Homeಅಂಕಣಗಳುಅನಂತನಾಗ್ ಮೋದಿ ಮೆಚ್ಚಿದ್ದರಲ್ಲಿ ಅಚ್ಚರಿಯೇನಿಲ್ಲ!

ಅನಂತನಾಗ್ ಮೋದಿ ಮೆಚ್ಚಿದ್ದರಲ್ಲಿ ಅಚ್ಚರಿಯೇನಿಲ್ಲ!

- Advertisement -
- Advertisement -

ನಮ್ಮ ಸಿನಿಮಾರಂಗದ ಒಂದೆರೆಡು ಸುದ್ದಿಗಳು ಶಾನೆ ಸ್ವಾರಸ್ಯವಾಗಿವೆಯಂತಲ್ಲಾ! ಗೋಳಿನ ದನಿಯಿಂದ ಹಾಸ್ಯನಟನಾಗಿ ಮೇಲೆ ಬಂದ ಕೋಮಲ್, ಅದು ಬಿಟ್ಟು ಹೀರೋ ಆದಾಗ ಜನ ತಿರಸ್ಕರಿಸಿದರು. ತನ್ನನ್ನು ಜನ ಹೇಗೆ ನೋಡಲು ಬಯಸುತ್ತಾರೆ ಎಂಬುದನ್ನು ಯಾವುದೇ ನಟ ಮೊದಲು ಗ್ರಹಿಸಿಕೊಳ್ಳಬೇಕು. ಅದಾಗದಿದ್ದರೆ, ಜೋತಿಷ್ಯದ ಮೊರೆ ಹೋಗುತ್ತಾರೆ; ಆದರೆ ಕೋಮಲ್ ಜ್ಯೋತಿಷ್ಯಕ್ಕಾಗಿ ದೂರ ಹೋಗದೆ ತನ್ನ ಅಣ್ಣನನ್ನೆ ಆಶ್ರಯಿಸಿದ್ದಾರೆ. ನವರಸ ನಾಯಕ ಜಗ್ಗೇಶ್ ಈಗ ಜ್ಯೋತಿಷಿಯಂತೆ ಜಾತಕ ಹಿಡಿದು ಗ್ರಹಗತಿಗಳ ಸ್ಥಾನ ಗುರುತಿಸಿ ನಿಮಗೆ ಯಾವ ಗ್ರಹದ ಕಾಟವಿದೆ ಎಂದೆಲ್ಲಾ ಕರಾರುವಕ್ಕಾಗಿ ಹೇಳುತ್ತಾರಂತೆ; ಅಲ್ಲಿಗೆ ಈ ಮಾಜಿ ಹಾಸ್ಯನಟ ದಶರಸ ನಟನಾಗಿರುವ ಸುದ್ದಿ ಕೋಮಲ್‌ರಿಂದ ಹೊರಬಿದ್ದಿದೆ. ನಿನಗೆ ಕೇತು ದೆಸೆಯಿಂದ ಕೇಡಾಗಿದೆ ಎಂದು ತಮ್ಮನಿಗೆ ಹೇಳಿ ಆತ ಐದು ವರ್ಷ ಮೂಲೆಯಲ್ಲಿ ಕೂರುವಂತೆ ಮಾಡಿದ ಈ ಆಧುನಿಕ ಜ್ಯೋತಿಷಿ ಆ ಅವಧಿಯಲ್ಲಿ ತಾನೇ ಮೆರೆಯಲು ಯೋಚಿಸಿದ್ದರಾ? ದಾಯಾದಿ ಮತ್ಸರ ಹೀಗೆ ಎಂದು ಹೇಳಲು ಬರುವುದಿಲ್ಲ. ಕೇತುವಿನಿಂದ ಕೇಡಾಗುತ್ತದೆಂದು ಐದು ವರ್ಷ ಮನೆಯಲ್ಲಿರಲು ತನ್ನ ತಮ್ಮನಿಗೆ ಹೇಳಿದ ಜಗ್ಗೇಶ ತನ್ನ ಜಾತಕ ಕುಂಡಲಿ ಹರಡಿಕೊಂಡು ಗ್ರಹಗತಿಗಳ ಸ್ಥಾನಗಳನ್ನು ಗ್ರಹಿಸಿ ತನ್ನ ಸಿನಿಮಾ ತೋತಾಪುರಿ ತೋಪೆದ್ದೋಗುವ ಸತ್ಯವನ್ನು ಗ್ರಹಿಸಬಹುದಿತಲ್ಲಾ. ಆದ್ದರಿಂದ ಧಿಡೀರನೆ ಉದ್ಭವಿಸಿರುವ ಈ ಉದಯೋನ್ಮುಖ ಬಿಜೆಪಿ ಜ್ಯೋತಿಷಿಯಿಂದ ಹುಷಾರಾಗಿರಿ ಎಂದು ಕಾಂಗೈಗಳು ಪ್ರಚಾರ ಮಾಡುತ್ತಿವೆಯಂತಲ್ಲಾ, ಥೂತ್ತೇರಿ.

