Homeಅಂಕಣಗಳುಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

- Advertisement -
- Advertisement -

(ಭಾರತದ Dalit Human Rights Defenders Network ಎಂಬ ಸಂಸ್ಥೆಯು ‘No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಇದರಲ್ಲಿ ಭಾರತದ ಏಳು ರಾಜ್ಯಗಳಲ್ಲಿ ’ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ದಲಿತರ ಮೇಲೆ ನಡೆದ 60 ದೌರ್ಜನ್ಯಗಳನ್ನು ಪಟ್ಟಿ ಮಾಡಿದೆ. ಒಂದೊಂದೂ ಭೀಕರವಾಗಿದ್ದು, ಹಿಂದೂ ಮೇಲ್ಜಾತಿಗಳು ದಲಿತರ ಮೇಲೆ ನಡೆಸಿರುವ ಕ್ರೂರ ಕೃತ್ಯಗಳನ್ನು ಬಯಲುಗೊಳಿಸುತ್ತದೆ. ಆ ದಲಿತರ ಮೇಲಿನ ದೌರ್ಜನ್ಯಗಳ 10 ಘಟನೆಯಲ್ಲಿ ಇದು ಮೂರನೆಯದ್ದಾಗಿದೆ. ಇದನ್ನು ವರದಿ ಮಾಡುವ ಉದ್ದೇಶ ಖಂಡಿತವಾಗಿಯೂ ಹಿಂದೂ ಮೇಲ್ಜಾತಿಗಳ ಮನ ಪರಿವರ್ತನೆಯಲ್ಲ. ಬದಲಾಗಿ ’ಹಿಂದೂ ನಾವೆಲ್ಲ ಒಂದೂ’ ಎನ್ನುತ್ತಿರುವ ದಲಿತರ ಅಂಧಕಾರವನ್ನು ಕಳಚುವುದಾಗಿದೆ.)

