Homeಕರ್ನಾಟಕಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

- Advertisement -
- Advertisement -

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಸುರತ್ಕಲ್ ಟೋಲ್ ಪ್ಲಾಜಾವನ್ನು ಹೆಜಮಾಡಿ ಟೋಲ್ ಗೇಟ್‌‌‌ಗೆ ವಿಲೀನ ಮಾಡಿದ್ದು, ಅಲ್ಲಿ ಸಂಗ್ರಹಿಸುವ ಟೋಲ್‌ ದರಗಳನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಗುರುವಾರ ಪ್ರಕಟಿಸಿದೆ. ಅದರಂತೆ, ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ಎಲ್ಲಾ ವಾಹನಗಳು ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುರತ್ಕಲ್ ಪ್ಲಾಜಾದ ಟೋಲ್‌ ಅನ್ನು ಒಟ್ಟು ಸೇರಿಸಿ ಪಾವತಿಸಬೇಕಾಗುತ್ತದೆ.

ಸರ್ಕಾರದ ಈ ನಿರ್ಧಾರದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀನ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಸುರತ್ಕಲ್ ಟೋಲ್ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿಯಲ್ಲಿ ಸಂಗ್ರಹಿಸಲು (ಸುಲಿಗೆ ನಡೆಸಲು) ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಈಗ ಹೆಜಮಾಡಿಯಲ್ಲಿ ಕಾರಿನ ಟೋಲ್ ದರ ಒಂದು ಬದಿಗೆ 40 ರುಪಾಯಿ ಇದ್ದದ್ದು 100 ರೂಪಾಯಿ ಆಗುತ್ತದೆ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ. ಏಳು ವರ್ಷಗಳ ಕಾಲ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸಂಗ್ರಹಿಸಿದ ನೂರಾರು ಕೋಟಿ ರೂಪಾಯಿಗೆ ಬೆಲೆಯೇ ಇಲ್ಲ” ಎಂದು ಅವರು ಹೇಳಿದ್ದಾರೆ.

“ಜನರ ಭಾವನೆ, ಕಷ್ಟ ಸುಖಗಳ ಅರಿವಿಲ್ಲದ ಸಂಸದ, ಶಾಸಕರುಗಳು ಮಾತ್ರ ಹೀಗೆ ನಡೆದುಕೊಳ್ಳಲು ಸಾಧ್ಯ. ಮತ ಹಾಕುವ ಇಲ್ಲಿನ ಜನರಿಗಿಂತ ನವಯುಗ್ ಟೋಲ್ ಕಂಪೆನಿಯ ಹಿತ ಮಾತ್ರ ಇವರಿಗೆ ಮುಖ್ಯವಾಯಿತು. ಜನತೆ ಇದನ್ನು ಒಪ್ಪಬಾರದು. ಅವಿಭಜಿತ ಜಿಲ್ಲೆಯ ಜನ ಒಂದೇ ಧ್ವನಿಯಾಗಿ ಈ ಅತ್ಯಂತ ಕೆಟ್ಟ ನಿರ್ಧಾರವನ್ನು ದೃಢವಾಗಿ ವಿರೋಧಿಸಬೇಕು. ಬಿಜೆಪಿ ಸಂಸದ, ಶಾಸಕರುಗಳಿಗೆ ಆಡಳಿತ ನಡೆಸುವ ಯಾವುದೇ ಅನುಭವ ಇಲ್ಲ ಎಂಬುದು ಈಗ ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತಾಯ್ತು‌” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದೇ ವೇಳೆ ಸುರತ್ಕಲ್‌ ಟೋಲ್ ವಿರೋಧಿ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಶುಕ್ರವಾರ 29 ನೇ ದಿನಕ್ಕೆ ಕಾಲಿಟ್ಟಿದೆ. ಸುರತ್ಕಲ್‌ನಲ್ಲಿ ಟೋಲ್‌ ಸಂಗ್ರಹ ನಿಲ್ಲುವವರೆಗೂ ಮುಂದುವರಿಯಲಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.

ಇದನ್ನೂ ಓದಿ: ‘ಸುರತ್ಕಲ್‌ ಟೋಲ್‌ ರದ್ದು’ | ಮಾಹಿತಿ ನೀಡಿದ ಸಂಸದ ನಳಿನ್ ಕುಮಾರ್‌; ಹಣ ಸಂಗ್ರಹ ನಿಲ್ಲುವವರೆಗೂ ಪ್ರತಿಭಟನೆ ಎಂದ ಹೋರಾಟ ಸಮಿತಿ

ಕಾರು, ಜೀಪ್, ವ್ಯಾನ್ ಇತ್ಯಾದಿ ಲಘು ಮೋಟಾರು ವಾಹನಗಳಿಗೆ (ಎಲ್‌ಎಂವಿ) ಸುರತ್ಕಲ್ ಪ್ಲಾಜಾದಲ್ಲಿ ಸಿಂಗಲ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 60 ರೂ. ಮತ್ತು ಹೆಜಮಾಡಿ ಪ್ಲಾಜಾದಲ್ಲಿ 40 ರೂ. ಇದೆ. ಇದೀಗ ಸುರತ್ಕಲ್ ಗೇಟ್ ವಿಲೀನದ ನಂತರ, ಹೆಜಮಾಡಿಯಲ್ಲಿ ಎಲ್‌ಎಂವಿಗೆ ಟೋಲ್ 100 ರೂ. ಗೆ ಏರಿಕೆಯಾಗಿದೆ.

