Homeಕ್ರೀಡೆಕ್ರಿಕೆಟ್ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

- Advertisement -
- Advertisement -

ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಭಾರತ- ನ್ಯೂಜಿಲೆಂಡ್ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಬಲಗೈ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್‌ರನ್ನು ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂದು ನಡೆಯುತ್ತಿರುವ 3ನೇ ಏಕದಿನ ಪಂದ್ಯದಿಂದಲೂ ಸಹ ಮತ್ತೆ ಅವರನ್ನು ಕೈಬಿಟ್ಟಿರುವುದಕ್ಕೆ ಅಭಿಮಾನಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. #JusticeForSanjuSamson ಹ್ಯಾಸ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್‌ ಸಹ ದನಿಗೂಡಿಸಿದ್ದಾರೆ.

ನ್ಯೂಜಿಲೆಂಡ್ ಪ್ರವಾಸದ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯಕ್ಕೆ ಮಾತ್ರ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಗಿದೆ ಎಂದು ಆಕ್ರೋಶ ಕೇಳಿಬಂದಿದೆ.

ಮೊದಲೇ ಏಕದಿನ ಪಂದ್ಯದಲ್ಲಿ 306 ರನ್‌ಗಳ ಉತ್ತಮ ಮೊತ್ತ ಗಳಿಸಿಯೂ ಭಾರತ ತಂಡ ಸೋಲು ಅನುಭವಿಸಿತ್ತು. ಆ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ 33 ರನ್ ಗಳಿಸಿದ್ದರು. ಆದರೂ ಆಲ್‌ರೌಂಡರ್ ಬೇಕೆಂಬ ಕಾರಣಕ್ಕೆ 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಕೋಕ್ ನೀಡಿ ದೀಪಕ್ ಹೂಡಾರನ್ನು ಆಡಿಸಲಾಗಿತ್ತು. ಮಳೆಯಿಂದ ಆ ಪಂದ್ಯ ರದ್ದಾಯಿತು. ಇಂದು ನಡೆದ ಮೂರನೇ ಪಂದ್ಯದಲ್ಲಿಯೂ ಸಹ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಿಲ್ಲ. ಸಂಜು ಸ್ಯಾಮ್ಸನ್ ಬದಲಿಗೆ ಕಳಪೆ ಫಾರ್ಮ್‌ನಲ್ಲಿರುವ ರಿಷಬ್ ಪಂತ್ ಕೈಬಿಡಬಹುದಿತ್ತಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂತ್ ವರ್ಸಸ್ ಸ್ಯಾಮ್ಸನ್

ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ನಡುವೆ ಹೋಲಿಕೆ ಆರಂಭಿಸಿದ್ದಾರೆ. 2015ರಲ್ಲಿಯೇ ಪಂತ್‌ಗಿಂತಲೂ ಮೊದಲೇ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಸಂಜು ಸ್ಯಾಮ್ಸನ್‌ಗೆ ಈ ಏಳು ವರ್ಷಗಳಲ್ಲಿ ಕೇವಲ 27 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಆನಂತರ ಬಂದ ರಿಷಬ್‌ ಪಂತ್‌ಗೆ 95 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಅವಕಾಶ ನೀಡಿದ್ದು ಏಕೆ ಎಂದು ಪ್ರಶ್ನಿಸುತ್ತಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್‌ರವರ ಸರಾಸರಿ 6 ಇದ್ದರೆ ರಿಷಬ್ ಪಂತ್ ಸರಾಸರಿ ಕೇವಲ 35 ಇದೆ. ಆದರೂ ರಿಷಬ್ ಪಂತ್‌ಗೆ ಏಕೆ ಅವಕಾಶ? ನ್ಯೂಜಿಲೆಂಡ್ ವಿರುದ್ಧದ ಎರಡು ಇನ್ನಿಂಗ್ಸ್‌ಗಳಲ್ಲಿ ಪಂತ್ ಕ್ರಮವಾಗಿ  ಕೇವಲ 15, 10 ರನ್ ಗಳಿಸಿದ್ದಾರೆ ಅಷ್ಟೇ. ಆದರೂ ಅವರಿಗೆ ಅವಕಾಶವೇಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಶಶಿ ತರೂರ್, “ಪಂತ್ ನಂ.4ರಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸುವುದು ಮುಖ್ಯವಾಗಿದೆ ಎನ್ನುತ್ತಾರೆ ವಿವಿಎಸ್ ಲಕ್ಷ್ಮಣ್. ಪಂತ್ ತಮ್ಮ ಕೊನೆಯ 11 ಇನ್ನಿಂಗ್ಸ್‌ಗಳಲ್ಲಿ ಹತ್ತರಲ್ಲಿ ವಿಫಲರಾಗಿ ಔಟ್‌ ಆಫ್ ಫಾರ್ಮ್ ಇರುವ ಉತ್ತಮ ಆಟಗಾರರಾಗಿದ್ದಾರೆ; ODI ಗಳಲ್ಲಿ ಸ್ಯಾಮ್ಸನ್ ಸರಾಸರಿ 66, ಅವರು ತನ್ನ ಕೊನೆಯ ಐದು ಪಂದ್ಯಗಳಲ್ಲಿ ರನ್ ಗಳಿಸಿದ್ದಾರೆ. ಆದರೂ ಬೆಂಚ್‌ನಲ್ಲಿದ್ದಾರೆ. ಹೋಗಿ ಹುಡುಕಿಕೊಳ್ಳಿ” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇಂದು ಪಂರತ್ ಕೇವಲ 10 ರನ್‌ಗಳಿಗೆ ಔಟ್‌ ಆದ ನಂತರ ಮತ್ತೊಂದು ಟ್ವೀಟ್ ಮಾಡಿರುವ ತರೂರ್, “ಪಂತ್ ಮತ್ತೊಮ್ಮೆ ವಿಫಲವಾಗಿದ್ದಾರೆ. ಅವರಿಗೆ ವೈಟ್ ಬಾಲ್ ಕ್ರಿಕೆಟ್‌ನಿಂದ ವಿರಾಮ ಬೇಕಿದೆ. ಆದರೆ ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ನಿರಾಕರಿಸಲಾಗಿದೆ. ಅವರು ಭಾರತದ ಉತ್ತಮ ಬ್ಯಾಟ್ಸ್‌ಮನ್ ಎಂದು ನಿರೂಪಿಸಲು ಮತ್ತೆ ಐಪಿಎಲ್‌ ಬರುವವರೆಗೂ ಕಾಯಬೇಕಿದೆ” ಎಂದು ಕಿಡಿಕಾರಿದ್ದಾರೆ.

ಇನ್ನು ಸ್ಯಾಮ್ಸನ್ ಸ್ಥಾನಕ್ಕೆ ಬಂದಿದ್ದ ದೀಪಕ್ ಹೂಡಾ ಸಹ ಇಂದು ವಿಫಲರಾಗಿದ್ದಾರೆ. ಅವರು ಕೇವಲ 12 ರನ್‌ಗಳಿಗೆ ಔಟ್ ಆಗಿದ್ದಾರೆ.

ಫಿಫಾ ವರ್ಲ್ಡ್‌ಕಪ್ ಪುಟ್ಬಾಲ್ ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ ಪರವಾಗಿ ಅಭಿಮಾನಿಗಳು ಪ್ರಚಾರ ನಡೆಸಿದ್ದರು.

ಇದನ್ನೂ ಓದಿ: 2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...