Homeಮುಖಪುಟರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ನಮ್ಮಲ್ಲಿ ಯಾರನ್ನು ಬ್ಯಾನ್ ಮಾಡುವ ಮಾತನ್ನಾಡಬಾರದು. ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಪದ ಹೋಗಬೇಕೆಂದು ಪುನೀತ್‌ ರಾಜ್‌ಕುಮಾರ್‌ ಹೇಳಿದ್ದರು.

- Advertisement -
- Advertisement -

ಕನ್ನಡ ಸಿನಿಮಾರಂಗದಿಂದ ನಟಿ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿರುವುದು ಸುಳ್ಳು. ನಿಜ ಏನೆಂದರೆ ರಶ್ಮಿಕಾ ಮಂದಣ್ಣನವರು ಕೇಳುವಷ್ಟು ಸಂಭಾವನೆ ಕೊಡಲು ಕನ್ನಡ ನಿರ್ಮಾಪಕರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ ಅಷ್ಟೆ ಎನ್ನುತ್ತಾರೆ ಕನ್ನಡ ನಿರ್ದೇಶಕ ಬಿ.ಎಂ ಗಿರಿರಾಜ್‌ರವರು.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಬ್ಯಾನ್ ಎಂದು ಗಾಳಿ ಸುದ್ದಿ ಹರಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ತೆಲುಗು ಮತ್ತು ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಮೇಲೆ ಹೆಚ್ಚು ಸಂಭಾವನೆ ಸಿಗುತ್ತಿರುವ ಕಾರಣಕ್ಕೆ ಅಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ. ಅಷ್ಟು ಸಂಭಾವನೆ ಕೊಟ್ಟು ಕನ್ನಡಕ್ಕೆ ಕರೆತಂದರೆ ತಮಗೆ ಗಿಟ್ಟುವುದಿಲ್ಲ ಎಂಬುದು ನಿರ್ಮಾಪಕರ ಅಭಿಪ್ರಾಯ. ಒಂದು ವೇಳೆ ಅವರು ಕಡಿಮೆ ಸಂಭಾವನೆಗೆ ಕನ್ನಡ ಚಿತ್ರಗಳಲ್ಲಿ ನಟಿಸಬೇಕು ಎಂದರೆ ಪಾತ್ರ ದೊಡ್ಡದಿರಬೇಕು ಅಥವಾ ಅವರಿಗೆ ಇಷ್ಟವಾದ ಪಾತ್ರವಿರಬೇಕು. ಅದು ಸಾಧ್ಯವಾಗದ ಕಾರಣ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ. ಇಷ್ಟೆ ವಿಷಯ” ಎಂದರು.

ನಿರ್ದೇಶಕ ಬಿ.ಎಂ.ಗಿರಿರಾಜ್‌

ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಪದ ಹೋಗಬೇಕೆಂದು ಪುನೀತ್‌ ರಾಜ್‌ಕುಮಾರ್‌ರವರು ಹೇಳಿದ್ದರು. “ನಮ್ಮಲ್ಲಿ ಯಾರನ್ನು ಬ್ಯಾನ್ ಮಾಡುವ ಮಾತನ್ನಾಡಬಾರದು. ಸಂವಿಧಾನದ ಪ್ರಕಾರ ಅತಿ ದೊಡ್ಡ ಅಪರಾಧವೆನಿಸದ ಹೊರತು ಯಾರನ್ನು ಬ್ಯಾನ್ ಮಾಡುವ ಅಧಿಕಾರ ಯಾರಿಗೂ ಇಲ್ಲ” ಎಂದು ಅಪ್ಪುರವರು ಹೇಳಿದ್ದರು. ಆದರೂ ಕೆಲವು ಟ್ರೋಲ್‌ ಮಾಡುವವರು ಬ್ಯಾನ್ ಮಾಡಬೇಕೆಂದು ಹೇಳುತ್ತಾರೆ. ಆದರೆ ಅದನ್ನು ಅಧಿಕೃತ ಎಂದು ಪ್ರಸಾರ ಮಾಡುವುದು ಮಾಧ್ಯಮಗಳ ಬೇಜವಬ್ದಾರಿತನವಾಗಿದೆ. ಯಾವುದಕ್ಕೆ ಮಹತ್ವ ಕೊಡಬೇಕು, ಯಾವುದಕ್ಕೆ ಕೊಡಬಾರದು ಎನ್ನುವ ಕನಿಷ್ಟ ತಿಳಿವಳಿಕೆ ಮಾಧ್ಯಮಗಳಿಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ- ಮಂಸೋರೆ

