Homeಮುಖಪುಟಏನಿದು ಫಿಲ್ಮ್ ಡೈರೆಕ್ಷನ್?

ಏನಿದು ಫಿಲ್ಮ್ ಡೈರೆಕ್ಷನ್?

- Advertisement -
- Advertisement -

| ರಾಜಶೇಖರ್ ಅಕ್ಕಿ |

ನಾನಾಗ ಹೈಸ್ಕೂಲಿನಲ್ಲಿದ್ದೆ, ಒಂದು ಸಿನೆಮಾ ನೋಡಿ ಬಂದ ನಂತರ ನನ್ನ ಒಬ್ಬ ಗೆಳೆಯ ಹೇಳಿದ್ದು, ‘ಪಿಚ್ಚರ್ ಅಷ್ಟು ಚೆನ್ನಾಗಿದ್ದಿಲ್ಲ, ಆದರೆ ಡರೆಕ್ಷನ್ ಮಸ್ತ್ ಇತ್ತು’. ಇದೇನಿದು? ಇದ್ಹೆಂಗೆ ಸಾಧ್ಯ? ಅಭಿನಯ ಅಂದ್ರೆ ಗೊತ್ತು, ಛಾಯಾಗ್ರಹಣ ಗೊತ್ತು, ಸಂಗೀತ ಗೊತ್ತು, ಈ ಡೈರೆಕ್ಷನ್ ಅಂದ್ರೇನು? ಸಿನೆಮಾಗಳನ್ನು ಇಷ್ಟು ಇಷ್ಟ ಪಡುವ ನನಗೆ ಈ ಡೈರೆಕ್ಷನ್ ಅನ್ನೋದೇನು ಎನ್ನೋದು ಗೊತ್ತೇ ಇಲ್ವಲ್ಲ? ನಾನು ಕಣ್ಣು ಪಿಳಿ ಪಿಳಿ ಬಿಟ್ಟು ನೋಡಿದೆ.

ಹಂಗಾದ್ರೆ ಚಲನಚಿತ್ರ ನಿರ್ದೇಶನ ಅಂದ್ರೇನು?
ಚಿತ್ರಕಥೆಯನ್ನು ತೆಗೆದುಕೊಂಡು ದೃಶ್ಯ ಮಾಧ್ಯಮಕ್ಕೆ ಇಳಿಸುವುದೇ ನಿರ್ದೇಶನ ಹಾಗೂ ಅದನ್ನು ದೃಶ್ಯ ಮಾಧ್ಯಮಕ್ಕೆ ಇಳಿಸುವ ಜವಾಬ್ದಾರಿ ಹೊತ್ತವನನ್ನು ನಿರ್ದೇಶಕ ಎನ್ನಬಹುದು. ಅಂದರೆ, ಸ್ಕ್ರಿಪ್ಟ್‍ಅನ್ನು ತೆಗೆದುಕೊಂಡು ಆಯಾ ದೃಶ್ಯಕ್ಕೆ ಬೇಕಾಗಿರುವ ಶಾಟ್‍ಗಳನ್ನು ಆಯ್ಕೆ ಮಾಡಿ ಶೂಟಿಂಗ್ ಮಾಡಿ ಸಂಕಲನ ಮಾಡಿದರೆ ಅದುವೇ ನಿರ್ದೇಶನ.

ಅಷ್ಟೇನಾ? ಹಂಗಂದ್ರೆ, ನನ್ನ ಗೆಳೆಯ ಹೇಳಿದ ಮಾತು, ಡೈರೆಕ್ಷನ್ ಮಸ್ತ್ ಇತ್ತು ಅಂದರೇನು? ನಿರ್ದೇಶನ ಮಸ್ತ್ ಆಗಲು ಏನೆಲ್ಲ ಮಾಡಬೇಕು? ಏನೆಲ್ಲ ಒಳಗೊಂಡಿರುತ್ತೆ ಈ ಚಲನಚಿತ್ರ ನಿರ್ದೇಶನ?

