Homeಮುಖಪುಟರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ನಮ್ಮಲ್ಲಿ ಯಾರನ್ನು ಬ್ಯಾನ್ ಮಾಡುವ ಮಾತನ್ನಾಡಬಾರದು. ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಪದ ಹೋಗಬೇಕೆಂದು ಪುನೀತ್‌ ರಾಜ್‌ಕುಮಾರ್‌ ಹೇಳಿದ್ದರು.

- Advertisement -
- Advertisement -

ಕನ್ನಡ ಸಿನಿಮಾರಂಗದಿಂದ ನಟಿ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿರುವುದು ಸುಳ್ಳು. ನಿಜ ಏನೆಂದರೆ ರಶ್ಮಿಕಾ ಮಂದಣ್ಣನವರು ಕೇಳುವಷ್ಟು ಸಂಭಾವನೆ ಕೊಡಲು ಕನ್ನಡ ನಿರ್ಮಾಪಕರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ ಅಷ್ಟೆ ಎನ್ನುತ್ತಾರೆ ಕನ್ನಡ ನಿರ್ದೇಶಕ ಬಿ.ಎಂ ಗಿರಿರಾಜ್‌ರವರು.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಬ್ಯಾನ್ ಎಂದು ಗಾಳಿ ಸುದ್ದಿ ಹರಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ತೆಲುಗು ಮತ್ತು ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಮೇಲೆ ಹೆಚ್ಚು ಸಂಭಾವನೆ ಸಿಗುತ್ತಿರುವ ಕಾರಣಕ್ಕೆ ಅಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ. ಅಷ್ಟು ಸಂಭಾವನೆ ಕೊಟ್ಟು ಕನ್ನಡಕ್ಕೆ ಕರೆತಂದರೆ ತಮಗೆ ಗಿಟ್ಟುವುದಿಲ್ಲ ಎಂಬುದು ನಿರ್ಮಾಪಕರ ಅಭಿಪ್ರಾಯ. ಒಂದು ವೇಳೆ ಅವರು ಕಡಿಮೆ ಸಂಭಾವನೆಗೆ ಕನ್ನಡ ಚಿತ್ರಗಳಲ್ಲಿ ನಟಿಸಬೇಕು ಎಂದರೆ ಪಾತ್ರ ದೊಡ್ಡದಿರಬೇಕು ಅಥವಾ ಅವರಿಗೆ ಇಷ್ಟವಾದ ಪಾತ್ರವಿರಬೇಕು. ಅದು ಸಾಧ್ಯವಾಗದ ಕಾರಣ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ. ಇಷ್ಟೆ ವಿಷಯ” ಎಂದರು.

ನಿರ್ದೇಶಕ ಬಿ.ಎಂ.ಗಿರಿರಾಜ್‌

ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಪದ ಹೋಗಬೇಕೆಂದು ಪುನೀತ್‌ ರಾಜ್‌ಕುಮಾರ್‌ರವರು ಹೇಳಿದ್ದರು. “ನಮ್ಮಲ್ಲಿ ಯಾರನ್ನು ಬ್ಯಾನ್ ಮಾಡುವ ಮಾತನ್ನಾಡಬಾರದು. ಸಂವಿಧಾನದ ಪ್ರಕಾರ ಅತಿ ದೊಡ್ಡ ಅಪರಾಧವೆನಿಸದ ಹೊರತು ಯಾರನ್ನು ಬ್ಯಾನ್ ಮಾಡುವ ಅಧಿಕಾರ ಯಾರಿಗೂ ಇಲ್ಲ” ಎಂದು ಅಪ್ಪುರವರು ಹೇಳಿದ್ದರು. ಆದರೂ ಕೆಲವು ಟ್ರೋಲ್‌ ಮಾಡುವವರು ಬ್ಯಾನ್ ಮಾಡಬೇಕೆಂದು ಹೇಳುತ್ತಾರೆ. ಆದರೆ ಅದನ್ನು ಅಧಿಕೃತ ಎಂದು ಪ್ರಸಾರ ಮಾಡುವುದು ಮಾಧ್ಯಮಗಳ ಬೇಜವಬ್ದಾರಿತನವಾಗಿದೆ. ಯಾವುದಕ್ಕೆ ಮಹತ್ವ ಕೊಡಬೇಕು, ಯಾವುದಕ್ಕೆ ಕೊಡಬಾರದು ಎನ್ನುವ ಕನಿಷ್ಟ ತಿಳಿವಳಿಕೆ ಮಾಧ್ಯಮಗಳಿಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ- ಮಂಸೋರೆ

“ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ. ರಶ್ಮಿಕಾ ಅವರು ವಾಣಿಜ್ಯ ಮಂಡಳಿಗೆ ಸಂಬಂಧಪಟ್ಟವರೂ ಅಲ್ಲ, ಕಲಾವಿದರ ಸಂಘದ ಸದಸ್ಯರೂ ಅಲ್ಲ. ವಾಣಿಜ್ಯ ಮಂಡಳಿಗೆ ಬ್ಯಾನ್ ಮಾಡಲು ಅಧಿಕಾರವಿಲ್ಲ. ಯಾವುದೇ ಹೆಣ್ಣುಮಗಳ ವೈಯಕ್ತಿಕ ವಿಚಾರಗಳನ್ನು ಮುಂದೆ ತಂದು ಅವಹೇಳನ ಮಾಡುವುದು ತಪ್ಪು” ಎನ್ನುತ್ತಾರೆ ಕನ್ನಡ ನಿರ್ದೇಶಕ ಮಂಸೋರೆಯವರು.

“ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರರಂಗದಲ್ಲಿ ಕೊಡುತ್ತಿರುವಷ್ಟು ಸಂಭಾವನೆಯನ್ನು ನಮ್ಮಲ್ಲಿ ನಟಿಯರಿಗೆ ಕೊಡುತ್ತಿಲ್ಲ. ಕನ್ನಡ ಚಿತ್ರರಂಗದಲ್ಲಿ ರಮ್ಯಾ ಅವರಷ್ಟು ಸಂಭಾವನೆ ಪಡೆದ ಮತ್ತೊಬ್ಬ ನಟಿ  ಸಿಗುವುದಿಲ್ಲ. ರಶ್ಮಿಕಾ ಅವರು ಈಗ ಬೇರೆ ಬೇರೆ ಚಿತ್ರರಂಗದಲ್ಲಿ ಒಂದು ಕೋಟಿ, ಎರಡು ಕೋಟಿಯಷ್ಟು ಸಂಭಾವನೆಯನ್ನು ಪಡೆಯುತ್ತಿದ್ದಾರೆ. ಇಷ್ಟು ಹಣವನ್ನು ಕೊಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ. ಇದು ವಾಸ್ತವ. ಎರಡು ವರ್ಷ ಬ್ಯುಸಿಯಾಗುವಷ್ಟು ಸಿನಿಮಾಗಳಿಗೆ ರಶ್ಮಿಕಾ ಈಗಾಗಲೇ ಸಹಿ ಹಾಕಿದ್ದಾರೆ” ಎಂದರು.

ನಿರ್ದೇಶಕ ಮಂಸೋರೆ

“ಬ್ಯಾನ್‌ ವಿಚಾರ ಮುನ್ನೆಲೆಗೆ ಬಂದಿರುವುದರಿಂದ ಕನ್ನಡ ಚಿತ್ರರಂಗ ರಶ್ಮಿಕಾ ಅವರನ್ನು ದೂರವಿಟ್ಟಿದೆ ಎಂಬ ಚರ್ಚೆಗಳೆಲ್ಲ ನಡೆಯುತ್ತಿರುವುದನ್ನು ನೋಡಿದೆ. ಅದ್ಯಾವುದಕ್ಕೂ ಆಧಾರವಿಲ್ಲ. ರಶ್ಮಿಕಾ ಅವರು ಕೇಳುವಷ್ಟು ಸಂಭಾವನೆಯನ್ನು ನೀಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ ಎಂಬುದಷ್ಟೆ ಸತ್ಯ” ಎಂದರು.

