Homeಮುಖಪುಟಏನಿದು ಫಿಲ್ಮ್ ಡೈರೆಕ್ಷನ್?

ಏನಿದು ಫಿಲ್ಮ್ ಡೈರೆಕ್ಷನ್?

- Advertisement -
- Advertisement -

| ರಾಜಶೇಖರ್ ಅಕ್ಕಿ |

ನಾನಾಗ ಹೈಸ್ಕೂಲಿನಲ್ಲಿದ್ದೆ, ಒಂದು ಸಿನೆಮಾ ನೋಡಿ ಬಂದ ನಂತರ ನನ್ನ ಒಬ್ಬ ಗೆಳೆಯ ಹೇಳಿದ್ದು, ‘ಪಿಚ್ಚರ್ ಅಷ್ಟು ಚೆನ್ನಾಗಿದ್ದಿಲ್ಲ, ಆದರೆ ಡರೆಕ್ಷನ್ ಮಸ್ತ್ ಇತ್ತು’. ಇದೇನಿದು? ಇದ್ಹೆಂಗೆ ಸಾಧ್ಯ? ಅಭಿನಯ ಅಂದ್ರೆ ಗೊತ್ತು, ಛಾಯಾಗ್ರಹಣ ಗೊತ್ತು, ಸಂಗೀತ ಗೊತ್ತು, ಈ ಡೈರೆಕ್ಷನ್ ಅಂದ್ರೇನು? ಸಿನೆಮಾಗಳನ್ನು ಇಷ್ಟು ಇಷ್ಟ ಪಡುವ ನನಗೆ ಈ ಡೈರೆಕ್ಷನ್ ಅನ್ನೋದೇನು ಎನ್ನೋದು ಗೊತ್ತೇ ಇಲ್ವಲ್ಲ? ನಾನು ಕಣ್ಣು ಪಿಳಿ ಪಿಳಿ ಬಿಟ್ಟು ನೋಡಿದೆ.

ಹಂಗಾದ್ರೆ ಚಲನಚಿತ್ರ ನಿರ್ದೇಶನ ಅಂದ್ರೇನು?
ಚಿತ್ರಕಥೆಯನ್ನು ತೆಗೆದುಕೊಂಡು ದೃಶ್ಯ ಮಾಧ್ಯಮಕ್ಕೆ ಇಳಿಸುವುದೇ ನಿರ್ದೇಶನ ಹಾಗೂ ಅದನ್ನು ದೃಶ್ಯ ಮಾಧ್ಯಮಕ್ಕೆ ಇಳಿಸುವ ಜವಾಬ್ದಾರಿ ಹೊತ್ತವನನ್ನು ನಿರ್ದೇಶಕ ಎನ್ನಬಹುದು. ಅಂದರೆ, ಸ್ಕ್ರಿಪ್ಟ್‍ಅನ್ನು ತೆಗೆದುಕೊಂಡು ಆಯಾ ದೃಶ್ಯಕ್ಕೆ ಬೇಕಾಗಿರುವ ಶಾಟ್‍ಗಳನ್ನು ಆಯ್ಕೆ ಮಾಡಿ ಶೂಟಿಂಗ್ ಮಾಡಿ ಸಂಕಲನ ಮಾಡಿದರೆ ಅದುವೇ ನಿರ್ದೇಶನ.

ಅಷ್ಟೇನಾ? ಹಂಗಂದ್ರೆ, ನನ್ನ ಗೆಳೆಯ ಹೇಳಿದ ಮಾತು, ಡೈರೆಕ್ಷನ್ ಮಸ್ತ್ ಇತ್ತು ಅಂದರೇನು? ನಿರ್ದೇಶನ ಮಸ್ತ್ ಆಗಲು ಏನೆಲ್ಲ ಮಾಡಬೇಕು? ಏನೆಲ್ಲ ಒಳಗೊಂಡಿರುತ್ತೆ ಈ ಚಲನಚಿತ್ರ ನಿರ್ದೇಶನ?