ಸರಳವಾಗಿ ಹೇಳಬೇಕೆಂದರೆ, ಕಥೆಯ, ಚಿತ್ರಕಥೆಯ, ಛಾಯಾಗ್ರಹಣದ, ಅಭಿನಯದ ಮತ್ತು ಸಂಕಲನದ ಆಳವಾದ ಜ್ಞಾನ ನಿರ್ದೇಶಕನಿಗಿರಬೇಕು, ಈ ಎಲ್ಲಾ ವಿಭಾಗಗಳಿಗೂ ನಿರ್ದೇಶಕನೇ ಜವಾಬ್ದಾರ. ಅಂದರೆ ನಿರ್ದೇಶಕ ಬರೀ ಸೂಪರ್‍ವೈಸರ್ ಆಗಿರಬೇಕಾ? ಅಥವಾ ಆಯಾ ದೃಶ್ಯಗಳಲ್ಲಿ ಯಾವ್ಯಾವ ಶಾಟ್ ಬೇಕು ಎಂದು ಛಾಯಾಗ್ರಾಹಕನಿಗೆ ಮತ್ತು ನಟರಿಗೆ ಹೇಳುವುದೇ ನಿರ್ದೇಶಕನ ಕೆಲಸ ಮತ್ತು ಇತರ ಕೆಲಸಗಳನ್ನೆಲ್ಲಾ ಮೇಲ್ವಿಚಾರಣೆ ಮಾಡುವುದು ಎಂದು ಅನ್ನಬಹುದಾ?

ಇರಲಿ, ನಿರ್ದೇಶಕನ ಕೆಲಸಗಳೇನು ಎಂದು ಸದ್ಯಕ್ಕೆ ನನಗೆ ತಿಳಿದಿರುವ ಕೆಲಸಗಳ ಪಟ್ಟಿ ಮಾಡುವ.
ಒಂದು, ಕಥೆಯ ಆಳ ಜ್ಞಾನ, ಕಥೆ ಹೇಗೆ ಕೆಲಸ ಮಾಡುವುದು ಎನ್ನುವುದರ ಸ್ಪಷ್ಟತೆ (ಸ್ಟ್ರಕ್ಚರ್ ಬಗ್ಗೆ ಈಗಾಗಲೇ ಬರೆದಿದ್ದೇನೆ. ಲಿಂಕ್) ಈ ಕಥೆ ಏನು? ಈ ಕಥೆ ಏಕೆ? ಈ ಕಥೆಯೇ ಏಕೆ? ಈ ಕಥೆಗೆ ಈ ನಿರ್ದೇಶಕನೇ ಏಕೆ? ಈ ಕಥೆ ಇಂದೇಕೆ? ಮೊದಲು ಈ ಮೂಲಪ್ರಶ್ನೆಗಳಿಗೆ ಸಮಾಧಾನಕರ ಉತ್ತರ ನೀಡಿದ ನಂತರ ಈ ಕಥೆ ಯಾರದ್ದು, ಕಥೆಯ ಉದ್ದೇಶ ಏನು, ಕಥಾನಾಯಕಿಯ ಉದ್ದೇಶ ಏನು, ಕಥೆ ಎಲ್ಲೆಲ್ಲಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ, ಚಿತ್ರಕಥೆಯಲ್ಲಿ ಬರೆದ ದೃಶ್ಯಗಳು ಕಥೆಯ ಆತ್ಮವನ್ನು ಬಿಂಬಿಸುತ್ತಿವೆಯೇ ಎನ್ನುವ ಹತ್ತಾರು ಪ್ರಶ್ನೆಗಳಿಗೂ ಉತ್ತರ ಕಂಡುಕೊಳ್ಳಬೇಕು.

ಮೇಲಿನ ಎಲ್ಲಾ ಅಂಶಗಳನ್ನು ಖಾತ್ರಿಪಡಿಸಿಕೊಂಡ ನಂತರ ಆಯಾ ದೃಶ್ಯಗಳಿಗೆ ಆಗತ್ಯವಿರುವ ಶಾಟ್‍ಗಳನ್ನು ಆಯ್ಕೆ ಮಾಡಬೇಕು. (ಇದರ ಬಗ್ಗೆ ಮುಂದಿನ ಪ್ಯಾರಾದಲ್ಲಿ). ಆ ದೃಶ್ಯಕ್ಕೆ ಆಯ್ಕೆ ಮಾಡಿದ ಶಾಟ್‍ಗಳು ಸಾಕೇ, ಇನ್ನೂ ಕಡಿಮೆ ಶಾಟ್‍ಗಳಲ್ಲಿ ಆ ದೃಶ್ಯದ ಸಾರವನ್ನು ಸೆರೆಹಿಡಿಯಬಹುದೇ ಮುಂತಾದ ಪ್ರಶ್ನೆಗಳಿಗೆ ಉತ್ತರಿಸಿ ಅದರನುಗುಣವಾಗಿ ಚಿತ್ರೀಕರಣ ಮಾಡಬೇಕು. ಈ ಹಂತದಲ್ಲಿ ನಿರ್ದೇಶಕನಿಗೆ ತಾಂತ್ರಿಕ ಅಂಶಗಳ ಸಂಪೂರ್ಣ ಅರಿವು ಇರಬೇಕಾಗುತ್ತದೆ. ಯಾವ ಕ್ಯಾಮರ ಬಳಸಬೇಕು, ಯಾವ ಲೆನ್ಸ್ ಬಳಸಬೇಕು, ಯಾವ ಕೋನ ಇಡಬೇಕು, ಶಾಟ್‍ನಲ್ಲಿ ಕ್ಯಾಮರ ಚಲನೆ ಇರಬೇಕೇ ಇತ್ಯಾದಿ ಪ್ರಶ್ನೆಗಳೊಂದಿಗೆ ಪರದೆಯಲ್ಲಿ ಕಾಣುವ ಎಲ್ಲಾ ವಸ್ತುಗಳು ಹೇಗಿರಬೇಕು ಎನ್ನುವುದನ್ನೂ ನಿರ್ದೇಶಕನೇ ನಿರ್ಧರಿಸಬೇಕು.

