Homeಅಂಕಣಗಳುಆತ್ಮಶ್ರೀಗಾಗಿ ಅವಧೂತರ ಬಳಿಹೋದ ಅಲ್ಪರು!

ಆತ್ಮಶ್ರೀಗಾಗಿ ಅವಧೂತರ ಬಳಿಹೋದ ಅಲ್ಪರು!

- Advertisement -
- Advertisement -

ನಮ್ಮ ಜನಪ್ರಿಯ ರಾಜಕಾರಣಿಯಾದ ಎಲ್.ಆರ್ ಶಿವರಾಮೇಗೌಡರು ಮಾದೇಗೌಡರನ್ನು ಕಟುವಾಗಿ ಟೀಕಿಸಿ ಆ ಕಾರಣವಾಗಿ ಕುಮಾರಣ್ಣನವರಿಂದ ನಿಂತ ನಿಲುವಿನಲ್ಲೇ ಪಾರ್ಟಿಯಿಂದ ವಜಾ ಆದ ಘಟನೆ ಈಗ ಹಳೆಯದು. ಆದರೇನು ಶಿವರಾಮೇಗೌಡರು ಇಂತಹ ಪನಿಶ್ಮೆಂಟಿಗೆಲ್ಲಾ ಹೆದರುವವರಲ್ಲ. ಅವರು ಈ ಹಿಂದೆ ಗೆದ್ದಿರುವುದೇ ಪಕ್ಷೇತರರಾಗಿ; ’ಈಗಲೂ ಮುಂಬರುವ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಲ್ಲುತ್ತೇನೆ. ಚಲುವರಾಯಸ್ವಾಮಿ ಮತ್ತು ಸುರೇಶ್‌ಗೌಡನ ಎದುರು ನನ್ನನ್ನು ಮತದಾರರು ಗೆಲ್ಲಿಸದಿದ್ದರೆ ಕೂಡಲೇ ಶಿರಶ್ಚೇದನ ಮಾಡಿಕೊಳ್ಳುತ್ತೆನೆಂದು’ ಹೆದರಿಸಿದ್ದಾರಲ್ಲಾ! ಸ್ವಾತಂತ್ರ್ಯ ಪಡೆಯುವುದಕ್ಕೇ ಹಲವು ವರ್ಷಗಳ ಮೊದಲು ಈ ದೇಶದಲ್ಲಿ ಸತಿಸಹಗಮನ ನಡಯುತ್ತಿತ್ತು. ಬಂಗಾಳದಲ್ಲಿಯೇ ವರ್ಷಕ್ಕೆ ಎಂಬತ್ತರಿಂದ ನೂರು ಜನ ಮಹಿಳೆಯರನ್ನು ಬೆಂಕಿಗೆ ದೂಡಲಾಗುತ್ತಿತ್ತು. ಜನ ಈ ದೃಶ್ಯವನ್ನು ಪದೇಪದೇ ನೋಡಿ ಮಾನವೀಯತೆಯನ್ನೆ ಕಳದುಕೊಂಡು ಮರುಗಟ್ಟಿಹೋಗಿದ್ದರು. ಆದುದರಿಂದ ಸತಿಸಹಗಮನ ಪದ್ಧತಿಯನ್ನು ನೋಡಲು ಯಾವಾಗಲೂ ಜಮಾಯಿಸುತ್ತಿದ್ದರು. ಅಂತದೇ ಮನಸ್ಥಿತಿಯ ಜನ ಈಗ ಹೆಚ್ಚಾಗಿರುವುದರಿಂದ, ದೇವೇಗೌಡರು ತಾವು ಸೋತಾಗ ಹಾಸನ ಜಿಲ್ಲೆಯನ್ನೇ ಬಹಿಷ್ಕರಿಸಿದಂತೆ, ಶಿವರಾಮೇಗೌಡರು ನಾಗಮಂಗಲದ ಕಡೆ ತಿರುಗಿ ನೋಡುವುದಿಲ್ಲ ಎಂದು ಶಪಥ ಬದಲಾಯಿಸಿಕೊಂಡರೆ ಒಳ್ಳೆಯದಲ್ಲವೆ, ಥೂತ್ತೇರಿ.

