Homeರಾಷ್ಟ್ರೀಯಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

ಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

- Advertisement -
- Advertisement -

ನಿವೃತ್ತ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ (ಅನೂಪ್ ಬರನ್ವಾಲ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಮತ್ತು ಓರ್ಸ್) ನೇಮಕ ಮಾಡುವಲ್ಲಿ ಒಕ್ಕೂಟ ಸರ್ಕಾರವು “ಭಾರಿ ಆತುರ” ಪಡಿಸಿರುವ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಸಂವಿಧಾನ ಪೀಠವು, ಒಕ್ಕೂಟ ಸರ್ಕಾರವು ಕೇವಲ 24 ಗಂಟೆಗಳ ಅವಧಿಯಲ್ಲಿ ಗೋಯೆಲ್‌ ಅವರ ಮೌಲ್ಯಮಾಪನ ಮತ್ತು ಆಯ್ಕೆ ಮಾಡಲಾಗಿದೆ ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅರುಣ್ ಗೋಯೆಲ್ ನೇಮಕಾತಿ ಕಡತವನ್ನು ನವೆಂಬರ್ 18 ರಂದು ಮುಂದೆ ತರಲಾಗಿದೆ. ಇದರ ನಂತರ ಹೆಸರುಗಳನ್ನು ಪರಿಶೀಲಿಸಲಾಗುತ್ತದೆ. ನಂತರ ಪ್ರಧಾನಿ ಬರುತ್ತಾರೆ… ಸಾಮಾನ್ಯವಾಗಿ ಇಷ್ಟು ತರಾತುರಿಯಲ್ಲಿ ನೇಮಕ ಮಾಡಲಾಗುತ್ತದೆಯೇ” ಎಂದು ನ್ಯಾಯಮೂರ್ತಿ ಜೋಸೆಫ್ ಅವರು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರನ್ನು ಕೇಳಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ: ನಿರಂತರ ಚರ್ಚೆಗಳ ಒಳಹೊರಗೆ

“ಗೋಯೆಲ್ ಅವರ ನೇಮಕವನ್ನು ನವೆಂಬರ್ 18 ರಂದು ಒಂದೇ ದಿನದಲ್ಲಿ ಮಾಡಿದ್ದೀರಿ. ಈ ಬಗ್ಗೆಗಿನ ಕಡತವು ಅದನ್ನು ಸೂಚುಸುತ್ತಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಕಾರ್ಯಾಂಗವು ಅಧಿಕಾರ ಅನುಭವಿಸುತ್ತದೆ ಎಂಬ ಕಾರಣಕ್ಕೆ ಭಾರತದ ಸಂವಿಧಾನದ 324(2)ನೇ ವಿಧಿಯನ್ನು ಉಲ್ಲಂಘಿಸಿ ಚುನಾವಣಾ ಆಯುಕ್ತರ ನೇಮಕಾತಿಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಈ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಗೋಯೆಲ್ ಅವರು ನವೆಂಬರ್ 18ರ ಶುಕ್ರವಾರದಂದು ತಮ್ಮ ಹಿಂದಿನ ಪೋಸ್ಟಿಂಗ್‌ನಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ನವೆಂಬರ್ 19 ರಂದು ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು ಮತ್ತು ನವೆಂಬರ್ 21 ರಂದು ಅಧಿಕಾರ ವಹಿಸಿಕೊಂಡಿದ್ದರು.

ಇದನ್ನೂ ಓದಿ: ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ಭಾರತೀಯ ಚುನಾವಣಾ ಆಯೋಗ (ಇಸಿಐ)ದ ನೇಮಕಾತಿಗಳಿಗೆ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಬಾಕಿ ಇರುವಾಗ ಈ ನೇಮಕಾತಿಯನ್ನು ಮಾಡಲಾಗಿತ್ತು. ಹೀಗಾಗಿ ಗೋಯೆಲ್ ಅವರನ್ನು ಚುನಾವಣಾ ಆಯುಕ್ತವಾರಿ ನೇಮಿಸಿದ್ದಕ್ಕೆ ಸಂಬಂಧಿಸಿದ ಕಡತವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಬುಧವಾರ ಸರ್ಕಾರಕ್ಕೆ ಸೂಚಿಸಿತ್ತು.

ಅದರಂತೆ ಒಕ್ಕೂಟ ಸರ್ಕಾರವು ಕಡತಗಳನ್ನು ಹಾಜರುಪಡಿಸಿದ್ದು, ಪೀಠವು ಇಂದು ಪರಿಶೀಲಿಸಲು ಮುಂದಾಯಿತು.

“ನಿಮ್ಮ ಮೊದಲ ಪುಟದ ಪ್ರಕಾರ, ಈ ಹುದ್ದೆಯು ಮೇ 15 ರಿಂದ ಖಾಲಿಯಾಗಿದೆ. ಮೇ ನಿಂದ ನವೆಂಬರ್‌ ತಿಂಗಳ ವರೆಗೆ ಕಾದು, ನವೆಂಬರ್‌ನಲ್ಲಿ ಎಲ್ಲವನ್ನೂ ಸೂಪರ್‌ಫಾಸ್ಟ್ ಆಗಿ ಮಾಡಬೇಕು ಎಂದು ಸರ್ಕಾರಕ್ಕೆ ಯಾಕೆ ಅನಿಸಿತು ಎಂದು ನಮಗೆ ಹೇಳಬಹುದೇ. ಎಲ್ಲಿ ಇಚ್ಛೆ ಇರುತ್ತದೋ ಅಲ್ಲಿ ದಾರಿ ಇರುತ್ತದೆ ಎಂದು ನಮಗೆ ತಿಳಿದಿದೆ” ಎಂದು ನ್ಯಾಯಮೂರ್ತಿ ಅಜಯ್ ರಸ್ತೋಗಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

“ಅದೇ ದಿನ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಕೇವಲ 24 ಗಂಟೆಗಳಲ್ಲಿ ಯಾವ ರೀತಿಯ ಮೌಲ್ಯಮಾಪನ ನಡೆದಿದೆ” ಎಂದು ನ್ಯಾಯಾಲಯ ಪ್ರಶ್ನಿಸಿದೆ.

