತ್ತು

- Advertisement -
- Advertisement -

ಆಡಳಿತಾರೂಢ ಬಿಜೆಪಿ ಸರ್ಕಾರವು ತಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ ಗುಜರಾತ್ ಮಾಲ್ಧಾರಿ ಮಹಾಪಂಚಾಯತ್ (ಜಿಎಂಎಂ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸುವಂತೆ ಸಮುದಾಯಕ್ಕೆ ಕರೆ ನೀಡಿದೆ. ಜಿಎಂಎಂ ರಾಜ್ಯದ ಜಾನುವಾರು ಸಾಕಣೆದಾರರ ಒಕ್ಕೂಟ ಸಂಘಟನೆಯಾದ್ದು, ಗುಜರಾತ್‌‌ನಲ್ಲಿ ಮಾಲ್ಧಾರಿ ಜನಸಂಖ್ಯೆ ಸುಮಾರು 61 ಲಕ್ಷ ಇದೆ ಎಂದು ಸಂಘಟನೆ ಪ್ರತಿಪಾದಿಸಿದೆ.

ಮೆಹ್ಸಾನಾದಲ್ಲಿ ಸೋಮವಾರ ಸಭೆ ನಡೆಸಿದ ಗುಜರಾತ್ ಮಾಲ್ಧಾರಿ ಮಹಾಪಂಚಾಯತ್‌ನ ವಕ್ತಾರ ನಾಗಜಿಭಾಯ್ ದೇಸಾಯಿ ನೀಡಿದ ಹೇಳಿಕೆಯಲ್ಲಿ, ಕಳೆದ ಒಂದೂವರೆ ವರ್ಷಗಳಿಂದ ಬಿಜೆಪಿ ಸರ್ಕಾರದ ಬಗ್ಗೆ ಸಮುದಾಯವು ತೀವ್ರ ಅಸಮಾಧಾನ ಹೊಂದಿರುವುದರಿಂದ ಅದನ್ನು ಒಗ್ಗೂಡಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಶಕ್ತಿಯನ್ನು ತೋರಿಸುತ್ತೇವೆ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಿಸೆಂಬರ್ 1 ಮತ್ತು 5 ರಂದು ನಡೆಯುವ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮಾಲ್ಧಾರಿ ಸಮುದಾಯದ ಎಲ್ಲಾ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಮಾಲ್ಧಾರಿ ಮಹಾಪಂಚಾಯತ್ ಮನವಿ ಮಾಡಿದೆ. ಸಮುದಾಯಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಗದೀಶ್ ಠಾಕೂರ್ ಮತ್ತು ಕಾಂಗ್ರೆಸ್ ಶಾಸಕರಿಗೆ ನಾವು ಕೃತಜ್ಞರಾಗಿರುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

ಮಾಲಧಾರಿ ಸಮುದಾಯದ ಬಾಕಿ ಉಳಿದಿರುವ ಬೇಡಿಕೆಗಳನ್ನು ಪಟ್ಟಿ ಮಾಡಿರುವ ದೇಸಾಯಿ, “ಕಳೆದ ವಾರದಿಂದ ಮಹಾಪಂಚಾಯತ್ ಸಮುದಾಯದ ಕಡಯಿಂದ ಅಭಿಪ್ರಾಯಗಳನ್ನು ಕೇಳಿದೆ. ನಿನ್ನೆ (ಸೋಮವಾರ) ನಡೆದ ಪ್ರತಿನಿಧಿಗಳ ಸಭೆಯಲ್ಲಿ ಬಿಜೆಪಿ ವಿರುದ್ಧ ಮತ ಹಾಕಲು ನಿರ್ಧರಿಸಲಾಯಿತು. ಮತ ಎಂಬ ಅಸ್ತ್ರ ಬಳಸಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಸಮುದಾಯವು ಮನವಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಮಾಲ್ಧಾರಿ ವಸಾಹತ್ (ವಸತಿ ಪ್ರದೇಶ) ಸ್ಥಾಪಿಸುವುದು, ಸಮುದಾಯದ ಸದಸ್ಯರ ವಿರುದ್ಧ ಸುಳ್ಳು ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು, ರೈತರಾಗಿರುವ ಹಕ್ಕು ಮತ್ತು ಗಿರ್, ಬರ್ದಾ ಮತ್ತು ಅಲೆಚ್ ಅರಣ್ಯ ಪ್ರದೇಶದಲ್ಲಿ ವಾಸಿಸುವ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಸೇರಿದಂತೆ ಹಲವು ಬೇಡಿಕೆಗಳನ್ನು ಸಮುದಾಯ ಮುಂದಿಟ್ಟಿದೆ ಎಂದು ದೇಸಾಯಿ ಹೇಳಿದ್ದಾರೆ.

“ಗುಜರಾತ್ ನಗರ ಪ್ರದೇಶಗಳಲ್ಲಿ ಜಾನುವಾರು ನಿಯಂತ್ರಣ (ಕೀಪಿಂಗ್ ಮತ್ತು ಮೂವಿಂಗ್) ಮಸೂದೆ-2022” ಯನ್ನು ಅಂಗೀಕರಿಸಿದ್ದಕ್ಕಾಗಿ ಬಿಜೆಪಿ ಸರ್ಕಾರದ ವಿರುದ್ಧ ಸಮುದಾಯವು ಈಗಾಗಲೇ ಭಾರಿ ವಿರೋಧವನ್ನು ಹೊಂದಿದೆ. ಈ ವರ್ಷ ಸೆಪ್ಟೆಂಬರ್ 18 ರಂದು, ಮಸೂದೆಯನ್ನು ರದ್ದುಗೊಳಿಸುವಂತೆ ಕೋರಿ, ಮಾಲ್ಧಾರಿ ಸಮುದಾಯದ ಮುಖಂಡರು ಮಹಾಪಂಚಾಯತ್ ಅನ್ನು ಆಯೋಜಿಸಿದರು. ಗಾಂಧಿನಗರ ಜಿಲ್ಲೆಯ ಶೇರ್ತಾ ಗ್ರಾಮದಲ್ಲಿ ನಡೆದ ಈ ಮಹಾಪಂಚಾಯತ್‌ನಲ್ಲಿ ಸುಮಾರು 50,000 ಸದಸ್ಯರು ಭಾಗವಹಿಸಿದ್ದರು.

ಇದನ್ನೂ ಓದಿ: ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ಈ ಪ್ರತಿಭಟನೆ ನಡೆದು ಒಂದು ದಿನದ ನಂತರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಮಸೂದೆಯನ್ನು ಮರುಪರಿಶೀಲನೆಗಾಗಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಹೀಗಾಗಿ ಸೆಪ್ಟೆಂಬರ್ 21 ರಂದು ವಿಧಾನಸಭೆಯು ಅವಿರೋಧವಾಗಿ ಮಸೂದೆಯನ್ನು ಹಿಂತೆಗೆದುಕೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...