Homeರಾಜಕೀಯಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

ಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

- Advertisement -
- Advertisement -

ಇತಿಹಾಸಕಾರರು ಭಾರತೀಯ ಸನ್ನಿವೇಶದಲ್ಲಿ ಇತಿಹಾಸವನ್ನು ಪುನಃ ಬರೆಯುವಂತೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಕೇಳಿಕೊಂಡಿದ್ದು, ಇಂತಹ ಪ್ರಯತ್ನ ಮಾಡುವವರಿಗೆ ತಮ್ಮ ಸರ್ಕಾರವು ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.

“ನಾನು ಇತಿಹಾಸದ ವಿದ್ಯಾರ್ಥಿ, ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ ಮತ್ತು ತಿರುಚಲಾಗಿದೆ ಎಂದು ನಾನು ಬಹಳಷ್ಟು ಬಾರಿ ಕೇಳಿದ್ದೇನೆ. ಬಹುಶಃ ಇದು ನಿಜವಿರಬಹುದು, ಆದರೆ ಈಗ ನಾವು ಇದನ್ನು ಸರಿಪಡಿಸಬೇಕಾಗಿದೆ” ಎಂದು ದೆಹಲಿಯಲ್ಲಿ ನಡೆದ ಅಸ್ಸಾಂ ಸರ್ಕಾರದ ಸಮಾರಂಭದಲ್ಲಿ ಅಮಿತ್‌ ಶಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

17ನೇ ಶತಮಾನದ ಅಹೋಮ್ ಸಾಮ್ಯಾಜ್ಯದ ಸೇನಾಪತಿ ಲಚಿತ್ ಬರ್ಫುಕನ್ ಅವರ 400ನೇ ಜನ್ಮದಿನಾಚರಣೆಯ ಮೂರು ದಿನಗಳ ಆಚರಣೆಯ 2ನೇ ದಿನದಂದು ಅವರು ಮಾತನಾಡುತ್ತಿದ್ದರು. ಲಚಿತ್ ಬರ್ಫುಕನ್‌ ಅವರ ನೆನಪಿಗಾಗಿ ನವೆಂಬರ್ 24 ಅನ್ನು ಲಚಿತ್ ದಿವಸ್ ಎಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮೈಸೂರು ರಾಕೆಟ್‌ಗಳ ಉತ್ಖನನ; ಆಸಕ್ತಿ ಕೆರಳಿಸುವ ಇತಿಹಾಸ

“ಇತಿಹಾಸವನ್ನು ಸರಿಯಾಗಿ ಮತ್ತು ವೈಭವಯುತವಾಗಿ ಪ್ರಸ್ತುತಪಡಿಸುವುದನ್ನು ಈ ಯಾರು ತಡೆಯುತ್ತಾರೆ ಎಂದು ನಾನು ನಿಮ್ಮನ್ನು ಕೇಳುತ್ತಿದ್ದೇನೆ” ಎಂದು ಅಮಿತ್‌ ಶಾ ಹೇಳಿದ್ದಾರೆ.

