Homeಸಿನಿಮಾಕ್ರೀಡೆಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ಜರ್ಮನಿ ಮಣಿಸಿದ ಜಪಾನ್, ಅರ್ಜೆಂಟೀನಾ ಮಣಿಸಿದ ಸೌದಿ - ಮುಂದೇನು?

- Advertisement -
- Advertisement -

ಬಹುನಿರೀಕ್ಷಿತ ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿ ಕತಾರ್‌ನಲ್ಲಿ ಆರಂಭಗೊಂಡಿದೆ. ಈ ಬಾರಿ ಏಷ್ಯಾ ದೇಶಗಳು ಲೀಗ್ ಹಂತದಲ್ಲಿ ಗೆಲುವಿನ ಖಾತೆ ತೆರೆಯುವ ಮೂಲಕ ಸಾಧನೆಗೈದಿವೆ. ಸೌದಿ ಅರೇಬಿಯಾ ದೇಶವು (2-1) ಎರಡು ಬಾರಿ ವಿಶ್ವಕಪ್ ಗೆದ್ದಿರುವ ಅರ್ಜೆಂಟೀನಾ ತಂಡವನ್ನು ಮಣಿಸಿದರೆ, ಜಪಾನ್ ದೇಶವು (2-1) ನಾಲ್ಕು ಬಾರಿ ಚಾಂಪಿಯನ್ ಜರ್ಮಿನಿಯನ್ನು ಸೋಲಿಸಿ ಸಂಭ್ರಮಿಸಿದೆ. ಆದರೆ ಫೈನಲ್‌ವರೆಗೆ ಸಾಗಬೇಕಾದ ದಾರಿ ಬಹಳ ದೂರವಿದೆ. ಹಾಗಾಗಿ ವಿಶ್ವಕಪ್ ಪುಟ್ಬಾಲ್ ಟೂರ್ನಿಯ ವಿವಿಧ ಹಂತಗಳ ಬಗ್ಗೆ ತಿಳಿಯೋಣ.

ಪ್ರಶಸ್ತಿಗಾಗಿ ಸೆಣಸಲಿರುವ 32 ದೇಶಗಳು

ವಿಶ್ವದಾದ್ಯಂತ ಅತಿ ಹೆಚ್ಚು ಜನಪ್ರಿಯತೆ ಹೊಂದಿರುವ ಪುಟ್ಬಾಲ್ ಕ್ರೀಡೆಯಲ್ಲಿ ವಿಶ್ವಕಪ್ ಅತಿ ದೊಡ್ಡ ಟೂರ್ನಿಯಾಗಿದೆ. ಹಲವು ದೇಶಗಳು ಈ ಟೂರ್ನಿಯಲ್ಲಿ ಆಡಲು ಬಯಸಿದರೂ ಅಂತಿಮ ಸುತ್ತಿಗೆ ಕೇವಲ 32 ದೇಶಗಳಿಗೆ ಮಾತ್ರ ಅವಕಾಶವಿರುತ್ತದೆ. ಅದಕ್ಕೂ ಮೊದಲು ಮೂರು ವರ್ಷಗಳ ಕಾಲ ವಿಶ್ವದ ಎಲ್ಲಾ ಭಾಗಗಳ ಅರ್ಹತಾ ಸುತ್ತಿನ  ಪಂದ್ಯಗಳಲ್ಲಿ ಗೆದ್ದು ಅರ್ಹತೆ ಪಡೆದವರನ್ನು ಮಾತ್ರ ಅಂತಿಮ ಸುತ್ತಿನಲ್ಲಿ ಆಡಿಸಲಾಗುತ್ತದೆ. ಆತಿಥ್ಯ ವಹಿಸುವ ದೇಶಗಳು ಸಹಜವಾಗಿ ಅರ್ಹತೆ ಪಡೆಯುತ್ತವೆ.

ಲೀಗ್ ಹಂತ

ಅಧಿಕೃತ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಲೀಗ್ ಹಂತದಲ್ಲಿ 32 ತಂಡಗಳನ್ನು ತಲಾ ನಾಲ್ಕು ತಂಡಗಳಂತೆ 8 (ಎ ಯಿಂದ ಹೆಚ್ ವರೆಗೆ) ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿದ್ದು ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಕ್ಕೂ ಮೂರು ಪಂದ್ಯಗಳನ್ನು ಆಡುವ ಅವಕಾಶವಿರುತ್ತದೆ. ಈ ಹಂತದಲ್ಲಿ ಪ್ರತಿ ಗೆಲುವಿಗೆ 3 ಅಂಕ, ಡ್ರಾ ಆದರೆ ಎರಡು ತಂಡಕ್ಕೆ ತಲಾ ಒಂದು ಅಂಕ ಮತ್ತು ಸೋಲಿಗೆ 0 ಅಂಕ ಇರುತ್ತದೆ. ಪ್ರತಿ ಗುಂಪಿನಲ್ಲಿ ಮೊದಲೆರಡು ಸ್ಥಾನ ಪಡೆದ ಎರಡು ತಂಡಗಳನ್ನು ಮುಂದಿನ ನಾಕೌಟ್ ಹಂತಕ್ಕೆ (16ರ ಹಂತ) ಅರ್ಹತೆ ಪಡೆಯುತ್ತವೆ. ಪ್ರತಿ ಗುಂಪಿನಿಂದ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಲಾ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಒಂದು ವೇಳೆ ಯಾವುದೇ ಗುಂಪಿನ ಅಂಕ ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದ ತಂಡಗಳು ಸಮಾನ ಅಂಕ ಪಡೆದರೆ (ಡ್ರಾ ಸಂದರ್ಭಗಳಲ್ಲಿ ಇದರ ಸಾಧ್ಯತೆ ಹೆಚ್ಚು) ಗುಂಪು ಹಂತದಲ್ಲಿ ತಂಡಗಳ ಗೆಲುವಿನ ಗೋಲಿನ ಅಂತರ ಅಥವಾ ಅತಿ ಹೆಚ್ಚು ಗೋಲು ಗಳಿಸಿದ ತಂಡ ಅಥವಾ ಆ ಎರಡು ತಂಡಗಳ ನಡುವಿನ ಇದುವರೆಗಿನ ಪಂದ್ಯಗಳಲ್ಲಿ ಅತಿ ಹೆಚ್ಚು ಗೆದ್ದಿರುವ ತಂಡ 16ರ ಹಂತಕ್ಕೆ ಅರ್ಹತೆ ಗಿಟ್ಟಿಸುತ್ತದೆ.