ಸರಳವಾಗಿ ಹೇಳಬೇಕೆಂದರೆ, ಕಥೆಯ, ಚಿತ್ರಕಥೆಯ, ಛಾಯಾಗ್ರಹಣದ, ಅಭಿನಯದ ಮತ್ತು ಸಂಕಲನದ ಆಳವಾದ ಜ್ಞಾನ ನಿರ್ದೇಶಕನಿಗಿರಬೇಕು, ಈ ಎಲ್ಲಾ ವಿಭಾಗಗಳಿಗೂ ನಿರ್ದೇಶಕನೇ ಜವಾಬ್ದಾರ. ಅಂದರೆ ನಿರ್ದೇಶಕ ಬರೀ ಸೂಪರ್‍ವೈಸರ್ ಆಗಿರಬೇಕಾ? ಅಥವಾ ಆಯಾ ದೃಶ್ಯಗಳಲ್ಲಿ ಯಾವ್ಯಾವ ಶಾಟ್ ಬೇಕು ಎಂದು ಛಾಯಾಗ್ರಾಹಕನಿಗೆ ಮತ್ತು ನಟರಿಗೆ ಹೇಳುವುದೇ ನಿರ್ದೇಶಕನ ಕೆಲಸ ಮತ್ತು ಇತರ ಕೆಲಸಗಳನ್ನೆಲ್ಲಾ ಮೇಲ್ವಿಚಾರಣೆ ಮಾಡುವುದು ಎಂದು ಅನ್ನಬಹುದಾ?

ಇರಲಿ, ನಿರ್ದೇಶಕನ ಕೆಲಸಗಳೇನು ಎಂದು ಸದ್ಯಕ್ಕೆ ನನಗೆ ತಿಳಿದಿರುವ ಕೆಲಸಗಳ ಪಟ್ಟಿ ಮಾಡುವ.
ಒಂದು, ಕಥೆಯ ಆಳ ಜ್ಞಾನ, ಕಥೆ ಹೇಗೆ ಕೆಲಸ ಮಾಡುವುದು ಎನ್ನುವುದರ ಸ್ಪಷ್ಟತೆ (ಸ್ಟ್ರಕ್ಚರ್ ಬಗ್ಗೆ ಈಗಾಗಲೇ ಬರೆದಿದ್ದೇನೆ. ಲಿಂಕ್) ಈ ಕಥೆ ಏನು? ಈ ಕಥೆ ಏಕೆ? ಈ ಕಥೆಯೇ ಏಕೆ? ಈ ಕಥೆಗೆ ಈ ನಿರ್ದೇಶಕನೇ ಏಕೆ? ಈ ಕಥೆ ಇಂದೇಕೆ? ಮೊದಲು ಈ ಮೂಲಪ್ರಶ್ನೆಗಳಿಗೆ ಸಮಾಧಾನಕರ ಉತ್ತರ ನೀಡಿದ ನಂತರ ಈ ಕಥೆ ಯಾರದ್ದು, ಕಥೆಯ ಉದ್ದೇಶ ಏನು, ಕಥಾನಾಯಕಿಯ ಉದ್ದೇಶ ಏನು, ಕಥೆ ಎಲ್ಲೆಲ್ಲಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ, ಚಿತ್ರಕಥೆಯಲ್ಲಿ ಬರೆದ ದೃಶ್ಯಗಳು ಕಥೆಯ ಆತ್ಮವನ್ನು ಬಿಂಬಿಸುತ್ತಿವೆಯೇ ಎನ್ನುವ ಹತ್ತಾರು ಪ್ರಶ್ನೆಗಳಿಗೂ ಉತ್ತರ ಕಂಡುಕೊಳ್ಳಬೇಕು.

ಮೇಲಿನ ಎಲ್ಲಾ ಅಂಶಗಳನ್ನು ಖಾತ್ರಿಪಡಿಸಿಕೊಂಡ ನಂತರ ಆಯಾ ದೃಶ್ಯಗಳಿಗೆ ಆಗತ್ಯವಿರುವ ಶಾಟ್‍ಗಳನ್ನು ಆಯ್ಕೆ ಮಾಡಬೇಕು. (ಇದರ ಬಗ್ಗೆ ಮುಂದಿನ ಪ್ಯಾರಾದಲ್ಲಿ). ಆ ದೃಶ್ಯಕ್ಕೆ ಆಯ್ಕೆ ಮಾಡಿದ ಶಾಟ್‍ಗಳು ಸಾಕೇ, ಇನ್ನೂ ಕಡಿಮೆ ಶಾಟ್‍ಗಳಲ್ಲಿ ಆ ದೃಶ್ಯದ ಸಾರವನ್ನು ಸೆರೆಹಿಡಿಯಬಹುದೇ ಮುಂತಾದ ಪ್ರಶ್ನೆಗಳಿಗೆ ಉತ್ತರಿಸಿ ಅದರನುಗುಣವಾಗಿ ಚಿತ್ರೀಕರಣ ಮಾಡಬೇಕು. ಈ ಹಂತದಲ್ಲಿ ನಿರ್ದೇಶಕನಿಗೆ ತಾಂತ್ರಿಕ ಅಂಶಗಳ ಸಂಪೂರ್ಣ ಅರಿವು ಇರಬೇಕಾಗುತ್ತದೆ. ಯಾವ ಕ್ಯಾಮರ ಬಳಸಬೇಕು, ಯಾವ ಲೆನ್ಸ್ ಬಳಸಬೇಕು, ಯಾವ ಕೋನ ಇಡಬೇಕು, ಶಾಟ್‍ನಲ್ಲಿ ಕ್ಯಾಮರ ಚಲನೆ ಇರಬೇಕೇ ಇತ್ಯಾದಿ ಪ್ರಶ್ನೆಗಳೊಂದಿಗೆ ಪರದೆಯಲ್ಲಿ ಕಾಣುವ ಎಲ್ಲಾ ವಸ್ತುಗಳು ಹೇಗಿರಬೇಕು ಎನ್ನುವುದನ್ನೂ ನಿರ್ದೇಶಕನೇ ನಿರ್ಧರಿಸಬೇಕು.