******

ಮಾತನಾಡಿಸಿದ ಕೂಡಲೇ ಸೋಮಾರಿ ಮತ್ತು ಜವಬ್ದಾರಿಯಿಲ್ಲದ ಸ್ವಾರ್ಥಿಯಂತೆ ಕಾಣುವ ಅನಂತನಾಗ್ ಹೀರೋ ಆಗಿ ನಲವತ್ತಾರು ವರ್ಷ ತುಂಬಿರುವ ಈ ಸಂದರ್ಭದಲ್ಲಿ ನಾನು ಮೋದಿಯ ಕಟ್ಟಾ ಅಭಿಮಾನಿ ಎಂದುಬಿಟ್ಟಿದ್ದಾರಲ್ಲಾ. ಇಂತಹ ಮಾತು ಇಂತವರ ಬಾಯಲ್ಲಿ ಸುಮ್ಮಸುಮ್ಮನೆ ಬರುವುದಿಲ್ಲ. ಯಾಕೆಂದರೆ ಇಂತವರ ಬಾಯನ್ನೇ ನೋಡುತ್ತಿರುವ ಆರೆಸ್ಸೆಸ್ಸಿಗರು ತಮ್ಮ ಅಜೆಂಡಾಗಳ ರಿಜಿಸ್ಟರಿನಲ್ಲಿ ತಮ್ಮ ಪರ ಮಾತನಾಡಿದವರ ಹೆಸರನ್ನು ದಾಖಲಿಸಿಕೊಂಡು ಅವರನ್ನು ಸ್ಥಾನಮಾನ ಬಿರುದು ಬಾವಲಿಗಳ ಪಟ್ಟಿಗಳಿಗೆ ಸೇರಿಸಿಕೊಳ್ಳುತ್ತವೆ. 1985ರಲ್ಲಿ ಇದೇ ಅನಂತನಾಗ್ ರಾಮಕೃಷ್ಣ ಹೆಗಡೆ ಹೇಳಿದರೆ ನಾನು ಹಾಳು ಬಾವಿಗೂ ಬೀಳಬಲ್ಲೆ ಎಂದುಬಿಟ್ಟಿದ್ದರು. ಆ ಕೂಡಲೇ ಹೆಗಡೆ ಹಾಳು ಬಾವಿ ಮುಚ್ಚಿ ನಜೀರ್ ಸಾಹೇಬರು ಬೋರ್‌ವೆಲ್ ಮುಖಾಂತರ ಜನರಿಗೆ ನೀರುಕೊಡುವ ವ್ಯವಸ್ಥೆ ಮಾಡಿದ್ದು ಈಗ ಇತಿಹಾಸ. ಆದರೆ ಹೆಗಡೆಯವರು ಎಂತಹ ಕಿಲಾಡಿಯೆಂದರೆ ಅನಂತನಾಗ್‌ಗೆ ತಾನೇ ಸಹಾಯ ಮಾಡುವುದರ ಬದಲು ಪಟೇಲರಿಗೆ ಹೇಳಿ ಮಂತ್ರಿ ಮಾಡಿಸಿದರು. ಪಟೇಲರ ಯಣ್ಣೆಪಾರ್ಟಿಗೆ ಒಬ್ಬ ಗುಂಡಿನ ಗೆಳೆಯ ಸಿಕ್ಕಂತಾಯ್ತು. ನಗರಾಭಿವೃದ್ಧಿ ಸಚಿವನಾಗಿ ಈತ ಮಾಡಿದ ಸಾಧನೆ ಎಲ್ಲಿ ಹುಡುಕಿದರೂ ಸಿಗುವುದಿಲ್ಲ. ಕೆಲವು ದಿನ ಖಾತೆಯೇ ಇಲ್ಲದೆ ಮಂತ್ರಿಯಾಗಿದ್ದ ದಾಖಲೆ ಮಾತ್ರ ಈತನ ಹೆಸರಿನಲ್ಲಿ ಹಾಗೇಯೇ ಇದೆ. ಅನಂತನಾಗ್ ಎಂಬ ನಟನ ಬಾಯಿಂದ ಮೋದಿ ಹೊಗಳಿಕೆ ಮಾತು ಸುಮ್ಮಸುಮ್ಮನೆ ಬರುವುದಿಲ್ಲ. ಮೋದಿ ಸರಕಾರದಿಂದ ಅದ್ಯಾವ ಸ್ಥಾನಮಾನ ಪ್ರಶಸ್ತಿ ಸಿಗುತ್ತದೋ ನೋಡಬೇಕೆಂಬುದು ಆತನನ್ನು ಕಂಡರಾಗದವರ ಅಭಿಪ್ರಾಯವಾಗಿದೆಯಲ್ಲಾ, ಥೂತ್ತೇರಿ.

