Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ರೋಚಕ ಗೆಲುವು - ಪ್ಲೇ ಆಫ್ ಪ್ರವೇಶಕ್ಕೆ ಎರಡೇ ಹೆಜ್ಜೆ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ರೋಚಕ ಗೆಲುವು – ಪ್ಲೇ ಆಫ್ ಪ್ರವೇಶಕ್ಕೆ ಎರಡೇ ಹೆಜ್ಜೆ

- Advertisement -
- Advertisement -

ಪುಣೇರಿ ಪಲ್ಟನ್ ಮತ್ತು ಬೆಂಗಾಲ್ ವಾರಿಯರ್ಸ್ ತಂಡಗಳ ವಿರುದ್ಧ ಕಡೆ ನಿಮಿಷಗಳಲ್ಲಿ ಕೂದಲೆಳೆ ಅಂತರದಲ್ಲಿ ಸೋಲು ಕಂಡಿದ್ದ ಬೆಂಗಳೂರು ಬುಲ್ಸ್ ತಂಡ ದಬಾಂಗ್ ಡೆಲ್ಲಿ ತಂಡದ ವಿರುದ್ಧ ರೋಚಕ ಗೆಲುವು ಸಾಧಿಸುವ (52-49) ಮೂಲಕ ಮತ್ತೆ ಜಯದ ಹಾದಿಗೆ ಮರಳಿದೆ. ಆ ಮೂಲಕ ಪ್ರೇ ಆಫ್ ಹಂತಕ್ಕೆ ಪ್ರವೇಶ ಪಡೆಯಲು ಇನ್ನು ಎರಡೇ ಹೆಜ್ಜೆ ಬಾಕಿಯಿದೆ.

ಭಾನುವಾರ ರಾತ್ರಿ ಹೈದರಾಬಾದ್‌ನ ಗಚಿಬೋಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರಡನೆ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ದಬಾಂಗ್ ಡೆಲ್ಲಿ ತಂಡವನ್ನು ಮೂರು ಅಂಕಗಳಿಂದ ಬಗ್ಗು ಬಡಿಯಿತು. ಒಂದು ಹಂತದಲ್ಲಿ ದೆಹಲಿಗಿಂತ 13 ಅಂಕ ಹಿಂದಿದ್ದ ಬೆಂಗಳೂರು ತಂಡ ದ್ವಿತಿಯಾರ್ಧದಲ್ಲಿ ಭರತ್ ನೀಡಿದ ಭರ್ಜರಿ ಪ್ರದರ್ಶನ ಬಲದಿಂದ ಪ್ರಬಲ ಕಮ್ ಬ್ಯಾಕ್ ಮಾಡಿ ಜಯ ಒಲಿಸಿಕೊಂಡಿತು. 24 ರೈಡ್‌ಗಳಿಂದ 23 ರೈಡ್ ಗಳಿಸಿದ ಭರತ್ ಹೂಡಾ ಪ್ಲೇಯರ್ ಆಫ್‌ ದಿ ಮ್ಯಾಚ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಅಲ್ಲದೆ ಟೂರ್ನಿಯಲ್ಲಿ ಅತ್ಯಧಿಕ ರೈಡ್ ಪಾಯಿಂಟ್ ಗಳಿಸಿದ (219) ಮೊದಲಿಗರಾದರು.

