Homeಮುಖಪುಟಅದೊಂದು ದೊಡ್ಡ ವಿಷಯವಲ್ಲ: ಮುಸ್ಲಿಂ ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದ ಘಟನೆಗೆ ಶಿಕ್ಷಣ ಸಚಿವ ನಾಗೇಶ್...

ಅದೊಂದು ದೊಡ್ಡ ವಿಷಯವಲ್ಲ: ಮುಸ್ಲಿಂ ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದ ಘಟನೆಗೆ ಶಿಕ್ಷಣ ಸಚಿವ ನಾಗೇಶ್ ಪ್ರತಿಕ್ರಿಯೆ

- Advertisement -
- Advertisement -

ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯೊಬ್ಬರನ್ನು ಕಸಬ್ ಎಂದು ಕರೆದು ಭಯೋತ್ಪಾದಕರಿಗೆ ಹೋಲಿಸುವ ಮೂಲಕ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಘಟನೆ ಕುರಿತು ಪ್ರತಿಕ್ರಿಯಿಸಿರುವ ರಾಜ್ಯದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅದೊಂದು ದೊಡ್ಡ ವಿಷಯವಲ್ಲ ಎಂದಿದ್ದಾರೆ.

ಉಡುಪಿ ಜಿಲ್ಲೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ತರಗತಿಯೊಳಗೆ ಎಲ್ಲಾ ವಿದ್ಯಾರ್ಥಿಗಳ ಎದುರು ಮುಸ್ಲಿಂ ವಿದ್ಯಾರ್ಥಿಯ ಹೆಸರು ಕೇಳಿದಾಕ್ಷಣ ಒಹ್ ನೀನು ಕಸಬ್ ಎಂದು ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಕರೆದಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿಯು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಾಧ್ಯಾಪಕರನ್ನು ಅಮಾನತ್ತು ಮಾಡಲಾಗಿತ್ತು.

ಈ ಪ್ರಕರಣದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಸಿ ನಾಗೇಶ್, “ಈ ಘಟನೆ ನಡೆದಿರುವುದು ದುರದೃಷ್ಟಕರ. ಪ್ರಾಧ್ಯಾಪಕ ಆ ಹೆಸರನ್ನು ಬಳಸಬಾರದಿತ್ತು. ಆದರೆ ಇದು ಅಷ್ಟು ಗಂಭೀರವಾದ ವಿಷಯ ಎಂದು ನನಗನಿಸುವುದಿಲ್ಲ. ಏಕೆಂದರೆ ನಾವು ಹಲವು ವಿದ್ಯಾರ್ಥಿಳಿಗೆ ಹಲವಾರು ಬಾರಿ ರಾವಣ, ಶಕುನಿ ಎಂದು ಕರೆಯುತ್ತೇವೆ. ಆದರೆ ಅದು ಸಮಸ್ಯೆಯಾಗುವುದಿಲ್ಲ. ಆದರೆ ಒಂದು ನಿರ್ಧಿಷ್ಟ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗೆ ಹೀಗೆ ಕರೆದರೆ ಏಕೆ ದೊಡ್ಡ ಸಮಸ್ಯೆಯಾಗುತ್ತದೆ ನನಗೆ ಗೊತ್ತಿಲ್ಲ” ಎಂದಿದ್ದಾರೆ.

“ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಆ ಪ್ರಾಧ್ಯಾಪಕನ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಮಾಡಲಾಗಿದೆ. ಅದರೆ ಕೆಲ ಹೆಸರುಗಳು ಏಕೆ ರಾಷ್ಟ್ರೀಯ ಇಶ್ಯೂಗಳಾಗುತ್ತವೆ ಎಂಬುದು ನನಗೆ ಅರ್ಥವಾಗುತ್ತಿಲ್ಲ” ಎಂದು ಬಿ.ಸಿ ನಾಗೇಶ್ ಹೇಳಿದ್ದಾರೆ.

ಶುಕ್ರವಾರ ಪ್ರಶ್ನೆ ಕೇಳಲು ಮುಂದಾದ ವಿದ್ಯಾರ್ಥಿ ತನ್ನ ಹೆಸರನ್ನು ಹೇಳಿದಾಕ್ಷಣ ಪ್ರಾಧ್ಯಾಪಕರು ಓಹ್ ನೀನು ಕಸಬ್ ಎಂದ ಪ್ರಾಧ್ಯಾಪಕನನ್ನು ಆ ವಿದ್ಯಾರ್ಥಿ ತರಾಟೆಗೆ ತೆಗೆದುಕೊಂಡಿದ್ದರು. “ಸರ್ ನೀವು ಹೇಗೆ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತೀರಿ? ಒಂದು ಧರ್ಮವನ್ನು ಹೇಗೆ ಭಯೋತ್ಪಾದನೆಗೆ ತಳುಕು ಹಾಕುತ್ತೀರಿ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಪ್ರಾಧ್ಯಾಪಕ ನೀನು ನನ್ನ ಮಗನಿದ್ದಂತೆ ಎಂದಿದ್ದಾರೆ. ನೀವು ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ? ಆತನನ್ನೂ ಭಯೋತ್ಪಾದಕ ಎಂದು ಕರೆಯುತ್ತೀರಾ, ಇಲ್ಲವೆಂದ ಮೇಲೆ ನನ್ನನ್ನು ಹೇಗೆ ಕರೆದಿರಿ? ಅದು ಇಷ್ಟು ಜನರ ಮುಂದೆ ಎಂದು ವಿದ್ಯಾರ್ಥಿ ಮರು ಪ್ರಶ್ನಿಸಿದ್ದಾರೆ.

