Homeಸಿನಿಮಾಕ್ರೀಡೆಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

ಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

- Advertisement -
- Advertisement -

ಬುಧವಾರ ರಾತ್ರಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡದ ಎದುರು 20 ಪಾಯಿಂಟ್‌ಗಳ ಅಂತರದಿಂದ ಬೆಂಗಳೂರು ಬುಲ್ಸ್ ತಂಡ ಹೀನಾಯ ಸೋಲು ಕಂಡಿತು. ಆ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ನೇರ ಸೆಮಿಫೈನಲ್ ತಲುಪುವುದು ಅವಕಾಶದಿಂದ ದೂರ ಸರಿಯುತ್ತಿದೆ.

ಈ ಹಿಂದೆ ಬೆಂಗಾಲ್ ವಾರಿಯರ್ಸ್ ಮತ್ತು ಪುಣೇರಿ ಪಲ್ಟಾನ್ ವಿರುದ್ಧ ಸೋತಿದ್ದ ಬೆಂಗಳೂರು ಬುಲ್ಸ್, ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಎರಡನೇ ಸ್ಥಾನ ಪಡೆದಿತ್ತು. ಆದರೆ ಬುಧವಾರ ಎಲ್ಲಾ ಡಿಫೆಂಡರ್‌ಗಳು ವಿಫಲರಾದ ಕಾರಣ 25-45 ಅಂತರದಲ್ಲಿ ಸೋಲು ಕಂಡಿತು. ರೈಡಿಂಗ್‌ನಲ್ಲಿ ಭರತ್ ಸೂಪರ್ ಟೆನ್ ಗಳಿಸಿದರೂ ಸಹ ಡೆಫೆಂಡರ್‌ಗಳು ಕೈಚೆಲ್ಲಿ ಅಂಕಗಳು ಸೋರಿ ಹೋದವು. ಗೆದ್ದ ಜೈಪುರ್ ತಂಡ 69 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಅಷ್ಟೇ ಅಂಕ ಪಡೆದಿರುವ ಪುಣೇರಿ ಪಲ್ಟಾನ್ ಎರಡನೇ ಸ್ಥಾನಲ್ಲಿದೆ. ಈ ಎರಡೂ ತಂಡಗಳು ಗೆಲವಿನ ಲಯದಲ್ಲಿರುವ ಕಾರಣ ಇವು ಕೊನೆಯವರೆಗೂ ಅಂಕಪಟ್ಟಿಯಲ್ಲಿ ಮೊದಲು ಮತ್ತು ಎರಡನೇ ಸ್ಥಾನದಲ್ಲಿಯೇ ಉಳಿಯುವ ಸಾಧ್ಯತೆಯಿದ್ದು, ಒಂದಕ್ಕಿಂತ ಹೆಚ್ಚು ಪಂದ್ಯ ಸೋಲದಿದ್ದರೆ ನೇರವಾಗಿ ಸೆಮಿಫೈನಲ್ ತಲುಪುವ ಅವಕಾಶ ಹೊಂದಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಇದುವರೆಗೆ ಆಡಿದ 19 ಪಂದ್ಯಗಳಲ್ಲಿ 11 ಗೆಲುವು, 7 ಸೋಲು ಮತ್ತು ಒಂದು ಟೈನೊಂದಿಗೆ 63 ಅಂಕ ಗಳಿಸಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಇನ್ನೂ ಲೀಗ್ ಹಂತದಲ್ಲಿ ಮೂರು ಪಂದ್ಯಗಳು ಉಳಿದಿದ್ದು ಎರಡು ಪಂದ್ಯ ಗೆದ್ದರೆ ಸುಲಭವಾಗಿ ಪ್ಲೇ ಆಫ್‌ ಪ್ರವೇಶಿಸಲಿದೆ. ಒಂದು ವೇಳೆ ಮೂರಕ್ಕೆ ಮೂರನ್ನು ಸೋತರೆ ಅದು ಪ್ಲೇ ಪ್ರವೇಶಿಸುವುದು ಕಷ್ಟವಾಗುತ್ತದೆ. ಆಗ ಉಳಿದ ತಂಡಗಳು ಸೋಲನ್ನು ಬಯಸಬೇಕಾಗುತ್ತದೆ.

ಪ್ಲೆ ಆಫ್‌ ರೇಸ್‌ನಲ್ಲಿ 8 ತಂಡಗಳು

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ಈಗಾಗಲೇ ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿವೆ. ಉಳಿದ ನಾಲ್ಕು ಸ್ಥಾನಗಳಿಗಾಗಿ ಬೆಂಗಳೂರು ಬುಲ್ಸ್ (63 ಅಂಕ), ಯುಪಿ ಯೋಧ (60 ಅಂಕ), ತಮಿಳು ತಲೈವಾಸ್ (56 ಅಂಕ), ದಬಾಂಗ್ ಡೆಲ್ಲಿ (54 ಅಂಕ), ಯು ಮುಂಬಾ (50 ಅಂಕ), ಬೆಂಗಾಲ್ ವಾರಿಯರ್ಸ್ (49 ಅಂಕ) ಪಟ್ನಾ ಪೈರೇಟ್ಸ್ (48 ಅಂಕ) ಮತ್ತು ಹರ್ಯಾಣ ಸ್ಟೀಲರ್ಸ್ (46 ಅಂಕ) ಸೇರಿ ಒಟ್ಟು 8 ತಂಡಗಳು ಸೆಣಸಾಟ ನಡೆಸುತ್ತಿವೆ. ಕೆಲವು ತಂಡಗಳಿಗೆ ಇನ್ನೂ 4 ಪಂದ್ಯಗಳಿದ್ದು ಎಲ್ಲವನ್ನು ಗೆದ್ದವರು ಪ್ಲೇ ಆಫ್ ಪ್ರವೇಶಿಸಬಹುದಾಗಿದೆ. ಆದರೆ 41 ಅಂಕ ಗಳಿಸಿರುವ ಗುಜರಾತ್ ಜೈಂಟ್ಸ್ ಮತ್ತು 15 ಅಂಕ ಗಳಿಸಿರುವ ತೆಲುಗು ಟೈಟನ್ಸ್ ಮಾತ್ರ ಪ್ಲೇ ಆಪ್‌ ರೇಸ್‌ನಿಂದ ಹೊರಬಿದ್ದಿವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ: ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...