Homeಸಿನಿಮಾಕ್ರೀಡೆಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

ಹೀನಾಯವಾಗಿ ಸೋತ ಬೆಂಗಳೂರು ಬುಲ್ಸ್: ಕ್ಷೀಣಿಸಿದ ನೇರ ಸೆಮಿಫೈನಲ್ ತಲುಪುವ ಸಾಧ್ಯತೆ

- Advertisement -
- Advertisement -

ಬುಧವಾರ ರಾತ್ರಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡದ ಎದುರು 20 ಪಾಯಿಂಟ್‌ಗಳ ಅಂತರದಿಂದ ಬೆಂಗಳೂರು ಬುಲ್ಸ್ ತಂಡ ಹೀನಾಯ ಸೋಲು ಕಂಡಿತು. ಆ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ನೇರ ಸೆಮಿಫೈನಲ್ ತಲುಪುವುದು ಅವಕಾಶದಿಂದ ದೂರ ಸರಿಯುತ್ತಿದೆ.

ಈ ಹಿಂದೆ ಬೆಂಗಾಲ್ ವಾರಿಯರ್ಸ್ ಮತ್ತು ಪುಣೇರಿ ಪಲ್ಟಾನ್ ವಿರುದ್ಧ ಸೋತಿದ್ದ ಬೆಂಗಳೂರು ಬುಲ್ಸ್, ದಬಾಂಗ್ ಡೆಲ್ಲಿ ವಿರುದ್ಧ ಗೆದ್ದು ಎರಡನೇ ಸ್ಥಾನ ಪಡೆದಿತ್ತು. ಆದರೆ ಬುಧವಾರ ಎಲ್ಲಾ ಡಿಫೆಂಡರ್‌ಗಳು ವಿಫಲರಾದ ಕಾರಣ 25-45 ಅಂತರದಲ್ಲಿ ಸೋಲು ಕಂಡಿತು. ರೈಡಿಂಗ್‌ನಲ್ಲಿ ಭರತ್ ಸೂಪರ್ ಟೆನ್ ಗಳಿಸಿದರೂ ಸಹ ಡೆಫೆಂಡರ್‌ಗಳು ಕೈಚೆಲ್ಲಿ ಅಂಕಗಳು ಸೋರಿ ಹೋದವು. ಗೆದ್ದ ಜೈಪುರ್ ತಂಡ 69 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಅಷ್ಟೇ ಅಂಕ ಪಡೆದಿರುವ ಪುಣೇರಿ ಪಲ್ಟಾನ್ ಎರಡನೇ ಸ್ಥಾನಲ್ಲಿದೆ. ಈ ಎರಡೂ ತಂಡಗಳು ಗೆಲವಿನ ಲಯದಲ್ಲಿರುವ ಕಾರಣ ಇವು ಕೊನೆಯವರೆಗೂ ಅಂಕಪಟ್ಟಿಯಲ್ಲಿ ಮೊದಲು ಮತ್ತು ಎರಡನೇ ಸ್ಥಾನದಲ್ಲಿಯೇ ಉಳಿಯುವ ಸಾಧ್ಯತೆಯಿದ್ದು, ಒಂದಕ್ಕಿಂತ ಹೆಚ್ಚು ಪಂದ್ಯ ಸೋಲದಿದ್ದರೆ ನೇರವಾಗಿ ಸೆಮಿಫೈನಲ್ ತಲುಪುವ ಅವಕಾಶ ಹೊಂದಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಇದುವರೆಗೆ ಆಡಿದ 19 ಪಂದ್ಯಗಳಲ್ಲಿ 11 ಗೆಲುವು, 7 ಸೋಲು ಮತ್ತು ಒಂದು ಟೈನೊಂದಿಗೆ 63 ಅಂಕ ಗಳಿಸಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಇನ್ನೂ ಲೀಗ್ ಹಂತದಲ್ಲಿ ಮೂರು ಪಂದ್ಯಗಳು ಉಳಿದಿದ್ದು ಎರಡು ಪಂದ್ಯ ಗೆದ್ದರೆ ಸುಲಭವಾಗಿ ಪ್ಲೇ ಆಫ್‌ ಪ್ರವೇಶಿಸಲಿದೆ. ಒಂದು ವೇಳೆ ಮೂರಕ್ಕೆ ಮೂರನ್ನು ಸೋತರೆ ಅದು ಪ್ಲೇ ಪ್ರವೇಶಿಸುವುದು ಕಷ್ಟವಾಗುತ್ತದೆ. ಆಗ ಉಳಿದ ತಂಡಗಳು ಸೋಲನ್ನು ಬಯಸಬೇಕಾಗುತ್ತದೆ.

ಪ್ಲೆ ಆಫ್‌ ರೇಸ್‌ನಲ್ಲಿ 8 ತಂಡಗಳು

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ಈಗಾಗಲೇ ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿವೆ. ಉಳಿದ ನಾಲ್ಕು ಸ್ಥಾನಗಳಿಗಾಗಿ ಬೆಂಗಳೂರು ಬುಲ್ಸ್ (63 ಅಂಕ), ಯುಪಿ ಯೋಧ (60 ಅಂಕ), ತಮಿಳು ತಲೈವಾಸ್ (56 ಅಂಕ), ದಬಾಂಗ್ ಡೆಲ್ಲಿ (54 ಅಂಕ), ಯು ಮುಂಬಾ (50 ಅಂಕ), ಬೆಂಗಾಲ್ ವಾರಿಯರ್ಸ್ (49 ಅಂಕ) ಪಟ್ನಾ ಪೈರೇಟ್ಸ್ (48 ಅಂಕ) ಮತ್ತು ಹರ್ಯಾಣ ಸ್ಟೀಲರ್ಸ್ (46 ಅಂಕ) ಸೇರಿ ಒಟ್ಟು 8 ತಂಡಗಳು ಸೆಣಸಾಟ ನಡೆಸುತ್ತಿವೆ. ಕೆಲವು ತಂಡಗಳಿಗೆ ಇನ್ನೂ 4 ಪಂದ್ಯಗಳಿದ್ದು ಎಲ್ಲವನ್ನು ಗೆದ್ದವರು ಪ್ಲೇ ಆಫ್ ಪ್ರವೇಶಿಸಬಹುದಾಗಿದೆ. ಆದರೆ 41 ಅಂಕ ಗಳಿಸಿರುವ ಗುಜರಾತ್ ಜೈಂಟ್ಸ್ ಮತ್ತು 15 ಅಂಕ ಗಳಿಸಿರುವ ತೆಲುಗು ಟೈಟನ್ಸ್ ಮಾತ್ರ ಪ್ಲೇ ಆಪ್‌ ರೇಸ್‌ನಿಂದ ಹೊರಬಿದ್ದಿವೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ: ಮತ್ತೆ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಸಂಸದ ಶಶಿ ತರೂರ್ ಸಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...