“ಬ್ಯಾನ್‌ ಅನ್ನುವ ಪದಕ್ಕೆ ಚಿತ್ರರಂಗದಲ್ಲಿ ಅವಕಾಶವೇ ಇಲ್ಲ. ರಶ್ಮಿಕಾ ಅವರು ವಾಣಿಜ್ಯ ಮಂಡಳಿಗೆ ಸಂಬಂಧಪಟ್ಟವರೂ ಅಲ್ಲ, ಕಲಾವಿದರ ಸಂಘದ ಸದಸ್ಯರೂ ಅಲ್ಲ. ವಾಣಿಜ್ಯ ಮಂಡಳಿಗೆ ಬ್ಯಾನ್ ಮಾಡಲು ಅಧಿಕಾರವಿಲ್ಲ. ಯಾವುದೇ ಹೆಣ್ಣುಮಗಳ ವೈಯಕ್ತಿಕ ವಿಚಾರಗಳನ್ನು ಮುಂದೆ ತಂದು ಅವಹೇಳನ ಮಾಡುವುದು ತಪ್ಪು” ಎನ್ನುತ್ತಾರೆ ಕನ್ನಡ ನಿರ್ದೇಶಕ ಮಂಸೋರೆಯವರು.

“ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರರಂಗದಲ್ಲಿ ಕೊಡುತ್ತಿರುವಷ್ಟು ಸಂಭಾವನೆಯನ್ನು ನಮ್ಮಲ್ಲಿ ನಟಿಯರಿಗೆ ಕೊಡುತ್ತಿಲ್ಲ. ಕನ್ನಡ ಚಿತ್ರರಂಗದಲ್ಲಿ ರಮ್ಯಾ ಅವರಷ್ಟು ಸಂಭಾವನೆ ಪಡೆದ ಮತ್ತೊಬ್ಬ ನಟಿ  ಸಿಗುವುದಿಲ್ಲ. ರಶ್ಮಿಕಾ ಅವರು ಈಗ ಬೇರೆ ಬೇರೆ ಚಿತ್ರರಂಗದಲ್ಲಿ ಒಂದು ಕೋಟಿ, ಎರಡು ಕೋಟಿಯಷ್ಟು ಸಂಭಾವನೆಯನ್ನು ಪಡೆಯುತ್ತಿದ್ದಾರೆ. ಇಷ್ಟು ಹಣವನ್ನು ಕೊಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ. ಇದು ವಾಸ್ತವ. ಎರಡು ವರ್ಷ ಬ್ಯುಸಿಯಾಗುವಷ್ಟು ಸಿನಿಮಾಗಳಿಗೆ ರಶ್ಮಿಕಾ ಈಗಾಗಲೇ ಸಹಿ ಹಾಕಿದ್ದಾರೆ” ಎಂದರು.

ನಿರ್ದೇಶಕ ಮಂಸೋರೆ

“ಬ್ಯಾನ್‌ ವಿಚಾರ ಮುನ್ನೆಲೆಗೆ ಬಂದಿರುವುದರಿಂದ ಕನ್ನಡ ಚಿತ್ರರಂಗ ರಶ್ಮಿಕಾ ಅವರನ್ನು ದೂರವಿಟ್ಟಿದೆ ಎಂಬ ಚರ್ಚೆಗಳೆಲ್ಲ ನಡೆಯುತ್ತಿರುವುದನ್ನು ನೋಡಿದೆ. ಅದ್ಯಾವುದಕ್ಕೂ ಆಧಾರವಿಲ್ಲ. ರಶ್ಮಿಕಾ ಅವರು ಕೇಳುವಷ್ಟು ಸಂಭಾವನೆಯನ್ನು ನೀಡಲು ಕನ್ನಡ ಚಿತ್ರರಂಗದವರು ಸಿದ್ಧವಿಲ್ಲ ಎಂಬುದಷ್ಟೆ ಸತ್ಯ” ಎಂದರು.

