Homeಕ್ರೀಡೆಕ್ರಿಕೆಟ್2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

- Advertisement -
- Advertisement -

2022ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯು ಹಲವು ರೋಚಕ ಪಂದ್ಯಗಳಿಗೆ ಸಾಕ್ಷಿಯಾಯಿತು. ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ಟಿ20 ಚಾಂಪಿಯನ್ ಎನಿಸಿತು. ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದರೂ ಸೆಮಿಫೈನಲ್‌ನಲ್ಲಿ ಎಡವಿದ ಭಾರತ ತಂಡ ಕಪ್ ಬರ ನೀಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಭಾರತ ತಂಡ ಮುಂದಿನ ಟಿ20 ವಿಶ್ವಕಪ್ ನತ್ತ ದೃಷ್ಟಿ ಹಾಯಿಸಿದೆ.

ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಮುಂಬರುವ 2024ರ ಆವೃತ್ತಿಯಲ್ಲಿ 12 ತಂಡಗಳ ಬದಲಿಗೆ 20 ತಂಡಗಳಿಗೆ ಅವಕಾಶ ನೀಡಲು ಮತ್ತು ಟೂರ್ನಿಯ ಫಾರ್ಮ್ಯಾಟ್‌ನಲ್ಲಿ ಬದಲಾವಣೆ ತರಲು ಐಸಿಸಿ ನಿರ್ಧರಿಸಿದೆ. ಸದ್ಯಕ್ಕೆ ಲೀಗ್ ಹಂತದಲ್ಲಿ ತಲಾ ಆರು ತಂಡಗಳಿರುವ ಎರಡು ಗುಂಪುಗಳ ಅಗ್ರ ಮೊದಲ ಮತ್ತು ದ್ವೀತಿಯ ಸ್ಥಾನ ಪಡೆದ ನಾಲ್ಕು ತಂಡಗಳನ್ನು ಸೆಮಿಫೈನಲ್‌ಗೆ ಕಳಿಸಲಾಗುತ್ತಿತ್ತು. ಆದರೆ ಹಲವು ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಐಸಿಸಿ ಹೊಸ ಫಾರ್ಮ್ಯಾಟ್‌ ಘೋಷಿಸಿದೆ.

ಈಗಾಗಲೇ ಅರ್ಹತೆ ಪಡೆದ ತಂಡಗಳು

ಮುಂದಿನ ಟಿ20 ವಿಶ್ವಕಪ್‌ನಲ್ಲಿ ಸೆಣಸಲಿರುವ 20 ತಂಡಗಳ ಪೈಕಿ 12 ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಭಾರತ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನೆದರ್ಲೆಂಡ್ಸ್, ನ್ಯೂಜಿಲೆಂಡ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು 2022ರ ಟೂರ್ನಿಯ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದ ಆಧಾರದ ಮೇಲೆ ಅರ್ಹತೆ ಪಡೆದಿವೆ. ಆತಿಥ್ಯ ವಹಿಸುವ ಕಾರಣಕಕಾಗಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ತಂಡಗಳು ಅರ್ಹತೆ ಪಡೆದರೆ, ಐಸಿಸಿಯ ಉತ್ತಮ ರ್ಯಾಂಕಿಂಗ್ ಆಧಾರದಲ್ಲಿ ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಸಹ ಅರ್ಹತೆ ಗಿಟ್ಟಿಸಿವೆ.

ಅರ್ಹತೆ ಪಡೆಯಬೇಕಿರುವ ತಂಡಗಳು

ಉಳಿದ 8 ತಂಡಗಳನ್ನು ಪ್ರಾದೇಶಿಕ ಕ್ವಾಲಿಫೈಯರ್ ಪಂದ್ಯಗಳ ಮೂಲಕ ನಿರ್ಧರಿಸಲಾಗುತ್ತದೆ. ಏಷ್ಯಾ, ಆಫ್ರಿಕಾ ಮತ್ತು ಯೂರೋಪ್ ಖಂಡದಿಂದ ತಲಾ ಎರಡು ದೇಶಗಳು ಅರ್ಹತೆ ಪಡೆದರೆ ಅಮೆರಿಕ ಮತ್ತು ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಪ್ರದೇಶದಿಂದ ತಲಾ ಒಂದು ತಂಡವು ಅರ್ಹತೆ ಪಡೆಯಲಿದೆ.

