Homeಮುಖಪುಟರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಕುಟುಂಬ ಸದಸ್ಯರು ಶುಕ್ರವಾರ ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ ‘ಮಾ ನರ್ಮದಾ’ ಆರತಿ ನೆರವೇರಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಧ್ಯಪ್ರದೇಶದ ಪ್ರಸಿದ್ಧ ಶಿವ ದೇವಾಲಯಕ್ಕೆ ಭೇಟಿ ನೀಡಿದಾಗ ಗಡಿಯಾರ ಚಲಿಸುವ ದಿಕ್ಕಿಗೆ (ಪ್ರದಕ್ಷಿಣಾಕಾರಕ್ಕೆ) ವಿರುದ್ಧವಾಗಿ ಆರತಿ ಮಾಡಿದರು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ.

ರಾಹುಲ್ ಅವರ 4 ಸೆಕೆಂಡ್‌ಗಳ ಕ್ಲಿಪ್ ಅನ್ನು ಹಂಚಿಕೊಂಡ ಮಾಳವಿಯಾ, “ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಎಂದು ತಿಳಿದಿದ್ದರೆ ಕಾಂಗ್ರೆಸ್ ನಾಯಕ ರಾಹುಲ್‌ ಸಾರ್ವಜನಿಕವಾಗಿ ತನ್ನನ್ನು ತಾನು ಪ್ರದರ್ಶಿಸಿಕೊಳ್ಳುವುದಿಲ್ಲ” ಎಂದಿದ್ದಾರೆ.

“ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡಲಾಗುತ್ತದೆ ಮತ್ತು ಅದಕ್ಕೆ ವೈಜ್ಞಾನಿಕ ಕಾರಣವಿದೆ (ಭೂಮಿಯು ಪ್ರದಕ್ಷಿಣಾಕಾರವಾಗಿ ಅಂದರೆ ಗಡಿಯಾರದ ಮುಳ್ಳುಗಳು ಸುತ್ತುವ ರೀತಿ ಚಲಿಸುತ್ತದೆ) ಎಂದು ‘ಚುನಾವಣೆಯ ಹಿಂದೂ’ವಾಗಿರುವ ರಾಹುಲ್ ಗಾಂಧಿಗೆ ತಿಳಿದಿದ್ದರೆ ಅವರು ತಮ್ಮನ್ನು ತಾವು ಚಮತ್ಕಾರಕ್ಕೆ ಒಳಪಡಿಸಿಕೊಳ್ಳುತ್ತಿರಲಿಲ್ಲ… ಸಾರ್ವಜನಿಕವಾಗಿ ಹೀಗೆ…” ಎಂದು ಮಾಳವಿಯಾ ಟ್ವೀಟ್ ಮಾಡಿದ್ದಾರೆ.

ಮಾಳವಿಯಾ ಮಾಡಿರುವ ಟ್ವೀಟ್‌ಗೆ ಸಾರ್ವಜನಿಕರು ತಿರುಗೇಟು ನೀಡಿದ್ದಾರೆ. “ರಾಹುಲ್ ಗಾಂಧಿಯವರು ನಿಜವಾಗಿಯೂ ಆರತಿಯನ್ನು ಪ್ರದಕ್ಷಿಣಾಕಾರವಾಗಿ ಮಾಡುತ್ತಿದ್ದಾರೆ. ಮಾಳವಿಯಾ ಅವರಿಗೆ ಇದು ಅಪ್ರದಕ್ಷಿಣಾಕಾರವಾಗಿ ಕಾಣುತ್ತದೆ” ಎಂದಿದ್ದಾರೆ.

“ತನ್ನ ಎಡಭಾಗವು ರಾಹುಲ್ ಅವರಿಗೆ ಬಲಭಾಗವಾಗಿರುತ್ತದೆ ಎಂದು ಅಮಿತ್ ಮಾಳವಿಯಾ ಅವರಿಗೆ ತಿಳಿವಳಿಕೆ ಇದ್ದಿದ್ದರೆ, ಅವರು ಸ್ವಯಂ ಮುಜುಗರವನ್ನು ಎದುರಿಸಬೇಕಾಗಿರಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

