Homeಮುಖಪುಟಅಸ್ಪೃಶ್ಯತೆ ಪದ ಬಳಕೆ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೂರು

ಅಸ್ಪೃಶ್ಯತೆ ಪದ ಬಳಕೆ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೂರು

- Advertisement -
- Advertisement -

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅಸ್ಪೃಶ್ಯತೆಯನ್ನು ಸಮರ್ಥಿಸುವ ರೀತಿಯಲ್ಲಿ ‘ಇಬ್ರಾಹಿಂ ಏಕೆ ಸಿಎಂ ಆಗಬಾರದು, ಅವರೇನು ಅಸ್ಪೃಶ್ಯರಲ್ಲ’ ಎಂದಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ದೂರು ದಾಖಲಾಗಿದೆ.

ಲಕ್ಷ್ಮೀಪತಿ, ರಾಜು ಸಣ್ಣಕ್ಕಿ, ಗೊಳ್ಯ ಹನುಮಣ್ಣ ಸೇರಿದಂತೆ ಹಲವು ಛಲವಾದಿ ಮಹಾಸಭಾ ಮತ್ತು ದಲಿತ ಸಂಘಟನೆಗಳ ಮುಖಂಡರು ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀಪತಿಯವರು, “ನವೆಂಬರ್ 27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಸಿ.ಎಂ ಇಬ್ರಾಹಿಂ ಅಸ್ಪೃಶ್ಯರಲ್ಲ ಎಂಬ ಪದ ಬಳಕೆ ಮಾಡಿದ್ದಾರೆ. ಇದು ಅವಹೇಳನಕಾರಿ ಮತ್ತು ಸಂವಿಧಾನ ವಿರೋಧಿ ಹೇಳಿಕೆಯಾಗಿದ್ದು, ಇಂತಹ ಹೇಳಿಕೆ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಸಾಬೀತು ಮಾಡಿದೆ. ಹಾಗಾಗಿ ಅವರು ದಲಿತ ಸಮುದಾಯದ ಎದುರು ಬೇಷರತ್ ಕ್ಷಮೆ ಕೇಳಬೇಕೆಂದು” ಆಗ್ರಹಿಸಿದರು.

ಜೆಡಿಎಸ್ ಪಕ್ಷವು ಜಾತ್ಯಾತೀತ ಎಂದು ಹೇಳಿಕೊಳ್ಳುತ್ತದೆ. ಆದರೆ ಜಾತೀಯತೆಯನ್ನು ಸಮರ್ಥಿಸುತ್ತದೆ. ಅದು ಜಾತಿವಾದಿ ಎಂದು ಹೆಸರು ಬದಲಿಸಿಕೊಂಡರೆ ಉತ್ತಮ ಎಂದು ಅವರು ಕಿಡಿಕಾರಿದರು.

ಕಳೆದ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂ ವ್ಯಕ್ತಿಯನ್ನು ಸಿಎಂ ಮಾಡುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳೀಕೆ ನೀಡಿದ್ದರು. ಈ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ ಕುಮಾರಸ್ವಾಮಿಯವರು “ನಾವು ಮುಸ್ಲಿಂ ಮತಗಳನ್ನು ಪಡೆಯುವುದಕ್ಕಾಗಿ ಮಾತನಾಡುತ್ತಿಲ್ಲ. ಇತ್ತೀಚೆಗೆ ನಮ್ಮ ಪಕ್ಷದ ಅಧ್ಯಕ್ಷರಾದ ಸಿ.ಎಂ ಇಬ್ರಾಹಿಂರವರು ಒಂದೆರೆಡು ವರ್ಷಗಳಲ್ಲಿ ಕುಮಾರಸ್ವಾಮಿಯವರು ಕೇಂದ್ರಕ್ಕೆ ತೆರಳಿದರೆ ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ. ಆದರೆ ಪ್ರಸ್ತುತ 5 ವರ್ಷ ನಾನು ನಮ್ಮ ಐದು ಅಂಶಗಳ ಕುರಿತು ಗಮನ ವಹಿಸುತ್ತೇವೆ. ಆದರೆ ಎರಡೂ ಮೂರು ವರ್ಷದಲ್ಲಿ ದೆಹಲಿಯ ನಮ್ಮ ಸ್ನೇಹಿತರು ಉನ್ನತ ಸ್ಥಾನಮಾನ ಕೊಡುವುದಾಗಿ ಕೇಂದ್ರಕ್ಕೆ ಕರೆದರೆ, ಅಂತ ಸಂದರ್ಭ ಬಂದರೆ ಹೋಗುತ್ತೇನೆ. ಅಂತ ಸಂದರ್ಭದಲ್ಲಿ ಇಬ್ರಾಹಿಂರವರು ಏಕೆ ಸಿಎಂ ಆಗಬಾರದು? ಅವರೇನು ಅಸ್ಪೃಶ್ಯರಲ್ಲ (He is not an Untouchable Man)” ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಸ್ಪ್ರಶ್ಯ ಅಥವಾ ಅಸ್ಪ್ರಶ್ಯರಲ್ಲ ಎಂಬ ಶಬ್ದ ಯಾರಾದರೊಬ್ಬರು ಬಳಸಿದರೆ ಅದು ಹೇಗೆ ಯಾರಿಗಾದರೂ ಅಪಮಾನದ ವಿಷಯವಾಗಲು ಸಾಧ್ಯ. ಅಸ್ಪ್ರಶ್ಯತೆ ಯ ಆಚರಣೆ ಕಾನೂನು ಬಾಹಿರ ಹೊರತು, ಅಸ್ಪ್ರಶ್ಯ ಎಂಬ ಪದ ಅಲ್ಲ.

  2. ಹಾಗಿದ್ದರೆ ದಲಿತರನ್ನು ಏಕೆ ಅಸ್ಪೃಶ್ಯರು ಅಂತ ಅನ್ನುತ್ತಾರೆ ಇಲ್ಲಿ ಇಬ್ರಾಹಿಮಿಗೆ ಅವರೇನು ಅಸ್ಪೃಶ್ಯ ಅಂತ ಹೇಳುವಾಗ ಅಲ್ಲಿ ಅಸ್ಪೃಶ್ಯ ಅಂದ್ರೆ ದಲಿತರು ಎಂಬ ಪದವನ್ನು ಅತಿರೇಕವಾಗಿ ಬಳಸಿದೆ ಎಂದರ್ಥ ಇದು ಅರ್ಥ ಮಾಡಿದವರಿಗೆ ಮಾತ್ರ ಗೊತ್ತಾಗುತ್ತೆ, ಸುಮ್ಸುಮ್ನೆ ಪ್ರಶ್ನೆ ಮಾಡುವವರಿಗೆ ಗೊತ್ತಾಗಲ್ಲ ದಲಿತರನ್ನು ಕೀಳಾಗಿ ಕಾಣುವಂತ ಇನ್ನೊಂದು ರೀತಿ ಪದೇ ಪದೇ ಅಸ್ಪೃಶ್ಯತೆ ಯನ್ನು ಬಳಸುವುದು

  3. ದಲಿತ ವಿರೋಧಿಗಳಿಗೆ ಮತ ಹಾಕಬೇಡಿ ಮುಂದೆ ಇವರಿಂದ ತೊಂದರೆ ಇದೆ ಉತ್ತಮ ವ್ಯಕ್ತಿತ್ವ ಇರುವವರಿಗೆ ಮಾತ್ರ ಮತದಾನ ಮಾಡಿ.ಯೋಚಿಸಿ ನಾಯಕರನ್ನು ಆಯ್ಕೆ ಮಾಡಿ 🙏🙏🙏🙏

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...