ಟೂರ್ನಿಯ ವಿಧಾನ (ಫಾರ್ಮ್ಯಾಟ್)

ಮುಂದಿನ ಟಿ20 ವಿಶ್ವಕಪ್‌ ಟೂರ್ನಿಯ ಲೀಗ್ ಹಂತದಲ್ಲಿ ತಲಾ 5 ತಂಡಗಳಿರುವ ನಾಲ್ಕು ಗುಂಪುಗಳನ್ನಾಗಿ ಮಾಡಲಾಗುತ್ತದೆ. ಇಲ್ಲಿ ಸಿಂಗಲ್ ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡವು ತಮ್ಮ ಗುಂಪಿನ ಇತರ ನಾಲ್ಕು ತಂಡಗಳ ಎದುರು ಸೆಣಸಬೇಕಿರುತ್ತದೆ. ಆನಂತರ ಪ್ರತಿ ಗುಂಪಿನಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನ ಪಡೆದ 8  ತಂಡಗಳು (ಪ್ರತಿ ಗುಂಪಿನಿಂದ 2) ಸೂಪರ್ 8 ಹಂತಕ್ಕೆ ಅರ್ಹತೆ ಪಡೆದರೆ ಉಳಿದ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 8 ಹಂತ

ಈ ಹಂತದಲ್ಲಿ 8 ತಂಡಗಳನ್ನು ತಲಾ ನಾಲ್ಕರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಇಲ್ಲಿಯೂ ಸಿಂಗಲ್ ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಗಳು ತಮ್ಮ ಎದುರಾಳಿ ತಂಡಗಳ ವಿರುದ್ದ ತಲಾ 3 ಪಂದ್ಯಗಳನ್ನು ಆಡುತ್ತವೆ. ಇಲ್ಲಿ ಪ್ರತಿ ಗುಂಪಿನಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸುತ್ತವೆ.

2021ರ ಟಿ20 ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ 5 ಪಂದ್ಯಗಳಲ್ಲಿ ನಾಲ್ಕು ಗೆದ್ದರೂ ಸಹ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಇನ್ನು 5ಕ್ಕೆ5 ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದ ಪಾಕಿಸ್ತಾನ ತಂಡ ಸೆಮಿಫೈನಲ್‌ನಲ್ಲಿ ಸೋಲಿನೊಂದಿಗೆ ನಿರ್ಗಮಿಸಿತ್ತು. 2022ರ ಟೂರ್ನಿಯಲ್ಲಿಯೂ ಸಹ ಲೀಗ್ ಹಂತದಲ್ಲಿ ಭಾರತ ಉತ್ತಮ ಪ್ರದರ್ಶನ ತೋರಿದರೂ ಸಹ ಸೆಮಿಫೈನಲ್‌ನಲ್ಲಿ ಸೋತು ನಿರ್ಗಮಿಸಿತ್ತು. ಹಾಗಾಗಿ ವಿಶ್ವಕಪ್ ಫಾರ್ಮ್ಯಾಟ್ ಬಗ್ಗೆ ದೂರುಗಳು ಕೇಳಿಬಂದಿದ್ದವು. ಹಾಗಾಗಿ ಐಸಿಸಿ ಹೊಸ ಫಾರ್ಮ್ಯಾಟ್‌ಗೆ ಬದಲಾವಣೆ ಮಾಡಿಕೊಂಡಿದೆ.

ಇದನ್ನೂ ಓದಿ:  ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...