“ನನ್ನ ಮೂರುವರೆ ವರ್ಷದ ಮಗುವಿಗೆ ನಿಮಗಿಂತ ಚೆನ್ನಾಗಿ ತಿಳಿವಳಿಕೆ ಇದೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ. “ನಿಮ್ಮ ಖಾತೆಯನ್ನು ಡಿಲೀಟ್‌ ಮಾಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಿ. ನಿಮಗೆ ಇಷ್ಟೂ ತಿಳಿಯದಿದ್ದರೆ, ಆಡಳಿತದ ಬಗ್ಗೆ ನಿಮಗೇನು ತಿಳಿದಿದೆ?” ಎಂದು ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿಯವರ ರೀತಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಆರತಿ ಬೆಳಗುತ್ತಿರುವ ವಿಡಿಯೊವನ್ನು ಅಮಿತ್ ಅವರಿಗೆ ಟ್ಯಾಗ್ ಮಾಡಿ ಪತ್ರಕರ್ತ ಮೊಹಮ್ಮದ್ ಜುಬೇರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈವರೆಗೆ ಅಮಿತ್‌ ಅವರ ವಿಡಿಯೊಗಿಂತ, ಜುಬೇರ್‌ ನೀಡಿರುವ ಪ್ರತಿಕ್ರಿಯೆಯೇ ಹೆಚ್ಚು ರೀಟ್ವೀಟ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿಯವರ ರೀತಿಯಲ್ಲಿಯೇ ಆರತಿ ಮಾಡುವ ವೀಡಿಯೋವನ್ನು ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಹಂಚಿಕೊಂಡಿದ್ದಾರೆ. “ಅದನ್ನೇ ನೀವು ಮೋದಿಯವರಿಗೆ ಏಕೆ ಹೇಳಬಾರದು?” ಎಂದು ಪ್ರಶ್ನಿಸಿದ್ದಾರೆ.

ಭೂಮಿ ಗಡಿಯಾರದ ರೀತಿ ಸುತ್ತುತ್ತದೆ ಎಂದು ಅಮಿತ್ ಮಾಡಿರುವ ಪ್ರತಿಪಾದನೆಯನ್ನು ಅನೇಕರು ಸರಿಪಡಿಸಿದ್ದಾರೆ. ಉತ್ತರ ಧ್ರುವ ನಕ್ಷತ್ರವಾದ ಪೊಲಾರಿಸ್‌ನಿಂದ ನೋಡಿದಾಗ ಭೂಮಿಯು ಅಪ್ರದಕ್ಷಿಣಾಕಾರವಾಗಿ ತಿರುಗುತ್ತದೆ ಎಂದು ತಿಳಿಸಿದ್ದಾರೆ.

“ಅಮಿತ್ ಅವರಿಗೆ ಸಾಮಾನ್ಯ ವಿಜ್ಞಾನದ ಅರಿವೂ ಇಲ್ಲ. ಇವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರೂ ಚುನಾವಣೆ ಹಿಂದೂ” ಎಂದಿದ್ದಾರೆ. ಜೊತೆಗೆ ಮೋದಿಯವರು ತೊಟ್ಟಿಲು ತೂಗುವ ರೀತಿಯಲ್ಲಿ ಆರತಿ ಬೆಳಗುತ್ತಿರುವ ವಿಡಿಯೊ ವೈರಲ್ ಆಗುತ್ತಿದೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯವರ ತಲೆಕೆಳಗಾದ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ವಿರೋಧ ಪಕ್ಷದ ನಾಯಕರಿಂದ ಟೀಕೆಗೆ ಗುರಿಯಾಗಿದ್ದಾರೆ. ಯೂತ್ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪ್ರತಿಕ್ರಿಯಿಸಿ, 2014ರ ಹಿಂದೆ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ಸ್ಮೃತಿಯವರು ಮಾಡಿದ್ದ ಹೋರಾಟದ ಫೋಟೋವನ್ನು ಟ್ಯಾಗ್ ಮಾಡಿದ್ದಾರೆ.

“ರಾಹುಲ್‌‌ ಪ್ರದಕ್ಷಿಣಾಕಾರವಾಗಿ ಆರತಿ ಮಾಡುತ್ತಿದ್ದಾರೆ. ನೀವು ಇನ್ನೊಂದು ಕಡೆಯಿಂದ ನೋಡುತ್ತಿದ್ದೀರಿ. ಪ್ರತಿ ದೇವಸ್ಥಾನದಲ್ಲಿಯೂ ಇದೇ ರೀತಿ ಆರತಿ ಮಾಡಲಾಗುತ್ತದೆ. ರಾಹುಲ್‌ ಮಾಡುವ ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ನಿಲ್ಲಿಸಿ ಮತ್ತು ನಿಮ್ಮ ಮೇಲಧಿಕಾರಿಗಳಿಂದ ಹೊಸ ಉದ್ಯೋಗ ವಿವರಣೆಯನ್ನು ಪಡೆಯಿರಿ. ಅವರನ್ನು ಸದಾ ಟ್ರೋಲ್ ಮಾಡುವುದಕ್ಕೆ ಬೇಸರವಿಲ್ಲವೇ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...