*****

ಈ ನೆಲದಲ್ಲಿ ಸದ್ಯಕ್ಕೆ ಎಂತಹ ವ್ಯಕ್ತಿಗಳಿಗೂ ಅಭಿಮಾನಿಗಳಿದ್ದಾರೆ. ಹೀಗಿರುವಾಗ ಗೌರಿಗದ್ದೆಯ ಅವಧೂತನಿಗೆ ಸಾವಿರಾರು ಮಂದಿ ಇರುವುದು ಅಚ್ಚರಿಯಲ್ಲ. ಈ ವಯಸ್ಸಿನಲ್ಲಿ ಇನ್ನೇನಾಗಬೇಕು ಎಂದು ಚಿಂತಿಸಬೇಕಾದ ದೇವೇಗೌಡರಿಂದ ಹಿಡಿದು ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಿ ಬಿಜೆಪಿಗಳ ಇ.ಡೀ ಈಡಿಯಟ್‌ಗಳಿಗೆ ತಕ್ಕ ಉತ್ತರ ಕೊಡಲು ಕಾದಿರುವ ಡಿ.ಕೆ ಶಿವಕುಮಾರ್ ಜೊತೆಗೆ, ಶಿವಕುಮಾರ್ ಅಭಿಮಾನಿಗಳೂ ಕೂಡ ಅವಧೂತನ ಅಭಿಮಾನಿಗಳಾಗಿರುವುದು ಅಚ್ಚರಿಯಲ್ಲ. ಕಳೆದ ಶತಮಾನದಲ್ಲಿ ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ ಎಂದು ಕರೆಕೊಟ್ಟು ವಿಚಾರ ಕ್ರಾಂತಿಗೆ ಆಹ್ವಾನ ನೀಡಿದ ಋಷಿಕವಿ ಕುವೆಂಪುರವರ ಸಂಬಂಧಿಗಳು ನಾವೆಂದು ಕಿರೀಟ ಧರಿಸಿ ಮೆರೆಯುತ್ತಿದ್ದ ಮೂರ್ಖರೆಲ್ಲಾ ಗೌರಿಗದ್ದೆ ಅವಧೂತನ ಪಾದಕ್ಕೆ ಬಿದ್ದು ಕುವೆಂಪು ಹೆಸರಿಗೆ ಮಸಿ ಬಳಿದಿವೆಯಂತಲ್ಲಾ. ಹಾಗೆ ನೋಡಿದರೆ ಕುವೆಂಪುರವರ ವಿಚಾರಧಾರೆಗೆ, ಮಂತ್ರ ಮಾಂಗಲ್ಯದ ಕಲ್ಪನೆಗೆ ಈ ಮಲೆನಾಡಿಗರು ತಿಲಾಂಜಲಿಯಿತ್ತು ಬಹಳ ವರ್ಷಗಳಾಗಿವೆ. ಆದ್ದರಿಂದ ಈ ಮಂದಮತಿಗಳು ನಾವು ಕುವೆಂಪು ಪ್ರದೇಶದವರು ಅವರ ಸಂಬಂಧಿಗಳು ಎಂದು ಹೇಳಿಕೊಳ್ಳುವುದನ್ನ ನಿಲ್ಲಿಸಿದರೆ ಅದೇ ಕುವೆಂಪುರವರಿಗೆ ಕೊಡುವ ಗೌರವ ಎಂದು ಕುವೆಂಪುರವರನ್ನು ನಿಜವಾಗಿ ಅನುಸರಿಸುವವರ ಸಲಹೆಯಾಗಿದೆಯಂತಲ್ಲಾ, ಥೂತ್ತೇರಿ.