ಇತ್ತೀಚಿಗೆ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿದ್ದ ರಶ್ಮಿಕಾ ತಾವು ಸಿನಿಮಾ ಪ್ರಪಂಚಕ್ಕೆ ಕಾಲಿಟ್ಟಿದುದರ ಬಗೆಗೆ ಮಾತನಾಡಿದ್ದರು. ಕಾಲೇಜು ಓದುತ್ತಿದ್ದಾಗಲೇ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದುದು, ತನ್ನ ಫೋಟೊ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಮುಖಪುಟದಲ್ಲಿ ಪ್ರಕಟವಾಗಿದ್ದು, ಸಿನಿಮಾದಲ್ಲಿ ನಟನೆಗೆ ಆಫರ್ ಬಂದಿದ್ದನ್ನು ನಂಬಲಾಗಲಿಲ್ಲ ಎಂದೆಲ್ಲಾ ಮಾತನಾಡಿದ್ದ ಅವರು ಆ ಸಂದರ್ಭದಲ್ಲಿ ತನ್ನ ಮೊದಲ ಚಿತ್ರದ ಹೆಸರು ಹೇಳುವ ಬದಲಿಗೆ ಎರಡೂ ಕೈಗಳಿಂದ ಕೋಟ್‌ ರೀತಿಯ ಸನ್ನೆ ಮಾಡಿದ್ದರು.

ಅಷ್ಟಕ್ಕೆ ಹಲವರು ರಶ್ಮಿಕಾ ವಿರುದ್ಧ ಮುಗಿಬಿದ್ದಿದ್ದಾರೆ. ತನ್ನ ಮೊದಲ ಚಿತ್ರ ಕಿರಿಕ್ ಪಾರ್ಟಿ ಎಂದೂ ಅದರ ನಿರ್ದೇಶಕ ರಿಷಬ್ ಶೆಟ್ಟಿ, ನಟ ರಕ್ಷಿತ್ ಶೆಟ್ಟಿ ಎಂದು ಪ್ರೊಡಕ್ಷನ್ ಹೌಸ್‌ ಅನ್ನು ರಶ್ಮಿಕಾ ಉಲ್ಲೇಖಿಸದೆ ಸನ್ನೆ ಮಾಡುವ ಮೂಲಕ ಅವಮಾನ ಮಾಡಿದ್ದಾರೆ ಎಂಬುದು ಟ್ರೋಲಿಗರ ಆರೋಪವಾಗಿದೆ. ಅದಕ್ಕಾಗಿ ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣನವರನ್ನು ಬ್ಯಾನ್ ಮಾಡಬೇಕು ಎಂದು ಕೆಲವರು ಒತ್ತಾಯಿಸಿ ಪೋಸ್ಟರ್ ಮಾಡಿ ಹಂಚುತ್ತಿದ್ದಾರೆ. ಅದನ್ನೆ ಕನ್ನಡ ಮಾಧ್ಯಮಗಳು ಸಹ ಬ್ಯಾನ್ ಎಂದು ಸುದ್ದಿ ಮಾಡುತ್ತಿವೆ.

ಆದರೆ ರಶ್ಮಿಕಾ ಮಂದಣ್ಣ ಕೈ ಸನ್ನೆ ಮಾಡಿದ್ದಕ್ಕೆ ಮಾತ್ರವೇ ಅವರೆ ಮೇಲೆ ಟ್ರೋಲ್ ಗಳಾಗುತ್ತಿವೆ ಎಂಬುದು ಸುಳ್ಳು. ಬದಲಿಗೆ ಅವರು ಮಹಿಳೆ ಎಂಬ ಕಾರಣಕ್ಕೆ, ಅದರಲ್ಲಿಯೂ ಯಶಸ್ವಿ ನಟಿ ಎಂಬ ಕಾರಣಕ್ಕೆ ಅವರ ಮೇಲೆ ನಿರಂತರ ದಾಳಿ ನಡೆಯುತ್ತಿವೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಟ್ರೋಲ್ ಏಕೆ?: ಪ್ರಜ್ಞಾವಂತರ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...