*******

ಈ ದೇಶದಲ್ಲಿ ಮೀಸಲಾತಿ ವಿರೋಧಿಗಳೆಲ್ಲಾ ಹಠಾತ್ತನೆ ಮೀಸಲಾತಿಗಾಗಿ ಹೋರಾಟ ಶುರು ಮಾಡಿಕೊಂಡಿದ್ದಾರಲ್ಲಾ. ಇದೊಂದು ರೀತಿ ಬಸವಣ್ಣನವರ ವಚನದಂತೆ ’ಏರಿಯೇ ಕೆರೆನೀರು ಕುಡಿದಂತೆ, ಬೇಲಿಯೇ ಹೊಲಮೇಯ್ದು ಬಿಸಾಡಿದಂತಲ್ಲಾ’. ಹಿಂದಣದನ್ನು ನೆನಪಿಸಿಕೊಳ್ಳುವುದಾದರೆ, ಮಂಡಲ ವರದಿ ವಿರುದ್ದ ತಿರುಗಿ ಬಿದ್ದ ಬಿಜೆಪಿಯವರು ಕಂಡವರ ಮಕ್ಕಳಿಗೆ ಬೆಂಕಿ ಹಚ್ಚಿದರು. ಉತ್ತರ ಭಾರತದಲ್ಲಿ ಒಕ್ಕಲಿಗರನ್ನು ಮೀಸಲಾತಿಯ ಮಂಡಲ ಕಮೀಷನ್ ಒಳಗೆ ಸೇರಿಸಿದ್ದನ್ನು ಅರಿಯದ ಒಕ್ಕಲಿಗರು ಇಲ್ಲಿ ಮಂಡಲದ ವಿರುದ್ಧ ಪ್ರತಿಭಟಿಸಿದರು. ಮಂಡಲದೊಳಗೆ ನೀವೂ ಇದ್ದೀರಿ ಎಂದು ಯಾರೂ ಹೇಳಲಿಲ್ಲ. ಏಕೆಂದರೆ ನಮ್ಮನ್ನಾಳುವ ಜನ ಮಂಡಲ ಕಮಿಷನ್ ವರದಿಯನ್ನೇ ಓದಿಕೊಂಡಿರಲಿಲ್ಲ. ಈಗ ಈ ಸಮುದಾಯದ ಪ್ರತಿನಿಧಿ ರಾಜಕಾರಣಿಗಳು ಮೀಸಲಾತಿ ಗಲಭೆ ಎಬ್ಬಿಸಲಿದ್ದಾರಲ್ಲಾ. ಹೊಸ ತಲೆಮಾರು ಇದಕ್ಕೆ ಹುಚ್ಚೆದ್ದು ಕುಣಿಯಬಹುದು. ಈಗ ಮೀಸಲು ಗಲಭೆ ಬೇಕಿರುವುದು ಮುಂದುವರಿದ ರಾಜಕಾರಣಿಗಳಿಗೆ. ಉದ್ಯೋಗಗಳೇ ಇಲ್ಲದಿದ್ದರೂ ಎಲ್ಲರೂ ಮೀಸಲು ಕೇಳುವಂತೆ ಮಾಡಿ ಮೀಸಲನ್ನೆ ರದ್ದು ಮಾಡುವ ಸಂಚಿಗಾಗಿ ಬಿಜೆಪಿ ಕಾಯುತ್ತಿದೆಯಂತಲ್ಲಾ, ಥೂತ್ತೇರಿ.

