Homeಮುಖಪುಟ'ಇಬ್ರಾಹಿಂ ಏಕೆ ಸಿಎಂ ಆಗಬಾರದು?, ಅವರೇನು ಅಸ್ಪೃಶ್ಯರಲ್ಲ': ಎಚ್.ಡಿ ಕುಮಾರಸ್ವಾಮಿ ಅಸೂಕ್ಷ್ಮ ಹೇಳಿಕೆ

‘ಇಬ್ರಾಹಿಂ ಏಕೆ ಸಿಎಂ ಆಗಬಾರದು?, ಅವರೇನು ಅಸ್ಪೃಶ್ಯರಲ್ಲ’: ಎಚ್.ಡಿ ಕುಮಾರಸ್ವಾಮಿ ಅಸೂಕ್ಷ್ಮ ಹೇಳಿಕೆ

- Advertisement -
- Advertisement -

ಜೆಡಿಎಸ್ ಪಕ್ಷವು ಮುಸ್ಲಿಂ ವ್ಯಕ್ತಿಯನ್ನು ಸಿಎಂ ಮಾಡುತ್ತದೆ ಎಂಬ ವಿಚಾರದ ಕುರಿತು ಮಾಧ್ಯಮಗಳ ಜೊತೆ ಮಾತನಾಡುವಾಗ ಅಸ್ಪೃಶ್ಯತೆಯನ್ನು ಸಮರ್ಥಿಸುವ ರೀತಿಯಲ್ಲಿ ‘ಇಬ್ರಾಹಿಂ ಏಕೆ ಸಿಎಂ ಆಗಬಾರದು, ಅವರೇನು ಅಸ್ಪೃಶ್ಯರಲ್ಲ’ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅಸೂಕ್ಷ್ಮವಾಗಿ ಮಾತನಾಡಿರುವುದು ವರದಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆಯಲ್ಲಿ ನಿರತರಾಗಿರುವ ಕುಮಾರಸ್ವಾಮಿಯವರು ಖಾಸಗಿ ಇಂಗ್ಲಿಷ್ ವಾಹಿನಿಯೊಂದಕ್ಕೆ ನೀಡಿದ ಚುಟುಕು ಸಂದರ್ಶನದಲ್ಲಿ ಈ ಮಾತುಗಳನ್ನು ಆಡಿ ವಿವಾದಕ್ಕೆ ಗುರಿಯಾಗಿದ್ದಾರೆ.

ಕಳೆದ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂ ವ್ಯಕ್ತಿಯನ್ನು ಸಿಎಂ ಮಾಡುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳೀಕೆ ನೀಡಿದ್ದರು. ಈ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ ಕುಮಾರಸ್ವಾಮಿಯವರು “ನಾವು ಮುಸ್ಲಿಂ ಮತಗಳನ್ನು ಪಡೆಯುವುದಕ್ಕಾಗಿ ಮಾತನಾಡುತ್ತಿಲ್ಲ. ಇತ್ತೀಚೆಗೆ ನಮ್ಮ ಪಕ್ಷದ ಅಧ್ಯಕ್ಷರಾದ ಸಿ.ಎಂ ಇಬ್ರಾಹಿಂರವರು ಒಂದೆರೆಡು ವರ್ಷಗಳಲ್ಲಿ ಕುಮಾರಸ್ವಾಮಿಯವರು ಕೇಂದ್ರಕ್ಕೆ ತೆರಳಿದರೆ ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ. ಆದರೆ ಪ್ರಸ್ತುತ 5 ವರ್ಷ ನಾನು ನಮ್ಮ ಐದು ಅಂಶಗಳ ಕುರಿತು ಗಮನ ವಹಿಸುತ್ತೇವೆ. ಆದರೆ ಎರಡೂ ಮೂರು ವರ್ಷದಲ್ಲಿ ದೆಹಲಿಯ ನಮ್ಮ ಸ್ನೇಹಿತರು ಉನ್ನತ ಸ್ಥಾನಮಾನ ಕೊಡುವುದಾಗಿ ಕೇಂದ್ರಕ್ಕೆ ಕರೆದರೆ, ಅಂತ ಸಂದರ್ಭ ಬಂದರೆ ಹೋಗುತ್ತೇನೆ. ಅಂತ ಸಂದರ್ಭದಲ್ಲಿ ಇಬ್ರಾಹಿಂರವರು ಏಕೆ ಸಿಎಂ ಆಗಬಾರದು? ಅವರೇನು ಅಸ್ಪೃಶ್ಯರಲ್ಲ (He is not an Untouchable Man)” ಎಂದು ಹೇಳಿದ್ದಾರೆ.

