Homeಮುಖಪುಟಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ?

- Advertisement -
- Advertisement -

ಸೆಪ್ಟಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‌ನ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುವ ಸಂದರ್ಭದಲ್ಲಿ ಆಂಬುಲೆನ್ಸ್ ಬಂದಾಗ ಅದಕ್ಕೆ ದಾರಿ ಮಾಡಿಕೊಟ್ಟಿದ್ದರು. ನವೆಂಬರ್ 09ರಂದು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮೂರು ದಿನ ಬಾಕಿ ಇರುವಾಗ ಕಾಂಗ್ರಾದಲ್ಲಿ ಮೋದಿಯವರು ಚುನಾವಣಾ ಪ್ರಚಾರ ನಡೆಸುತ್ತಿದ್ದಾಗಲೂ ಆಂಬುಲೆನ್ಸ್ ಒಂದು ಎದುರಾಗಿತ್ತು. ಆಗಲೂ ಪ್ರಧಾನಿಗಳು ಕಾದು ದಾರಿ ಬಿಟ್ಟು ಕೊಟ್ಟಿದ್ದರು. ನಿನ್ನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿಯವರು ರೋಡ್ ಶೋ ನಡೆಸುವ ವೇಲೆ ಆಂಬುಲೆನ್ಸ್ ಒಂದೇ ಅದೇ ರಸ್ತೆಯಲ್ಲಿ ಬಂದಿದೆ. ಮತ್ತೆ ಮೋದಿಯವರು ಅದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷ ಪ್ರಧಾನಿ ಮೋದಿ ರೋಡ್‌ ಶೋಗಳಲ್ಲಿ ಪದೇ ಪದೇ ಆಂಬುಲೆನ್ಸ್‌ಗಳು ಬರುವುದೇಕೆ? ಇದು ಭದ್ರತಾ ವೈಫಲ್ಯವಲ್ಲವೇ? ಎಂದು ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುವ ರಸ್ತೆಯಲ್ಲಿ ಅವರ ಬೆಂಗಾವಲು ವಾಹನಗಳನ್ನು ಬಿಟ್ಟರೆ ಬೇರೆ ಯಾವುದೇ ವಾಹನಗಳಿಗೆ ಪ್ರವೇಶ ನೀಡದೇ ಬದಲಿ ಮಾರ್ಗವನ್ನು ಸೂಚಿಸಲಾಗಿತ್ತು. ಆ ರಸ್ತೆಯಲ್ಲಿ ನೂರಾರು ಪೊಲೀಸರ ಕಣ್ತಪ್ಪಿಸಿ ಆಂಬುಲೆನ್ಸ್ ಬರಲು ಹೇಗೆ ಸಾಧ್ಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಎದ್ದಿದೆ.