ಇದರೊಂದಿಗೆ ಅಭಿನಯ. ನಟರ ಹಾವಭಾವದೊಂದಿಗೆ ಎಲ್ಲಾ ನಟರ ಚಲನೆಗಳನ್ನೂ ನಿರ್ದೇಶಕನೇ ನಿರ್ಧರಿಸಬೇಕು. (ಪಾತ್ರ ಸೃಷ್ಟಿಯಲ್ಲಿ ನಿರ್ದೇಶಕನ ಪಾತ್ರದ ಬಗ್ಗೆ ಈಗಾಗಲೇ ಬರೆದಿದ್ದೇನೆ.) ಚಿತ್ರೀಕರಣ ಮುಗಿಸಿದ ನಂತರ ಅತ್ಯಂತ ಮುಖ್ಯ ಅಂಗವಾದ ಸಂಕಲನದ ಪ್ರಕ್ರಿಯೆಯಲ್ಲಿ ಸಂಕಲನಕಾರಳೊಂದಿಗೆ ಸೇರಿ ಪ್ರೇಕ್ಷಕರಿಗೆ ಕೊನೆಯದಾಗಿ ಚಿತ್ರ ಹೇಗೆ ತಲುಪುವುದು ಎನ್ನುವ ಕೆಲಸ ಮುಗಿಸಬೇಕು. (ಸಂಕಲನದ ಬಗ್ಗೆ ಇನ್ನೊಂದು ಲೇಖನ ಬೇಕು.)

ಅಂದ್ರೆ? ಇಷ್ಟೇನಾ ನಿರ್ದೇಶನ ಅಂದರೆ?
ನಿರ್ದೇಶನದ ಬಗ್ಗೆ ಹಲವಾರು ಥಿಯರಿಗಳಿವೆ. ಅಂದ್ರೆ ತಾರ್ಕಾವ್‍ಸ್ಕಿ (Andrei Tarkovsky)ಎಂಬ ರಷಿಯಾದ ನಿರ್ದೇಶಕ ಸಿನೆಮಾ ಎನ್ನುವುದು ಸಮಯದಲ್ಲಿ ಕೆತ್ತನೆ (sculpting) ಮಾಡಿದಂತೆ ಎಂದು ಹೇಳಿ ಚಲನಚಿತ್ರ ಎಂದರೆ ಏನು, ಅದರ ಜೀವ ಎಂಥದ್ದು ಎನ್ನುವುದರ ಬಗ್ಗೆ ಮಾತನಾಡುತ್ತಾರೆ. ಸ್ಟಾಕರ್, ಸೊಲಾರಿಸ್, ಮಿರರ್ ಮುಂತಾದ ಸಿನೆಮಾಗಳನ್ನು ನಿರ್ದೇಶಿಸಿದ ಇವರ ಸಿನೆಮಾಗಳಲ್ಲಿ ಆಧ್ಯಾತ್ಮ, ಕನಸು ಮುಂತಾದ ವಿಷಯಗಳನ್ನು ಸೆರೆಹಿಡಿಯುವ ಪ್ರಯತ್ನ ಕಾಣಿಸುತ್ತದೆ. ಇವರ ಚಿತ್ರಗಳಲ್ಲಿ ತುಂಬಾ ಉದ್ದದ ಶಾಟ್‍ಗಳು ಮತ್ತು ತುಂಬಾ ಕಡಿಮೆ ಕಟ್‍ಗಳು ಕಾಣಿಸುತ್ತವೆ. ಆದರೆ ಐಸೆನ್‍ಸ್ಟೈನ್ ಮತ್ತು ಡೇವಿಡ್ ಮ್ಯಾಮೆಟ್(ಇವರ ಬಗ್ಗೆ ಬರೆದಿದ್ದೇನೆ) ಮುಂತಾದವರು ಮೊಂಟಾಜ್ ಥಿಯರಿಯನ್ನು ಮುಂದಿಡುತ್ತಾರೆ. ಚಿತ್ರದಲ್ಲಿ ಮುಂದೇನಾಗುವುದು ಎನ್ನುವ ಪ್ರಶ್ನೆ ಪ್ರೇಕ್ಷಕರನ್ನು ಹಿಡಿದಿಡಬೇಕು, ಪ್ರತಿಯೊಂದು ದೃಶ್ಯವೂ ಕಥೆಯನ್ನು ಮುಂದೊಯ್ಯಬೇಕು, ಪ್ರತಿಯೊಂದು ದೃಶ್ಯದ ಉದ್ದೇಶ ಸ್ಪಷ್ಟವಾಗಿರಬೇಕು, ಸಂಭಾಷಣೆಯ ಪ್ರತಿಯೊಂದು ತುಣುಕು ಸಹ ಚಿತ್ರಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಇತ್ಯಾದಿ.