ಕುಮಾರಸ್ವಾಮಿಯವರು ಒಂದು ಪಕ್ಷದ ಶಾಸಕಾಂಗ ಪಕ್ಷದ ಮುಖಂಡರಾಗಿ, ಮಾಜಿ ಮುಖ್ಯ ಮಂತ್ರಿಗಳಾಗಿ ಆ ಪಕ್ಷದ ಅಧ್ಯಕ್ಷರಿಗೆ ಸಿಎಂ ಸ್ಥಾನ ನೀಡುವ ಕುರಿತು ಮಾತನಾಡುವುದು ತಪ್ಪಲ್ಲ. ಆದರೆ ಮಾತಿನ ಮಧ್ಯೆ ಅವರೇನು ಅಸ್ಪೃಶ್ಯರಲ್ಲ ಎಂದು ಹೇಳುವ ಮೂಲಕ ಅಸ್ಪೃಶ್ಯ ಸಮುದಾಯಗಳನ್ನು ಅವಮಾನಿಸಿ, ಅಸ್ಪೃಶ್ಯರಿಗೆ ಅಧಿಕಾರ ನೀಡುವ ಅಗತ್ಯವಿಲ್ಲ ಎನ್ನುವ ಧಾಟಿಯಲ್ಲಿ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿದೆ.

ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ಸೂಕ್ಷ್ಮತೆಯನ್ನು ಹೊಂದಿರಬೇಕಾಗುತ್ತದೆ. ಅಸ್ಪೃಶ್ಯತೆ ಎಂಬುದು ಭಾರತಕ್ಕೆ ಅಂಟಿದ ಶಾಪ ಹಲವು ಮಹನೀಯರು ಅಭಿಪ್ರಾಯಪಟ್ಟಿದ್ದಾರೆ. ಹೀಗಿರುವಾಗ ಅಸ್ಪೃಶ್ಯತೆಯನ್ನು ತೊಡೆದುಹಾಕಬೇಕಾದರೆ ಅವರಿಗೆ ಅಧಿಕಾರ-ಸಮಾನತೆ ನೀಡುವ ಮೂಲಕ ಮುಖ್ಯವಾಹಿನಿ ಸಮಾಜದ ಭಾಗವಾಗುವಂತೆ ಮಾಡಬೇಕಿದೆ. ಅದನ್ನೇ ನಮ್ಮ ಸಂವಿಧಾನ ಹೇಳುತ್ತದೆ. ಒಂದು ಕಡೆ ದಲಿತರನ್ನು ಸಿಎಂ, ಡಿಸಿಎಂ ಮಾಡುತ್ತೇವೆ ಎನ್ನುವವರು ಇನ್ನೊಂದು ಕಡೆ ಅವರೇನು ಅಸ್ಪೃಶ್ಯರಲ್ಲ ಎನ್ನುವುದು ವಿರೋಧಭಾಸ ಮಾತ್ರವಲ್ಲ ಅವರ ನೈಜ ಕಾಳಜಿಯನ್ನು ಪ್ರಶ್ನಿಸುವಂತೆ ಮಾಡುತ್ತದೆ. ಈ ಹೇಳಿಕೆಯನ್ನು ಕುಮಾರಸ್ವಾಮಿ ಪರಿಶೀಲಿಸಿ ವಾಪಸ್ ಪಡೆದು ಕ್ಷಮೆ ಕೇಳಬೇಕು ಮತ್ತು ಉಳಿದವರಿಗೆ ಇದು ಪಾಠವಾಗಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...