Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ರೋಚಕ ಗೆಲುವು - ಪ್ಲೇ ಆಫ್ ಪ್ರವೇಶಕ್ಕೆ ಎರಡೇ ಹೆಜ್ಜೆ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ರೋಚಕ ಗೆಲುವು – ಪ್ಲೇ ಆಫ್ ಪ್ರವೇಶಕ್ಕೆ ಎರಡೇ ಹೆಜ್ಜೆ

- Advertisement -
- Advertisement -

ಪುಣೇರಿ ಪಲ್ಟನ್ ಮತ್ತು ಬೆಂಗಾಲ್ ವಾರಿಯರ್ಸ್ ತಂಡಗಳ ವಿರುದ್ಧ ಕಡೆ ನಿಮಿಷಗಳಲ್ಲಿ ಕೂದಲೆಳೆ ಅಂತರದಲ್ಲಿ ಸೋಲು ಕಂಡಿದ್ದ ಬೆಂಗಳೂರು ಬುಲ್ಸ್ ತಂಡ ದಬಾಂಗ್ ಡೆಲ್ಲಿ ತಂಡದ ವಿರುದ್ಧ ರೋಚಕ ಗೆಲುವು ಸಾಧಿಸುವ (52-49) ಮೂಲಕ ಮತ್ತೆ ಜಯದ ಹಾದಿಗೆ ಮರಳಿದೆ. ಆ ಮೂಲಕ ಪ್ರೇ ಆಫ್ ಹಂತಕ್ಕೆ ಪ್ರವೇಶ ಪಡೆಯಲು ಇನ್ನು ಎರಡೇ ಹೆಜ್ಜೆ ಬಾಕಿಯಿದೆ.

ಭಾನುವಾರ ರಾತ್ರಿ ಹೈದರಾಬಾದ್‌ನ ಗಚಿಬೋಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರಡನೆ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ದಬಾಂಗ್ ಡೆಲ್ಲಿ ತಂಡವನ್ನು ಮೂರು ಅಂಕಗಳಿಂದ ಬಗ್ಗು ಬಡಿಯಿತು. ಒಂದು ಹಂತದಲ್ಲಿ ದೆಹಲಿಗಿಂತ 13 ಅಂಕ ಹಿಂದಿದ್ದ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಭರತ್ ನೀಡಿದ ಭರ್ಜರಿ ಪ್ರದರ್ಶನ ಬಲದಿಂದ ಪ್ರಬಲ ಕಮ್ ಬ್ಯಾಕ್ ಮಾಡಿ ಜಯ ಒಲಿಸಿಕೊಂಡಿತು. 24 ರೈಡ್‌ಗಳಿಂದ 23 ರೈಡ್ ಗಳಿಸಿದ ಭರತ್ ಹೂಡಾ ಪ್ಲೇಯರ್ ಆಫ್‌ ದಿ ಮ್ಯಾಚ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಅಲ್ಲದೆ ಟೂರ್ನಿಯಲ್ಲಿ ಅತ್ಯಧಿಕ ರೈಡ್ ಪಾಯಿಂಟ್ ಗಳಿಸಿದ (219) ಮೊದಲಿಗರಾದರು.

ಪಂದ್ಯದ ಗತಿ ಬದಲಿಸಿದ ವಿಕಾಸ್ ಖಂಡೋಲ

ಬೆಂಗಳೂರು ಬುಲ್ಸ್ ತಂಡದ ಮುಖ್ಯ ರೈಡರ್ ವಿಕಾಸ್ ಖಂಡೋಲ ಸಾಧರಣ ಪ್ರದರ್ಶನಕ್ಕೆ ಸೀಮಿತಗೊಂಡಿದ್ದರು. ಆದರೆ ದಬಾಂಗ್ ಡೆಲ್ಲಿ ವಿರುದ್ಧ ಅವರು ಮಾಡಿದ ಸೂಪರ್ ರೈಡ್ (ಒಂದೇ ರೈಡ್‌ನಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸುವುದು) ಪಂದ್ಯದ ಗತಿಯನ್ನೆ ಬದಲಿಸಿತು. ಪಂದ್ಯದ ಆರಂಭದಿಂದಲೂ ಪಾರಮ್ಯ ಮೆರೆದಿದ್ದ ದೆಹಲಿ ತಂಡ ಮೊದಲಾರ್ಧ ಮುಗಿಯುವ ಹೊತ್ತಿಗೆ 12 ಪಾಯಿಂಟ್ ಲೀಡ್ ಪಡೆದಿತ್ತು. ಆದರೆ ಮೊದಲಾರ್ಧದ ಕೊನೆಯ ರೈಡ್ ಮಾಡಿದ ವಿಕಾಸ್ ಒಂದೇ ರೈಡ್‌ನಲ್ಲಿ ಮೂರು ಜನರನ್ನು ಔಟ್ ಮಾಡುವ ಮೂಲಕ ಅಂತರವನ್ನು ಕೇವಲ 9 ಪಾಯಿಂಟ್‌ಗೆ ಇಳಿಸಿದರೂ ಮಾತ್ರವಲ್ಲ ಮೂರು ಜನರನ್ನು ಕೋರ್ಟ್‌ನಿಂದ ಹೊರಹಾಕಿದರು. ಇದು ಪಂದ್ಯದ ಗತಿಯನ್ನೇ ಬದಲಿಸಿತು. ವಿಕಾಸ್ ಖಂಡೋಲ 14 ರೈಡ್‌ಗಳಿಂದ 10 ಪಾಯಿಂಟ್ ಗಳಿಸಿ ಈ ಆವೃತ್ತಿಯಲ್ಲಿ ತಮ್ಮ 3ನೇ ಸೂಪರ್ ಟೆನ್ ಗಳಿಸಿದರು.