ಇದರೊಂದಿಗೆ ಅಭಿನಯ. ನಟರ ಹಾವಭಾವದೊಂದಿಗೆ ಎಲ್ಲಾ ನಟರ ಚಲನೆಗಳನ್ನೂ ನಿರ್ದೇಶಕನೇ ನಿರ್ಧರಿಸಬೇಕು. (ಪಾತ್ರ ಸೃಷ್ಟಿಯಲ್ಲಿ ನಿರ್ದೇಶಕನ ಪಾತ್ರದ ಬಗ್ಗೆ ಈಗಾಗಲೇ ಬರೆದಿದ್ದೇನೆ.) ಚಿತ್ರೀಕರಣ ಮುಗಿಸಿದ ನಂತರ ಅತ್ಯಂತ ಮುಖ್ಯ ಅಂಗವಾದ ಸಂಕಲನದ ಪ್ರಕ್ರಿಯೆಯಲ್ಲಿ ಸಂಕಲನಕಾರಳೊಂದಿಗೆ ಸೇರಿ ಪ್ರೇಕ್ಷಕರಿಗೆ ಕೊನೆಯದಾಗಿ ಚಿತ್ರ ಹೇಗೆ ತಲುಪುವುದು ಎನ್ನುವ ಕೆಲಸ ಮುಗಿಸಬೇಕು. (ಸಂಕಲನದ ಬಗ್ಗೆ ಇನ್ನೊಂದು ಲೇಖನ ಬೇಕು.)

ಅಂದ್ರೆ? ಇಷ್ಟೇನಾ ನಿರ್ದೇಶನ ಅಂದರೆ?
ನಿರ್ದೇಶನದ ಬಗ್ಗೆ ಹಲವಾರು ಥಿಯರಿಗಳಿವೆ. ಅಂದ್ರೆ ತಾರ್ಕಾವ್‍ಸ್ಕಿ (Andrei Tarkovsky)ಎಂಬ ರಷಿಯಾದ ನಿರ್ದೇಶಕ ಸಿನೆಮಾ ಎನ್ನುವುದು ಸಮಯದಲ್ಲಿ ಕೆತ್ತನೆ (sculpting) ಮಾಡಿದಂತೆ ಎಂದು ಹೇಳಿ ಚಲನಚಿತ್ರ ಎಂದರೆ ಏನು, ಅದರ ಜೀವ ಎಂಥದ್ದು ಎನ್ನುವುದರ ಬಗ್ಗೆ ಮಾತನಾಡುತ್ತಾರೆ. ಸ್ಟಾಕರ್, ಸೊಲಾರಿಸ್, ಮಿರರ್ ಮುಂತಾದ ಸಿನೆಮಾಗಳನ್ನು ನಿರ್ದೇಶಿಸಿದ ಇವರ ಸಿನೆಮಾಗಳಲ್ಲಿ ಆಧ್ಯಾತ್ಮ, ಕನಸು ಮುಂತಾದ ವಿಷಯಗಳನ್ನು ಸೆರೆಹಿಡಿಯುವ ಪ್ರಯತ್ನ ಕಾಣಿಸುತ್ತದೆ. ಇವರ ಚಿತ್ರಗಳಲ್ಲಿ ತುಂಬಾ ಉದ್ದದ ಶಾಟ್‍ಗಳು ಮತ್ತು ತುಂಬಾ ಕಡಿಮೆ ಕಟ್‍ಗಳು ಕಾಣಿಸುತ್ತವೆ. ಆದರೆ ಐಸೆನ್‍ಸ್ಟೈನ್ ಮತ್ತು ಡೇವಿಡ್ ಮ್ಯಾಮೆಟ್(ಇವರ ಬಗ್ಗೆ ಬರೆದಿದ್ದೇನೆ) ಮುಂತಾದವರು ಮೊಂಟಾಜ್ ಥಿಯರಿಯನ್ನು ಮುಂದಿಡುತ್ತಾರೆ. ಚಿತ್ರದಲ್ಲಿ ಮುಂದೇನಾಗುವುದು ಎನ್ನುವ ಪ್ರಶ್ನೆ ಪ್ರೇಕ್ಷಕರನ್ನು ಹಿಡಿದಿಡಬೇಕು, ಪ್ರತಿಯೊಂದು ದೃಶ್ಯವೂ ಕಥೆಯನ್ನು ಮುಂದೊಯ್ಯಬೇಕು, ಪ್ರತಿಯೊಂದು ದೃಶ್ಯದ ಉದ್ದೇಶ ಸ್ಪಷ್ಟವಾಗಿರಬೇಕು, ಸಂಭಾಷಣೆಯ ಪ್ರತಿಯೊಂದು ತುಣುಕು ಸಹ ಚಿತ್ರಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಇತ್ಯಾದಿ.

