Homeಮುಖಪುಟರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಕುಟುಂಬ ಸದಸ್ಯರು ಶುಕ್ರವಾರ ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ ‘ಮಾ ನರ್ಮದಾ’ ಆರತಿ ನೆರವೇರಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಧ್ಯಪ್ರದೇಶದ ಪ್ರಸಿದ್ಧ ಶಿವ ದೇವಾಲಯಕ್ಕೆ ಭೇಟಿ ನೀಡಿದಾಗ ಗಡಿಯಾರ ಚಲಿಸುವ ದಿಕ್ಕಿಗೆ (ಪ್ರದಕ್ಷಿಣಾಕಾರಕ್ಕೆ) ವಿರುದ್ಧವಾಗಿ ಆರತಿ ಮಾಡಿದರು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ.

ರಾಹುಲ್ ಅವರ 4 ಸೆಕೆಂಡ್‌ಗಳ ಕ್ಲಿಪ್ ಅನ್ನು ಹಂಚಿಕೊಂಡ ಮಾಳವಿಯಾ, “ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಎಂದು ತಿಳಿದಿದ್ದರೆ ಕಾಂಗ್ರೆಸ್ ನಾಯಕ ರಾಹುಲ್‌ ಸಾರ್ವಜನಿಕವಾಗಿ ತನ್ನನ್ನು ತಾನು ಪ್ರದರ್ಶಿಸಿಕೊಳ್ಳುವುದಿಲ್ಲ” ಎಂದಿದ್ದಾರೆ.

“ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಮತ್ತು ಅದಕ್ಕೆ ವೈಜ್ಞಾನಿಕ ಕಾರಣವಿದೆ (ಭೂಮಿಯು ಪ್ರದಕ್ಷಿಣಾಕಾರವಾಗಿ ಅಂದರೆ ಗಡಿಯಾರದ ಮುಳ್ಳುಗಳು ಸುತ್ತುವ ರೀತಿ ಚಲಿಸುತ್ತದೆ) ಎಂದು ‘ಚುನಾವಣೆಯ ಹಿಂದೂ’ವಾಗಿರುವ ರಾಹುಲ್ ಗಾಂಧಿಗೆ ತಿಳಿದಿದ್ದರೆ ಅವರು ತಮ್ಮನ್ನು ತಾವು ಚಮತ್ಕಾರಕ್ಕೆ ಒಳಪಡಿಸಿಕೊಳ್ಳುತ್ತಿರಲಿಲ್ಲ… ಸಾರ್ವಜನಿಕವಾಗಿ ಹೀಗೆ…” ಎಂದು ಮಾಳವಿಯಾ ಟ್ವೀಟ್ ಮಾಡಿದ್ದಾರೆ.

ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಾರ್ವಜನಿಕರು ತಿರುಗೇಟು ನೀಡಿದ್ದಾರೆ. “ರಾಹುಲ್ ಗಾಂಧಿಯವರು ನಿಜವಾಗಿಯೂ ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡುತ್ತಿದ್ದಾರೆ. ಮಾಳವಿಯಾ ಅವರಿಗೆ ಇದು ಅಪ್ರದಕ್ಷಿಣಾಕಾರವಾಗಿ ಕಾಣುತ್ತದೆ” ಎಂದಿದ್ದಾರೆ.

