Homeಕರ್ನಾಟಕಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

ಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

- Advertisement -
- Advertisement -

ಕೋಲಾರ ಜಿಲ್ಲೆಯ ಪೆತ್ತಾಂಡ್ಲಹಳ್ಳಿಯಲ್ಲಿ ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕ ಉದಯ್ ಕಿರಣ್ ಮೇಲಿನ ಸವರ್ಣೀಯರ ಹಲ್ಲೆ ಮತ್ತು ಆತ್ಮಹತ್ಯೆಗೆ ವ್ಯಾಪಕ ಪ್ರತಿರೋಧ ವ್ಯಕ್ತವಾಗಿದೆ. ಇಂದು ಗ್ರಾಮಕ್ಕೆ ಭೇಟಿ ನೀಡಿ ದಲಿತ ಮತ್ತು ಪ್ರಗತಿಪರ ಸಂಘಟನೆಯ ಮುಖಂಡರು ಸಭೆ ಸೇರಿ ಪೆತ್ತಾಂಡ್ಲಹಳ್ಳಿ ಬೈಕ್ ಜಾಥಾ ನಡೆಸಲು ತೀರ್ಮಾನಿಸಿದ್ದಾರೆ.

ಯಾವ ಮರಕ್ಕೆ ದಲಿತ ಉದಯ್ ಕಿರಣ್ ಕಟ್ಟಿ ಹಲ್ಲೆ ನಡೆಸಲಾಯಿತೊ ಅಲ್ಲಿಯೇ ಜಮಾಯಿಸಿದ ಮುಖಂಡರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. “ಇದು ಆತ್ಮಹತ್ಯೆ ಎನ್ನುವುದಕ್ಕಿಂತ ಕೊಲೆ ಎಂದು ಕರೆಯಬೇಕಾಗಿದೆ. ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ. ಘಟನೆ ನಡೆದು ಎರಡು ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಕೋಲಾರ ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು ಪ್ರಕರಣವನ್ನು ಖಂಡಿಸಿಲ್ಲ. ಮೂರು ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕರು, ಜಿಲ್ಲೆಯ ದಲಿತ ಸಂಸದರು ಬಾಯಿ ಮುಚ್ಚಿ ಕುಳಿತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದಕ್ಕೂ ಮೊದಲು ಸಂತ್ರಸ್ತ ಯುವಕ ವಾಸವಿದ್ದ ಬೇವಹಳ್ಳಿಗೆ ಭೇಟಿ ನೀಡಿದ ಸಂಘಟನೆಗಳ ನಿಯೋಗವು ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿ ನ್ಯಾಯ ಕೊಡಿಸುವ ಭರವಸೆ ನೀಡಿದರು.

ಪೊಲೀಸರು 24 ಗಂಟೆಗಳ ಒಳಗಾಗಿ ಆರೋಪಿಗಳನ್ನು ಬಂಧಿಸಬೇಕು. ಈ ರೀತಿಯ ಘಟನೆಗಳು ನಡೆಯದಂತೆ ತಡೆಯಬೇಕು. ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ಪರಿಹಾರ, ಮನೆ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ಮುಳಬಾಗಿಲಿನಿಂದ ಪೆತ್ತಾಂಡ್ಲಹಳ್ಳಿಗೆ ಬೈಕ್ ಜಾಥ ನಡೆಸಲಾಗುವುದು. ಆರೋಪಿಗಲ ಮನೆ ಎದುರೆ ಸ್ವಾಭಿಮಾನಿ ಸಮಾವೇಶ ನಡೆಸಲಾಗುವುದು. ಪೆತ್ತಾಂಡ್ಲಹಳ್ಳಿ ಜಾಥಾದ ದಿನಾಂಕವನ್ನು ಡಿಸೆಂಬರ್ 6 ರ ಅಂಬೇಡ್ಕರ್ ಪರಿನಿರ್ವಾಣ ದಿನದಂದು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

ಕಂಬಾಲಪಲ್ಲಿ ಘಟನೆಯಿಂದ ಹಿಡಿದು ಉಳ್ಳೇರಹಳ್ಳಿ ಜಾತಿದೌರ್ಜನ್ಯದವರೆಗೂ, ಇಂದಿನ ಪೆತ್ತಾಂಡ್ಲಹಳ್ಳಿ ಕೊಲೆವರೆಗೂ ದಲಿತರ ಮೇಲಿನ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿವೆ. ಉತ್ತರ ಪ್ರದೇಶದಲ್ಲಿ ವರದಿಯಾಗುವ ಭೀಕರ ಘಟನೆಗಳು ನಮ್ಮಲ್ಲಿಯೂ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿದೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಸಭೆಯಲ್ಲಿ ಸಿಪಿಎಂ ಜಿಲ್ಲಾಧ್ಯಕ್ಷರಾದ ಗಾಂಧಿನಗರ ನಾರಾಯಣಸ್ವಾಮಿ, ಡಿಎಸ್‌ಎಸ್‌ ಸಂಯೋಜಕ ಬಣದ ಮೆಕಾನಿಕ್ ಶ್ರೀನಿವಾಸ್, ಬಹುಜನ ಚಳವಳಿಯ ಸಂಗಸಂದ್ರ ವಿಜಯ್ ಕುಮಾರ್, ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ, ಸುರೇಶ್ ಬಾಬು, ಶ್ರೀನಿವಾಸ್, ಮೃತ ಉದಯ್ ಕಿರಣ್ ಮಾವ ನಾಗರಾಜು ಭಾಗವಹಿಸಿದ್ದರು.

ಇನ್ನೊಂದೆಡೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬೇವಹಳ್ಳಿಯ ಸಂತ್ರಸ್ತ ಯುವಕನ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. 50 ಸಾವಿರ ರೂಗಳ ಪರಿಹಾರದ ಚೆಕ್ ವಿತರಿಸಲಾಗಿದೆ.

ಇದನ್ನೂ ಓದಿ: ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...