Homeಮುಖಪುಟಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

ಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

- Advertisement -
- Advertisement -

ಡಿಸೆಂಬರ್ 1 ಮತ್ತು 5ರಂದು ಗುಜರಾತ್ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಡಿಸೆಂಬರ್ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಇದರ ನಡುವೆ ಡಿಸೆಂಬರ್ 4ರಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ (ಎಂಸಿಡಿ) ಚುನಾವಣೆ ನಡೆಯಲಿದ್ದು, ಡಿಸೆಂಬರ್ 7ರಂದು ಫಲಿತಾಂಶ ಪ್ರಕಟವಾಗಲಿದೆ. ಪ್ರಸ್ತುತ ಗುಜರಾತ್ ಮತ್ತು ದೆಹಲಿಯ ಮೂರು ಎಂಸಿಡಿಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

ಗುಜರಾತ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಗುಜರಾತ್ ಮತ್ತು ದೆಹಲಿ ಎಂಸಿಡಿಗಳಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೆ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿದೆ. ಗುಜರಾತ್ ರಾಜ್ಯವು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವೂ ಹೌದು.

ಗುಜರಾತ್‌ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ತೀವ್ರ ಪೈಪೋಟಿ ನೀಡುತ್ತಿವೆ. ಬಿಜೆಪಿಯ ಸ್ಟಾರ್ ಪ್ರಚಾರಕ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಮೂರು ರಾಜಕೀಯ ಪಕ್ಷಗಳ ಹಲವಾರು ನಾಯಕರು ಈಗಾಗಲೇ ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಪ್ರಸ್ತುತ ‘ಭಾರತ್ ಜೋಡೋ ಯಾತ್ರೆ’ಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು, ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮುಂಬರುವ ವಿಧಾನಸಭಾ ಚುನಾವಣೆಗಾಗಿ ಗುಜರಾತ್‌ನಲ್ಲಿ ಪ್ರಚಾರ ನಡೆಸಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಶನಿವಾರ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದನ್ನು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ಸಿಆರ್ ಪಾಟೀಲ್ ಬಿಡುಗಡೆ ಮಾಡಿದ್ದಾರೆ.

ಜೆ.ಪಿ.ನಡ್ಡಾ ಮಾತನಾಡಿ, “ಬಿಜೆಪಿಯು ‘ಗುಜರಾತ್ ಒಲಿಂಪಿಕ್ಸ್ ಮಿಷನ್’ ಪ್ರಾರಂಭಿಸುತ್ತದೆ. 2036ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸುವ ಗುರಿಯೊಂದಿಗೆ ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ರೂಪಿಸಲಾಗುತ್ತದೆ” ಎಂದು ಘೋಷಿಸಿದ್ದಾರೆ.

“ಬಿಜೆಪಿ ಗುಜರಾತ್‌ನಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ ಹೆಣ್ಣುಮಕ್ಕಳಿಗೆ ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣವನ್ನು ನೀಡಲಾಗುವುದು. ಸಮಾಜ ವಿರೋಧಿ ಕೃತ್ಯಗಳ ರೂಪದಲ್ಲಿ ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡುವ ವ್ಯಕ್ತಿಗಳ ವಿರುದ್ಧ ಪಕ್ಷವು ಕ್ರಮ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಇದರ ನಡುವೆ ದೆಹಲಿಯಲ್ಲಿ ಬಿಜೆಪಿ ಮತ್ತು ಎಎಪಿ ನಡುವೆ ವಾಕ್ ಸಮರ ನಡೆದಿದೆ. ಚುನಾವಣಾ ಪೂರ್ವದಲ್ಲಿ ಕೇಜ್ರಿವಾಲ್ ಪಕ್ಷದವರು ಕಸದ ಸಮಸ್ಯೆಗಳು ಮತ್ತು ಕಳಪೆ ನೈರ್ಮಲ್ಯದ ಬಗ್ಗೆ ಗಮನಹರಿಸಿದ್ದಾರೆ. 15 ವರ್ಷಗಳಿಂದ ಎಂಸಿಡಿಗಳನ್ನು ಆಳುತ್ತಿರುವ ಬಿಜೆಪಿ, “ಕಸದ ಸಮಸ್ಯೆ, ಕೊಳೆಗೇರಿ ನಿವಾಸಿಗಳಿಗೆ ವಸತಿ” ಸೇರಿದಂತೆ 12 ಅಂಶಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿರಿ: ರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ಗುಜರಾತ್ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಮತ್ತು 5 ರಂದು ನಿಗದಿಯಾಗಿದೆ. ಗುಜರಾತ್ ವಿಧಾನಸಭೆಯ 182 ಸ್ಥಾನಗಳಿಗೆ ಒಟ್ಟು 1,621 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದ ಮತದಾನದಲ್ಲಿ 89 ಕ್ಷೇತ್ರಗಳಿಗೆ 788 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಹಂತ-2ರಲ್ಲಿ 93 ಸ್ಥಾನಗಳಿಗೆ ಒಟ್ಟು 833 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆ ಡಿಸೆಂಬರ್ 8 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿದೆ.

ದೆಹಲಿ ಎಂಸಿಡಿಗಳ ಚುನಾವಣೆಯನ್ನು ಡಿಸೆಂಬರ್ 4 ರಂದು ನಿಗದಿಪಡಿಸಲಾಗಿದೆ. ಫಲಿತಾಂಶಗಳ ಪ್ರಕಟಣೆಯು ಡಿಸೆಂಬರ್ 7 ರಂದು ನಡೆಯಲಿದೆ. ಒಟ್ಟು ನಾಮನಿರ್ದೇಶನಗಳಲ್ಲಿ 507 ಸ್ವತಂತ್ರ ಅಭ್ಯರ್ಥಿಗಳು ಇದ್ದಾರೆ. 492 ಅಭ್ಯರ್ಥಿಗಳು ಎಎಪಿಯಿಂದ ಸ್ಪರ್ಧಿಸಿದ್ದಾರೆ. ಬಿಜೆಪಿ 423 ಅಭ್ಯರ್ಥಿಗಳನ್ನು ಸಲ್ಲಿಸಿದ್ದು, ಕಾಂಗ್ರೆಸ್‌ನಿಂದ 334, ಬಹುಜನ ಸಮಾಜ ಪಕ್ಷದಿಂದ (ಬಿಎಸ್‌ಪಿ) 149, ಜೆಡಿಯುನಿಂದ 31, ಎಐಎಂಐಎಂನಿಂದ 20 ಮತ್ತು ಸಿಪಿಐ(ಎಂ) ನಿಂದ 9 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...