Homeಚಳವಳಿಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸಗೈದ ಆರೋಪಿಗಳನ್ನು ಬಂಧಿಸಿ: ದಾವಣಗೆರೆಯಲ್ಲಿ ಪ್ರತಿಭಟನೆ

ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸಗೈದ ಆರೋಪಿಗಳನ್ನು ಬಂಧಿಸಿ: ದಾವಣಗೆರೆಯಲ್ಲಿ ಪ್ರತಿಭಟನೆ

ಆರೋಪಿಗಳ ಬಂಧನವಾಗಬೇಕು, ಇದೇ ಜಾಗದಲ್ಲಿ ಡಾ.ತಿಪ್ಪೇಸ್ವಾಮಿ ಮತ್ತು ಅವರ ಕುಟುಂಬದವರ ಸಮಾಧಿ ಮರು ನಿರ್ಮಾಣ ಮಾಡಬೇಕು ಮತ್ತು ಇಂತಹ ತಪ್ಪಿಗಾಗಿ ಆರೋಪಿಗಳು ನಾಡಿನ ಕ್ಷಮೆ ಕೇಳಬೇಕು - ಸಿ.ಎಸ್ ದ್ವಾರಕನಾಥ್

- Advertisement -
- Advertisement -

ದಾವಣಗೆರೆಯ ದಲಿತ ಮುಖಂಡರು, ಮಾಜಿ ಶಾಸಕರು ಆದ ದಿವಂಗತ ಡಾ. ಬಿ.ಎಂ. ತಿಪ್ಪೇಸ್ವಾಮಿ ಹಾಗೂ ಅವರ ಕುಟುಂಬದ ಮೂರು ಸದಸ್ಯರ ಸಮಾಧಿಗಳನ್ನು ಅತಿಕ್ರಮಣಕಾರರು ಧ್ವಂಸಗೊಳಿಸಿ, ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಬಹೃತ್ ಪ್ರತಿಭಟನೆ ನಡೆಸಲಾಯಿತು.