ಸುರತ್ಕಲ್‌ನಲ್ಲಿ ಎಲ್‌ಎಂವಿ ರಿಟರ್ನ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 90 ರೂ. ಮತ್ತು ಹೆಜಮಾಡಿಯಲ್ಲಿ 65 ರೂ. ಇತ್ತು. ಇದೀಗ ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ LMV ಗೆ ರಿಟರ್ನ್ ಟ್ರಿಪ್ ಶುಲ್ಕ 155 ರೂ.ಗೆ ಏರಿಕೆ ಮಾಡಲಾಗಿದೆ.

ಸುರತ್ಕಲ್ ಪ್ಲಾಜಾದಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ ಪ್ರಸ್ತುತ ಶುಲ್ಕ 2,050 ರೂ ಇದ್ದು, ಹೆಜಮಾಡಿಯಲ್ಲಿ 1,410 ರೂ. ಇತ್ತು. ಟೋಲ್‌ ವಿಲೀನದ ನಂತರ ಹೆಜಮಾಡಿಯಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ 3,460 ರೂ. ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಅದೇ ರೀತಿ, ಬಸ್ಸುಗಳು, ಟ್ರಕ್ಗಳು ​​ಮತ್ತು ಇತರ ಭಾರೀ ವಾಹನಗಳು ಕೂಡ ವಿಲೀನದ ನಂತರ ಹೆಜಮಾಡಿಯಲ್ಲಿ ಸುರತ್ಕಲ್ ಪ್ಲಾಜಾದ ಟೋಲ್ ಅನ್ನು ಪಾವತಿಸಬೇಕಾಗುತ್ತದೆ. ಸುರತ್ಕಲ್ ಮತ್ತು ಹೆಜಮಾಡಿಯಲ್ಲಿ ಕ್ರಮವಾಗಿ 50 ಸಿಂಗಲ್ ಟ್ರಿಪ್‌ಗಳಿಗೆ ಮಾಸಿಕ ಪಾಸ್‌ಗೆ 6,940 ರೂ. ಮತ್ತು 4,765 ರೂ. ಪಾವತಿಸುತ್ತಿರುವ ಬಸ್‌ಗಳು ವಿಲೀನದ ನಂತರ ಹೆಜಮಾಡಿಯಲ್ಲಿ 11,705 ರೂ. ಪಾವತಿಸಬೇಕಾಗುತ್ತದೆ.

ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2010 ಮತ್ತು ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2014 ರ ಪ್ರಕಾರ ಟೋಲ್ ಮಾಡಬಹುದಾದ ಉದ್ದದ ಲೆಕ್ಕಾಚಾರವನ್ನು ಮಾಡಲಾಗಿದೆ ಎಂದು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಎಚ್‌.ಎಸ್. ಲಿಂಗೇಗೌಡ ಅವರು ಉಡುಪಿ ಜಿಲ್ಲಾಧಿಕಾರಿಗೆ ಗುರುವಾರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರದ ನಿರಂತರ ಕೋರಿಕೆ, ಸ್ಥಳೀಯ ಸಾರ್ವಜನಿಕ ಹಾಗೂ ವಿಐಪಿ ಉಲ್ಲೇಖಗಳ ಆಧಾರದ ಮೇಲೆ, ಸುರತ್ಕಲ್ ಟೋಲ್ ಪ್ಲಾಜಾವನ್ನು ಪಕ್ಕದ ಹೆಜಮಾಡಿ ಟೋಲ್ ಪ್ಲಾಜಾದೊಂದಿಗೆ ವಿಲೀನಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದೆ. ಅದರಂತೆ, ಸುರತ್ಕಲ್ ಟೋಲ್ ಪ್ಲಾಜಾಗೆ ಬಳಕೆದಾರರ ಶುಲ್ಕವನ್ನು ಈಗ ಹೆಜಮಾಡಿಯಲ್ಲಿ ವಿಧಿಸಲಾಗುತ್ತದೆ. ಟೋಲ್ ಪ್ಲಾಜಾ ಎರಡೂ ಸ್ಟ್ರೆಚ್‌ಗಳಿಗೆ ಟೋಲ್ ಶುಲ್ಕವನ್ನು ಸೇರಿಸುತ್ತದೆ” ಎಂದು ಲಿಂಗೇಗೌಡ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ರಕ್ಷಣೆ ಸೇರಿದಂತೆ ಅಗತ್ಯ ಬೆಂಬಲವನ್ನು ನೀಡುವಂತೆ NHAI ಉಡುಪಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಡಳಿತಾರೂಢ ಮನುವಾದಿಗಳಿಗೆ, ಜನಸಾಮಾನ್ಯರ ಹಿತಾಸಕ್ತಿಗಿಂತಲೂ, ಕಾರ್ಪೊರೇಟ್ ಕುಳಗಳ ಹಿತಾಸಕ್ತಿಯೇ ಮುಖ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...