“ಇತಿಹಾಸವು ಸರಿಯಲ್ಲ ಎಂಬ ಈ ನಿರೂಪಣೆಯನ್ನು ಬಿಟ್ಟುಬಿಡಿ. ಆದರೆ ದೇಶದಲ್ಲಿ 150 ವರ್ಷಗಳ ಕಾಲ ಆಳಿದ 30 ರಾಜವಂಶಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ 300 ಗಣ್ಯ ವ್ಯಕ್ತಿಗಳ ಬಗ್ಗೆ ಸಂಶೋಧನೆ ಮಾಡಲು ಪ್ರಯತ್ನಿಸಿ ಎಂದು ಇಲ್ಲಿ ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ನಾನು ವಿನಂತಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಒಮ್ಮೆ ಬರೆದರೆ ಸಾಕು, ಸುಳ್ಳು ನಿರೂಪಣೆಯನ್ನು ಪ್ರಚಾರ ಮಾಡಲಾಗುತ್ತದೆ ಎಂಬ ಕಲ್ಪನೆ ಕೂಡಾ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ವಿಜ್ಞಾನ ಭವನದಲ್ಲಿ ಹಾಜರಿದ್ದ ಇತಿಹಾಸಕಾರರು ಮತ್ತು ವಿದ್ಯಾರ್ಥಿಗಳ ಸಂಶೋಧನೆಗೆ ಒಕ್ಕೂಟ ಸರ್ಕಾರವು ಬೆಂಬಲ ನೀಡಲಿದೆ ಎಂದು ಅಮಿತ್‌ ಶಾ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಇತಿಹಾಸದ ಅವಜ್ಞೆ; ದೇಶ ವಿಭಜನೆಗೆ ಸಿಕ್ಕಸಿಕ್ಕವರ ಮೇಲೆ ಆರೋಪ ಹೊರಿಸುವ ಮುನ್ನ..

“ಮುಂದೆ ಬನ್ನಿ, ಸಂಶೋಧನೆ ಮಾಡಿ ಮತ್ತು ಇತಿಹಾಸವನ್ನು ಪುನಃ ಬರೆಯಿರಿ. ಈ ರೀತಿಯಾಗಿ ನಾವು ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಬಹುದು” ಎಂದು ಅವರು ಹೇಳಿದ್ದಾರೆ.

ಜನರಿಗೆ ಹೆಚ್ಚಿನ ಪ್ರಯೋಜನ ಆಗುವಂತೆ ಇತಿಹಾಸದ ಹಾದಿಯನ್ನು ಮರುಪರಿಶೀಲಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ. ಮೊಘಲ್ ವಿಸ್ತರಣೆಯನ್ನು ತಡೆಯುವಲ್ಲಿ ಲಚಿತ್ ವಹಿಸಿದ ಪಾತ್ರವನ್ನು ಗುರುತಿಸಿದ ಅಮಿತ್‌ ಶಾ, “ಸರಿಘಾಟ್ ಯುದ್ಧದಲ್ಲಿ ಅವರ ಅನಾರೋಗ್ಯದ ಹೊರತಾಗಿಯೂ ಮೊಘಲರನ್ನು ಸೋಲಿಸಿದರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನೋವಿಕಾರಿಯೊಬ್ಬನ ವಿರೂಪೀ ಹೇಳಿಕೆಯಿದು. ಮೊಗಲರು ಈ ದೇಶಕ್ಕೆ ಕೊಟ್ಟ ಅನುಪಮ ಕೊಡುಗೆಗಳ ಬಗ್ಗೆ ಇತಿಹಾಸದಲ್ಲಿ ದಾಖಲಿಸಲ್ಪಟ್ಟ ವಿಷಯಗಳೇನು ಎಂಬುದು ಈ ತಡಿಪಾರ್ ನರಹಂತಕ ಮೊದಲು ಕಂಡುಕೊಳ್ಳಲಿ. ಹಾಗೆಯೇ ಹಿಟ್ಲರ್ ಅಭಿಮಾನಿಗಳಾದ ಆರೆಸ್ಸಿಗರು ಸ್ವಾತಂತ್ರ್ಯ ಸಂಗ್ರಾಮಲ್ಲಿ ಬ್ರಿಟಿಷರ ಜೊತೆಗೂಡಿ ದೇಶಕ್ಕೆ ದ್ರೋಹ ಬಗೆದದ್ದು,ಸಾವರ್ಕರ್ ಬ್ರಿಟಿಷರ ಪಿಂಚಣಿಯಲ್ಲಿ ಬದುಕು ನಡೆಸಿದ ಇತಿಹಾಸ ಕೂಡಾ ಈ ದೇಶದ ಪ್ರತೀ ಪ್ರಜೆಗೂ ತಿಳಿಸುವಂತಾಗಲಿ.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...