******

ಕರ್ನಾಟಕ ಈವರೆಗೆ ಕಂಡರಿಯದ ಧಾರಾಳತನದ ಮುಖ್ಯಮಂತ್ರಿಗಳು ಏನೂ ಕೇಳಿದರೂ ಕೊಡುವಂತಹ ಕೊಡುಗೈ ದಾನಿಗಳಾಗಿದ್ದಾರಂತಲ್ಲಾ. ಮೀಸಲಾತಿ ವಿಷಯ ಬಂದರೆ ಎಷ್ಟು ಪರಸೆಂಟ್ ಬೇಕು ಹೇಳಿ ಎಂದು ಅವರೇ ಕೇಳುತ್ತಾರೆ. ಅಡಿಕೆ ತೋಟಕ್ಕೆ ಎಲೆಚುಕ್ಕೆ ರೋಗಬಂದು ಯಕ್ಕುಟ್ಟಿ ಹೋಗಿದೆ ಸ್ವಾಮಿ ಎಂದರೆ ಅದರ ಕೊತೆಗೆ ಹವಮಾನ ವೈಪರೀತ್ಯದಿಂದ ಉಂಟಾದ ನಷ್ಟವನ್ನು ಸೇರಿಸಿ ಕೇಳಿ ಎನ್ನುತ್ತಾರೆ. ಇನ್ನ ಶರಾವತಿ ಡ್ಯಾಮಿನ ಹಿನ್ನೀರಿಗೆ ಸಿಕ್ಕಿ ದಿಕ್ಕಾಪಾಲಾದ ಜನರು ಭೂಮಿ ಹಕ್ಕಿನ ಪತ್ರ ಕೇಳಿದರೆ, ಡಿಸೆಂಬರ್ ಒಳಗೆ ಹಿನ್ನೀರಿನಲ್ಲೇ ಹಕ್ಕುಪತ್ರ ಕೊಡುತ್ತೇನೆ ಎನ್ನುತ್ತಾರೆ, ಜೊತೆಗೆ ನೂರಾರು ಕೋಟಿ ರೂಗಳ ಕಾಮಗಾರಿ ಕಲ್ಲುಗಳನ್ನು ಸತ್ತವರ ಗೋರಿಕಲ್ಲುಗಳಂತೆ ನೆಡುತ್ತ ಹೋಗುತ್ತಿದ್ದಾರೆ. ಆದರೆ ಕಬ್ಬಿನ ಬೆಂಬಲ ಬೆಲೆಗಾಗಿ ಹೋರಾಟ ಮಾಡುತ್ತಿರುವ ರೈತರ ಕಡೆ ತಿರುಗಿ ನೋಡಿಲ್ಲ. ಅಕಸ್ಮಾತ್ ಅಲ್ಲಿಗೆ ಹೋದದ್ದಾದರೆ ರೈತರು ಹಿಡಿದು ಉರುಳುಸೇವೆ ಮಾಡಿಸುತ್ತಾರೆಂಬ ಇಲ್ಲದ ಮಾಹಿತಿಯನ್ನ ತಾವೇ ಊಹಿಸಿಕೊಂಡು ಸದ್ಯಕ್ಕೆ ಪರಿಹಾರ ಕಾಣದ ಅಡಿಕೆ ಚುಕ್ಕೆರೋಗ ಇರುವ ಜಾಗ ಹುಡುಕುತ್ತ ಹೊರಟರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...