ಇದು ತಮಾಷೆ ಎಂದಾಗ, ಇಲ್ಲ ಸರ್ ಇದು ತಮಾಷೆಯಲ್ಲ. 26/11 ಭಯೋತ್ಪಾದನಾ ಪ್ರಕರಣವು ತಮಾಷೆಯಲ್ಲ. ಒಬ್ಬ ಮಸ್ಲಿಮನಾಗಿ ನಾನು ಇದನ್ನು ಪ್ರತಿನಿತ್ಯ ಎದುರಿಸುತ್ತಿದ್ದೇನೆ. ಹಾಗಾಗಿ ಇದು ತಮಾಷೆಯ ವಿಷಯವಲ್ಲ. ನೀವು ಪ್ರಾಧ್ಯಾಪಕರು. ನಮಗೆ ಪಾಠ ಮಾಡುತ್ತೀರಿ. ಹೇಗೆ ನನ್ನನ್ನು ಹಾಗೆ ಕರೆಯುವ ಹಾಗಿಲ್ಲ ಎಂದು ವಿದ್ಯಾರ್ಥಿ ವಾದಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಂತರ ಪ್ರಾಧ್ಯಾಪಕರು ಕ್ಷಮೆ ಕೇಳುತ್ತೇನೆ ಎಂದಾಗ, ನಿಮ್ಮ ಸಾರಿ ನೀವು ಏನೆಂಬುದನ್ನು ಮತ್ತು ನೀವು ಯೋಚಿಸುವ ವಿಧಾನವನ್ನು ಬದಲಿಸುವುದಿಲ್ಲ ಎಂದು ವಿದ್ಯಾರ್ಥಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿವಾದ ಬಳಿಕ ಮಾತನಾಡಿರುವ ವಿದ್ಯಾರ್ಥಿಯು, “ಜನಾಂಗೀಯ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಸ್ವೀಕರಾರ್ಹನಲ್ಲದ ಭಯೋತ್ಪಾದಕ ಕಸಬ್ ಹೆಸರಿನಿಂದ ನನ್ನನ್ನು ನಾನು ಇಷ್ಟಪಡುವ ಪ್ರಾಧ್ಯಾಪಕರೆ ಕರೆದುದ್ದುದು ಬೇಸರ ತರಿಸಿತು. ಅದಕ್ಕಾಗಿ ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದೆ. ಆನಂತರ ಅವರೊಡನೆ ಮಾತನಾಡಿದ್ದೇನೆ. ಅವರು ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ” ಎಂದಿದ್ದಾರೆ.

ಈ ಘಟನೆ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಲೇಜಿನ ವ್ಯವಸ್ಥಾಪಕ ಮಂಡಳಿಯು, “ಈ ಘಟನೆ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಮತ್ತು ತನಿಖೆ ಮುಗಿಯುವವರೆಗೂ ಸಂಬಂಧಿತ ಪ್ರಾಧ್ಯಾಪಕರು ತರಗತಿ ತೆಗೆದುಕೊಳ್ಳದಂತೆ ಸೂಚಿಸಿದ್ದೇವೆ. ಸಂಸ್ಥೆಯು ಈ ರೀತಿಯ ನಡವಳಿಕೆಯನ್ನು ಕ್ಷಮಿಸುವುದಿಲ್ಲ ಮತ್ತು ಈ ಪ್ರತ್ಯೇಕ ಘಟನೆಯನ್ನು ನಿಗದಿಪಡಿಸಿದ ನೀತಿಗಳಿಗೆ ಅನುಗುಣವಾಗಿ ವಿಚಾರಣೆ ನಡೆಸುತ್ತದೆ. ನಮ್ಮ ಸಂಸ್ಥೆಯು ಕ್ಯಾಂಪಸ್‌ನಲ್ಲಿ ಬಹು ವೈವಿಧ್ಯತೆಯನ್ನು ಹೆಮ್ಮೆಯೆಂದು ಭಾವಿಸುತ್ತದೆ ಮತ್ತು ಜಾತಿ, ಧರ್ಮ, ಲಿಂಗ, ಪ್ರದೇಶಗಳನ್ನು ಲೆಕ್ಕಿಸದೆ ಎಲ್ಲರನ್ನು ಸಮಾನವಾಗಿ ಪರಿಗಣಿಸುವ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ; ಅಸ್ಪೃಶ್ಯತೆ ಪದ ಬಳಕೆ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಮಾನ್ಯ ಶಿಕ್ಷಣ ಸಚಿವರನ್ನು ಯಾರು ಏನು ಬೇಕಾದರೂ ಕರೆಯಿರಿ ಅವರು ನೊಂದು ಕೊಳ್ಳುವುದಿಲ್ಲ, ಅವರನ್ನು ರಾವಣ ಅನ್ನಿ, ಶಕುನಿ ಅನ್ನಿ, ಅಥವಾ ಭಯೋತ್ಪಾದಕ ಅನ್ನಿ, ಒಸಮಾ ಬಿನ್ ಲಾಡೆನ್ ಅನ್ನಿ ಅವರು ಬೇಸರ ಪಟ್ಟುಕೊಳ್ಳುವುದಿಲ್ಲ ಏಕೆಂದರೆ ಅದು ಅವರಿಗೆ ದೊಡ್ಡ ವಿಷಯವೇ ಅಲ್ಲ!

  2. ನೀವು ಸಚಿವರಿಗೆ ಸರಿಯಾದ ಪ್ರತಿಕ್ರಿಯೆ ನೀಡಿದ್ದೀರಾ.ಅವರನ್ನ ಮನುವಾದಿ,ಜಾತಿವಾದಿ ,ಪುರೋಹಿತಶಾಹಿ, ನಾಲಾಯಕ್ ಮಂತ್ರಿ ಅಂದರು ಅವರೀಗೆನು ಬೇಸರವಿಲ್ಲಾ ಬಿಡಿ.

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...