HomeಮುಖಪುಟNDTV ರಾಜೀನಾಮೆ ಬೆನ್ನಲ್ಲೆ ಯೂಟ್ಯೂಬ್ ಚಾನೆಲ್ ತೆರೆದ ರವೀಶ್ ಕುಮಾರ್: ಈಗಾಗಲೇ 10 ಲಕ್ಷದಷ್ಟು ಚಂದಾದಾರರು!

NDTV ರಾಜೀನಾಮೆ ಬೆನ್ನಲ್ಲೆ ಯೂಟ್ಯೂಬ್ ಚಾನೆಲ್ ತೆರೆದ ರವೀಶ್ ಕುಮಾರ್: ಈಗಾಗಲೇ 10 ಲಕ್ಷದಷ್ಟು ಚಂದಾದಾರರು!

- Advertisement -
- Advertisement -

NDTV ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ರವೀಶ್ ಕುಮಾರ್ ರಾಜೀನಾಮೆ ಪ್ರಕಟಿಸಿದ ಬೆನ್ನಲ್ಲೆ ‘ರವೀಶ್ ಕುಮಾರ್ ಅಫಿಶಿಯಲ್’ ಹೆಸರಿನ ಯೂಟ್ಯೂಬ್ ಚಾನೆಲ್‌ ಅನ್ನು ಆರಂಭಿಸಿದ್ದಾರೆ. ತಮ್ಮ ಮೊದಲ ವಿಡಿಯೋದಲ್ಲಿ “ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಿರುವ ಸಮಯದಲ್ಲಿ ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಪತ್ರಕರ್ತರನ್ನು ಬೆಂಬಲಿಸುವುದನ್ನು ಮುಂದುವರಿಸಬೇಕೆಂದು” ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

“ದೇಶದ ನ್ಯಾಯಾಂಗವು ತತ್ತರಿಸಿದ ಸಮಯದಲ್ಲಿ, ಅಧಿಕಾರದಲ್ಲಿರುವ ಜನರು ಅನೇಕರ ಧ್ವನಿಯನ್ನು ಅಡಗಿಸಲು ಪ್ರಯತ್ನಿಸಿದಾಗ, ದೇಶದ ಜನರು ನನ್ನ ಮೇಲೆ ಅಪಾರ ಪ್ರೀತಿಯನ್ನು ತೋರಿಸಿದರು. ನನ್ನ ಪ್ರೇಕ್ಷಕರಿಲ್ಲದೆ ನಾನು ಏನನ್ನೂ ಮಾಡಲು ಸಾಧ್ಯವಾಗುತ್ತಿರಲಿಲ್ಲ. ನನ್ನ ಕೆಲಸವನ್ನು ಹೊಸ ಯೂಟ್ಯೂಬ್ ಚಾನೆಲ್ ಮತ್ತು ಫೇಸ್‌ಬುಕ್ ಪುಟದ ಮೂಲಕ ಮುಂದುವರೆಸುತ್ತಿದ್ದು, ಅದನ್ನು ಬೆಂಬಲಿಸುತ್ತೀರೆಂದು ನಂಬಿದ್ದೇನೆ” ಎಂದು ರವೀಶ್ ತಮ್ಮ ಯುಟ್ಯೂಬ್ ವೀಡಿಯೊದಲ್ಲಿ ಹೇಳಿದ್ದಾರೆ.

ನನ್ನ ಅಸ್ತಿತ್ವದಲ್ಲಿ ನೀವೆಲ್ಲರೂ ಸೇರಿದ್ದೀರಿ. ನಿಮ್ಮ ಪ್ರೀತಿಯೇ ನನ್ನ ಸಂಪತ್ತು. ಇದು ನಿಮ್ಮ youtube ಚಾನಲ್‌ನಲ್ಲಿನ ನನ್ನ ಹೊಸ ವಿಳಾಸವಾಗಿದೆ. ಗೋದಿ ಮೀಡಿಯಾದ ದಾಸ್ಯದ ವಿರುದ್ಧ ಎಲ್ಲರೂ ಹೋರಾಡಬೇಕಿದೆ ಎಂದು ರವೀಶ್ ಕುಮಾರ್ ಹೇಳಿದ್ದಾರೆ.

ನಾನು ರಾಜೀನಾಮೆ ನೀಡಿದ್ದೇನೆ. ಈ ರಾಜೀನಾಮೆ ನಿಮ್ಮ ಗೌರವಾರ್ಥವಾಗಿದೆ. ಕೋಟ್ಯಾಂತರ ವೀಕ್ಷಕರ ಆತ್ಮಗೌರವ ಒಬ್ಬರ ಕೆಲಸ ಮತ್ತು ಅಸಹಾಯಕತೆಗಿಂತ ಬಹಳ ದೊಡ್ಡದು. ನಿನ್ನ ಪ್ರೀತಿಯ ಮುಂದೆ ತಲೆಬಾಗುತ್ತೇನೆ ಎಂದು ಅವರು ಹೇಳಿದ್ದಾರೆ.

ರವೀಶ್ ಕುಮಾರ್ ಅಫಿಶಿಯಲ್ ಯೂಟ್ಯೂಬ್ ಚಾನೆಲ್‌ಗೆ ಈಗಾಗಲೇ 10 ಲಕ್ಷದಷ್ಟು ಚಂದಾದಾರರಾಗಿದ್ದಾರೆ. ಕೆಲವೇ ದಿನಗಳಲ್ಲಿ ಈ ಸಂಖ್ಯೆ ಭಾರೀ ಹೆಚ್ಚಾಗುವ ಸಾಧ್ಯತೆಯಿದೆ.

ರವೀಶ್ ಕುಮಾರ್ 1996 ರಲ್ಲಿ NDTV ಸೇರಿದ್ದರು. NDTV ಇಂಡಿಯಾ (ಹಿಂದಿ ಆವೃತ್ತಿ)ಯಲ್ಲಿ ಹಮ್ ಲೋಗ್, ರವೀಶ್ ಕಿ ರಿಪೋರ್ಟ್, ದೇಶ್ ಕಿ ಬಾತ್ ಮತ್ತು ಪ್ರೈಮ್ ಟೈಮ್‌ನಂತಹ ಹಲವಾರು ಸುದ್ದಿ ಆಧಾರಿತ ಕಾರ್ಯಕ್ರಮಗಳ ನಿರೂಪಕರಾಗಿದ್ದರು. ಅವರು 2019 ರಲ್ಲಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಜೊತೆಗೆ ಎರಡು ಬಾರಿ ಪತ್ರಿಕೋದ್ಯಮದಲ್ಲಿ ರಾಮನಾಥ್ ಗೋಯೆಂಕಾ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಗೌರಿ ಲಂಕೇಶ್ ಸ್ಮಾರಕ ಪ್ರಶಸ್ತಿಗೂ ಆಯ್ಕೆಯಾಗಿದ್ದರು.

ಇದನ್ನೂ ಓದಿ: ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಉಳಿದುಕೊಳ್ಳುವ ಹೆಸರು ರವೀಶ್ ಕುಮಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...