ಅಂದರೆ, ಈ ಎರಡೂ ಥಿಯರಿಗಳು ಒಂದಕ್ಕೊಂದು ವಿರುದ್ಧದ ಥಿಯರಿಗಳಾ? ದೃಶ್ಯದ ಉದ್ದೇಶ ಸ್ಪಷ್ಟವಾದರೆ ಸಾಕಲ್ವಾ, ಅದಕ್ಕೆ ಜೀವ ತುಂಬೋದು ಅಂದರೆ ಏನು?

ಕಥೆಗಳ ಆಧಾರದ ಮೇಲೆ ಅದರ ಹಿಂದಿರಬೇಕಾದ ಥಿಯರಿ ನಿರ್ಧಾರವಾಗಬೇಕೆ? ಅಥವಾ ನಿರ್ದೇಶಕ ಒಂದೇ ಥಿಯರಿಗೆ ಬದ್ಧವಾಗಬೇಕೆ?
1999ರಲ್ಲಿ ಪೋಸ್ಟ್‍ಮೆನ್ ಇನ ದ ಮೌಂಟನ್ಸ್ ಎನ್ನುವ ಚಿತ್ರ ಬಂತು. ಅದರಲ್ಲಿಯ ಮೊದಲ ದೃಶ್ಯ; ತಂದೆ ಮಗ ಇಬ್ಬರೂ ಮಾರನೆಯ ದಿನ ಬೆಳಗ್ಗೆ ತಮ್ಮ ಪ್ರವಾಸಕ್ಕೆ ಹೊರಡಲಿದ್ದಾರೆ, ಹಾಗಾಗಿ ರಾತ್ರಿ ದೀಪದ ಬೆಳಕಿನಲ್ಲಿ ನಕ್ಷೆಗಳನ್ನು, ಇತರ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನೊಂದು ದೃಶ್ಯದಲ್ಲಿ ತಂದೆ ಮಗ ಒಂದು ಊರಿಗೆ ಬೆಳ್ಳಂಬೆಳಗ್ಗೆ ಬಂದು ಮುಟ್ಟುತ್ತಾರೆ. ಈ ದೃಶ್ಯಗಳನ್ನು ನೋಡುತ್ತಿರುವಾಗ ಒಬ್ಬ ಪ್ರೇಕ್ಷಕನನ್ನು ಸಂಪೂರ್ಣವಾಗಿ ಅಲ್ಲಿಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗುತ್ತಾನೆ ನಿರ್ದೇಶಕ ಹೋ ಜಿಯಾಂಗಿ? ಅದನ್ನು ಮಾಡಲು ಹೇಗೆ ಸಾಧ್ಯವಾಯಿತು?

