Homeರಾಜಕೀಯಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

ಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

- Advertisement -
- Advertisement -

ಇತಿಹಾಸಕಾರರು ಭಾರತೀಯ ಸನ್ನಿವೇಶದಲ್ಲಿ ಇತಿಹಾಸವನ್ನು ಪುನಃ ಬರೆಯುವಂತೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಕೇಳಿಕೊಂಡಿದ್ದು, ಇಂತಹ ಪ್ರಯತ್ನ ಮಾಡುವವರಿಗೆ ತಮ್ಮ ಸರ್ಕಾರವು ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.

“ನಾನು ಇತಿಹಾಸದ ವಿದ್ಯಾರ್ಥಿ, ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ ಮತ್ತು ತಿರುಚಲಾಗಿದೆ ಎಂದು ನಾನು ಬಹಳಷ್ಟು ಬಾರಿ ಕೇಳಿದ್ದೇನೆ. ಬಹುಶಃ ಇದು ನಿಜವಿರಬಹುದು, ಆದರೆ ಈಗ ನಾವು ಇದನ್ನು ಸರಿಪಡಿಸಬೇಕಾಗಿದೆ” ಎಂದು ದೆಹಲಿಯಲ್ಲಿ ನಡೆದ ಅಸ್ಸಾಂ ಸರ್ಕಾರದ ಸಮಾರಂಭದಲ್ಲಿ ಅಮಿತ್‌ ಶಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

17ನೇ ಶತಮಾನದ ಅಹೋಮ್ ಸಾಮ್ಯಾಜ್ಯದ ಸೇನಾಪತಿ ಲಚಿತ್ ಬರ್ಫುಕನ್ ಅವರ 400ನೇ ಜನ್ಮದಿನಾಚರಣೆಯ ಮೂರು ದಿನಗಳ ಆಚರಣೆಯ 2ನೇ ದಿನದಂದು ಅವರು ಮಾತನಾಡುತ್ತಿದ್ದರು. ಲಚಿತ್ ಬರ್ಫುಕನ್‌ ಅವರ ನೆನಪಿಗಾಗಿ ನವೆಂಬರ್ 24 ಅನ್ನು ಲಚಿತ್ ದಿವಸ್ ಎಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮೈಸೂರು ರಾಕೆಟ್‌ಗಳ ಉತ್ಖನನ; ಆಸಕ್ತಿ ಕೆರಳಿಸುವ ಇತಿಹಾಸ

“ಇತಿಹಾಸವನ್ನು ಸರಿಯಾಗಿ ಮತ್ತು ವೈಭವಯುತವಾಗಿ ಪ್ರಸ್ತುತಪಡಿಸುವುದನ್ನು ಈ ಯಾರು ತಡೆಯುತ್ತಾರೆ ಎಂದು ನಾನು ನಿಮ್ಮನ್ನು ಕೇಳುತ್ತಿದ್ದೇನೆ” ಎಂದು ಅಮಿತ್‌ ಶಾ ಹೇಳಿದ್ದಾರೆ.