“ತನ್ನ ಎಡಭಾಗವು ರಾಹುಲ್ ಅವರಿಗೆ ಬಲಭಾಗವಾಗಿರುತ್ತದೆ ಎಂದು ಅಮಿತ್ ಮಾಳವಿಯಾ ಅವರಿಗೆ ತಿಳಿವಳಿಕೆ ಇದ್ದಿದ್ದರೆ, ಅವರು ಸ್ವಯಂ ಮುಜುಗರವನ್ನು ಎದುರಿಸಬೇಕಾಗಿರಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ನನ್ನ ಮೂರುವರೆ ವರ್ಷದ ಮಗುವಿಗೆ ನಿಮಗಿಂತ ಚೆನ್ನಾಗಿ ತಿಳಿವಳಿಕೆ ಇದೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ. “ನಿಮ್ಮ ಖಾತೆಯನ್ನು ಡಿಲೀಟ್‌ ಮಾಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಿ. ನಿಮಗೆ ಇಷ್ಟೂ ತಿಳಿಯದಿದ್ದರೆ, ಆಡಳಿತದ ಬಗ್ಗೆ ನಿಮಗೇನು ತಿಳಿದಿದೆ?” ಎಂದು ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿಯವರ ರೀತಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಆರತಿ ಬೆಳಗುತ್ತಿರುವ ವಿಡಿಯೊವನ್ನು ಅಮಿತ್ ಅವರಿಗೆ ಟ್ಯಾಗ್ ಮಾಡಿ ಪತ್ರಕರ್ತ ಮೊಹಮ್ಮದ್ ಜುಬೇರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈವರೆಗೆ ಅಮಿತ್‌ ಅವರ ವಿಡಿಯೊಗಿಂತ, ಜುಬೇರ್‌ ನೀಡಿರುವ ಪ್ರತಿಕ್ರಿಯೆಯೇ ಹೆಚ್ಚು ರೀಟ್ವೀಟ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಯವರ ರೀತಿಯಲ್ಲಿಯೇ ಆರತಿ ಮಾಡುವ ವೀಡಿಯೋವನ್ನು ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಹಂಚಿಕೊಂಡಿದ್ದಾರೆ. “ಅದನ್ನೇ ನೀವು ಮೋದಿಯವರಿಗೆ ಏಕೆ ಹೇಳಬಾರದು?” ಎಂದು ಪ್ರಶ್ನಿಸಿದ್ದಾರೆ.

ಭೂಮಿ ಗಡಿಯಾರದ ರೀತಿ ಸುತ್ತುತ್ತದೆ ಎಂದು ಅಮಿತ್ ಮಾಡಿರುವ ಪ್ರತಿಪಾದನೆಯನ್ನು ಅನೇಕರು ಸರಿಪಡಿಸಿದ್ದಾರೆ. ಉತ್ತರ ಧ್ರುವ ನಕ್ಷತ್ರವಾದ ಪೊಲಾರಿಸ್‌ನಿಂದ ನೋಡಿದಾಗ ಭೂಮಿಯು ಅಪ್ರದಕ್ಷಿಣಾಕಾರವಾಗಿ ತಿರುಗುತ್ತದೆ ಎಂದು ತಿಳಿಸಿದ್ದಾರೆ.

“ಅಮಿತ್ ಅವರಿಗೆ ಸಾಮಾನ್ಯ ವಿಜ್ಞಾನದ ಅರಿವೂ ಇಲ್ಲ. ಇವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರೂ ಚುನಾವಣೆ ಹಿಂದೂ” ಎಂದಿದ್ದಾರೆ. ಜೊತೆಗೆ ಮೋದಿಯವರು ತೊಟ್ಟಿಲು ತೂಗುವ ರೀತಿಯಲ್ಲಿ ಆರತಿ ಬೆಳಗುತ್ತಿರುವ ವಿಡಿಯೊ ವೈರಲ್ ಆಗುತ್ತಿದೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯವರ ತಲೆಕೆಳಗಾದ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರಿಂದ ಟೀಕೆಗೆ ಗುರಿಯಾಗಿದ್ದಾರೆ. ಯೂತ್ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪ್ರತಿಕ್ರಿಯಿಸಿ, 2014ರ ಹಿಂದೆ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ಸ್ಮೃತಿಯವರು ಮಾಡಿದ್ದ ಹೋರಾಟದ ಫೋಟೋವನ್ನು ಟ್ಯಾಗ್ ಮಾಡಿದ್ದಾರೆ.

“ರಾಹುಲ್‌‌ ಪ್ರದಕ್ಷಿಣಾಕಾರವಾಗಿ ಆರತಿ ಮಾಡುತ್ತಿದ್ದಾರೆ. ನೀವು ಇನ್ನೊಂದು ಕಡೆಯಿಂದ ನೋಡುತ್ತಿದ್ದೀರಿ. ಪ್ರತಿ ದೇವಸ್ಥಾನದಲ್ಲಿಯೂ ಇದೇ ರೀತಿ ಆರತಿ ಮಾಡಲಾಗುತ್ತದೆ. ರಾಹುಲ್‌ ಮಾಡುವ ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ನಿಲ್ಲಿಸಿ ಮತ್ತು ನಿಮ್ಮ ಮೇಲಧಿಕಾರಿಗಳಿಂದ ಹೊಸ ಉದ್ಯೋಗ ವಿವರಣೆಯನ್ನು ಪಡೆಯಿರಿ. ಅವರನ್ನು ಸದಾ ಟ್ರೋಲ್ ಮಾಡುವುದಕ್ಕೆ ಬೇಸರವಿಲ್ಲವೇ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...