ನೂರಾರು ಪ್ರತಿಭಟನಾಕಾರರು ಸಮಾಧಿ ಸ್ಥಳದಿಂದ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಎಸಿ ಕಚೇರಿವರೆಗೆ ಸಾಗಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ತಿಪ್ಪೇಸ್ವಾಮಿಯವರ ಪುತ್ರಿಯಾದ ಲೇಖಕಿ ಬಿ.ಟಿ ಜಾಹ್ನವಿಯವರು ಮಾತನಾಡಿ “ನೊಂದವರಿಗೆ ನ್ಯಾಯ ನೀಡಲು ಬದಲು ಆರೋಪಿಗಳನ್ನು ರಕ್ಷಿಸಲಾಗುತ್ತಿದೆ. ನಕಲಿ ದಾಖಲೆ ಸೃಷ್ಟಿಸಿ ಅನ್ಯಾಯವೆಸಗಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ನವೆಂಬರ್ 21 ಈ ಘಟನೆ ನಡೆದಾಗ ಮಾಹಿತಿ ತಿಳಿದು ನಾನು ಜಾಗಕ್ಕೆ ಬರುವಷ್ಟರಲ್ಲಿ ಎಲ್ಲಾ ಸಮಾಧಿಗಳನ್ನು ಧ್ವಂಸಗೊಳಿಸಿಬಿಟ್ಟಿದ್ದರು. ಸ್ಥಳದಲ್ಲಿ ಗಣೇಶ್ ಹುಲುಮನೆ ಎಂಬುವವರಿದ್ದರು. ಏಕೆ ನಮ್ಮ ತಂದೆಯವರ ಸಮಾಧಿ ಹೊಡೆದಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ನಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದರು. ಅದರ ಮಾರನೇಯ ದಿನ ಎಸ್‌ಪಿಯವರನ್ನು ಭೇಟಿಯಾಗಿ ದೂರು ನೀಡಿದ್ದೇವೆ. ಆದರೂ ಆರೋಪಿಗಳನ್ನು ಬಂಧಿಸಿಲ್ಲ, ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸರು ಅವರ ಬಳಿ 1955ರ ಕಾಲದಿಂದಲೂ ದಾಖಲೆಗಳಿವೆ ಎನ್ನುತ್ತಿದ್ದಾರೆ. ಆದರೆ ಇದು ಸಿವಿಲ್ ವಿಷಯವಾಗಿದ್ದು ನಾವು ಕೋರ್ಟ್‌ನಲ್ಲಿ ಅದನ್ನು ಪರಿಹರಿಸಿಕೊಳ್ಳುತ್ತೇವೆ. ಆದರೆ ಇಲ್ಲಿ ನಮ್ಮ ತಂದೆಯವರು ಸೇರಿ ನಮ್ಮ ಕುಟುಂಬದ ನಾಲ್ವರ ಸಮಾಧಿಗಳಿವೆ. ಇಷ್ಟು ಸಮಾಧಿಗಳನ್ನು ನಾವು 1990ರಿಂದ ಕಟ್ಟುವಾಗ ಅವರು ದಾಖಲೆಗಳಿದ್ದರೂ ಏಕೆ ಸುಮ್ಮನಿದ್ದರು? ಈ ಜಮೀನಿನ ಖಾತೆ ನಮ್ಮ ಅಣ್ಣನ ಹೆಸರಿನಲ್ಲಿದೆ. ನಾವು ಇದುವರೆಗೂ ಕಂದಾಯ ಸಹ ಕಟ್ಟುತ್ತಿದ್ದೇವೆ. 2012ರವರೆಗೂ ಪಹಣಿ ಸಹ ಅವರ ಹೆಸರಿನಲ್ಲಿತ್ತು. ಆದರೆ 2013ರಲ್ಲಿ ಪಹಣಿಯನ್ನು ರವಿಕುಮಾರ್ ಎಂಬುವವರ ಹೆಸರಿಗೆ ಹೇಗೆ ಮಾಡಲಾಗಿದೆ ಎಂಬುದು ನಮಗೆ ಗೊತ್ತಿಲ್ಲ. ಇದನ್ನು ಪರೀಶಿಲೀಸಬೇಕು, ನಕಲಿ ದಾಖಲೆ ಸೃಷ್ಟಿಸಿದವರು ಮತ್ತು ಅದರಲ್ಲಿ ಭಾಗಿಯಾದ ಅಧಿಕಾರಿಗಳಿಗೂ ಶಿಕ್ಷೆಯಾಗಬೇಕೆಂದು ಅವರು ಒತ್ತಾಯಿಸಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್ ದ್ವಾರಕನಾಥ್‌ರವರು ಮಾತನಾಡಿ, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ. ಒಂದು ಬಲಿಷ್ಠ ಸರ್ಕಾರವಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ. ಹಾಗಾಗಿ ಈ ದುರ್ಘಟನೆಗೆ ಸರ್ಕಾರವೇ ನೇರ ಹೊಣೆಯಾಗಿದೆ. ಸಮಾಧಿ ಧ್ವಂಸಮಾಡಿ ಮೂರು ದಿನವಾದರೂ ಇದುವರೆಗೂ ಆರೋಪಿಗಳ ಬಂಧನವಾಗಿಲ್ಲ. ಇದು ಏಕೆ ಎಂದು ಅರ್ಥವಾಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೊದಲನೇಯದಾಗಿ ಆರೋಪಿಗಳ ಬಂಧನವಾಗಬೇಕು, ಇದೇ ಜಾಗದಲ್ಲಿ ಡಾ.ತಿಪ್ಪೇಸ್ವಾಮಿ ಮತ್ತು ಅವರ ಕುಟುಂಬದವರ ಸಮಾಧಿ ಮರು ನಿರ್ಮಾಣ ಮಾಡಬೇಕು ಮತ್ತು ಇಂತಹ ತಪ್ಪಿಗಾಗಿ ನಾಡಿನ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: ದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...