*****

ಶ್ರೇಷ್ಠ ಸಂವಿಧಾನ ಪಡೆದಿರುವ ನಮ್ಮ ವ್ಯವಸ್ಥೆಯಲ್ಲಿ ಕಾನೂನಿಗಿಂತ ಧರ್ಮವೇ ದೊಡ್ಡದೆಂದು ಪ್ರತಿಪಾದಿಸಿದ ಚಿತ್ರದುರ್ಗ ಪ್ರದೇಶದ ಜಗದ್ಗುರುವೊಬ್ಬರು ಅದನ್ನೇ ಅಧಿಕೃತಗೊಳಿಸುತ್ತ ಹೊರಟಿದ್ದಾರಲ್ಲಾ. ಅದೂ ಕೂಡ ತಾನೇ ನಡೆಸುತ್ತಿರುವ ಅನಧಿಕೃತ ನ್ಯಾಯಾಲಯದ ಉದಾಹರಣೆಗಳನ್ನ ಉದಾಹರಿಸುತ್ತ! ಅದಷ್ಟೇ ಅಲ್ಲ ಅವರ ಮಾತನ್ನು ಅಲ್ಲಗಳೆದವರನ್ನು ನಿಂದಿಸಲು ಭಕ್ತಾದಿಗಳನ್ನ ಪ್ರಚೋದಿಸುತ್ತ. ಇಲ್ಲಿ ಪೊಲೀಸ್ ಠಾಣೆ, ನ್ಯಾಯಾಲಯ, ವಕೀಲರ ಅಗತ್ಯವೇ ಇಲ್ಲ; ಬದಲಿಗೆ ಧರ್ಮದ ಮಾನದಂಡದಿಂದಲೇ ಜಾದೂ ಮಾಡಬಹುದು. ಇರಲಿ ಗುರುಗಳು ಕಾನೂನಿಗೆ ತಿಲಾಂಜಲಿ ಇಟ್ಟ ಫಲವಾಗಿಯೇ ಏನೋ ತರಳಬಾಳು ಕೇಂದ್ರದಲ್ಲಿ ಅಕ್ರಮ ಕಟ್ಟಡ ನಿರ್ಮಿಸುತ್ತಿರವ ಆರೋಪದ ಮೇಲೆ ಬಿಬಿಎಂಪಿ ಆಯುಕ್ತರ ವಿರುದ್ದ ಲೋಕಾಯುಕ್ತಕ್ಕೆ ದೂರು ಹೋಗಿದೆ. ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮಗಳಿಗೆ ವ್ಯತಿರಿಕ್ತವಾಗಿ ತರಳಬಾಳು ಮಠವು ಆರ್.ಟಿ ನಗರದಲ್ಲಿ ಕಾನೂನುಬಾಹಿರ ಮತ್ತು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಜಿ.ಬಿ ವೆಂಕಟೇಶ್‌ರವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಮುಂದೆ ಬುದ್ಧಿಯವರು ಪ್ರತಿಪಾದಿಸಿದ ಧರ್ಮದ ಸೆಕ್ಷೆನ್‌ಗಳನ್ನೇ ಬಳಸಿ ಹೋರಾಡುತ್ತಾರೋ ಅಥವಾ ಕಾನೂನು ಸಮರಕ್ಕೆ ತಲೆಬಾಗುತ್ತಾರೋ ಎಂಬುದು ಕುತೂಹಲಕ್ಕೆಡೆಮಾಡಿದೆಯಲ್ಲಾ, ಥೂತ್ತೇರಿ.

*****

ದೆಹಲಿಯಿಂದ ಇಲ್ಲಿಯವರೆಗೆ ಈ ದೇಶದ ವ್ಯವಸ್ಥೆಯೇ ಹಾಳಾಗಿಹೋಗಿದೆ. ಆದರೂ ಬಿಜೆಪಿಗಳು ಮತ್ತೆ ಚುನಾವಣೆಯಲ್ಲಿ ಗೆದ್ದುಬರುವ ಆತ್ಮವಿಶ್ವಾಸಕ್ಕೆ ಕಾರಣವೇನು ಎಂಬುದಕ್ಕೆ ಸಾಕ್ಷಾಧಾರವಾಗಿ ಬೆಂಗಳೂರಲ್ಲಿ ನಡೆದಿರುವ ಮತಪೆಟ್ಟಿಗೆ ಕನ್ನದ ಹಗರಣ ಹೊರಬಿದ್ದಿದೆಯಲ್ಲಾ. ಯಾವುದೇ ಸರ್ಕಾರ ಬರಲಿ ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ಸರಕಾರ ರಚನೆ ಮಾಡುವ ಸಂಚಿನ ಭರವಸೆಯಿಂದ ಬೀಗುತ್ತಿರುವ ಬಿಜೆಪಿಗಳ ತಮಗೆ ಮತಹಾಕದವರನ್ನು ಮತದಾರರ ಪಟ್ಟಿಯಿಂದಲೇ ಕಿತ್ತು ಬಿಸಾಡುವ ಷಡ್ಯಂತ್ರ ರೂಪಿಸಿದ್ದಾರಂತಲ್ಲಾ. ಇಂತಹ ಯಾವ ಸಂಚೂ ಇಲ್ಲದೆ ಈ ದೇಶ ಇರುವವರೆಗೂ ನಾವು ಅಧಿಕಾರದಲ್ಲಿರುತ್ತೇವೆಂದು ಭಾವಿಸಿ ಆರಾಮವಾಗಿದ್ದ ಕಾಂಗೈಗಳಿಗೆ ಬಿಜೆಪಿ ಸಂಚಿಗೆ ಪ್ರತಿತಂತ್ರವೇ ಹೊಳೆಯದೆ ಪ್ರತಿಭಟನೆಗೆ ಸ್ಪಷ್ಟ ಕಾರಣವೂ ಹೊಳೆಯದೆ ಕಂಗಾಲಾಗಿ ಕೂತಿವೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...