Homeಮುಖಪುಟಬೊಮ್ಮಾಯಿಯವರನ್ನು ಪ್ರಶ್ನಿಸಲು ಮಹಾರಾಷ್ಟ್ರ ಸಿಎಂಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ

ಬೊಮ್ಮಾಯಿಯವರನ್ನು ಪ್ರಶ್ನಿಸಲು ಮಹಾರಾಷ್ಟ್ರ ಸಿಎಂಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ

- Advertisement -
- Advertisement -

ಉಭಯ ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೀಡಿರುವ ಹೇಳಿಕೆಯನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಕಟುವಾಗಿ ಟೀಕಿಸಿದ್ದಾರೆ.

“ಕರ್ನಾಟಕ ಮುಖ್ಯಮಂತ್ರಿಗಳು ಗಡಿ ಸಮಸ್ಯೆಗಳ ಬಗ್ಗೆ ತಮ್ಮ ಹೇಳಿಕೆಯನ್ನು ನೀಡುತ್ತಿದ್ದಾರೆ. ಮಹಾರಾಷ್ಟ್ರದ 40 ಹಳ್ಳಿಗಳ ಮೇಲೆ ಏಕಾಏಕಿ ಹಕ್ಕು ಚಲಾಯಿಸಿದ್ದಾರೆ” ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಡಿ ವಿವಾದಕ್ಕೆ ಸಂಬಂಧಿಸಿ ರಾಜಕೀಯ ತಿಕ್ಕಾಟ ಹೆಚ್ಚುತ್ತಿರುವಂತೆಯೇ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ವಿರುದ್ಧ ಶಿವಸೇನಾ (ಉದ್ಧವ್‌ ಬಾಳಾ ಠಾಕ್ರೆ ಬಣ) ಮುಖ್ಯಸ್ಥ ಉದ್ಧವ್‌ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.

“ರಾಜ್ಯದ ಕೆಲ ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿದ್ದವು ಎಂದು ಹೇಳಿರುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾತನಾಡಲು ಮುಖ್ಯಮಂತ್ರಿ ಏಕನಾಥ ಶಿಂದೆಗೆ ಧೈರ್ಯ ಇಲ್ಲ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ಮಹಾರಾಷ್ಟ್ರದ ಕೆಲ ಗ್ರಾಮಗಳು ರಾಜ್ಯಕ್ಕೆ ಸೇರಬೇಕು ಎಂಬುದಾಗಿ ಕರ್ನಾಟಕ ಮುಖ್ಯಮಂತ್ರಿ ಸುಲಭವಾಗಿ ಹೇಳಿಕೆ ನೀಡುತ್ತಿರುವುದರರಿಂದಲೇ ನಾವು ಅವರ ವಿರುದ್ಧ ಧ್ವನಿ ಎತ್ತಲು ಧೈರ್ಯ ಕಳೆದುಕೊಂಡಿದ್ದೇವೆಯೇ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದಾರೆ.

“ಈ ವಿಷಯಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿಗೆ ದೆಹಲಿ ನಾಯಕರ ಆಶೀರ್ವಾದ ಇದೆಯೇ? ಕೇಂದ್ರ ಸರ್ಕಾರಕ್ಕೂ ಇದೇ ಬೇಕಾಗಿದೆಯೇ?” ಎಂದು ಕೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್‌ ರಾವುತ್‌, “ಛತ್ರಪತಿ ಶಿವಾಜಿ ಮಹಾರಾಜ್‌ಗೆ ರಾಜ್ಯಪಾಲ ಭಗತ್‌ಸಿಂಗ್‌ ಕೋಶ್ಯಾರಿ ಅವರು ಅವಮಾನಿಸಿದ ವಿಷಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದವನ್ನು ಮತ್ತೆ ಮುನ್ನೆಲೆ ತರಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಂದು ವೇಳೆ ಗುಜರಾತಿಗಳು ಹಾಗೂ ಮಾರವಾಡಿಗಳು ನಗರವನ್ನು ತೊರೆದರೆ ಮುಂಬೈ ಈ ದೇಶದ ಆರ್ಥಿಕ ರಾಜಧಾನಿ ಆಗಿ ಉಳಿಯುವುದಿಲ್ಲ ಎಂದು ಹೇಳುವ ಮೂಲಕ ಈ ಹಿಂದೆಯೂ ರಾಜ್ಯಪಾಲ ಕೋಶ್ಯಾರಿ ಅವರು ಮರಾಠಿ ಭಾಷಿಕರನ್ನು ಅವಮಾನಿಸಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ನೀಡಿರುವ ಹೇಳಿಕೆ ಕುರಿತು ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಗುರುವಾರ ಪ್ರತಿಕ್ರಿಯಿಸಿದ್ದಾರೆ. “ನಮಗೆ ಕಲಿಸಬೇಡಿ” ಎಂದು ಉದ್ಧವ್ ಠಾಕ್ರೆ ಅವರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಗ್ರಾಮಸ್ಥರು

“ಬಾಳಾಸಾಹೇಬರ ಹಿಂದುತ್ವದ ತತ್ವವನ್ನು ಮುರಿದವರಿಗೆ ನಮ್ಮನ್ನು ಟೀಕಿಸುವ ಹಕ್ಕು ಇಲ್ಲ, ಛತ್ರಪತಿ ಶಿವಾಜಿ ಮಹಾರಾಜರ ಹೆಸರನ್ನು ತೆಗೆದುಕೊಳ್ಳುವ ಹಕ್ಕು ಇಲ್ಲ. ಅವರನ್ನು ಯಾರೊಂದಿಗೂ ಹೋಲಿಸಲಾಗುವುದಿಲ್ಲ. ಉದ್ಧವ್ ಠಾಕ್ರೆ ನಮಗೆ ಪಾಠ ಮಾಡಬಾರದು” ಎಂದು ಶಿಂಧೆ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

“ಗವರ್ನರ್ ರೂಪದಲ್ಲಿ ಅವರು ಕಳುಹಿಸಿರುವ ಅಮೆಜಾನ್ ಪಾರ್ಸೆಲ್ ಅನ್ನು ಹಿಂಪಡೆಯಲು ನಾನು ಕೇಂದ್ರ ಸರ್ಕಾರವನ್ನು ವಿನಂತಿಸುತ್ತೇನೆ” ಎಂದು ಠಾಕ್ರೆ ಹೇಳಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳುಹಿಸಲಾದ ಸ್ಯಾಂಪಲ್‌ಗಳನ್ನು ಹಿಂಪಡೆಯಲು ಮತ್ತು ವೃದ್ಧಾಶ್ರಮಕ್ಕೆ ಕಳುಹಿಸಲು ನಾವು ಕೇಂದ್ರವನ್ನು ವಿನಂತಿಸುತ್ತೇವೆ. ಅವರ ಹೇಳಿಕೆಯ ವಿರುದ್ಧ ಪ್ರತಿಭಟಿಸಲು ನಾವು ಎಲ್ಲಾ ಮಹಾರಾಷ್ಟ್ರ ಪ್ರೇಮಿಗಳನ್ನು ಕೋರುತ್ತೇವೆ. ಒಗ್ಗೂಡಿ ಮತ್ತು ಪಕ್ಷ ರಾಜಕೀಯದಿಂದ ಮೇಲಕ್ಕೆ ಬನ್ನಿ. ಮಹಾರಾಷ್ಟ್ರದ ವಿರುದ್ಧದ ಈ ದೇಶದ್ರೋಹದ ವಿರುದ್ಧ ಒಗ್ಗಟ್ಟಿನಿಂದ ಮುಂದೆ ಬನ್ನಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...