ಇತ್ತೀಚಿಗೆ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿದ್ದ ರಶ್ಮಿಕಾ ತಾವು ಸಿನಿಮಾ ಪ್ರಪಂಚಕ್ಕೆ ಕಾಲಿಟ್ಟಿದುದರ ಬಗೆಗೆ ಮಾತನಾಡಿದ್ದರು. ಕಾಲೇಜು ಓದುತ್ತಿದ್ದಾಗಲೇ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದುದು, ತನ್ನ ಫೋಟೊ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಮುಖಪುಟದಲ್ಲಿ ಪ್ರಕಟವಾಗಿದ್ದು, ಸಿನಿಮಾದಲ್ಲಿ ನಟನೆಗೆ ಆಫರ್ ಬಂದಿದ್ದನ್ನು ನಂಬಲಾಗಲಿಲ್ಲ ಎಂದೆಲ್ಲಾ ಮಾತನಾಡಿದ್ದ ಅವರು ಆ ಸಂದರ್ಭದಲ್ಲಿ ತನ್ನ ಮೊದಲ ಚಿತ್ರದ ಹೆಸರು ಹೇಳುವ ಬದಲಿಗೆ ಎರಡೂ ಕೈಗಳಿಂದ ಕೋಟ್‌ ರೀತಿಯ ಸನ್ನೆ ಮಾಡಿದ್ದರು.

ಅಷ್ಟಕ್ಕೆ ಹಲವರು ರಶ್ಮಿಕಾ ವಿರುದ್ಧ ಮುಗಿಬಿದ್ದಿದ್ದಾರೆ. ತನ್ನ ಮೊದಲ ಚಿತ್ರ ಕಿರಿಕ್ ಪಾರ್ಟಿ ಎಂದೂ ಅದರ ನಿರ್ದೇಶಕ ರಿಷಬ್ ಶೆಟ್ಟಿ, ನಟ ರಕ್ಷಿತ್ ಶೆಟ್ಟಿ ಎಂದು ಪ್ರೊಡಕ್ಷನ್ ಹೌಸ್‌ ಅನ್ನು ರಶ್ಮಿಕಾ ಉಲ್ಲೇಖಿಸದೆ ಸನ್ನೆ ಮಾಡುವ ಮೂಲಕ ಅವಮಾನ ಮಾಡಿದ್ದಾರೆ ಎಂಬುದು ಟ್ರೋಲಿಗರ ಆರೋಪವಾಗಿದೆ. ಅದಕ್ಕಾಗಿ ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಬೇಕು ಎಂದು ಕೆಲವರು ಒತ್ತಾಯಿಸಿ ಪೋಸ್ಟರ್ ಮಾಡಿ ಹಂಚುತ್ತಿದ್ದಾರೆ. ಅದನ್ನೆ ಕನ್ನಡ ಮಾಧ್ಯಮಗಳು ಸಹ ಬ್ಯಾನ್ ಎಂದು ಸುದ್ದಿ ಮಾಡುತ್ತಿವೆ.

ಆದರೆ ರಶ್ಮಿಕಾ ಮಂದಣ್ಣ ಕೈ ಸನ್ನೆ ಮಾಡಿದ್ದಕ್ಕೆ ಮಾತ್ರವೇ ಅವರೆ ಮೇಲೆ ಟ್ರೋಲ್ ಗಳಾಗುತ್ತಿವೆ ಎಂಬುದು ಸುಳ್ಳು. ಬದಲಿಗೆ ಅವರು ಮಹಿಳೆ ಎಂಬ ಕಾರಣಕ್ಕೆ, ಅದರಲ್ಲಿಯೂ ಯಶಸ್ವಿ ನಟಿ ಎಂಬ ಕಾರಣಕ್ಕೆ ಅವರ ಮೇಲೆ ನಿರಂತರ ದಾಳಿ ನಡೆಯುತ್ತಿವೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಟ್ರೋಲ್ ಏಕೆ?: ಪ್ರಜ್ಞಾವಂತರ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...