Homeಮುಖಪುಟ'ಪಾಲಾರ್' ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

‘ಪಾಲಾರ್’ ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

- Advertisement -
- Advertisement -

ದಲಿತ ದೌರ್ಜನ್ಯ ಮತ್ತು ಭೂಮಿ ಪ್ರಶ್ನೆಯ ಕಥೆಯನ್ನಾಧರಿಸಿದ ಕನ್ನಡದ ಬಹುನಿರೀಕ್ಷಿತ ‘ಪಾಲಾರ್‌’ ಸಿನಿಮಾದ ಟ್ರೇಲರ್‌ ಅನ್ನು ಖ್ಯಾತ ತಮಿಳು ನಿರ್ದೇಶಕ ಪ.ರಂಜಿತ್ ಬಿಡುಗಡೆ ಮಾಡಿದ್ದಾರೆ. ‘ಪಾಲಾರ್ ಸಿನಿಮಾ ಕನ್ನಡ ಚಲನಚಿತ್ರರಂಗದಲ್ಲಿ ಮೈಲಿಗಲ್ಲು ಆಗಲಿ ಎಂದು ಶುಭ ಕೋರುತ್ತೇನೆ’ ಎಂದು ಅವರು ಟ್ವೀಟ್ ಸಹ ಮಾಡಿದ್ದಾರೆ.

ಯುವ ನಿರ್ದೇಶಕ ಜೀವಾ ನವೀನ್ ನಿರ್ದೇಶನದ ಕೋಲಾರ ಜಿಲ್ಲೆಯಲ್ಲಿ ನಡೆದ ಸತ್ಯ ಘಟನೆಗಳ ಆಧಾರಿತ ಪಾಲಾರ್ ಸಿನಿಮಾದಲ್ಲಿ ‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಸೌನವಿ ಕ್ರಿಯೇಷನ್ಸ್‌ ಸಂಸ್ಥೆ ಸಿನಿಮಾ ನಿರ್ಮಾಣ ಮಾಡಿದೆ.

ಎಲ್ಲಾ ಕಮ್ಮಿ ಜಾತಿ ನನ್ ಮಕ್ಕಳಿಗೇನಾ ಪ್ರೈಸ್ ಕೊಡೋದು ನೀವು? ಇಲ್ಲ ನೀವು ಅವರೇನಾ? ಎನ್ನುವ ಡೈಲಾಗ್ ಮತ್ತು ‘ಜಮೀನ್‌ಗುಳಗಾ ಏನ್ ಬೆಳೆಯಕಾತದೆ ಅಂದ್ರೆ? ಏನ್ ಏರೋಪ್ಲೇನಾ ಬೆಳೆಯಕಾತದೆ? ರಾಗಿ, ಟಮಾಟ ಬೆಳೆಯಾದು, ಹೊಟ್ಗುಳ್‌ಗ ತಿನ್ನಕ!’ ಎನ್ನುವ ಉಮಾರವರ ಕೋಲಾರ ಕನ್ನಡ ಭಾಷೆಯ ಡೈಲಾರ್ ಟ್ರೇಲರ್‌ನಲ್ಲಿದ್ದು ಗಮನ ಸೆಳೆದಿದೆ.

“ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎನ್ನುತ್ತಾರೆ ನಿರ್ದೇಶಕ ಜೀವಾ ನವೀನ್.

ಮೂರು ತಿಂಗಳ ಹಿಂದೆಯೇ ಚಿತ್ರದ ಟ್ರೇಲರ್ ಬಿಡುಗಡೆಯಾಗಬೇಕಿತ್ತು. ಆದರೆ ದಲಿತರ ಕಥೆ ಎಂಬ ಕಾರಣಕ್ಕೆ ಆಡಿಯೋ ಕಂಪನಿಗಳು ಟ್ರೇಲರ್ ಬಿಡುಗಡೆಗೆ ಹಿಂಜರಿಯುತ್ತಿವೆ ಎಂದು ಜೀವಾ ನವೀನ್ ಆರೋಪಿಸಿದ್ದರು. ಧೀರ್ಘ ಫೇಸ್‌ಬುಕ್ ಪೋಸ್ಟ್ ಮೂಲಕ ಯಾವ ಯಾವ ಕಂಪನಿಗಳು ಯಾವ ರೀತಿ ಉತ್ತರ ನೀಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಕೊನೆಗೆ ಸೌನವಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿಯೇ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಎರಡು ನಿಮಿಷದ ಟ್ರೇಲ್‌ರ್‌ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಒಮ್ಮೆ ನೀವು ಟ್ರೇಲರ್‌ ನೋಡಿ.

ಇದನ್ನೂ ಓದಿ; ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...