ಪಂದ್ಯದ ಗತಿ ಬದಲಿಸಿದ ವಿಕಾಸ್ ಖಂಡೋಲ

ಬೆಂಗಳೂರು ಬುಲ್ಸ್ ತಂಡದ ಮುಖ್ಯ ರೈಡರ್ ವಿಕಾಸ್ ಖಂಡೋಲ ಸಾಧರಣ ಪ್ರದರ್ಶನಕ್ಕೆ ಸೀಮಿತಗೊಂಡಿದ್ದರು. ಆದರೆ ದಬಾಂಗ್ ಡೆಲ್ಲಿ ವಿರುದ್ಧ ಅವರು ಮಾಡಿದ ಸೂಪರ್ ರೈಡ್ (ಒಂದೇ ರೈಡ್‌ನಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸುವುದು) ಪಂದ್ಯದ ಗತಿಯನ್ನೆ ಬದಲಿಸಿತು. ಪಂದ್ಯದ ಆರಂಭದಿಂದಲೂ ಪಾರಮ್ಯ ಮೆರೆದಿದ್ದ ದೆಹಲಿ ತಂಡ ಮೊದಲಾರ್ಧ ಮುಗಿಯುವ ಹೊತ್ತಿಗೆ 12 ಪಾಯಿಂಟ್ ಲೀಡ್ ಪಡೆದಿತ್ತು. ಆದರೆ ಮೊದಲಾರ್ಧದ ಕೊನೆಯ ರೈಡ್ ಮಾಡಿದ ವಿಕಾಸ್ ಒಂದೇ ರೈಡ್‌ನಲ್ಲಿ ಮೂರು ಜನರನ್ನು ಔಟ್ ಮಾಡುವ ಮೂಲಕ ಅಂತರವನ್ನು ಕೇವಲ 9 ಪಾಯಿಂಟ್‌ಗೆ ಇಳಿಸಿದರೂ ಮಾತ್ರವಲ್ಲ ಮೂರು ಜನರನ್ನು ಕೋರ್ಟ್‌ನಿಂದ ಹೊರಹಾಕಿದರು. ಇದು ಪಂದ್ಯದ ಗತಿಯನ್ನೇ ಬದಲಿಸಿತು. ವಿಕಾಸ್ ಖಂಡೋಲ 14 ರೈಡ್‌ಗಳಿಂದ 10 ಪಾಯಿಂಟ್ ಗಳಿಸಿ ಈ ಆವೃತ್ತಿಯಲ್ಲಿ ತಮ್ಮ 3ನೇ ಸೂಪರ್ ಟೆನ್ ಗಳಿಸಿದರು.

ದ್ವಿತಿಯಾರ್ಧದಲ್ಲಿ ಗೂಳಿಯಂತೆ ಆರ್ಭಟಿಸಿದ ಭರತ್

ಮೊದಲಾರ್ಧದಲ್ಲಿ ಪದೇ ಪದೇ ಔಟ್ ಆಗಿ 10 ನಿಮಿಷಕ್ಕಿಂತ ಹೆಚ್ಚು ಕಾಲ ಕೋರ್ಟ್‌ನಿಂದ ಹೊರಗುಳಿದಿದ್ದ ಭರತ್ ದ್ವಿತಿಯಾರ್ಧದಲ್ಲಿ ಮಿಂಚಿದರು. ತಮ್ಮ ರನ್ನಿಂಗ್ ಹ್ಯಾಂಡ್ ಟಚ್ ಸ್ಕಿಲ್ ಮೂಲಕ ದ್ವೀತಿಯಾರ್ಧದ ಕೇವಲ 2 ನಿಮಿಷದಲ್ಲಿ ದೆಹಲಿಯನ್ನು ಆಲೌಟ್ ಮಾಡಿದರು. ಹಾಗಾಗಿ ಅಂತರ ಕೇವಲ 5 ಅಂಕಕ್ಕೆ ಇಳಿಯಿತು.