“ಇತಿಹಾಸವು ಸರಿಯಲ್ಲ ಎಂಬ ಈ ನಿರೂಪಣೆಯನ್ನು ಬಿಟ್ಟುಬಿಡಿ. ಆದರೆ ದೇಶದಲ್ಲಿ 150 ವರ್ಷಗಳ ಕಾಲ ಆಳಿದ 30 ರಾಜವಂಶಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ 300 ಗಣ್ಯ ವ್ಯಕ್ತಿಗಳ ಬಗ್ಗೆ ಸಂಶೋಧನೆ ಮಾಡಲು ಪ್ರಯತ್ನಿಸಿ ಎಂದು ಇಲ್ಲಿ ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ನಾನು ವಿನಂತಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಒಮ್ಮೆ ಬರೆದರೆ ಸಾಕು, ಸುಳ್ಳು ನಿರೂಪಣೆಯನ್ನು ಪ್ರಚಾರ ಮಾಡಲಾಗುತ್ತದೆ ಎಂಬ ಕಲ್ಪನೆ ಕೂಡಾ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ವಿಜ್ಞಾನ ಭವನದಲ್ಲಿ ಹಾಜರಿದ್ದ ಇತಿಹಾಸಕಾರರು ಮತ್ತು ವಿದ್ಯಾರ್ಥಿಗಳ ಸಂಶೋಧನೆಗೆ ಒಕ್ಕೂಟ ಸರ್ಕಾರವು ಬೆಂಬಲ ನೀಡಲಿದೆ ಎಂದು ಅಮಿತ್‌ ಶಾ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಇತಿಹಾಸದ ಅವಜ್ಞೆ; ದೇಶ ವಿಭಜನೆಗೆ ಸಿಕ್ಕಸಿಕ್ಕವರ ಮೇಲೆ ಆರೋಪ ಹೊರಿಸುವ ಮುನ್ನ..

“ಮುಂದೆ ಬನ್ನಿ, ಸಂಶೋಧನೆ ಮಾಡಿ ಮತ್ತು ಇತಿಹಾಸವನ್ನು ಪುನಃ ಬರೆಯಿರಿ. ಈ ರೀತಿಯಾಗಿ ನಾವು ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಬಹುದು” ಎಂದು ಅವರು ಹೇಳಿದ್ದಾರೆ.

ಜನರಿಗೆ ಹೆಚ್ಚಿನ ಪ್ರಯೋಜನ ಆಗುವಂತೆ ಇತಿಹಾಸದ ಹಾದಿಯನ್ನು ಮರುಪರಿಶೀಲಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ. ಮೊಘಲ್ ವಿಸ್ತರಣೆಯನ್ನು ತಡೆಯುವಲ್ಲಿ ಲಚಿತ್ ವಹಿಸಿದ ಪಾತ್ರವನ್ನು ಗುರುತಿಸಿದ ಅಮಿತ್‌ ಶಾ, “ಸರಿಘಾಟ್ ಯುದ್ಧದಲ್ಲಿ ಅವರ ಅನಾರೋಗ್ಯದ ಹೊರತಾಗಿಯೂ ಮೊಘಲರನ್ನು ಸೋಲಿಸಿದರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನೋವಿಕಾರಿಯೊಬ್ಬನ ವಿರೂಪೀ ಹೇಳಿಕೆಯಿದು. ಮೊಗಲರು ಈ ದೇಶಕ್ಕೆ ಕೊಟ್ಟ ಅನುಪಮ ಕೊಡುಗೆಗಳ ಬಗ್ಗೆ ಇತಿಹಾಸದಲ್ಲಿ ದಾಖಲಿಸಲ್ಪಟ್ಟ ವಿಷಯಗಳೇನು ಎಂಬುದು ಈ ತಡಿಪಾರ್ ನರಹಂತಕ ಮೊದಲು ಕಂಡುಕೊಳ್ಳಲಿ. ಹಾಗೆಯೇ ಹಿಟ್ಲರ್ ಅಭಿಮಾನಿಗಳಾದ ಆರೆಸ್ಸಿಗರು ಸ್ವಾತಂತ್ರ್ಯ ಸಂಗ್ರಾಮಲ್ಲಿ ಬ್ರಿಟಿಷರ ಜೊತೆಗೂಡಿ ದೇಶಕ್ಕೆ ದ್ರೋಹ ಬಗೆದದ್ದು,ಸಾವರ್ಕರ್ ಬ್ರಿಟಿಷರ ಪಿಂಚಣಿಯಲ್ಲಿ ಬದುಕು ನಡೆಸಿದ ಇತಿಹಾಸ ಕೂಡಾ ಈ ದೇಶದ ಪ್ರತೀ ಪ್ರಜೆಗೂ ತಿಳಿಸುವಂತಾಗಲಿ.

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...