ದ್ವಿತಿಯಾರ್ಧದಲ್ಲಿ ಗೂಳಿಯಂತೆ ಆರ್ಭಟಿಸಿದ ಭರತ್

ಮೊದಲಾರ್ಧದಲ್ಲಿ ಪದೇ ಪದೇ ಔಟ್ ಆಗಿ 10 ನಿಮಿಷಕ್ಕಿಂತ ಹೆಚ್ಚು ಕಾಲ ಕೋರ್ಟ್‌ನಿಂದ ಹೊರಗುಳಿದಿದ್ದ ಭರತ್ ದ್ವಿತಿಯಾರ್ಧದಲ್ಲಿ ಮಿಂಚಿದರು. ತಮ್ಮ ರನ್ನಿಂಗ್ ಹ್ಯಾಂಡ್ ಟಚ್ ಸ್ಕಿಲ್ ಮೂಲಕ ದ್ವೀತಿಯಾರ್ಧದ ಕೇವಲ 2 ನಿಮಿಷದಲ್ಲಿ ದೆಹಲಿಯನ್ನು ಆಲೌಟ್ ಮಾಡಿದರು. ಹಾಗಾಗಿ ಅಂತರ ಕೇವಲ 5 ಅಂಕಕ್ಕೆ ಇಳಿಯಿತು.

ಆದರೆ ಮತ್ತೊಂದು ಕಡೆ ಬೆಂಗಳೂರು ಬುಲ್ಸ್ ಡಿಫೆಂಡರ್‌ಗಳು ಕೈಚೆಲ್ಲಿದ ಕಾರಣ ಮತ್ತೊಮ್ಮೆ ಬೆಂಗಳೂರು ಆಲೌಟ್ ಆಗಬೇಕಾಯಿತು. ಆಗ ದೆಹಲಿ 36 ಪಾಯಿಂಟ್ ಇದ್ದರೆ ಬೆಂಗಳೂರು ಕೇವಲ 25 ಪಾಯಿಂಟ್ ಇತ್ತು. ಅಂತರ ಮತ್ತೆ 11 ಪಾಯಿಂಟ್‌ಗಳಿಗೇರಿತ್ತು. ಆದರೆ ಕೊನೆಯ ಹತ್ತು ನಿಮಿಷ ಇರುವಂತೆ ಭರತ್ ಸಿಡಿದೆದ್ದರು. ಕೇವಲ 5-10 ಸೆಕೆಂಡ್‌ಗಳ ರೈಡ್‌ಗಳಲ್ಲಿಯೇ ಪಾಯಿಂಟ್ ಗಳಿಸಿದರು. ಕಡೆಯ 4 ನಿಮಿಷದ ಆಟ ಇರುವಂತೆ ಡೆಲ್ಲಿ ಮತ್ತೆ ಆಲೌಟ್‌ ಆಯ್ತು. ಆದರೂ ದೆಹಲಿ ಮೂರು ಪಾಯಿಂಟ್‌ಗಳಿಂದ ಮುಂದಿತ್ತು. ಆದರೆ ಭರತ್ ಛಲಬಿಡದೆ ಆಡಿ ಗೂಳಿಯಂತೆ ಆರ್ಭಟಿಸಿದರು. ಸತತ ಎರಡು ಮಲ್ಟಿ ಪಾಯಿಟ್ ರೈಡ್ ಮಾಡಿ ದಬಾಂಗ್ ಡೆಲ್ಲಿ ಕೋರ್ಟ್ ಖಾಲಿ ಮಾಡಿಸಿದರು. ಕೊನೆಯ ಡು ಆರ್ ಡೈ ನಲ್ಲಿಯೂ ಒಂದು ಪಾಯಿಂಟ್ ಹೆಕ್ಕಿ ಮೂರು ಪಾಯಿಂಟ್‌ಗಳ ಗೆಲುವಿನ ಸಂಭ್ರಮ ಆಚರಿಸಿದರು.