ಅಂದರೆ, ಈ ಎರಡೂ ಥಿಯರಿಗಳು ಒಂದಕ್ಕೊಂದು ವಿರುದ್ಧದ ಥಿಯರಿಗಳಾ? ದೃಶ್ಯದ ಉದ್ದೇಶ ಸ್ಪಷ್ಟವಾದರೆ ಸಾಕಲ್ವಾ, ಅದಕ್ಕೆ ಜೀವ ತುಂಬೋದು ಅಂದರೆ ಏನು?

ಕಥೆಗಳ ಆಧಾರದ ಮೇಲೆ ಅದರ ಹಿಂದಿರಬೇಕಾದ ಥಿಯರಿ ನಿರ್ಧಾರವಾಗಬೇಕೆ? ಅಥವಾ ನಿರ್ದೇಶಕ ಒಂದೇ ಥಿಯರಿಗೆ ಬದ್ಧವಾಗಬೇಕೆ?
1999ರಲ್ಲಿ ಪೋಸ್ಟ್‍ಮೆನ್ ಇನ ದ ಮೌಂಟನ್ಸ್ ಎನ್ನುವ ಚಿತ್ರ ಬಂತು. ಅದರಲ್ಲಿಯ ಮೊದಲ ದೃಶ್ಯ; ತಂದೆ ಮಗ ಇಬ್ಬರೂ ಮಾರನೆಯ ದಿನ ಬೆಳಗ್ಗೆ ತಮ್ಮ ಪ್ರವಾಸಕ್ಕೆ ಹೊರಡಲಿದ್ದಾರೆ, ಹಾಗಾಗಿ ರಾತ್ರಿ ದೀಪದ ಬೆಳಕಿನಲ್ಲಿ ನಕ್ಷೆಗಳನ್ನು, ಇತರ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಇನ್ನೊಂದು ದೃಶ್ಯದಲ್ಲಿ ತಂದೆ ಮಗ ಒಂದು ಊರಿಗೆ ಬೆಳ್ಳಂಬೆಳಗ್ಗೆ ಬಂದು ಮುಟ್ಟುತ್ತಾರೆ. ಈ ದೃಶ್ಯಗಳನ್ನು ನೋಡುತ್ತಿರುವಾಗ ಒಬ್ಬ ಪ್ರೇಕ್ಷಕನನ್ನು ಸಂಪೂರ್ಣವಾಗಿ ಅಲ್ಲಿಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗುತ್ತಾನೆ ನಿರ್ದೇಶಕ ಹೋ ಜಿಯಾಂಗಿ? ಅದನ್ನು ಮಾಡಲು ಹೇಗೆ ಸಾಧ್ಯವಾಯಿತು?

