Homeಕ್ರೀಡೆಕ್ರಿಕೆಟ್ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

- Advertisement -
- Advertisement -

ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಭಾರತ- ನ್ಯೂಜಿಲೆಂಡ್ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಬಲಗೈ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್‌ರನ್ನು ಕೈಬಿಟ್ಟಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂದು ನಡೆಯುತ್ತಿರುವ 3ನೇ ಏಕದಿನ ಪಂದ್ಯದಿಂದಲೂ ಸಹ ಮತ್ತೆ ಅವರನ್ನು ಕೈಬಿಟ್ಟಿರುವುದಕ್ಕೆ ಅಭಿಮಾನಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. #JusticeForSanjuSamson ಹ್ಯಾಸ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್‌ ಸಹ ದನಿಗೂಡಿಸಿದ್ದಾರೆ.

ನ್ಯೂಜಿಲೆಂಡ್ ಪ್ರವಾಸದ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯಕ್ಕೆ ಮಾತ್ರ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಗಿದೆ ಎಂದು ಆಕ್ರೋಶ ಕೇಳಿಬಂದಿದೆ.

ಮೊದಲೇ ಏಕದಿನ ಪಂದ್ಯದಲ್ಲಿ 306 ರನ್‌ಗಳ ಉತ್ತಮ ಮೊತ್ತ ಗಳಿಸಿಯೂ ಭಾರತ ತಂಡ ಸೋಲು ಅನುಭವಿಸಿತ್ತು. ಆ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ 33 ರನ್ ಗಳಿಸಿದ್ದರು. ಆದರೂ ಆಲ್‌ರೌಂಡರ್ ಬೇಕೆಂಬ ಕಾರಣಕ್ಕೆ 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಕೋಕ್ ನೀಡಿ ದೀಪಕ್ ಹೂಡಾರನ್ನು ಆಡಿಸಲಾಗಿತ್ತು. ಮಳೆಯಿಂದ ಆ ಪಂದ್ಯ ರದ್ದಾಯಿತು. ಇಂದು ನಡೆದ ಮೂರನೇ ಪಂದ್ಯದಲ್ಲಿಯೂ ಸಹ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಿಲ್ಲ. ಸಂಜು ಸ್ಯಾಮ್ಸನ್ ಬದಲಿಗೆ ಕಳಪೆ ಫಾರ್ಮ್‌ನಲ್ಲಿರುವ ರಿಷಬ್ ಪಂತ್ ಕೈಬಿಡಬಹುದಿತ್ತಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂತ್ ವರ್ಸಸ್ ಸ್ಯಾಮ್ಸನ್

ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ನಡುವೆ ಹೋಲಿಕೆ ಆರಂಭಿಸಿದ್ದಾರೆ. 2015ರಲ್ಲಿಯೇ ಪಂತ್‌ಗಿಂತಲೂ ಮೊದಲೇ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಸಂಜು ಸ್ಯಾಮ್ಸನ್‌ಗೆ ಈ ಏಳು ವರ್ಷಗಳಲ್ಲಿ ಕೇವಲ 27 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಆನಂತರ ಬಂದ ರಿಷಬ್‌ ಪಂತ್‌ಗೆ 95 ಏಕದಿನ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಅವಕಾಶ ನೀಡಿದ್ದು ಏಕೆ ಎಂದು ಪ್ರಶ್ನಿಸುತ್ತಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್‌ರವರ ಸರಾಸರಿ 6 ಇದ್ದರೆ ರಿಷಬ್ ಪಂತ್ ಸರಾಸರಿ ಕೇವಲ 35 ಇದೆ. ಆದರೂ ರಿಷಬ್ ಪಂತ್‌ಗೆ ಏಕೆ ಅವಕಾಶ? ನ್ಯೂಜಿಲೆಂಡ್ ವಿರುದ್ಧದ ಎರಡು ಇನ್ನಿಂಗ್ಸ್‌ಗಳಲ್ಲಿ ಪಂತ್ ಕ್ರಮವಾಗಿ  ಕೇವಲ 15, 10 ರನ್ ಗಳಿಸಿದ್ದಾರೆ ಅಷ್ಟೇ. ಆದರೂ ಅವರಿಗೆ ಅವಕಾಶವೇಕೆ ಎಂಬ ಪ್ರಶ್ನೆ ಕೇಳಿಬಂದಿದೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಶಶಿ ತರೂರ್, “ಪಂತ್ ನಂ.4ರಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸುವುದು ಮುಖ್ಯವಾಗಿದೆ ಎನ್ನುತ್ತಾರೆ ವಿವಿಎಸ್ ಲಕ್ಷ್ಮಣ್. ಪಂತ್ ತಮ್ಮ ಕೊನೆಯ 11 ಇನ್ನಿಂಗ್ಸ್‌ಗಳಲ್ಲಿ ಹತ್ತರಲ್ಲಿ ವಿಫಲರಾಗಿ ಔಟ್‌ ಆಫ್ ಫಾರ್ಮ್ ಇರುವ ಉತ್ತಮ ಆಟಗಾರರಾಗಿದ್ದಾರೆ; ODI ಗಳಲ್ಲಿ ಸ್ಯಾಮ್ಸನ್ ಸರಾಸರಿ 66, ಅವರು ತನ್ನ ಕೊನೆಯ ಐದು ಪಂದ್ಯಗಳಲ್ಲಿ ರನ್ ಗಳಿಸಿದ್ದಾರೆ. ಆದರೂ ಬೆಂಚ್‌ನಲ್ಲಿದ್ದಾರೆ. ಹೋಗಿ ಹುಡುಕಿಕೊಳ್ಳಿ” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇಂದು ಪಂರತ್ ಕೇವಲ 10 ರನ್‌ಗಳಿಗೆ ಔಟ್‌ ಆದ ನಂತರ ಮತ್ತೊಂದು ಟ್ವೀಟ್ ಮಾಡಿರುವ ತರೂರ್, “ಪಂತ್ ಮತ್ತೊಮ್ಮೆ ವಿಫಲವಾಗಿದ್ದಾರೆ. ಅವರಿಗೆ ವೈಟ್ ಬಾಲ್ ಕ್ರಿಕೆಟ್‌ನಿಂದ ವಿರಾಮ ಬೇಕಿದೆ. ಆದರೆ ಸಂಜು ಸ್ಯಾಮ್ಸನ್‌ಗೆ ಮತ್ತೊಂದು ಅವಕಾಶ ನಿರಾಕರಿಸಲಾಗಿದೆ. ಅವರು ಭಾರತದ ಉತ್ತಮ ಬ್ಯಾಟ್ಸ್‌ಮನ್ ಎಂದು ನಿರೂಪಿಸಲು ಮತ್ತೆ ಐಪಿಎಲ್‌ ಬರುವವರೆಗೂ ಕಾಯಬೇಕಿದೆ” ಎಂದು ಕಿಡಿಕಾರಿದ್ದಾರೆ.

ಇನ್ನು ಸ್ಯಾಮ್ಸನ್ ಸ್ಥಾನಕ್ಕೆ ಬಂದಿದ್ದ ದೀಪಕ್ ಹೂಡಾ ಸಹ ಇಂದು ವಿಫಲರಾಗಿದ್ದಾರೆ. ಅವರು ಕೇವಲ 12 ರನ್‌ಗಳಿಗೆ ಔಟ್ ಆಗಿದ್ದಾರೆ.

ಫಿಫಾ ವರ್ಲ್ಡ್‌ಕಪ್ ಪುಟ್ಬಾಲ್ ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ ಪರವಾಗಿ ಅಭಿಮಾನಿಗಳು ಪ್ರಚಾರ ನಡೆಸಿದ್ದರು.

ಇದನ್ನೂ ಓದಿ: 2024ರ ಟಿ20 ವಿಶ್ವಕಪ್‌ಗೆ 20 ತಂಡಗಳು!: ಹೊಸ ಫಾರ್ಮ್ಯಾಟ್ ಘೋಷಿಸಿದ ಐಸಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...