23 ರೈಡ್ ಪಾಯಿಂಟ್ ಗಳಿಸಿದ ಭರತ್ ಒಂದೇ ಪಂದ್ಯದಲ್ಲಿ ಅತಿ ಹೆಚ್ಚು ಪಾಯಿಂಟ್ ಗಳಿಸಿದ ತಮ್ಮ ದಾಖಲೆಯನ್ನು ಉತ್ತಮಪಡಿಸಿಕೊಂಡರು. ಹಿಂದಿನ ದಬಾಂಗ್ ಡೆಲ್ಲಿ ವಿರುದ್ಧದ ಪಂದ್ಯದಲ್ಲಿಯೂ ಅವರು 20 ಪಾಯಿಂಟ್ ಗಳಿಸಿದ್ದರು.

ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಬೆಂಗಳೂರು

ಇದುವರೆಗೆ ಆಡಿದ 18 ಪಂದ್ಯಗಳಲ್ಲಿ 11 ಗೆಲುವು, 6 ಸೋಲು ಮತ್ತು ಒಂದು ಟೈನೊಂದಿಗೆ 63 ಅಂಕ ಗಳಿಸಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನೊಂದಿಗೆ ಪ್ಲೇ ಆಫ್‌ ಕಡೆ ಮುಖ ಮಾಡಿದೆ. ಪುಣೇರಿ ಪಲ್ಟಾನ್ ತಂಡ 69 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಬೆಂಗಳೂರು ತಂಡ ಎರಡನೇ ಸ್ಥಾನದಲ್ಲಿ ಅಥವಾ ಮೊದಲ ಸ್ಥಾನದಲ್ಲಿ ಉಳಿದುಕೊಂಡರೆ ಮಾತ್ರ ಅದು ನೇರವಾಗಿ ಸೆಮಿಫೈನಲ್ ತಲುಪಲು ಸಾಧ್ಯ. ಆದರೆ ಕೇವಲ 17 ಪಂದ್ಯಗಳಲ್ಲಿ 59 ಅಂಕ ಗಳಿಸಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡ ಎರಡನೇ ಸ್ಥಾನಕ್ಕೆ ಸವಾಲೊಡ್ಡುತ್ತಿದೆ.

ಈ ಆವೃತ್ತಿಯಲ್ಲಿ ಅತಿ ಉತ್ತಮ ಪ್ರದರ್ಶನ ನೀಡಿರುವ ಈ ಎರಡು ತಂಡಗಳು ಮುಂದಿನ ಬುಧವಾರ ಪರಸ್ಪರ ಕಣಕ್ಕಿಳಿಯುತ್ತಿವೆ. ಅಲ್ಲಿ ಗೆದ್ದವರು ಎರಡನೇ ಸ್ಥಾನದಲ್ಲಿ ಮುಂದುವರೆಯುವ ಸಾಧ್ಯತೆಯಿದೆ.

ಬೆಂಗಳೂರು ತಂಡಕ್ಕೆ ಲೀಗ್ ಹಂತದಲ್ಲಿ ಇನ್ನು 4 ಪಂದ್ಯಗಳು ಬಾಕಿ ಇವೆ. ಈ ನಾಲ್ಕರಲ್ಲಿ ಎರಡು ಪಂದ್ಯ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಆದರೆ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರ 2ನೇ ಸ್ಥಾನದೊಳಗಿರುವುದು ಉತ್ತಮ. ಅದಕ್ಕಾಗಿ ಅದು ಕನಿಷ್ಟ 3 ಅಥವಾ ನಾಲ್ಕೂ ಪಂದ್ಯಗಳನ್ನು ಗೆಲ್ಲಬೇಕಿದೆ. ಏಕೆಂದರೆ ಪ್ಲೇ ಆಫ್‌ಗೆ 6 ತಂಡಗಳು ಅರ್ಹತೆ ಪಡೆದರೆ, ಅವುಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ 2 ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಎಲಿಮಿನೇಟರ್ ಪಂದ್ಯಗಳಲ್ಲಿ ಸೆಣಸಿ ಗೆದ್ದ 2 ತಂಡಗಳು ಸೆಮಿಫೈನಲ್ ತಲುಪಬೇಕಿದೆ.

ಪ್ಲೇ ಆಫ್ ಹೀಗಿರಲಿದೆ

ಒಟ್ಟು 12 ತಂಡಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ 6 ರೊಳಗಿನ ತಂಡಗಳು ಪ್ಲೇ ಆಫ್ ಪ್ರವೇಶಿಸಿದರೆ ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ: 2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...