ಆದರೆ ಮತ್ತೊಂದು ಕಡೆ ಬೆಂಗಳೂರು ಬುಲ್ಸ್ ಡಿಫೆಂಡರ್‌ಗಳು ಕೈಚೆಲ್ಲಿದ ಕಾರಣ ಮತ್ತೊಮ್ಮೆ ಬೆಂಗಳೂರು ಆಲೌಟ್ ಆಗಬೇಕಾಯಿತು. ಆಗ ದೆಹಲಿ 36 ಪಾಯಿಂಟ್ ಇದ್ದರೆ ಬೆಂಗಳೂರು ಕೇವಲ 25 ಪಾಯಿಂಟ್ ಇತ್ತು. ಅಂತರ ಮತ್ತೆ 11 ಪಾಯಿಂಟ್‌ಗಳಿಗೇರಿತ್ತು. ಆದರೆ ಕೊನೆಯ ಹತ್ತು ನಿಮಿಷ ಇರುವಂತೆ ಭರತ್ ಸಿಡಿದೆದ್ದರು. ಕೇವಲ 5-10 ಸೆಕೆಂಡ್‌ಗಳ ರೈಡ್‌ಗಳಲ್ಲಿಯೇ ಪಾಯಿಂಟ್ ಗಳಿಸಿದರು. ಕಡೆಯ 4 ನಿಮಿಷದ ಆಟ ಇರುವಂತೆ ಡೆಲ್ಲಿ ಮತ್ತೆ ಆಲೌಟ್‌ ಆಯ್ತು. ಆದರೂ ದೆಹಲಿ ಮೂರು ಪಾಯಿಂಟ್‌ಗಳಿಂದ ಮುಂದಿತ್ತು. ಆದರೆ ಭರತ್ ಛಲಬಿಡದೆ ಆಡಿ ಗೂಳಿಯಂತೆ ಆರ್ಭಟಿಸಿದರು. ಸತತ ಎರಡು ಮಲ್ಟಿ ಪಾಯಿಟ್ ರೈಡ್ ಮಾಡಿ ದಬಾಂಗ್ ಡೆಲ್ಲಿ ಕೋರ್ಟ್ ಖಾಲಿ ಮಾಡಿಸಿದರು. ಕೊನೆಯ ಡು ಆರ್ ಡೈ ನಲ್ಲಿಯೂ ಒಂದು ಪಾಯಿಂಟ್ ಹೆಕ್ಕಿ ಮೂರು ಪಾಯಿಂಟ್‌ಗಳ ಗೆಲುವಿನ ಸಂಭ್ರಮ ಆಚರಿಸಿದರು.

23 ರೈಡ್ ಪಾಯಿಂಟ್ ಗಳಿಸಿದ ಭರತ್ ಒಂದೇ ಪಂದ್ಯದಲ್ಲಿ ಅತಿ ಹೆಚ್ಚು ಪಾಯಿಂಟ್ ಗಳಿಸಿದ ತಮ್ಮ ದಾಖಲೆಯನ್ನು ಉತ್ತಮಪಡಿಸಿಕೊಂಡರು. ಹಿಂದಿನ ದಬಾಂಗ್ ಡೆಲ್ಲಿ ವಿರುದ್ಧದ ಪಂದ್ಯದಲ್ಲಿಯೂ ಅವರು 20 ಪಾಯಿಂಟ್ ಗಳಿಸಿದ್ದರು.

ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಬೆಂಗಳೂರು

ಇದುವರೆಗೆ ಆಡಿದ 18 ಪಂದ್ಯಗಳಲ್ಲಿ 11 ಗೆಲುವು, 6 ಸೋಲು ಮತ್ತು ಒಂದು ಟೈನೊಂದಿಗೆ 63 ಅಂಕ ಗಳಿಸಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನೊಂದಿಗೆ ಪ್ಲೇ ಆಫ್‌ ಕಡೆ ಮುಖ ಮಾಡಿದೆ. ಪುಣೇರಿ ಪಲ್ಟಾನ್ ತಂಡ 69 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಬೆಂಗಳೂರು ತಂಡ ಎರಡನೇ ಸ್ಥಾನದಲ್ಲಿ ಅಥವಾ ಮೊದಲ ಸ್ಥಾನದಲ್ಲಿ ಉಳಿದುಕೊಂಡರೆ ಮಾತ್ರ ಅದು ನೇರವಾಗಿ ಸೆಮಿಫೈನಲ್ ತಲುಪಲು ಸಾಧ್ಯ. ಆದರೆ ಕೇವಲ 17 ಪಂದ್ಯಗಳಲ್ಲಿ 59 ಅಂಕ ಗಳಿಸಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡ ಎರಡನೇ ಸ್ಥಾನಕ್ಕೆ ಸವಾಲೊಡ್ಡುತ್ತಿದೆ.