“ಸರಿಯಾದ ಪ್ರಕ್ರಿಯೆಗಳೊಂದಿಗೆ ಹೆಸರನ್ನು ಪರಿಗಣಿಸಲಾಗಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. 12 ಅಥವಾ 24 ಗಂಟೆಗಳಲ್ಲಿ ಸಾರ್ವಜನಿಕ ಕಚೇರಿಗಳಲ್ಲಿ ಎಷ್ಟು ನೇಮಕಾತಿಗಳು ನಡೆಯುತ್ತವೆ? ಇಂತಹ ಪ್ರಶ್ನೆಗಳು ಬೆಳೆಯುತ್ತಲೆ ಹೋಗುತ್ತದೆ. ಅಂತಹ ಎಲ್ಲಾ ನಿದರ್ಶನಗಳನ್ನು ಪಡೆಯಬಹುದೆ” ಎಂದು ಒಕ್ಕೂಟ ಸರ್ಕಾರದ ಪರ ಹಾಜರಾದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಇದಕ್ಕೆ ಪ್ರಶ್ನಿಸಿದ ನ್ಯಾಯಾಲಯ, ಸೂಚಿಸಿದ ಕಾರ್ಯವಿಧಾನವನ್ನು ಸರಿಯಾಗಿ ಅನುಸರಿಸಲಾಗಿದೆಯೇ ಎಂದು ತಿಳಿಯಲು ಪೀಠ ಬಯಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

“ನೀವು ನೇಮಕಾತಿಯಲ್ಲಿ ಕೈಗೊಂಡ ಪ್ರಕ್ರಿಯೆಯನ್ನು ಮಾತ್ರ ನಾವು ತಿಳಿದುಕೊಳ್ಳಲು ಬಯಸುತ್ತೇವೆ. ನೀವು ಟಾಸ್ ಹಾಕಿ ಎರಡೂ ಕಡೆ ಬಿದ್ದರೂ ಗೆಲ್ಲುತ್ತೀರಿ. ನಮಗೆ ತಿಳಿದಂತೆ ಅಧಿಕಾರ ಹೊಂದಿರುವ ವ್ಯಕ್ತಿ ನಿಮಗೆ ವಿಧೇಯನಾಗಿದ್ದರೆ ಏನು ಮಾಡುವುದು” ಎಂದು ಜಸ್ಟೀಸ್ ಜೋಸೆಫ್ ಪ್ರಶ್ನಿಸಿದ್ದಾರೆ.‘

“ಅವರು ನಮಗೆ ವಿಧೇಯನೆಂದು ಯಾರಾದರೊಬ್ಬರು ಹೇಳುತ್ತಾರೆ. ಅದು ಅಲ್ಲ ಎಂದು ಇನ್ನೊಬ್ಬ ಹೇಳುತ್ತಾರೆ. ಇವುಗಳಲ್ಲಿ ಕೋರ್ಟ್‌ ಯಾರನ್ನು ಪರಿಗಣಿಸುತ್ತದೆ” ಅಟಾರ್ನಿ ಜನರಲ್‌ ಕೇಳುತ್ತಾರೆ.

“ನಾಲ್ವರಿಗಿಂತ ಮುಂಚಿತವಾಗಿ ಅವರನ್ನು ಹೇಗೆ ಆಯ್ಕೆ ಮಾಡಲಾಗಿದೆ ಎಂದು ನಮಗೆ ತಿಳಿಸಿ” ಎಂದು ನ್ಯಾಯಮೂರ್ತಿ ಜೋಸೆಫ್ ಪಟ್ಟು ಹಿಡಿದರು.

ಇದನ್ನೂ ಓದಿ: ಪ್ರೊ.ಜಿ.ಎನ್. ಸಾಯಿಬಾಬಾ ಬಿಡುಗಡೆಯ ಆದೇಶ ಅಮಾನತು ಮಾಡಿದ ಸುಪ್ರೀಂಕೋರ್ಟ್‌

“ಅವರು ಸ್ವಯಂಪ್ರೇರಿತ ನಿವೃತ್ತಿ ಪಡೆದಿದ್ದು, ಸೇರಿದಂತೆ ಇತ್ಯಾದಿ ವಿಚರಗಳನ್ನು ನಾವು ಕಂಡುಕೊಂಡಿದ್ದೇವೆ…ಇದು ಸಾಮಾನ್ಯವೇ? ಸಾಮಾನ್ಯವಾಗಿ ಈ ರೀತಿ ನಡೆಯುತ್ತದೆಯೇ’’ ಎಂದು ನ್ಯಾಯಮೂರ್ತಿ ಬೋಸ್ ಕೇಳಿದ್ದಾರೆ.

ಈ ವೇಳೆ ಉತ್ತರಿಸಿದ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್‌, “ಅವರು ಹೇಗಿದ್ದರೂ ಡಿಸೆಂಬರ್ 31 ರಂದು ನಿವೃತ್ತರಾಗಲಿದ್ದಾರೆ” ಎಂದು ಉತ್ತರಿಸಿದ್ದಾರೆ.

ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...