Homeಕರ್ನಾಟಕಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

- Advertisement -
- Advertisement -

ಡಿಸೆಂಬರ್ 2ರ ಶುಕ್ರವಾರದಂದು ಕೆಂಗೇರಿ ಮತ್ತು ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಥಳೀಯರು ಚಿರತೆಗಳನ್ನು ಗುರುತಿಸಿದ ನಂತರ ಮುಂಜಾಗೃತೆ ಕ್ರಮಗಳನ್ನು ಸೂಚಿಸಲಾಗಿದೆ.

ಇತ್ತೀಚೆಗಷ್ಟೇ ಕೆಂಗೇರಿ, ಕುಂಬಳಗೋಡು, ದೇವನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಾಲ್ಕು ಚಿರತೆಗಳು ಕಾಣಿಸಿಕೊಂಡಿದ್ದವು. ಬೆಂಗಳೂರು ಹೊರವಲಯದ ಕನಕಪುರ ಬಳಿಯ ಕೋಡಿಪಾಳ್ಯದಲ್ಲಿ ಚಿರತೆ ದಾಳಿಗೆ ತುತ್ತಾದ ಜಿಂಕೆಯ ಕಳೇಬರವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವನಹಳ್ಳಿಯ ಚಿಕ್ಕಜಾಲದ ಬಳಿ ಐಟಿಸಿ ಕಂಪನಿ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕರ್ನಾಟಕ ಅರಣ್ಯ ಇಲಾಖೆಯ ಐವರು ಅಧಿಕಾರಿಗಳ ತಂಡವು ಈ ಪ್ರದೇಶದಲ್ಲಿ ಹುಡುಕಾಟ ನಡೆಸಿದೆ. ಆದರೆ ಚಿರತೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಬೆಂಗಳೂರಿಗೆ ಸಮೀಪದಲ್ಲಿರುವ ತುರಹಳ್ಳಿ ಮೀಸಲು ಅರಣ್ಯದಿಂದ ಚಿರತೆಗಳು ಜನವಸತಿ ಪ್ರದೇಶಗಳಿಗೆ ಕಾಲಿಡುತ್ತಿರುವ ಆತಂಕ ಎದುರಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಈ ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಿಸಿದ್ದು, ಬೆಳಗಿನ ವಾಕಿಂಗ್ ಮಾಡುವವರು ಮತ್ತು ಸ್ಥಳೀಯ ನಿವಾಸಿಗಳಲ್ಲಿ ಭಯ ಆವರಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ತರಬನಹಳ್ಳಿಯಲ್ಲಿರುವ ಖಾಸಗಿ ಕಾರ್ಖಾನೆಯೊಂದರ ಆವರಣದಲ್ಲಿ ಬೀಡು ಬಿಟ್ಟಿರುವ ಚಿರತೆಗಳನ್ನು ಹಿಡಿಯಲು ಬೋನು ಇರಿಸಲಾಗಿದೆ.

ಕಳೆದೆರಡು ದಿನಗಳಿಂದ ಹಲವಾರು ಬಾರಿ ಚಿರತೆ ಕಾಣಿಸಿಕೊಂಡಿದೆ. ಆದಾಗ್ಯೂ, ಈ ಪ್ರದೇಶದಲ್ಲಿ ಚಿರತೆಗಳು ನೈಸರ್ಗಿಕವಾಗಿ ಕಂಡುಬರುತ್ತವೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ ಎಂದು ವನ್ಯಜೀವಿ ತಜ್ಞರು ಹೇಳುತ್ತಿದ್ದಾರೆ.

ರಾತ್ರಿ ವೇಳೆ ಒಂಟಿಯಾಗಿ ಹೊರಗೆ ಹೋಗದಂತೆ ಅಧಿಕಾರಿಗಳು ಮತ್ತು ವನ್ಯಜೀವಿ ತಜ್ಞರು ಜನರಿಗೆ ಸಲಹೆ ನೀಡಿದ್ದಾರೆ. ಮೀಸಲು ಅರಣ್ಯದಿಂದ ದೂರವಿರಲು, ಮೊಬೈಲ್‌ನಲ್ಲಿ ಹಾಡುಗಳನ್ನು ಪ್ಲೇ ಮಾಡದಿರಲು ಮತ್ತು ರಾತ್ರಿ ವೇಳೆ ಪ್ರಯಾಣಿಸುವಾಗ ಜೋರಾಗಿ ಮಾತನಾಡಿಕೊಂಡು ತೆರಳಲು ಸೂಚಿಸಲಾಗಿದೆ.

ಚಿರತೆ ದಾಳಿಗೆ ಯುವತಿ ಬಲಿ

ಚಿರತೆ ದಾಳಿಗೆ ಒಳಗಾಗಿದ್ದ ಮೈಸೂರು ಜಿಲ್ಲೆಯ ಟಿ.ನರಸೀಪುರ ಸಮೀಪದ ಸಾಕೆಬ್ಬೆಹುಂಡಿ ನಿವಾಸಿ, 22 ವರ್ಷದ ಮೇಘನಾ ಕೊನೆಯುಸಿರೆಳೆದಿದ್ದಾರೆ. ಗುರುವಾರ ತನ್ನ ನಿವಾಸದ ಬಳಿ ವಿಶ್ರಾಂತಿ ಪಡೆಯಲು ತೆರಳಿದ್ದ ಮೇಘನಾ ಮೇಲೆ ಚಿರತೆ ದಾಳಿ ನಡೆಸಿತ್ತು. ಮುಖ ಮತ್ತು ಕುತ್ತಿಗೆ ಭಾಗಕ್ಕೆ ಗಾಯ ಮಾಡಿ ಪರಾರಿಯಾಗಿತ್ತು. ಈಗ ಯುವತಿ ಸಾವಿಗೀಡಾಗಿರುವ ಘಟನೆಯಿಂದ ಗ್ರಾಮದ ಜನತೆ ಆತಂಕಗೊಂಡಿದ್ದಾರೆ.

ಗ್ರಾಮದ ನಿವಾಸಿ ರಮೇಶ್ ನಾಯಕ ಅವರು ಊರಿನ ಹೊರಗೆ ಅಂದರೆ, ಗ್ರಾಮದೇವತೆ ದೇವಸ್ಥಾನದ ಬಳಿ ಮನೆ ಮಾಡಿಕೊಂಡಿದ್ದರು. ಗುರುವಾರ ಸಂಜೆ 6.30ರ ವೇಳೆ ಗ್ರಾಮಕ್ಕೆ ಬಂದಿದ್ದ ಯುವತಿ ಮೇಲೆ ಚಿರತೆ ದಾಳಿ ಮಾಡಿತ್ತು. ಮೇಘನಾರನ್ನು ತಿ.ನರಸೀಪುರ ಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಶಾಸಕ ಎಂ.ಅಶ್ವಿನ್ ಕುಮಾರ್ ಆಸ್ಪತ್ರೆಗೆ ಆಗಮಿಸಿ ಪೋಷಕರಿಗ ಸಾಂತ್ವನ ಹೇಳಿದ್ದಾರೆ. ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...