Homeಕರ್ನಾಟಕಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ...

ಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಗ್ರಾಮಸ್ಥರು

- Advertisement -
- Advertisement -

“ಎಲ್ಲರ ಮೇಲೂ ಕೇಸ್ ಹಾಕಿ. ಎಷ್ಟು ದಿನ ಅಂತ ನೋಡೋದು ಸಾರ್‌? ರಾತ್ರಿಯಿಂದ ಬೆಳಿಗ್ಗೆ ಆರು ಗಂಟೆತನಕ ಆನೆ ಓಡಿಸುತ್ತೇವೆ. ಯಾರೂ ಇರಲ್ಲ. ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?”- ಹೀಗೆ ಆನೆ ಹಾವಳಿಯಿಂದ ನೊಂದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಆನೆ ಹಾವಳಿ ತಪ್ಪಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹೆಚ್ಚಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನರ ಆಕ್ರೋಶ ಭುಗಿಲೇಳುತ್ತಿದೆ. ಇತ್ತೀಚೆಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸ್ಥಳೀಯರು ಛೀಮಾರಿ ಹಾಕಿದ್ದರು. ಈಗ ಕಳ್ಳಬೇಟೆ ಶಿಬಿರಕ್ಕೆ ನುಗ್ಗಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲೂರು ವಲಯ ಚಿಕ್ಕಮಗಳೂರು ವಿಭಾಗದ ಕಳ್ಳ ಬೇಟೆ ನಿಗ್ರಹ ಶಿಬಿರ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ಥಳೀಯರು ನೊಂದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದಲ್ಲಿ ಮಹಿಳೆ ಆನೆ ದಾಳಿಯಿಂದ ಮೃತಪಟ್ಟಿದ್ದರು. ಕಳ್ಳ ಬೇಟೆ ಶಿಬಿರ ನಿಗ್ರಹ ಅಧಿಕಾರಿಗಳು ಆನೆ ದಾಳಿಯಿಂದ ಗ್ರಾಮ ಹಾಗೂ ಸ್ಥಳೀಯ ಜನರ ರಕ್ಷಣೆ ಮಾಡುವ ಬದಲು ರಾತ್ರಿ ಹಗಲು ಮಾಂಸವನ್ನು ಬೇಯಿಸಿ, ಎಣ್ಣೆ ಕುಡಿದು ತೇಲಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಿಬಿರಕ್ಕೆ ನುಗ್ಗಿದ್ದಾರೆ.

ಕುಂದೂರು ಎಸ್ಟೇಟ್‌ನಲ್ಲಿರುವ ಶಿಬಿರದೊಳಗೆ ನುಗ್ಗಿದ ಯುವಕರ ಗುಂಪು ಕಟ್ಟಡದೊಳಗಿನ ಉಪಕರಣಗಳನ್ನು ಹೊರಗೆಸೆದಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಸುಧೀರ್‌, ಕೃಷ್ಣನ್‌, ನಿಖಿಲ್ ಮರಿಗೌಡ, ಸುಚಿನ್‌, ಗಣೇಶ ಮೊದಲಾದ ಯುವಕರು ಘಟನೆಯಲ್ಲಿ ಭಾಗಿಯಾಗಿದ್ದಾರೆ.

“ಇವರಿಗೆ (ಅಧಿಕಾರಿಗಳಿಗೆ) ತಿನ್ನಲು ಸೋನಮುಸುರಿ ಅಕ್ಕಿ ಬೇಕು, ಪೊಲೀಸರು ಈ ಅಧಿಕಾರಿಗಳಿಗೆ ರಕ್ಷಣೆ ಕೊಡುತ್ತೀರಾ, ನಮಗೆ ನ್ಯಾಯ ಕೊಡಿಸಲು ಆಗುತ್ತಾ? ಇಲ್ಲೇ ಮಜಾ ಮಾಡ್ತಾರೆ, ಚಿಕನ್ ಫ್ರೈ ಮಾಡ್ಕೊಂಡು ತಿನ್ನುತ್ತಾರೆ. ಇಷ್ಟು ದೊಡ್ಡ ಬಿಲ್ಡಿಂಗ್ ಇಟ್ಟುಕೊಂಡು ಇಲ್ಲೇ ಪಟಾಕಿ ಹೊಡಿದುಕೊಂಡು ಇರುತ್ತಾರೆ” ಎಂದು ದೂರಿದ್ದಾರೆ.

