Homeಮುಖಪುಟನಿರ್ದೇಶಕ ಸ್ಥಾನಕ್ಕೆ ರಾಧಿಕಾ ರಾಯ್, ಪ್ರಣಯ್ ರಾಯ್ ರಾಜೀನಾಮೆ: RIP, ಅನ್‌ಫಾಲೋ NDTV ಎಂದ ಪ್ರಮುಖರು

ನಿರ್ದೇಶಕ ಸ್ಥಾನಕ್ಕೆ ರಾಧಿಕಾ ರಾಯ್, ಪ್ರಣಯ್ ರಾಯ್ ರಾಜೀನಾಮೆ: RIP, ಅನ್‌ಫಾಲೋ NDTV ಎಂದ ಪ್ರಮುಖರು

- Advertisement -
- Advertisement -

NDTV ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ RRPRH ನಿರ್ದೇಶಕರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೆ ಖ್ಯಾತ ಸುಪ್ರೀಂ ಕೋರ್ಟ್ ವಕೀಲರಾದ ಪ್ರಶಾಂತ್ ಭೂಷಣ್ RIP NDTV ಎಂದು ಟ್ವೀಟ್ ಮಾಡಿದರೆ, ಟಿಆರ್‌ಎಸ್ ಪಕ್ಷದ ಕಾರ್ಯಾಧ್ಯಕ್ಷ ಕೆಟಿಆರ್ Unfollowing NDTV ಎಂದು ಟ್ವೀಟ್ ಮಾಡಿದ್ದಾರೆ.

NDTV ಮಂಡಳಿಯು ರಾಜೀನಾಮೆಗಳನ್ನು ಅಂಗೀಕರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸುದೀಪ್ತ ಭಟ್ಟಾಚಾರ್ಯ, ಸಂಜಯ್ ಪುಗಾಲಿಯಾ ಮತ್ತು ಸೆಂಥಿಲ್ ಚೆಂಗಲ್ವರಾಯನ್ ಅವರನ್ನು RRPRH ಮಂಡಳಿಯ ನಿರ್ದೇಶಕರನ್ನಾಗಿ ನೇಮಿಸಿದೆ.

ಎನ್‌ಡಿಟಿವಿಯ ಪ್ರವರ್ತಕ ಸಂಸ್ಥೆ ಆರ್‌ಆರ್‌ಪಿಆರ್ ಹೋಲ್ಡಿಂಗ್ (ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್) ಸೋಮವಾರ ತನ್ನ ಈಕ್ವಿಟಿ ಬಂಡವಾಳದ 99.5 ಪ್ರತಿಶತದಷ್ಟು ಷೇರುಗಳನ್ನು ಅದಾನಿ ಸಮೂಹದ ಒಡೆತನದ ವಿಶ್ವಪ್ರಧನ್ ಕಮರ್ಷಿಯಲ್ (ವಿಸಿಪಿಎಲ್) ಗೆ ವರ್ಗಾಯಿಸಿದೆ ಎಂದು ಹೇಳಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಉಳಿದುಕೊಳ್ಳುವ ಹೆಸರು ರವೀಶ್ ಕುಮಾರ್..

ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಪ್ರಸಿದ್ಧ ಪತ್ರಕರ್ತ ದಂಪತಿ. ಎನ್.ಡಿ.ಟಿ.ವಿ ಸುದ್ದಿ ಸಂಸ್ಥೆಯ ಸ್ಥಾಪಕರು. ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್) ಎಂಬುದು 2008ರಲ್ಲಿ ಹುಟ್ಟಿಕೊಂಡ ಕಂಪನಿ. ಹತ್ತು ವರ್ಷಗಳ ಹಿಂದೆ ಈ ಸಂಸ್ಥೆಯಿಂದ 403.85 ಕೋಟಿ ರುಪಾಯಿಗಳ ಸಾಲವನ್ನು ಪಡೆಯಿತು ಎನ್.ಡಿ.ಟಿ.ವಿ. ಈ ಸಾಲ ನೀಡಿಕೆಗೆ ಬೇಕಾದ ಹಣವನ್ನು ಮುಖೇಶ್ ಅಂಬಾನಿಯವರ ರಿಲಯನ್ಸ್‌ನಿಂದ ಪಡೆದಿತ್ತು ವಿಸಿಪಿಎಲ್.

ಸಾಲಕ್ಕೆ ಬದಲಾಗಿ ಎನ್.ಡಿ.ಟಿ.ವಿಯ ಶೇ.29.18ರಷ್ಟು ಪಾಲುದಾರಿಕೆ ಪಡೆಯಬಹುದಾದ ವಾರಂಟ್‌ಗಳನ್ನು ವಿ.ಸಿ.ಪಿ.ಎಲ್‌ಗೆ ನೀಡಲಾಯಿತು. ಈ ವಾರಂಟುಗಳನ್ನು ವಿ.ಸಿ.ಪಿ.ಎಲ್ ತನಗೆ ಬೇಕಾದಾಗ ಪರಿವರ್ತಿಸಿಕೊಳ್ಳಬಹುದಿತ್ತು. ಈ ನಡುವೆ ಅದಾನಿ ಉದ್ಯಮ ಸಮೂಹ ವಿ.ಸಿ.ಪಿ.ಎಲ್‌ನ್ನು ಖರೀದಿಸಿತು. ಹಕ್ಕುಗಳನ್ನು ಚಲಾಯಿಸಿ ವಿ.ಸಿ.ಪಿ.ಎಲ್‌ಗೆ ನೀಡಲಾಗಿದ್ದ ವಾರಂಟುಗಳನ್ನು ಶೇ.29.18ರ ಪಾಲುದಾರಿಕೆಯಾಗಿ ಪರಿವರ್ತಿಸಿಕೊಂಡಿತು. ಎನ್.ಡಿ.ಟಿ.ವಿಯ ಶೇ.50ಕ್ಕಿಂತ ಹೆಚ್ಚು ಷೇರುಗಳನ್ನು ಖರೀದಿಸಿ ಸಂಸ್ಥೆಯ ಪೂರ್ಣ ನಿಯಂತ್ರಣ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತ ದಂಪತಿಗಳು ನಿರ್ದೇಶಕ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ.

ಇನ್ನು ಎನ್‌ಡಿಟಿವಿಯ ಖ್ಯಾತ ಪತ್ರಕರ್ತ, ಹಿಂದಿ ಆವೃತ್ತಿಯ ಸಂಪಾದಕ ರವೀಶ್ ಕುಮಾರ್ ಎನ್‌ಡಿಟಿವಿಯಲ್ಲಿಯೇ ಉಳಿಯುತ್ತಾರ? ಹೊರಬರುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ; ಎನ್.ಡಿ.ಟಿ.ವಿ ಅದಾನಿ ಕೈವಶ; ಮತ್ತೊಂದು ಚಾನೆಲ್ ಮೋದಿ ಪದತಲಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...