ಸಿಡ್ನಿ ಲುಮೆಟ್ ಅವರ ಚಿತ್ರ ದಿ ವರ್ಡಿಕ್ಟ್ ನೋಡುವಾಗ ಅದೊಂದು ವಿದ್ಯುತ್ ಪ್ರವಹಿಸುತ್ತಿರುವ ತಂತಿ ಎಂತಲೇ ಭಾಸವಾಯಿತು. ಪ್ರತಿಯೊಂದು ದೃಶ್ಯವೂ ಜೀವಂತವಾಗಿದೆ; ಅದರದೇ ಬಿಗಿತ, ಟೆನ್ಷನ್ ಹೊಂದಿದೆ. ಆ ಬಿಗಿತ ಪ್ರೇಕ್ಷಕನನ್ನು ಒಂದುಕ್ಷಣವೂ ಬಿಡುವುದಿಲ್ಲ. ಹಿನ್ನಲೆ ಸಂಗೀತ ಇಲ್ಲದೇ ಅಷ್ಟು ಟೆನ್ಷನ್ ತಂದಿಡುತ್ತಾರೆ. ಅದನ್ನು ಹೇಗೆ ಮಾಡಲು ಸಾಧ್ಯವಾಯಿತು?

ನಾವು ಚಿಕ್ಕವರಿದ್ದಾಗ ಒಂದು ಮಾಡ್ತಿದ್ವಿ. ಯಾರೋ ಸಿನೆಮಾ ನೋಡಿ ಬಂದಕೂಡಲೇ, ಅವರನ್ನು ಸ್ಟೋರಿ ಹೇಳು ಎಂದು ಪೀಡಿಸುತ್ತಿದ್ವಿ. ಅನೇಕ ಸಲ ಅವರು ಆ ಚಿತ್ರದ ಸಂಪೂರ್ಣ ಸ್ಟೋರಿಯನ್ನು ಕಣ್ಣಿಗೆ ಕಾಣುವ ಹಾಗೆ ಹೇಳುತ್ತಿದ್ದರು. (ಮಕ್ಕಳಷ್ಟೇ ಅಲ್ಲ, ವಯಸ್ಕರೂ ಇದನ್ನು ಮಾಡುತ್ತಿದ್ದರು.) ಅಂದರೆ, ಸಿನೆಮಾ ಎಂದರೆ ಕಥೆ ಎಂದಾಯಿತಲ್ಲ?

ಫಾರೆಸ್ಟ್ ಗಂಪ್, ಕಾಸ್ಟ್ ಅವೇ ಮುಂತಾದ ಚಿತ್ರಗಳು ಎಲ್ಲರಿಗೂ ಇಷ್ಟವಾಗಿದ್ದರೂ ಆ ಚಿತ್ರಗಳ ನಿರ್ದೇಶಕ ಯಾರು ಎಂದು ತಿಳಿದುಕೊಳ್ಳುವ ಗೋಜಿಗೆ ಯಾರೂ ಹೋಗುವುದಿಲ್ಲ. ಅದೇಕೆ?

ನಿರ್ದೇಶನದ ವಿಷಯಕ್ಕೆ ಬಂದಾಗ ಇನ್ನೂ ಇಂತಹ ನೂರಾರು ಪ್ರಶ್ನೆಗಳು ಎದುರಾಗುತ್ತವೆ. ಲೇಖಕನ ತಲೆಯಲ್ಲಿ ಬಿತ್ತಿದ ಕಥೆಯೆನ್ನುವ ಬೀಜ ಮೊಳಕೆಯೊಡೆದು, ಚಿಗುರಿ, ಗಿಡವಾಗಿ, ಮರವಾಗಿ ಹೂ ಹಣ್ಣು ಕೊಡುವ ಪ್ರಕ್ರಿಯೆ ಇದು; ಬೇರೆ ಬೇರೆ ಹಂತಗಳಲ್ಲಿ ಬೇರೆ ಬೇರೆಯವರು ಪೋಷಿಸುತ್ತ ಹೋಗುತ್ತಾರೆ. ನಮಗೆ ಹಣ್ಣು ರುಚಿಕರವಾಗಿರಬೇಕು ಅಷ್ಟೇ.

ಅಂದಹಾಗೆ, ‘ಪಿಚ್ಚರ್ ಚೆನ್ನಾಗಿದ್ದಿಲ್ಲ, ಆದರೆ ಡರೆಕ್ಷನ್ ಮಸ್ತ್ ಇತ್ತು’ ಎಂದು ಹೇಳಿದ ನನ್ನ ಹೈಸ್ಕೂಲಿನ ಆ ಗೆಳೆಯ ಡಬ್ಬಾ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...