ರಾಜಸ್ತಾನದ ಬಟೋಡ ಎಂಬ ಹಳ್ಳಿಯ ದಲಿತೆ ಪಾರ್ವತಿಗೆ (ಹೆಸರು ಬದಲಿಸಿದೆ) ಒಬ್ಬನೇ ಮಗ. ಅವನನ್ನು ಓದಿಸಿ ಉತ್ತಮ ಹಂತಕ್ಕೆ ಕಳಿಸಬೇಕೆಂಬುದೇ ಆಕೆಯ ಏಕೈಕ ಆಸೆ. ಆ ಕಾರಣಕ್ಕಾಗಿಯೇ ಸುಮಾರು 100 ಕಿಮೀ ದೂರದಲ್ಲಿರುವ ಪಟ್ಟಣ ’ದೌಸಾ’ಗೆ ಕೆಲಸಕ್ಕೆಂದು ದಿನವೂ ಪ್ರಯಾಣಿಸಬೇಕಿತ್ತು. 17 ವರ್ಷದ ಮಗ ರಘು ಇದ್ದಕ್ಕಿದ್ದಂತೆ ಕುಡಿತದ ಚಟವನ್ನು ಮೈಗೂಡಿಸಿಕೊಂಡಾಗ ಇನ್ನಿಲ್ಲದಂತೆ ನೊಂದುಕೊಂಡಿದ್ದ ಪಾರ್ವತಿ ತನ್ನ ಕನಸನ್ನು ಅರ್ಧಕ್ಕೆ ಕೈಬಿಡದೇ ಅವನ ಮನವೊಲಿಸಲು ಪ್ರಾರಂಭಿಸಿದ್ದಳು. ಆದರೇನು ಮಾಡುವುದು; ರಘು ಗಲಭೆಯೊಂದರಲ್ಲಿ ಜೈಲಿಗೂ ಹೋಗಿಬಿಟ್ಟನು. ಆಗಲೂ ಆತನ ಮನಸ್ಸನ್ನು ಹೇಗಾದರೂ ಮಾಡಿ ಬದಲಾಯಿಸಬೇಕೆಂಬ ಹಠಕ್ಕೆ ಬಿದ್ದು ದಿನವೂ ಜೈಲಿಗೆ ಹೋಗುವುದನ್ನೂ ರೂಢಿಸಿಕೊಂಡಿದ್ದಳು. ಇದೇ ಸಮಯದಲ್ಲಿ ಕೋವಿಡ್-19ನಿಂದಾಗಿ ದೇಶವೇ ಲಾಕ್‌ಡೌನ್ ಆಯಿತು. ಆದರೆ ಅಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಏಪ್ರಿಲ್ 21, 2020ರಂದು ಮಗನನ್ನು ನೋಡಲು ಬರಿಗಾಲಲ್ಲಿ ನಡೆದು ದೌಸಾಗೆ ಹೋಗಲು ಅಣಿಯಾದಳು. ಮಧ್ಯ ಅವರಿವರ ಸಹಾಯ ಪಡೆದು ಸಂಜೆಯಷ್ಟೊತ್ತಿಗೆ ಜೈಲಿನ ಬಳಿ ತಲುಪಿದಳಾದರೂ ಅವಳಿಗೆ ಮಗನನ್ನು ಭೇಟಿಯಾಗಲು ಬೆಳಗ್ಗೆಯವರೆಗೆ ಕಾಯಬೇಕಾಯಿತು. ಅಲ್ಲೇ ಜೈಲಿನ ಆವರಣದಲ್ಲಿಯೇ ಮಲಗಿಕೊಂಡು ಬೆಳಗ್ಗೆ ಎದ್ದು ಮಗನನ್ನು ಭೇಟಿಯಾಗಿ ಮತ್ತೆ ಅದೇ ರೀತಿಯಲ್ಲಿ ತನ್ನ ಹಳ್ಳಿ ಬಟೋಡಾಗೆ ಮರಳಿದಾಗ ಹಳ್ಳಿಯವರೆಲ್ಲರೂ ಆಕೆಯನ್ನು ಕ್ವಾರಂಟೈನ್‌ನಲ್ಲಿರಲು ಸೂಚಿಸಿದರು. ಅದೇ ಹಳ್ಳಿಯ ಸರ್ಕಾರಿ ಶಾಲೆಯನ್ನು ಕ್ವಾರಂಟೈನ್ ಕೇಂದ್ರವನ್ನಾಗಿಸಲಾಗಿತ್ತು. ಈ ತೀರ್ಮಾನ ನ್ಯಾಯಯುತವಾದುದೇ ಎಂದರಿತ ಪಾರ್ವತಿ ಕ್ವಾರಂಟೈನ್ ಕೇಂದ್ರಕ್ಕೆ ತೆರಳಿದಳು.

ಇದನ್ನೂ ಓದಿ: ಮಾತು ಮರೆತ ಭಾರತ-28; ಲಾಕ್‌ಡೌನ್ ಫೈಲ್ಸ್ : ದಲಿತರ ಪಾಲಿನ ಕಗ್ಗತ್ತಲ ದೀಪಾವಳಿ

200 ಕಿಮೀ ದೂರದ ಪ್ರಯಾಣ ಮಾಡಿದ್ದ ಪಾರ್ವತಿ ಬಳಲಿದ್ದಳು. ಸರಿಯಾದ ಆಹಾರ ನೀರಿಲ್ಲದೆ ನಿತ್ರಾಣಳಾಗಿದ್ದಳು. ಆ ಕ್ವಾರಂಟೈನ್ ಕೇಂದ್ರದಲ್ಲಿ ಆಕೆಯೊಬ್ಬಳೇ ತಂಗಬೇಕಾಯಿತು. ಪೊಲೀಸರು ಮತ್ತು ಶುಶ್ರೂಷಕ ಸಿಬ್ಬಂದಿ ಮುಂಜಾಗ್ರತೆಯ ಕಾರಣಕ್ಕಾಗಿ ಆಕೆಯೊಂದಿಗೆ ಯಾರನ್ನೂ ತಂಗಲು ಬಿಡಲಿಲ್ಲ. ಆದರೂ ಸುದೀರ್ಘ ಪ್ರಯಾಣದ ಕಾರಣ ಒಂದಷ್ಟು ಆಹಾರ ಹೊಟ್ಟೆಗೆ ಬಿದ್ದೊಡನೆ ಕಣ್ಣು ಎಳೆಯಲು ಆರಂಭಿಸಿದ್ದವು. ಗಾಢ ನಿದ್ರೆಗೆ ಜಾರಿದಳು.