ಸಿಡ್ನಿ ಲುಮೆಟ್ ಅವರ ಚಿತ್ರ ದಿ ವರ್ಡಿಕ್ಟ್ ನೋಡುವಾಗ ಅದೊಂದು ವಿದ್ಯುತ್ ಪ್ರವಹಿಸುತ್ತಿರುವ ತಂತಿ ಎಂತಲೇ ಭಾಸವಾಯಿತು. ಪ್ರತಿಯೊಂದು ದೃಶ್ಯವೂ ಜೀವಂತವಾಗಿದೆ; ಅದರದೇ ಬಿಗಿತ, ಟೆನ್ಷನ್ ಹೊಂದಿದೆ. ಆ ಬಿಗಿತ ಪ್ರೇಕ್ಷಕನನ್ನು ಒಂದುಕ್ಷಣವೂ ಬಿಡುವುದಿಲ್ಲ. ಹಿನ್ನಲೆ ಸಂಗೀತ ಇಲ್ಲದೇ ಅಷ್ಟು ಟೆನ್ಷನ್ ತಂದಿಡುತ್ತಾರೆ. ಅದನ್ನು ಹೇಗೆ ಮಾಡಲು ಸಾಧ್ಯವಾಯಿತು?

ನಾವು ಚಿಕ್ಕವರಿದ್ದಾಗ ಒಂದು ಮಾಡ್ತಿದ್ವಿ. ಯಾರೋ ಸಿನೆಮಾ ನೋಡಿ ಬಂದಕೂಡಲೇ, ಅವರನ್ನು ಸ್ಟೋರಿ ಹೇಳು ಎಂದು ಪೀಡಿಸುತ್ತಿದ್ವಿ. ಅನೇಕ ಸಲ ಅವರು ಆ ಚಿತ್ರದ ಸಂಪೂರ್ಣ ಸ್ಟೋರಿಯನ್ನು ಕಣ್ಣಿಗೆ ಕಾಣುವ ಹಾಗೆ ಹೇಳುತ್ತಿದ್ದರು. (ಮಕ್ಕಳಷ್ಟೇ ಅಲ್ಲ, ವಯಸ್ಕರೂ ಇದನ್ನು ಮಾಡುತ್ತಿದ್ದರು.) ಅಂದರೆ, ಸಿನೆಮಾ ಎಂದರೆ ಕಥೆ ಎಂದಾಯಿತಲ್ಲ?

ಫಾರೆಸ್ಟ್ ಗಂಪ್, ಕಾಸ್ಟ್ ಅವೇ ಮುಂತಾದ ಚಿತ್ರಗಳು ಎಲ್ಲರಿಗೂ ಇಷ್ಟವಾಗಿದ್ದರೂ ಆ ಚಿತ್ರಗಳ ನಿರ್ದೇಶಕ ಯಾರು ಎಂದು ತಿಳಿದುಕೊಳ್ಳುವ ಗೋಜಿಗೆ ಯಾರೂ ಹೋಗುವುದಿಲ್ಲ. ಅದೇಕೆ?

ನಿರ್ದೇಶನದ ವಿಷಯಕ್ಕೆ ಬಂದಾಗ ಇನ್ನೂ ಇಂತಹ ನೂರಾರು ಪ್ರಶ್ನೆಗಳು ಎದುರಾಗುತ್ತವೆ. ಲೇಖಕನ ತಲೆಯಲ್ಲಿ ಬಿತ್ತಿದ ಕಥೆಯೆನ್ನುವ ಬೀಜ ಮೊಳಕೆಯೊಡೆದು, ಚಿಗುರಿ, ಗಿಡವಾಗಿ, ಮರವಾಗಿ ಹೂ ಹಣ್ಣು ಕೊಡುವ ಪ್ರಕ್ರಿಯೆ ಇದು; ಬೇರೆ ಬೇರೆ ಹಂತಗಳಲ್ಲಿ ಬೇರೆ ಬೇರೆಯವರು ಪೋಷಿಸುತ್ತ ಹೋಗುತ್ತಾರೆ. ನಮಗೆ ಹಣ್ಣು ರುಚಿಕರವಾಗಿರಬೇಕು ಅಷ್ಟೇ.

ಅಂದಹಾಗೆ, ‘ಪಿಚ್ಚರ್ ಚೆನ್ನಾಗಿದ್ದಿಲ್ಲ, ಆದರೆ ಡರೆಕ್ಷನ್ ಮಸ್ತ್ ಇತ್ತು’ ಎಂದು ಹೇಳಿದ ನನ್ನ ಹೈಸ್ಕೂಲಿನ ಆ ಗೆಳೆಯ ಡಬ್ಬಾ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...