Homeಮುಖಪುಟನಿರ್ದೇಶಕ ಸ್ಥಾನಕ್ಕೆ ರಾಧಿಕಾ ರಾಯ್, ಪ್ರಣಯ್ ರಾಯ್ ರಾಜೀನಾಮೆ: RIP, ಅನ್‌ಫಾಲೋ NDTV ಎಂದ ಪ್ರಮುಖರು

ನಿರ್ದೇಶಕ ಸ್ಥಾನಕ್ಕೆ ರಾಧಿಕಾ ರಾಯ್, ಪ್ರಣಯ್ ರಾಯ್ ರಾಜೀನಾಮೆ: RIP, ಅನ್‌ಫಾಲೋ NDTV ಎಂದ ಪ್ರಮುಖರು

- Advertisement -
- Advertisement -

NDTV ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ RRPRH ನಿರ್ದೇಶಕರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೆ ಖ್ಯಾತ ಸುಪ್ರೀಂ ಕೋರ್ಟ್ ವಕೀಲರಾದ ಪ್ರಶಾಂತ್ ಭೂಷಣ್ RIP NDTV ಎಂದು ಟ್ವೀಟ್ ಮಾಡಿದರೆ, ಟಿಆರ್‌ಎಸ್ ಪಕ್ಷದ ಕಾರ್ಯಾಧ್ಯಕ್ಷ ಕೆಟಿಆರ್ Unfollowing NDTV ಎಂದು ಟ್ವೀಟ್ ಮಾಡಿದ್ದಾರೆ.

NDTV ಮಂಡಳಿಯು ರಾಜೀನಾಮೆಗಳನ್ನು ಅಂಗೀಕರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸುದೀಪ್ತ ಭಟ್ಟಾಚಾರ್ಯ, ಸಂಜಯ್ ಪುಗಾಲಿಯಾ ಮತ್ತು ಸೆಂಥಿಲ್ ಚೆಂಗಲ್ವರಾಯನ್ ಅವರನ್ನು RRPRH ಮಂಡಳಿಯ ನಿರ್ದೇಶಕರನ್ನಾಗಿ ನೇಮಿಸಿದೆ.

ಎನ್‌ಡಿಟಿವಿಯ ಪ್ರವರ್ತಕ ಸಂಸ್ಥೆ ಆರ್‌ಆರ್‌ಪಿಆರ್ ಹೋಲ್ಡಿಂಗ್ (ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್) ಸೋಮವಾರ ತನ್ನ ಈಕ್ವಿಟಿ ಬಂಡವಾಳದ 99.5 ಪ್ರತಿಶತದಷ್ಟು ಷೇರುಗಳನ್ನು ಅದಾನಿ ಸಮೂಹದ ಒಡೆತನದ ವಿಶ್ವಪ್ರಧನ್ ಕಮರ್ಷಿಯಲ್ (ವಿಸಿಪಿಎಲ್) ಗೆ ವರ್ಗಾಯಿಸಿದೆ ಎಂದು ಹೇಳಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಉಳಿದುಕೊಳ್ಳುವ ಹೆಸರು ರವೀಶ್ ಕುಮಾರ್..

ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಪ್ರಸಿದ್ಧ ಪತ್ರಕರ್ತ ದಂಪತಿ. ಎನ್.ಡಿ.ಟಿ.ವಿ ಸುದ್ದಿ ಸಂಸ್ಥೆಯ ಸ್ಥಾಪಕರು. ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (ವಿಸಿಪಿಎಲ್) ಎಂಬುದು 2008ರಲ್ಲಿ ಹುಟ್ಟಿಕೊಂಡ ಕಂಪನಿ. ಹತ್ತು ವರ್ಷಗಳ ಹಿಂದೆ ಈ ಸಂಸ್ಥೆಯಿಂದ 403.85 ಕೋಟಿ ರುಪಾಯಿಗಳ ಸಾಲವನ್ನು ಪಡೆಯಿತು ಎನ್.ಡಿ.ಟಿ.ವಿ. ಈ ಸಾಲ ನೀಡಿಕೆಗೆ ಬೇಕಾದ ಹಣವನ್ನು ಮುಖೇಶ್ ಅಂಬಾನಿಯವರ ರಿಲಯನ್ಸ್‌ನಿಂದ ಪಡೆದಿತ್ತು ವಿಸಿಪಿಎಲ್.

ಸಾಲಕ್ಕೆ ಬದಲಾಗಿ ಎನ್.ಡಿ.ಟಿ.ವಿಯ ಶೇ.29.18ರಷ್ಟು ಪಾಲುದಾರಿಕೆ ಪಡೆಯಬಹುದಾದ ವಾರಂಟ್‌ಗಳನ್ನು ವಿ.ಸಿ.ಪಿ.ಎಲ್‌ಗೆ ನೀಡಲಾಯಿತು. ಈ ವಾರಂಟುಗಳನ್ನು ವಿ.ಸಿ.ಪಿ.ಎಲ್ ತನಗೆ ಬೇಕಾದಾಗ ಪರಿವರ್ತಿಸಿಕೊಳ್ಳಬಹುದಿತ್ತು. ಈ ನಡುವೆ ಅದಾನಿ ಉದ್ಯಮ ಸಮೂಹ ವಿ.ಸಿ.ಪಿ.ಎಲ್‌ನ್ನು ಖರೀದಿಸಿತು. ಹಕ್ಕುಗಳನ್ನು ಚಲಾಯಿಸಿ ವಿ.ಸಿ.ಪಿ.ಎಲ್‌ಗೆ ನೀಡಲಾಗಿದ್ದ ವಾರಂಟುಗಳನ್ನು ಶೇ.29.18ರ ಪಾಲುದಾರಿಕೆಯಾಗಿ ಪರಿವರ್ತಿಸಿಕೊಂಡಿತು. ಎನ್.ಡಿ.ಟಿ.ವಿಯ ಶೇ.50ಕ್ಕಿಂತ ಹೆಚ್ಚು ಷೇರುಗಳನ್ನು ಖರೀದಿಸಿ ಸಂಸ್ಥೆಯ ಪೂರ್ಣ ನಿಯಂತ್ರಣ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತ ದಂಪತಿಗಳು ನಿರ್ದೇಶಕ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ.

ಇನ್ನು ಎನ್‌ಡಿಟಿವಿಯ ಖ್ಯಾತ ಪತ್ರಕರ್ತ, ಹಿಂದಿ ಆವೃತ್ತಿಯ ಸಂಪಾದಕ ರವೀಶ್ ಕುಮಾರ್ ಎನ್‌ಡಿಟಿವಿಯಲ್ಲಿಯೇ ಉಳಿಯುತ್ತಾರ? ಹೊರಬರುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ; ಎನ್.ಡಿ.ಟಿ.ವಿ ಅದಾನಿ ಕೈವಶ; ಮತ್ತೊಂದು ಚಾನೆಲ್ ಮೋದಿ ಪದತಲಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...