Homeಚಳವಳಿಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಅಂಬೇಡ್ಕರ್‌ ಸಂಬಂಧಿ, ಚಿಂತಕ ಆನಂದ್‌ ತೇಲ್ತುಂಬ್ಡೆ

ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಅಂಬೇಡ್ಕರ್‌ ಸಂಬಂಧಿ, ಚಿಂತಕ ಆನಂದ್‌ ತೇಲ್ತುಂಬ್ಡೆ

ಅವರಿಗೆ ಜಾಮೀನು ನೀಡಬಾರದು ಎಂದು ಎನ್‌ಐಎ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್‌ ಶುಕ್ರವಾರ ತಿರಸ್ಕರಿಸಿತ್ತು

- Advertisement -
- Advertisement -

ಎಲ್ಗರ್ ಪರಿಷತ್-ಕೊರೆಗಾಂವ್‌ ಪ್ರಕರಣದಲ್ಲಿ ಸಿಲುಕಿದ್ದ ವಿದ್ವಾಂಸ, ಅಂಬೇಡ್ಕರ್‌ವಾದಿ ಆನಂದ್ ತೇಲ್ತುಂಬ್ಡೆ ಅವರು ಕೊನೆಗೂ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಿಂದ ಶನಿವಾರ ಬಿಡುಗಡೆಗೊಂಡಿದ್ದಾರೆ. ಮುಂಬೈ ಹೈಕೋರ್ಟ್‌ ಅವರಿಗೆ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್‌ ಶುಕ್ರವಾರ ತಿರಸ್ಕರಿಸಿ, ಅವರ ಜಾಮೀನಿಗೆ ಅನುಮತಿ ನೀಡಿತ್ತು.

ಪ್ರಕರಣದಲ್ಲಿ ಎರಡೂವರೆ ವರ್ಷಗಳ ಕಾಲ ಜೈಲಿನಲ್ಲಿ ಕಳೆದ 73 ವರ್ಷದ ತೇಲ್ತುಂಬ್ಡೆ ಅವರು ಮಧ್ಯಾಹ್ನ 1.15 ರ ಸುಮಾರಿಗೆ ಜೈಲಿನಿಂದ ಹೊರನಡೆದರು ಎಂದು ಅವರು ಅಧಿಕಾರಿಗಳು ಹೇಳಿದ್ದಾರೆ. ಎಪ್ರೀಲ್ 14 2020ರ ಅಂಬೇಡ್ಕರ್‌ ಜಯಂತಿಯಂದು ಶರಣಾಗಿದ್ದ ಅವರು, ನವೆಂಬರ್‌‌ 26ರ ಸಂವಿಧಾನ ದಿನದಂದು ಬಿಡುಗಡೆಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೇಲ್ತುಂಬ್ಡೆಗೆ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರದಂದು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಅದರಂತೆ ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: NIA ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್: ಚಿಂತಕ ಆನಂದ್ ತೇಲ್ತುಂಬ್ಡೆ ಜಾಮೀನಿಗೆ ಸಮ್ಮತಿ

ಪ್ರಕರಣದಲ್ಲಿ ಬಂಧಿತರಾದವರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಲಿರುವ 16 ಆರೋಪಿಗಳಲ್ಲಿ ತೇಲ್ತುಂಬ್ಡೆ ಮೂರನೇಯವರಾಗಿದ್ದಾರೆ. ಪ್ರಸ್ತುತ ಕ್ರಾಂತಿಕಾರಿ ಕವಿ ವರವರ ರಾವ್ ಆರೋಗ್ಯದ ಕಾರಣದಿಂದ ಜಾಮೀನಿನ ಮೇಲೆ ಹೊರಗಿದ್ದು, ವಕೀಲೆ ಸುಧಾ ಭಾರದ್ವಾಜ್ ಅವರು ಡೀಫಾಲ್ಟ್‌‌ ಜಾಮೀನಿನ ಮೇಲೆ ಹೊರಗಿದ್ದಾರೆ.

ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಪ್ರಚೋದಕ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಸಭೆ ನಡೆದ ಮರುದಿನ ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ಉಂಟಾಗಿತ್ತು. ಎಲ್ಗರ್‌ನಲ್ಲಿ ನಡೆಸಿದ ಪ್ರಚೋದನಾತ್ಮಕ ಭಾಷಣದಿಂದ ಈ ಹಿಂಸಾಚಾರ ಭುಗಿಲೆದ್ದಿದೆ ಎಂದು ಪೊಲೀಸರು ಆರೋಪಿಸಿದ್ದರು.

ಈ ವೇಳೆ ಪೊಲೀಸರು ಮಾವೋವಾದಿ ನಂಟು ಹೊಂದಿರುವ ಕೆಲ ವ್ಯಕ್ತಿಗಳು ಈ ಸಮಾವೇಶವನ್ನು ಆಯೋಜಿಸಿದ್ದರು ಎಂದು ಪುಣೆ ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ಅದಾತಗ್ಯೂ 2017 ರ ಡಿಸೆಂಬರ್ 31 ರಂದು ಪುಣೆ ನಗರದಲ್ಲಿ ನಡೆದ ಎಲ್ಗರ್ ಪರಿಷತ್ ಕಾರ್ಯಕ್ರಮಕ್ಕೆ ತಾನು ಹಾಜರಾಗಿರಲಿಲ್ಲ ಅಥವಾ ಯಾವುದೇ ಪ್ರಚೋದನಕಾರಿ ಭಾಷಣಗಳನ್ನು ಮಾಡಿಲ್ಲ ಎಂದು ಎಲ್ತುಂಬ್ಡೆ ನ್ಯಾಯಾಲಯದಲ್ಲಿ ವಾದಿಸಿದ್ದರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...