Homeಮುಖಪುಟರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಮುಖಂಡರು: ಟೀಕೆ ಬಳಿಕ ಎಚ್ಚೆತ್ತ...

ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಮುಖಂಡರು: ಟೀಕೆ ಬಳಿಕ ಎಚ್ಚೆತ್ತ ಬಿಜೆಪಿ

- Advertisement -
- Advertisement -

ಸಿಸಿಬಿ ಪೊಲೀಸರ ದಾಳಿ ವೇಳೆ ನಾಪತ್ತೆಯಾಗಿದ್ದ ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಮುಖಂಡರಿಂದ ವಿವರಣೆ ಪಡೆಯಲಾಗುವುದು, ಸೈಲೆಂಟ್ ಸುನೀಲ್‌ರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಭಾನುವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸೈಲೆಂಟ್ ಸುನೀಲ್ ಆರ್‌ಎಸ್‌ಎಸ್‌ ಹಿನ್ನೆಲೆಯ ರಾಷ್ಟ್ರೋತ್ಥಾನ ಪರಿಷತ್ ಜೊತೆಗೂಡಿ ರಕ್ತದಾನ ಶಿಬಿರ ಏರ್ಪಡಿಸಿದ್ದರು. ಆ ಕಾರ್ಯಕ್ರಮಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಪಿ.ಸಿ ಮೋಹನ್, ಶಾಸಕರುಗಳಾದ ಉದಯ್ ಗರುಡಾಚಾರ್, ಬೆಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷ ರಮೇಶ್ ಸೇರಿದಂತೆ ಹಲವರು ಅತಿಥಿಗಳಾಗಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹುಟ್ಟುಹಾಕಿತ್ತು.

ನವೆಂಬರ್ 23ರಂದು ನಡೆದ ರೌಡಿಗಳ ಮನೆ ಮೇಲಿನ ಸಿಸಿಬಿ ದಾಳಿಯಲ್ಲಿ ಸೈಲೆಂಟ್ ಸುನೀಲ್ ತಪ್ಪಿಸಿಕೊಂಡಿದ್ದರು ಎಂದು ಪೊಲೀಸರು ಪತ್ರಿಕಾ ಹೇಳಿಕೆ ನೀಡಿದ್ದರು. ಆದರೆ ಮೂರೇ ದಿನದಲ್ಲಿ ಅವರ ನೇತೃತ್ವದಲ್ಲಿಯೇ ರಕ್ತದಾನ ಕಾರ್ಯಕ್ರಮ ನಡೆಸಲಾಗಿದ್ದು ಬಂಧಿಸಬೇಕಿದ್ದ ಪೊಲೀಸರೆ ಆತನಿಗೆ ರಕ್ಷಣೆ ನೀಡಿದ್ಯಾಕೆ ಎಂಬ ಪ್ರಶ್ನೆಗಳು ಕೇಳಿಬಂದಿದ್ದವು.

“ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು! ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್‌ಗಳು, ಕ್ರೀಮಿನಲ್‌ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ ಬಿಜೆಪಿ
ಪಕ್ಷ ತವರು ಮನೆ ಇದ್ದಂತೆ” ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿತ್ತು.

ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್! ಆರಗ ಜ್ಞಾನೇದ್ರರವರೇ, ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.

ರೌಡಿ ಶೀಟರ್ ಫೈಟರ್ ರವಿ ಬಿಜೆಪಿ ಸೇರ್ಪಡೆ

ಸೈಲೆಂಟ್ ಸುನೀಲ್ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಭಾಗಿಯಾಗಿದ್ದು ದೊಡ್ಡ ಟೀಕೆಗೆ ಒಳಗಾದ ಸಂದರ್ಭದಲ್ಲಿಯೇ ಮತ್ತೊರ್ವ ರೌಟಿ ಶೀಟರ್ ಫೈಟರ್ ರವಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸಚಿವರಾದ ಅಶ್ವಥ ನಾರಾಯಣ್, ಗೋಪಾಲಯ್ಯ ಮತ್ತು ಸಿ.ಪಿ ಯೋಗೀಶ್ವರ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

“ವಾಂಟೆಂಡ್ ಕ್ರಿಮಿನಲ್‌ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್! ರೌಡಿ ಶೀಟರ್‌ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ. ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ” ಎಂದು ಕಾಂಗ್ರೆಸ್ ಟೀಕಿಸಿತ್ತು.

ಸೈಲೆಂಟ್ ಸುನೀಲ್ ಬಿಜೆಪಿ ಸೇರಲು ಅವಕಾಶವಿಲ್ಲ: ನಳೀನ್ ಕುಮಾರ್ ಕಟೀಲ್

ಸಾಲು ಸಾಲು ರೌಟಿ ಶೀಟರ್‌ಗಳು ಬಿಜೆಪಿ ಜೊತೆ ಗುರುತಿಸಿಕೊಳ್ಳುತ್ತಿರುವುದು ಆಡಳಿತ ಪಕ್ಷಕ್ಕೆ ಮುಜುಗರ ತಂದಿದೆದ. ಅಲ್ಲದೆ ಸಾರ್ವಜನಿಕರಿಂದ ಟೀಕೆಗಳು ಕೇಳಿ ಬರುತ್ತಿವೆ. ಪೊಲೀಸರು ಸೈಲೆಂಟ್ ಸುನೀಲ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ಡ್ಯಾಮೇಜ್ ಕಂಟ್ರೋಲ್‌ಗೆ ಇಳಿದಿದೆ. ಸೈಲೆಂಟ್ ಸುನೀಲ್ ಬಿಜೆಪಿ ಸೇರಲು ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಆದರೆ ಈಗಾಗಲೇ ಪಕ್ಷಕ್ಕೆ ಸೇರಿರುವ ಫೈಟರ್ ರವಿ ಬಗ್ಗೆ ಅವರು ಚಕಾರವೆತ್ತಿಲ್ಲ.

ಇದನ್ನೂ ಓದಿ: ತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...