Homeಮುಖಪುಟಭಾರತ್ ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ ಎಂದು ತಿರುಚಿದ ವಿಡಿಯೋ ಪೋಸ್ಟ್: ಬಿಜೆಪಿ ಮುಖಂಡನ...

ಭಾರತ್ ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ ಎಂದು ತಿರುಚಿದ ವಿಡಿಯೋ ಪೋಸ್ಟ್: ಬಿಜೆಪಿ ಮುಖಂಡನ ಮೇಲೆ FIR

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ಮಧ್ಯ ಪ್ರದೇಶದಲ್ಲಿ ಸಂಚರಿಸುವಾಗ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂದು ತಿರುಚಿದ ವಿಡಿಯೋ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡನ ಮೇಲೆ ಛತ್ತೀಸ್‌ಘಡ ಪೊಲೀಸರು FIR ದಾಖಲಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಯಾತ್ರೆಯ ಮೂರನೇ ದಿನ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಲಾಗಿದೆ ಎಂದು ಬಿಜೆಪಿ ಮುಖಂಡ ವಿಡಿಯೋ ಒಂದನ್ನು ಟ್ವೀಟ್ ಮಾಡಿದ್ದರು. ಇದು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಬಂದಿದೆ ಎಂದು ಅವರು ಆರೋಪಿಸಿದ್ದರು. ಅಲ್ಲದೆ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ವಿರುದ್ಧ ದೂರು ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್, “ವಿಡಿಯೋ ತಿರುಚಲ್ಪಟ್ಟಿದೆ. ಭಾರತ್ ಜೋಡೋ ಯಾತ್ರೆಗೆ ಅಪಾರ ಜನಬೆಂಬಲ ವ್ಯಕ್ತವಾಗಿರುವುದರಿಂದ ಬಿಜೆಪಿ ಪಕ್ಷಕ್ಕೆ ಹತಾಶೆಯಾಗಿದೆ. ಹಾಗಾಗಿ ಅದು ತಿರುಚಿದ ವಿಡಿಯೋವನ್ನು ಪೋಸ್ಟ್ ಮಾಡಿದೆ. ಈ ಕುರಿತು ಕೂಡಲೇ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಮತ್ತು ಬಿಜೆಪಿಯ ಕುತಂತ್ರಗಳಿಗೆ ತಿರುಗೇಟು ನೀಡಲು ಸಿದ್ದರಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

ಆ ವೀಡಿಯೋವನ್ನು ವಿರೂಪಗೊಳಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಮಧ್ಯಪ್ರದೇಶ ಬಿಜೆಪಿ ಮಾಧ್ಯಮ ಉಸ್ತುವಾರಿ ಲೋಕೇಂದ್ರ ಪರಾಶರ್‌ ವಿರುದ್ಧ ಛತ್ತೀಸ್‌ಗಢದ ರಾಯ್‌ಪುರದ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಕಾಂಗ್ರೆಸ್ ಕಾನೂನು ವಿಭಾಗದ ವಕೀಲ ಅಂಕಿತ್ ಮಿಶ್ರಾ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು IPC ಸೆಕ್ಷನ್ 153-A, 504, 505 (1), 505 (2), ಮತ್ತು 120-B ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಛತ್ತೀಸ್‌ಗಢದ ಕಾಂಗ್ರೆಸ್ ವಕ್ತಾರ ಧನಂಜಯ್ ಸಿಂಗ್ ಮಾತನಾಡಿ “ಭಾರತ್ ಜೋಡೋ ಯಾತ್ರೆಯು ಮಧ್ಯಪ್ರದೇಶ ತಲುಪಿದೆ ಮತ್ತು ಮಧ್ಯಪ್ರದೇಶದಲ್ಲಿ ಸಾಕಷ್ಟು ಪ್ರೀತಿಯನ್ನು ಪಡೆಯುತ್ತಿದೆ. ಭಾರತೀಯ ಜನತಾ ಪಕ್ಷವು ನಕಲಿ ವೀಡಿಯೊಗಳನ್ನು ಮಾಡುವ, ತಪ್ಪುದಾರಿಗೆಳೆಯುವ ಮತ್ತು ಸುಳ್ಳು ಹೇಳುವ ಅಭ್ಯಾಸವನ್ನು ಹೊಂದಿದೆ. ಅವರು ಅದಕ್ಕೆ ಸಂಬಂಧಿಸಿದ ಕಲ್ಪಿತ ವೀಡಿಯೊವನ್ನು ಪ್ರಚಾರ ಮಾಡಿದ್ದಾರೆ. ಅದಕ್ಕಾಗಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ‘ಇಬ್ರಾಹಿಂ ಏಕೆ ಸಿಎಂ ಆಗಬಾರದು?, ಅವರೇನು ಅಸ್ಪೃಶ್ಯರಲ್ಲ’: ಎಚ್.ಡಿ ಕುಮಾರಸ್ವಾಮಿ ಅಸೂಕ್ಷ್ಮ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...