ಇದೇ ಸಮಯದಲ್ಲಿ ಪಾರ್ವತಿ ಕೊಠಡಿಗೆ ಬಂದ ರಿಷಿಕೇಶ್ ಮೀನ, ಲಖನ್ ರಾಮ್ ಮತ್ತು ಕಮಲ್ ಖರ್ವಾಲ್ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡರು. ನಿದ್ದೆಯ ಮಂಪರಿನಲ್ಲಿದ್ದ ಪಾರ್ವತಿಗೆ ಅದೇನಾಗುತ್ತಿದೆ ಎಂಬುದು ತಿಳಿಯುವಷ್ಟರಲ್ಲಿ ಆಕೆಯ ಕಾಲುಗಳು ಹಗ್ಗದಿಂದ ಬಿಗಿಯಾಗಿ ಬಂಧಿಯಾಗಿದ್ದವು. ಹಿಂದೂ ಮೇಲ್ಜಾತಿಯ ಆ ಮೂರು ಪ್ರಾಣಿಗಳು ಆಕೆಯ ಮೇಲೆ ಒಬ್ಬರಾದ ಮೇಲೊಬ್ಬರಂತೆ ಅತ್ಯಾಚಾರ ಮಾಡಿದರು. ಪಾರ್ವತಿಯನ್ನು ಕಾಪಾಡಲು ಅಲ್ಲಿ ಒಂದು ನರಪಿಳ್ಳೆಯೂ ಸಹ ಇರಲಿಲ್ಲ. ಪೊಲೀಸ್ ಮತ್ತು ದಾದಿಯರು ಗೌಗತ್ತಲಾಗುತ್ತಿದ್ದಂತೆ ಮನೆಗೆ ತೆರಳಿದ್ದರು. ಹಳ್ಳಿಯ ವ್ಯಕ್ತಿಯೊಬ್ಬನಿಗೆ ಸೆಕ್ಯುರಿಟಿ ಕೆಲಸ ಒಪ್ಪಿಸಿ ಮನೆಯಲ್ಲಿ ಹಾಯಾಗಿ ಮಲಗಲು ತೆರಳಿದ್ದರು.

ಬೆಳಗ್ಗೆ ಈ ವಿಷಯವನ್ನು ಪಾರ್ವತಿ ಪೊಲೀಸರಿಗೆ ತಿಳಿಸಿದಾಗ ಆಕೆಯನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯಿಂದಾಗಿ ಪಾರ್ವತಿಗೆ ಕೋವಿಡ್ ಪಾಸಿಟಿವ್ ಬಂದಿತಲ್ಲದೆ ಅತ್ಯಾಚಾರವಾಗಿರುವುದೂ ಖಾತ್ರಿಯಾಯಿತು. ಕೋವಿಡ್ ಫೋಬಿಯಾವನ್ನು ಮಾಧ್ಯಮಗಳು ಕ್ಷಣಕ್ಷಣಕ್ಕೂ ಬಿತ್ತರಿಸುತ್ತಿದ್ದ ಸಮಯವದು; ಪಾರ್ವತಿ ಕೋವಿಡ್‌ನಿಂದ ಬದುಕುಳಿಯುವುದು ಹೇಗೆ ಎಂದು ಚಿಂತಿಸುತ್ತಿದ್ದಳೋ ಅಥವಾ ತನ್ನ ಮೇಲೆ ನಡೆದಿರುವ ಅತ್ಯಾಚಾರದ ಗಾಯಕ್ಕೆ ಮಾನಸಿಕವಾಗಿ ಮುಲಾಮು ಹಚ್ಚಿಕೊಳ್ಳುತ್ತಿದ್ದಳೋ ಕಾಣೆ.

