Homeಕ್ರೀಡೆಕ್ರಿಕೆಟ್ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

- Advertisement -
- Advertisement -

ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಭಾರತ- ನ್ಯೂಜಿಲೆಂಡ್ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಬಲಗೈ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್‌ರನ್ನು ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂದು ನಡೆಯುತ್ತಿರುವ 3ನೇ ಏಕದಿನ ಪಂದ್ಯದಿಂದಲೂ ಸಹ ಮತ್ತೆ ಅವರನ್ನು ಕೈಬಿಟ್ಟಿರುವುದಕ್ಕೆ ಅಭಿಮಾನಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. #JusticeForSanjuSamson ಹ್ಯಾಸ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್‌ ಸಹ ದನಿಗೂಡಿಸಿದ್ದಾರೆ.

ನ್ಯೂಜಿಲೆಂಡ್ ಪ್ರವಾಸದ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯಕ್ಕೆ ಮಾತ್ರ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಗಿದೆ ಎಂದು ಆಕ್ರೋಶ ಕೇಳಿಬಂದಿದೆ.

ಮೊದಲೇ ಏಕದಿನ ಪಂದ್ಯದಲ್ಲಿ 306 ರನ್‌ಗಳ ಉತ್ತಮ ಮೊತ್ತ ಗಳಿಸಿಯೂ ಭಾರತ ತಂಡ ಸೋಲು ಅನುಭವಿಸಿತ್ತು. ಆ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ 33 ರನ್ ಗಳಿಸಿದ್ದರು. ಆದರೂ ಆಲ್‌ರೌಂಡರ್ ಬೇಕೆಂಬ ಕಾರಣಕ್ಕೆ 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಕೋಕ್ ನೀಡಿ ದೀಪಕ್ ಹೂಡಾರನ್ನು ಆಡಿಸಲಾಗಿತ್ತು. ಮಳೆಯಿಂದ ಆ ಪಂದ್ಯ ರದ್ದಾಯಿತು. ಇಂದು ನಡೆದ ಮೂರನೇ ಪಂದ್ಯದಲ್ಲಿಯೂ ಸಹ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಿಲ್ಲ. ಸಂಜು ಸ್ಯಾಮ್ಸನ್ ಬದಲಿಗೆ ಕಳಪೆ ಫಾರ್ಮ್‌ನಲ್ಲಿರುವ ರಿಷಬ್ ಪಂತ್ ಕೈಬಿಡಬಹುದಿತ್ತಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂತ್ ವರ್ಸಸ್ ಸ್ಯಾಮ್ಸನ್

ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ನಡುವೆ ಹೋಲಿಕೆ ಆರಂಭಿಸಿದ್ದಾರೆ. 2015ರಲ್ಲಿಯೇ ಪಂತ್‌ಗಿಂತಲೂ ಮೊದಲೇ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಸಂಜು ಸ್ಯಾಮ್ಸನ್‌ಗೆ ಈ ಏಳು ವರ್ಷಗಳಲ್ಲಿ ಕೇವಲ 27 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಆನಂತರ ಬಂದ ರಿಷಬ್‌ ಪಂತ್‌ಗೆ 95 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಅವಕಾಶ ನೀಡಿದ್ದು ಏಕೆ ಎಂದು ಪ್ರಶ್ನಿಸುತ್ತಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್‌ರವರ ಸರಾಸರಿ 6 ಇದ್ದರೆ ರಿಷಬ್ ಪಂತ್ ಸರಾಸರಿ ಕೇವಲ 35 ಇದೆ. ಆದರೂ ರಿಷಬ್ ಪಂತ್‌ಗೆ ಏಕೆ ಅವಕಾಶ? ನ್ಯೂಜಿಲೆಂಡ್ ವಿರುದ್ಧದ ಎರಡು ಇನ್ನಿಂಗ್ಸ್‌ಗಳಲ್ಲಿ ಪಂತ್ ಕ್ರಮವಾಗಿ  ಕೇವಲ 15, 10 ರನ್ ಗಳಿಸಿದ್ದಾರೆ ಅಷ್ಟೇ. ಆದರೂ ಅವರಿಗೆ ಅವಕಾಶವೇಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಶಶಿ ತರೂರ್, “ಪಂತ್ ನಂ.4ರಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸುವುದು ಮುಖ್ಯವಾಗಿದೆ ಎನ್ನುತ್ತಾರೆ ವಿವಿಎಸ್ ಲಕ್ಷ್ಮಣ್. ಪಂತ್ ತಮ್ಮ ಕೊನೆಯ 11 ಇನ್ನಿಂಗ್ಸ್‌ಗಳಲ್ಲಿ ಹತ್ತರಲ್ಲಿ ವಿಫಲರಾಗಿ ಔಟ್‌ ಆಫ್ ಫಾರ್ಮ್ ಇರುವ ಉತ್ತಮ ಆಟಗಾರರಾಗಿದ್ದಾರೆ; ODI ಗಳಲ್ಲಿ ಸ್ಯಾಮ್ಸನ್ ಸರಾಸರಿ 66, ಅವರು ತನ್ನ ಕೊನೆಯ ಐದು ಪಂದ್ಯಗಳಲ್ಲಿ ರನ್ ಗಳಿಸಿದ್ದಾರೆ. ಆದರೂ ಬೆಂಚ್‌ನಲ್ಲಿದ್ದಾರೆ. ಹೋಗಿ ಹುಡುಕಿಕೊಳ್ಳಿ” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇಂದು ಪಂರತ್ ಕೇವಲ 10 ರನ್‌ಗಳಿಗೆ ಔಟ್‌ ಆದ ನಂತರ ಮತ್ತೊಂದು ಟ್ವೀಟ್ ಮಾಡಿರುವ ತರೂರ್, “ಪಂತ್ ಮತ್ತೊಮ್ಮೆ ವಿಫಲವಾಗಿದ್ದಾರೆ. ಅವರಿಗೆ ವೈಟ್ ಬಾಲ್ ಕ್ರಿಕೆಟ್‌ನಿಂದ ವಿರಾಮ ಬೇಕಿದೆ. ಆದರೆ ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ನಿರಾಕರಿಸಲಾಗಿದೆ. ಅವರು ಭಾರತದ ಉತ್ತಮ ಬ್ಯಾಟ್ಸ್‌ಮನ್ ಎಂದು ನಿರೂಪಿಸಲು ಮತ್ತೆ ಐಪಿಎಲ್‌ ಬರುವವರೆಗೂ ಕಾಯಬೇಕಿದೆ” ಎಂದು ಕಿಡಿಕಾರಿದ್ದಾರೆ.

ಇನ್ನು ಸ್ಯಾಮ್ಸನ್ ಸ್ಥಾನಕ್ಕೆ ಬಂದಿದ್ದ ದೀಪಕ್ ಹೂಡಾ ಸಹ ಇಂದು ವಿಫಲರಾಗಿದ್ದಾರೆ. ಅವರು ಕೇವಲ 12 ರನ್‌ಗಳಿಗೆ ಔಟ್ ಆಗಿದ್ದಾರೆ.

ಫಿಫಾ ವರ್ಲ್ಡ್‌ಕಪ್ ಪುಟ್ಬಾಲ್ ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ ಪರವಾಗಿ ಅಭಿಮಾನಿಗಳು ಪ್ರಚಾರ ನಡೆಸಿದ್ದರು.

ಇದನ್ನೂ ಓದಿ: 2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...