“ಆನೆ ಎಲ್ಲಿ ಬಂದಿದ್ದವು ಎನ್ನುತ್ತಾರೆ? ನೋಡಿ ಅಲ್ಲಿ ಚಿಕನ್ ಫ್ರೈ ಮಾಡಿಕೊಂಡು ತಿಂದಿದ್ದಾರೆ. ಸ್ಥಳೀಯರಿಗೆ ರಕ್ಷಣೆ ಕೊಡುವುದಿಲ್ಲ” ಎಂದು ನೊಂದ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಮೂಡಿಗೆರೆ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಕುದೂರಿನ ಗ್ರಾಮಸ್ಥರು ‘ಕಳ್ಳ ಕಳ್ಳ’ ಎಂದು ಕರೆದು ಅಟ್ಟಾಡಿಸಿದ ಘಟನೆ ಇತ್ತೀಚೆಗೆ ನಡೆದಿತ್ತು. ಇದರ ನಂತರ ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದ ಶಾಸಕ, ಗ್ರಾಮಸ್ಥರು ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದರು.

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಇಟ್ಟು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ ಮೃತದೇಹ ನೋಡಲು ಶಾಸಕ ಕುಮಾರಸ್ವಾಮಿ ಕೂಡಾ ಬಂದಿದ್ದು, ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

“ನನ್ನ ಮೇಲೆ ಸಂಚು ಮಾಡಿ ಹಲ್ಲೆ ಮಾಡಿದ್ದು, ಇದರಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ” ಎಂದು ಎಂ.ಪಿ ಕುಮಾರಸ್ವಾಮಿ ಆರೋಪಿದ್ದರು. “ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರಗೆ ಕಳುಹಿಸಿದ್ದಾರೆ. ಸಾರ್ವಜನಿಕರ ಸೇವೆ ಮಾಡಲು ಇರುವವರು ಎಲ್ಲ ತಾಗ್ಯಕ್ಕೂ ರೆಡಿ ಇರುತ್ತೇವೆ” ಎಂದು ಅವರು ಹೇಳಿದ್ದರು.

ಉದ್ರಿಕ್ತ ಜನರು ಅವರನ್ನು ಅಟ್ಟಾಡಿಸಿಕೊಂಡು ಬರುವಾಗ ಪೊಲೀಸರು ಅವರನ್ನು ರಕ್ಷಿಸಿ ಕಾರಿಗೆ ಕೂರಿಸುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿತ್ತು. ಈ ವೇಳೆ ಅವರ ಬಟ್ಟೆ ಹರಿದಿರಲಿಲ್ಲ. ಮತ್ತೊಂದು ವಿಡಿಯೊದಲ್ಲಿ ಅವರು ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಸಂಶಯ ವ್ಯಕ್ತಪಡಿಸಿದ್ದರು. ಘಟನೆಯ ನಂತರ ತಾನಾಗಿಯೆ ಬಟ್ಟೆ ಹರಿದು ವಿಡಿಯೊ ಮಾಡಿದ್ದಾರೆ ಎಂದು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಸಾರ್ವಜನಿಕ ಸೇವಕರು” ಎಂದು ಕರೆಯಲಾಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಜನರ ಸಮಸ್ಯೆಗಳನ್ನು ಬಗೆಹರಿಸದೇ, ಕೇವಲ ಕಾನೂನನ್ನು ಚಲಾಯಿಸಲು ಮುಂದಾದಾಗ, ಜನ ರೊಚ್ಚಿಗೇಳುವುದು ಸಹಜ. ಅದರಲ್ಲೂ ನಮ್ಮ ರೈತರು ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿದಾಗ, ಅವರು ಆಕ್ರೋಶಗೊಳ್ಳುವುದು ಸಹಜ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಿನಂಚಿನ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...