ಇದನ್ನೂ ಓದಿ: ಮಾತು ಮರೆತ ಭಾರತ-27; ಲಾಕ್‌ಡೌನ್ ಫೈಲ್ಸ್: ನೀರು ಕೇಳಿದ ದಲಿತ ಯುವಕನ ಉಸಿರು ನಿಲ್ಲಿಸಿದರು

ಈ ಪ್ರಕರಣದಿಂದ ಅರಿಯಬೇಕಾದ ಮತ್ತೊಂದು ವಿಚಾರವೇನೆಂದರೆ ಪಾರ್ವತಿ ಎಂಬ ದಲಿತ ಮಹಿಳೆಯ ಜಾಗದಲ್ಲಿ ಹಿಂದೂ ಮೇಲ್ಜಾತಿ ಮಹಿಳೆ ಇದ್ದಿದ್ದರೆ ಅಲ್ಲಿ ಹಳ್ಳಿಗರು ಆಕೆಯನ್ನು ಒಬ್ಬಂಟಿಯಾಗಿ ಇರಲು ಬಿಡುತ್ತಿದ್ದರೆ? ಪೊಲೀಸರು ಕಿಂಚಿತ್ ಮುಂಜಾಗ್ರತೆಯನ್ನೂ ವಹಿಸದೆ ನಿದ್ದೆ ಮಾಡಲು ಮನೆಗೆ ತೆರಳುತ್ತಿದ್ದರೆ? ದಾದಿಯರು ತಮ್ಮ ಕರ್ತವ್ಯವನ್ನು ಮರೆತು ಸ್ವಲ್ಪವೂ ಆಲೋಚಿಸದೇ ಮಹಿಳೆಯೊಬ್ಬಳನ್ನು ಬಿಟ್ಟು ಹೊರಡುತ್ತಿದ್ದರೇ? ಆ ಮೂವರು ಪಾಪಿಗಳು ಅಷ್ಟು ಧೈರ್ಯದಿಂದ ಕೊಠಡಿಗೆ ನುಗ್ಗಿ ಅತ್ಯಾಚಾರಗೈಯ್ಯುತ್ತಿದ್ದರೆ?

ಈ ಮೇಲಿನ ಪ್ರಶ್ನೆಗೆ ಉತ್ತರ ಹುಡುಕುವುದು ಅಷ್ಟು ಕಷ್ಟವಲ್ಲ. ಆದರೆ ಅದಕ್ಕೆ ಪರಿಹಾರ ಹುಡುಕುವುದು ಮಾತ್ರ ಇಂದಿಗೂ ಸಾಧ್ಯವಾಗಿಲ್ಲ. ದಲಿತರೆಂದರೆ ಈ ಸಮಾಜಕ್ಕೆ ಏನು ಬೇಕಾದರೂ ಮಾಡಿ ಬಿಸಾಕಬಹುದಾದ ವಸ್ತುಗಳಿದ್ದಂತೆ.

ಈಗ ಆ ಮೂವರು ಪಾಪಿಗಳು ಜೈಲಿನಲ್ಲಿದ್ದಾರೆ. ಪೊಲೀಸ್ ಒಬ್ಬ ಅಮಾನತುಗೊಂಡಿದ್ದಾನೆ. ಪಾರ್ವತಿಯೂ ಸಹ ಗುಣಮುಖಳಾಗಿ ತನ್ನ ಮಗನ ಭವಿಷ್ಯದ ಕನಸನ್ನು ಕಾಣುತ್ತಿದ್ದಾಳೆ. ಇದರ ನಡುವೆ ಆ ಮೂವರಿಗೆ ಶಿಕ್ಷೆ ಆಗುವುದೇ? ದಲಿತರ ಮೇಲಿನ ದೌರ್ಜನ್ಯಕ್ಕೆ ನ್ಯಾಯಾಲಯದ ನ್ಯಾಯದ ಇತಿಹಾಸ ಇಲ್ಲವೆಂದೇ ಉತ್ತರವನ್ನು ಪದೇಪದೇ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...