ನಾಕೌಟ್ (16ರ ಹಂತ)

16ರ ಹಂತದಲ್ಲಿ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. ಒಂದು ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡ ಮತ್ತೊಂದು ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದೊಂದಿಗೆ ಸ್ಪರ್ಧಿಸುತ್ತದೆ. ಗೆದ್ದವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಪಂದ್ಯ ಡ್ರಾ ಆದರೆ ವಿಜೇತ ತಂಡವನ್ನು ಗುರುತಿಸಲು ಹೆಚ್ಚಿನ ಸಮಯ ನೀಡಲಾಗುತ್ತದೆ ಅಥವಾ ಪೆನಾಲ್ಟಿ ಶೂಟೌಟ್ ನಡೆಸಲಾಗುತ್ತದೆ. ಹೀಗೆ 4 ಗುಂಪಿನಿಂದ 8 ತಂಡಗಳು ಕ್ವಾರ್ಟರ್ ಫೈನಲ್ ತಲುಪುತ್ತವೆ.

ಕ್ವಾರ್ಟರ್ ಫೈನಲ್

ಇಲ್ಲಿಯೂ ಸಹ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. 8 ತಂಡಗಳಿಗೆ ನಾಲ್ಕು ಪಂದ್ಯಗಳು ನಡೆದು ಗೆದ್ದವರು ಸೆಮಿಫೈನಲ್ ತಲುಪುತ್ತಾರೆ. ಸೋತ ತಂಡ ಹೊರನಡೆಯುತ್ತದೆ.

ಸೆಮಿಫೈನಲ್

ನಾಲ್ಕು ತಂಡಗಳ ಎರಡು ಸೆಮಿಫೈನಲ್ ಪಂದ್ಯಗಳು ನಡೆಯುತ್ತವೆ. ಗೆದ್ದ ಎರಡು ತಂಡ ನೇರವಾಗಿ ಫೈನಲ್ ಪ್ರವೇಶ ಪಡೆಯುತ್ತವೆ. ಸೋತ ತಂಡಗಳ ನಡುವೆ ಮೂರನೇ ಸ್ಥಾನಕ್ಕಾಗಿ ಒಂದು ಪಂದ್ಯ ನಡೆಯುತ್ತದೆ.

ಫೈನಲ್

ಅಂತಿಮವಾಗಿ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತದೆ. ಪ್ರಸ್ತುತ ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಡಿಸೆಂಬರ್ 18 ರಂದು ನಡೆಯಲಿದೆ.

ಇದುವರೆಗೂ ನಡೆದ 21 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಬ್ರೆಜಿಲ್ ದೇಶವು ಎಲ್ಲಾ ವಿಶ್ವಕಪ್‌ಗಳಲ್ಲಿಯೂ ಅರ್ಹತೆ ಪಡೆದು ಆಡಿದೆ. ಅಲ್ಲದೆ 5 ಬಾರಿ ಚಾಂಪಿಯನ್ ಆಗುವ ಮೂಲಕ ದಾಖಲೆ ನಿರ್ಮಿಸಿದೆ. ಉಳಿದಂತೆ ಜರ್ಮನಿ ಮತ್ತು ಇಟಲಿ ತಂಡಗಳು ತಲಾ ನಾಲ್ಕು ಬಾರಿ ಚಾಂಪಿಯನ್ ಆಗಿವೆ. ಹಾಲಿ ಚಾಂಪಿಯನ್ ಫ್ರಾನ್ಸ್, ಅರ್ಜೆಂಟೀನಾ ಮತ್ತು ಉರುಗ್ವೆ ತಂಡಗಳು ತಲಾ ಎರಡು ಬಾರಿ ಚಾಂಪಿಯನ್ ಆಗಿವೆ. ಇಂಗ್ಲೆಂಡ್ ಮತ್ತು ಸ್ಪೇನ್ ತಲಾ ಒಮ್ಮೆ ಟ್ರೋಫಿ ಎತ್ತಿ ಹಿಡಿದಿವೆ.

ಇದನ್ನೂ ಓದಿ: ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...