Homeಸಿನಿಮಾಕ್ರೀಡೆಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ - ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

ಫಿಫಾ ಪುಟ್ಬಾಲ್: ಏಕೈಕ ಗೋಲಿನಿಂದ ಗೆದ್ದ ಸ್ವಿಜರ್ಲ್ಯಾಂಡ್ – ಗೋಲು ಬಾರಿಸಿದ ಬ್ರೀಲ್ ಎಂಬೋಲೊ ಸಂಭ್ರಮಿಸಲಿಲ್ಲವೇಕೆ?

- Advertisement -
- Advertisement -

ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಜಿ ಗುಂಪಿನ ಲೀಗ್ ಪಂದ್ಯದಲ್ಲಿ ಸ್ವಿಜರ್ಲ್ಯಾಂಡ್ ತಂಡವು ಕ್ಯಾಮರೂನ್ ವಿರುದ್ಧ ಏಕೈಕ ಗೋಲಿನಿಂದ (1-0) ಗೆಲುವು ದಾಖಲಿಸಿದೆ. ಆದರೆ ಗೋಲು ಬಾರಿಸಿದ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಸಂಭ್ರಮಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಲ್ ಜನಾಬ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದ 48ನೇ ನಿಮಿಷದಲ್ಲಿ ಸ್ವಿಜರ್ಲ್ಯಾಂಡ್ ಆಟಗಾರ ಬ್ರೀಲ್ ಎಂಬೋಲೊ ಗೋಲು ಗಳಿಸಿದ ಕಾರಣದಿಂದ ಆ ತಂಡ ಗೆಲುವು ದಾಖಲಿಸಿ 3 ಅಂಕ ಸಂಪಾದಿಸಿದತು. ಆದರೆ ಗೋಲು ಗಳಿಸಿದ ನಂತರ ಅವರು ಸಂಭ್ರಮಾಚರಣೆಯ ಬದಲಿಗೆ ತನ್ನ ಎರಡೂ ಕೈ ಎತ್ತಿ ಶರಣಾಗತಿಯಲ್ಲಿರುವಂತೆ ಕಂಡುಬಂದರು. ಅವರು ಮೂಲತಃ ಕ್ಯಾಮರೂನ್ ದೇಶದವರಾಗಿದ್ದು ತನ್ನ ಸ್ವದೇಶದ ವಿರುದ್ಧವೇ ಗೋಲು ಗಳಿಸಿದ್ದು ಅವರು ಸಂಭ್ರಮಿಸದಿರಲು ಕಾರಣವಾಗಿತ್ತು.

ಕ್ಯಾಮರೂನ್‌ನ ರಾಜಧಾನಿ ಯೌಂಡೆಯಲ್ಲಿ ಜನಿಸಿದ ಬ್ರೀಲ್ ಎಂಬೋಲೊ ಬಾಸೆಲ್ ನಗರದಲ್ಲಿ ಬೆಳೆದಿದ್ದರು. ಎಂಟು ವರ್ಷಗಳ ಹಿಂದಿನವರೆಗೆ ಸ್ವಿಸ್ ಪೌರತ್ವವನ್ನು ಪಡೆದಿರದಿದ್ದ ಅವರು ಇದೀಗ ಸ್ವಿಟ್ಜರ್ಲೆಂಡ್‌ನ ಫಾರ್ವರ್ಡ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

ಜಿ ಗುಂಪಿನಲ್ಲಿ ಈ ದೇಶಗಳ ಜೊತೆಗೆ ಬಲಿಷ್ಠ ಬ್ರೆಜಿಲ್ ಮತ್ತು ಸೆರ್ಬಿಯಾ ತಂಡಗಳಿದ್ದು, ಈ ಪಂದ್ಯದಲ್ಲಿ ಗೆಲ್ಲುವುದು ಎರಡೂ ತಂಡಕ್ಕೂ ಅನಿವಾರ್ಯವಾಗಿತ್ತು. ಆದರೆ ಬ್ರೀಲ್ ಎಂಬೋಲೊ ಗಳಿಸಿದ ಏಕೈಕ ಗೋಲಿನ ಸಹಾಯದಿಂದ ಸ್ವಿಜರ್ಲ್ಯಾಂಡ್ ಶುಭಾರಂಭ ಮಾಡಿದ್ದು ಮತ್ತೊಂದು ಪಂದ್ಯ ಗೆಲ್ಲುವ ಮೂಲಕ 16ರ ಹಂತ ಪ್ರವೇಶಿಸಲು ತುದಿಗಾಲಲ್ಲಿ ಕಾಯುತ್ತಿದೆ.

ಕ್ಯಾಮರೂನ್ ದೇಶವು ಇಂದಿನ ಸೋಲಿನೊಂದಿಗೆ ವಿಶ್ವಕಪ್‌ ಪುಟ್ಬಾಲ್ ಪಂದ್ಯದಲ್ಲಿ ಸತತ 8ನೇ ಸೋಲು ಕಂಡ ಅಪಖ್ಯಾತಿ ಒಳಗಾಯಿತು. ಅದರಲ್ಲಿಯೂ ತನ್ನದೇ ದೇಶದ ಆಟಗಾರ ಗೋಲಿನಿಂದ ಪಂದ್ಯ ಸೋತಿದ್ದು ಕ್ಯಾಮರೂನ್ ಅಭಿಮಾನಿಗಳಿಗೆ ತೀವ್ರ ನಿರಾಸೆ ತರಿಸಿತು.

ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡದ ಚಿಂತಕ ಸುರೇಶ್ ಕಂಜರ್ಪಣೆಯವರು, “ಇಂದಿನ ಫುಟ್ಬಾಲ್ ಪಂದ್ಯದ ಕತೆ ಇದು. ಸ್ವಿಟ್ಜರ್ಲೆಂಡ್‌‌ – ಕ್ಯಾಮರೂನ್ ಪಂದ್ಯದಲ್ಲಿ ಸ್ವಿಟ್ಜರ್ಲೆಂಡ್‌‌ ನ ಎಂಬೋಲೋ ಏಕ ಮಾತ್ರ ಗೋಲು ಹೊಡೆದು ಪಂದ್ಯ ಗೆಲ್ಲಿಸಿದ್ದಾನೆ. ವಿಪರ್ಯಾಸವೆಂದರೆ ಈತ ಕ್ಯಾಮರೂನ್ ಸಂಜಾತ. ಈಗ ಸ್ವಿಸ್ ಪ್ರಜೆ! ಆತನ ಮಾನಸಿಕ ಸ್ಥಿತಿ ಎರಡನೇ ಚಿತ್ರದಲ್ಲಿದೆ. ಗೋಲು ಹೊಡೆದ ಮೇಲೆ ಆತ ಸಂಭ್ರಮಿಸದೇ ಕೈ ಎತ್ತಿ ಸುಮ್ಮನೆ ನಿಂತಿದ್ದಾನೆ. ನಮ್ಮಲ್ಲಾಗಿದ್ದರೆ ಇಷ್ಟರೊಳಗೆ ಟು ರುಪೀಸ್ ಪಡೆ ಟ್ರೋಲ್ ಮಾಡಿ, ಆತನನ್ನು ಪಾಕಿಸ್ತಾನಕ್ಕೋ, ಕೈಲಾಸಕ್ಕೋ ಕಳಿಸುತ್ತಿತ್ತು” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...