ಈ ಆವೃತ್ತಿಯಲ್ಲಿ ಅತಿ ಉತ್ತಮ ಪ್ರದರ್ಶನ ನೀಡಿರುವ ಈ ಎರಡು ತಂಡಗಳು ಮುಂದಿನ ಬುಧವಾರ ಪರಸ್ಪರ ಕಣಕ್ಕಿಳಿಯುತ್ತಿವೆ. ಅಲ್ಲಿ ಗೆದ್ದವರು ಎರಡನೇ ಸ್ಥಾನದಲ್ಲಿ ಮುಂದುವರೆಯುವ ಸಾಧ್ಯತೆಯಿದೆ.

ಬೆಂಗಳೂರು ತಂಡಕ್ಕೆ ಲೀಗ್ ಹಂತದಲ್ಲಿ ಇನ್ನು 4 ಪಂದ್ಯಗಳು ಬಾಕಿ ಇವೆ. ಈ ನಾಲ್ಕರಲ್ಲಿ ಎರಡು ಪಂದ್ಯ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಆದರೆ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರ 2ನೇ ಸ್ಥಾನದೊಳಗಿರುವುದು ಉತ್ತಮ. ಅದಕ್ಕಾಗಿ ಅದು ಕನಿಷ್ಟ 3 ಅಥವಾ ನಾಲ್ಕೂ ಪಂದ್ಯಗಳನ್ನು ಗೆಲ್ಲಬೇಕಿದೆ. ಏಕೆಂದರೆ ಪ್ಲೇ ಆಫ್‌ಗೆ 6 ತಂಡಗಳು ಅರ್ಹತೆ ಪಡೆದರೆ, ಅವುಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ 2 ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಎಲಿಮಿನೇಟರ್ ಪಂದ್ಯಗಳಲ್ಲಿ ಸೆಣಸಿ ಗೆದ್ದ 2 ತಂಡಗಳು ಸೆಮಿಫೈನಲ್ ತಲುಪಬೇಕಿದೆ.

ಪ್ಲೇ ಆಫ್ ಹೀಗಿರಲಿದೆ

ಒಟ್ಟು 12 ತಂಡಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರ 6 ರೊಳಗಿನ ತಂಡಗಳು ಪ್ಲೇ ಆಫ್ ಪ್ರವೇಶಿಸಿದರೆ ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದುವರೆಗಿನ ಪ್ರೊ ಕಬಡ್ಡಿ ಚಾಂಪಿಯನ್‌ಗಳು

ಮೊದಲ ಆವೃತ್ತಿ 2014: ಜೈಪುರ್ ಪಿಂಕ್ ಪ್ಯಾಂಥರ್ಸ್

ಎರಡನೇ ಆವೃತ್ತಿ 2014: ಯು ಮುಂಬಾ

ಮೂರನೇ ಆವೃತ್ತಿ 2015: ಪಟ್ನಾ ಪೈರೇಟ್ಸ್

ನಾಲ್ಕನೇ ಆವೃತ್ತಿ 2016: ಪಟ್ನಾ ಪೈರೇಟ್ಸ್

ಐದನೇ ಆವೃತ್ತಿ 2017: ಪಟ್ನಾ ಪೈರೇಟ್ಸ್

ಆರನೇ ಆವೃತ್ತಿ 2018: ಬೆಂಗಳೂರು ಬುಲ್ಸ್

ಏಳನೇ ಆವೃತ್ತಿ 2019: ಬೆಂಗಾಲ್ ವಾರಿಯರ್ಸ್

ಎಂಟನೇ ಆವೃತ್ತಿ 2021: ದಬಾಂಗ್ ಡೆಲ್ಲಿ

ಇದನ್ನೂ ಓದಿ: 2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...