ಪ್ರಧಾನಿ ಮೋದಿಯವರ ರೋಡ್ ಶೋಗಳಲ್ಲಿ ಆಂಬುಲೆನ್ಸ್‌ಗಳು ಬರುವುದು, ಅದಕ್ಕೆ ಪ್ರಧಾನಿಗಳು ದಾರಿ ಬಿಟ್ಟುಕೊಡುವುದು ಪೂರ್ವನಿಯೋಜಿತ ನಾಟಕ ಎಂದು ಆರೋಪಿಸಿರುವ ಕಾಂಗ್ರೆಸ್, ಆಂಬುಲೆನ್ಸ್‌ ಅನ್ನು ಬಿಜೆಪಿಯ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಬೇಕು ಎಂದು ವ್ಯಂಗ್ಯವಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಎರಡು ಬೇಡಿಕೆಗಳನ್ನಿಟ್ಟಿದ್ದಾರೆ. ಮೊದಲನೇಯದಾಗಿ “ಪ್ರತಿಬಾರಿಯೂ ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಮಾಡುವಾಗ ಅಲ್ಲಿ ಆಂಬುಲೆನ್ಸ್ ಬರುತ್ತದೆ ಮತ್ತು ಅವರು ದಾರಿ ಬಿಟ್ಟುಕೊಡುವ ವರದಿಯಾಗುತ್ತಿದೆ. ಇದು ಕಾಕತಾಳೀಯವಲ್ಲ. ಬದಲಿಗೆ ಪ್ರಧಾನಿಯವರ ಗಂಭೀರ ಭದ್ರತಾ ಲೋಪವಾಗಿದೆ. ಈ ಕುರಿತು ಯಾವುದೇ ಪಕ್ಷಪಾತವಿಲ್ಲದೆ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಎರಡನೇಯದಾಗಿ ಪದೇ ಪದೇ ಬರುವ ಆಂಬುಲೆನ್ಸ್‌ ಅನ್ನು ಬಿಜೆಪಿಯ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಬೇಕು ಎಂದಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಕನಿಷ್ಟ 5 ಬಾರಿ ಪ್ರಧಾನಿಯವರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಆಂಬುಲೆನ್ಸ್ ಕಾಣಿಸಿಕೊಂಡಿದ್ದಾಗಿ ಮಾಧ್ಯಮಗಳು ವರದಿ ಮಾಡಿದ ಪತ್ರಿಕಾ ತುಣುಕುಗಳಲ್ಲಿನ ದಿನಾಂಕಗಳನ್ನು ಮಾರ್ಕ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಪ್ರತಿ ಚುನಾವಣಾ ರ್ಯಾಲಿಯಲ್ಲಿ, ಯಾವುದೇ ಭದ್ರತಾ ತಪಾಸಣೆಯಿಲ್ಲದೆ ಆಂಬ್ಯುಲೆನ್ಸ್‌ ಪ್ರಧಾನಿಯವರ ಅತ್ಯಂತ ಸಮೀಪಕ್ಕೆ ಬರುವುದು, ಅವರ ವಾಹನವನ್ನು ಹಿಂದಿಕ್ಕುವುದು ಅವರ ಭದ್ರತೆಯಲ್ಲಿ ಆಳವಾದ ಲೋಪವಾಗಿದೆ. ನಿಮ್ಮ ಅಭಿಪ್ರಾಯ ಏನು?” ಎಂದು ಅವರು ಪ್ರಶ್ನಿಸಿದ್ದಾರೆ.

ನವೆಂಬರ್ 09ರಂದು ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಪ್ರಧಾನಿಗಳು ಆಂಬುಲೆನ್ಸ್‌ಗೆ ದಾರಿ ಬಿಟ್ಟಿಕೊಟ್ಟಿದ್ದನ್ನು ದೊಡ್ಡ ನಾಟಕ ಎಂದು ಟಿಆರ್‌ಎಸ್ ಪಕ್ಷದ ಸಾಮಾಜಿಕ ಜಾಲತಾಣ ಜವಾಬ್ದಾರಿ ಹೊತ್ತಿರುವ ವೈ.ಸತೀಶ್ ರೆಡ್ಡಿ ಆರೋಪಿಸಿದ್ದರು.

“ಆಂಬ್ಯುಲೆನ್ಸ್‌ ಹಾದುಹೋಗುವಿಕೆಯನ್ನು ಸೆರೆಹಿಡಿಯಲು ಮತ್ತು ಅದೇ ದೃಶ್ಯವನ್ನು ವಿವಿಧ ಕೋನಗಳಲ್ಲಿ ಚಿತ್ರೀಕರಿಸಲು ಕ್ಯಾಮರ ಸಿಬ್ಬಂದಿಗೆ ತಕ್ಷಣವೇ ತಿಳಿಸಲಾಗುತ್ತದೆ. ಅಲ್ಲದೆ, ಬೆಂಗಾವಲು ಪಡೆಯನ್ನು ಅದಕ್ಕೆ ತಕ್ಕಂತೆ ಹೊಂದಿಸಲಾಗಿರುತ್ತದೆ. ಆದ್ದರಿಂದ ಆಂಬ್ಯುಲೆನ್ಸ್ ಮೋದಿಯವರ ಕಾರಿನಿಂದ ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದು ಟ್ವೀಟ್ ಮಾಡುವ ಮೂಲಕ ಇದೊಂದು ಪ್ರಹಸನ ಎಂದು ಕರೆದಿದ್ದರು.

ಇದನ್ನೂ ಓದಿ: ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...