Homeಮುಖಪುಟಅಸ್ಪೃಶ್ಯತೆ ಪದ ಬಳಕೆ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೂರು

ಅಸ್ಪೃಶ್ಯತೆ ಪದ ಬಳಕೆ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೂರು

- Advertisement -
- Advertisement -

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅಸ್ಪೃಶ್ಯತೆಯನ್ನು ಸಮರ್ಥಿಸುವ ರೀತಿಯಲ್ಲಿ ‘ಇಬ್ರಾಹಿಂ ಏಕೆ ಸಿಎಂ ಆಗಬಾರದು, ಅವರೇನು ಅಸ್ಪೃಶ್ಯರಲ್ಲ’ ಎಂದಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ದೂರು ದಾಖಲಾಗಿದೆ.

ಲಕ್ಷ್ಮೀಪತಿ, ರಾಜು ಸಣ್ಣಕ್ಕಿ, ಗೊಳ್ಯ ಹನುಮಣ್ಣ ಸೇರಿದಂತೆ ಹಲವು ಛಲವಾದಿ ಮಹಾಸಭಾ ಮತ್ತು ದಲಿತ ಸಂಘಟನೆಗಳ ಮುಖಂಡರು ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀಪತಿಯವರು, “ನವೆಂಬರ್ 27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಸಿ.ಎಂ ಇಬ್ರಾಹಿಂ ಅಸ್ಪೃಶ್ಯರಲ್ಲ ಎಂಬ ಪದ ಬಳಕೆ ಮಾಡಿದ್ದಾರೆ. ಇದು ಅವಹೇಳನಕಾರಿ ಮತ್ತು ಸಂವಿಧಾನ ವಿರೋಧಿ ಹೇಳಿಕೆಯಾಗಿದ್ದು, ಇಂತಹ ಹೇಳಿಕೆ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಸಾಬೀತು ಮಾಡಿದೆ. ಹಾಗಾಗಿ ಅವರು ದಲಿತ ಸಮುದಾಯದ ಎದುರು ಬೇಷರತ್ ಕ್ಷಮೆ ಕೇಳಬೇಕೆಂದು” ಆಗ್ರಹಿಸಿದರು.

ಜೆಡಿಎಸ್ ಪಕ್ಷವು ಜಾತ್ಯಾತೀತ ಎಂದು ಹೇಳಿಕೊಳ್ಳುತ್ತದೆ. ಆದರೆ ಜಾತೀಯತೆಯನ್ನು ಸಮರ್ಥಿಸುತ್ತದೆ. ಅದು ಜಾತಿವಾದಿ ಎಂದು ಹೆಸರು ಬದಲಿಸಿಕೊಂಡರೆ ಉತ್ತಮ ಎಂದು ಅವರು ಕಿಡಿಕಾರಿದರು.

ಕಳೆದ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂ ವ್ಯಕ್ತಿಯನ್ನು ಸಿಎಂ ಮಾಡುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳೀಕೆ ನೀಡಿದ್ದರು. ಈ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ ಕುಮಾರಸ್ವಾಮಿಯವರು “ನಾವು ಮುಸ್ಲಿಂ ಮತಗಳನ್ನು ಪಡೆಯುವುದಕ್ಕಾಗಿ ಮಾತನಾಡುತ್ತಿಲ್ಲ. ಇತ್ತೀಚೆಗೆ ನಮ್ಮ ಪಕ್ಷದ ಅಧ್ಯಕ್ಷರಾದ ಸಿ.ಎಂ ಇಬ್ರಾಹಿಂರವರು ಒಂದೆರೆಡು ವರ್ಷಗಳಲ್ಲಿ ಕುಮಾರಸ್ವಾಮಿಯವರು ಕೇಂದ್ರಕ್ಕೆ ತೆರಳಿದರೆ ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ. ಆದರೆ ಪ್ರಸ್ತುತ 5 ವರ್ಷ ನಾನು ನಮ್ಮ ಐದು ಅಂಶಗಳ ಕುರಿತು ಗಮನ ವಹಿಸುತ್ತೇವೆ. ಆದರೆ ಎರಡೂ ಮೂರು ವರ್ಷದಲ್ಲಿ ದೆಹಲಿಯ ನಮ್ಮ ಸ್ನೇಹಿತರು ಉನ್ನತ ಸ್ಥಾನಮಾನ ಕೊಡುವುದಾಗಿ ಕೇಂದ್ರಕ್ಕೆ ಕರೆದರೆ, ಅಂತ ಸಂದರ್ಭ ಬಂದರೆ ಹೋಗುತ್ತೇನೆ. ಅಂತ ಸಂದರ್ಭದಲ್ಲಿ ಇಬ್ರಾಹಿಂರವರು ಏಕೆ ಸಿಎಂ ಆಗಬಾರದು? ಅವರೇನು ಅಸ್ಪೃಶ್ಯರಲ್ಲ (He is not an Untouchable Man)” ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಸ್ಪ್ರಶ್ಯ ಅಥವಾ ಅಸ್ಪ್ರಶ್ಯರಲ್ಲ ಎಂಬ ಶಬ್ದ ಯಾರಾದರೊಬ್ಬರು ಬಳಸಿದರೆ ಅದು ಹೇಗೆ ಯಾರಿಗಾದರೂ ಅಪಮಾನದ ವಿಷಯವಾಗಲು ಸಾಧ್ಯ. ಅಸ್ಪ್ರಶ್ಯತೆ ಯ ಆಚರಣೆ ಕಾನೂನು ಬಾಹಿರ ಹೊರತು, ಅಸ್ಪ್ರಶ್ಯ ಎಂಬ ಪದ ಅಲ್ಲ.

  2. ಹಾಗಿದ್ದರೆ ದಲಿತರನ್ನು ಏಕೆ ಅಸ್ಪೃಶ್ಯರು ಅಂತ ಅನ್ನುತ್ತಾರೆ ಇಲ್ಲಿ ಇಬ್ರಾಹಿಮಿಗೆ ಅವರೇನು ಅಸ್ಪೃಶ್ಯ ಅಂತ ಹೇಳುವಾಗ ಅಲ್ಲಿ ಅಸ್ಪೃಶ್ಯ ಅಂದ್ರೆ ದಲಿತರು ಎಂಬ ಪದವನ್ನು ಅತಿರೇಕವಾಗಿ ಬಳಸಿದೆ ಎಂದರ್ಥ ಇದು ಅರ್ಥ ಮಾಡಿದವರಿಗೆ ಮಾತ್ರ ಗೊತ್ತಾಗುತ್ತೆ, ಸುಮ್ಸುಮ್ನೆ ಪ್ರಶ್ನೆ ಮಾಡುವವರಿಗೆ ಗೊತ್ತಾಗಲ್ಲ ದಲಿತರನ್ನು ಕೀಳಾಗಿ ಕಾಣುವಂತ ಇನ್ನೊಂದು ರೀತಿ ಪದೇ ಪದೇ ಅಸ್ಪೃಶ್ಯತೆ ಯನ್ನು ಬಳಸುವುದು

  3. ದಲಿತ ವಿರೋಧಿಗಳಿಗೆ ಮತ ಹಾಕಬೇಡಿ ಮುಂದೆ ಇವರಿಂದ ತೊಂದರೆ ಇದೆ ಉತ್ತಮ ವ್ಯಕ್ತಿತ್ವ ಇರುವವರಿಗೆ ಮಾತ್ರ ಮತದಾನ ಮಾಡಿ.ಯೋಚಿಸಿ ನಾಯಕರನ್ನು ಆಯ್ಕೆ ಮಾಡಿ 🙏🙏🙏🙏

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...