Homeಕರ್ನಾಟಕಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

ಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

- Advertisement -
- Advertisement -

ಕೋಲಾರ ಜಿಲ್ಲೆಯ ಪೆತ್ತಾಂಡ್ಲಹಳ್ಳಿಯಲ್ಲಿ ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕ ಉದಯ್ ಕಿರಣ್ ಮೇಲಿನ ಸವರ್ಣೀಯರ ಹಲ್ಲೆ ಮತ್ತು ಆತ್ಮಹತ್ಯೆಗೆ ವ್ಯಾಪಕ ಪ್ರತಿರೋಧ ವ್ಯಕ್ತವಾಗಿದೆ. ಇಂದು ಗ್ರಾಮಕ್ಕೆ ಭೇಟಿ ನೀಡಿ ದಲಿತ ಮತ್ತು ಪ್ರಗತಿಪರ ಸಂಘಟನೆಯ ಮುಖಂಡರು ಸಭೆ ಸೇರಿ ಪೆತ್ತಾಂಡ್ಲಹಳ್ಳಿ ಬೈಕ್ ಜಾಥಾ ನಡೆಸಲು ತೀರ್ಮಾನಿಸಿದ್ದಾರೆ.

ಯಾವ ಮರಕ್ಕೆ ದಲಿತ ಉದಯ್ ಕಿರಣ್ ಕಟ್ಟಿ ಹಲ್ಲೆ ನಡೆಸಲಾಯಿತೊ ಅಲ್ಲಿಯೇ ಜಮಾಯಿಸಿದ ಮುಖಂಡರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. “ಇದು ಆತ್ಮಹತ್ಯೆ ಎನ್ನುವುದಕ್ಕಿಂತ ಕೊಲೆ ಎಂದು ಕರೆಯಬೇಕಾಗಿದೆ. ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ. ಘಟನೆ ನಡೆದು ಎರಡು ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಕೋಲಾರ ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು ಪ್ರಕರಣವನ್ನು ಖಂಡಿಸಿಲ್ಲ. ಮೂರು ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕರು, ಜಿಲ್ಲೆಯ ದಲಿತ ಸಂಸದರು ಬಾಯಿ ಮುಚ್ಚಿ ಕುಳಿತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದಕ್ಕೂ ಮೊದಲು ಸಂತ್ರಸ್ತ ಯುವಕ ವಾಸವಿದ್ದ ಬೇವಹಳ್ಳಿಗೆ ಭೇಟಿ ನೀಡಿದ ಸಂಘಟನೆಗಳ ನಿಯೋಗವು ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿ ನ್ಯಾಯ ಕೊಡಿಸುವ ಭರವಸೆ ನೀಡಿದರು.

ಪೊಲೀಸರು 24 ಗಂಟೆಗಳ ಒಳಗಾಗಿ ಆರೋಪಿಗಳನ್ನು ಬಂಧಿಸಬೇಕು. ಈ ರೀತಿಯ ಘಟನೆಗಳು ನಡೆಯದಂತೆ ತಡೆಯಬೇಕು. ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ಪರಿಹಾರ, ಮನೆ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ಮುಳಬಾಗಿಲಿನಿಂದ ಪೆತ್ತಾಂಡ್ಲಹಳ್ಳಿಗೆ ಬೈಕ್ ಜಾಥ ನಡೆಸಲಾಗುವುದು. ಆರೋಪಿಗಲ ಮನೆ ಎದುರೆ ಸ್ವಾಭಿಮಾನಿ ಸಮಾವೇಶ ನಡೆಸಲಾಗುವುದು. ಪೆತ್ತಾಂಡ್ಲಹಳ್ಳಿ ಜಾಥಾದ ದಿನಾಂಕವನ್ನು ಡಿಸೆಂಬರ್ 6 ರ ಅಂಬೇಡ್ಕರ್ ಪರಿನಿರ್ವಾಣ ದಿನದಂದು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

ಕಂಬಾಲಪಲ್ಲಿ ಘಟನೆಯಿಂದ ಹಿಡಿದು ಉಳ್ಳೇರಹಳ್ಳಿ ಜಾತಿದೌರ್ಜನ್ಯದವರೆಗೂ, ಇಂದಿನ ಪೆತ್ತಾಂಡ್ಲಹಳ್ಳಿ ಕೊಲೆವರೆಗೂ ದಲಿತರ ಮೇಲಿನ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿವೆ. ಉತ್ತರ ಪ್ರದೇಶದಲ್ಲಿ ವರದಿಯಾಗುವ ಭೀಕರ ಘಟನೆಗಳು ನಮ್ಮಲ್ಲಿಯೂ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿದೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಸಭೆಯಲ್ಲಿ ಸಿಪಿಎಂ ಜಿಲ್ಲಾಧ್ಯಕ್ಷರಾದ ಗಾಂಧಿನಗರ ನಾರಾಯಣಸ್ವಾಮಿ, ಡಿಎಸ್‌ಎಸ್‌ ಸಂಯೋಜಕ ಬಣದ ಮೆಕಾನಿಕ್ ಶ್ರೀನಿವಾಸ್, ಬಹುಜನ ಚಳವಳಿಯ ಸಂಗಸಂದ್ರ ವಿಜಯ್ ಕುಮಾರ್, ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ, ಸುರೇಶ್ ಬಾಬು, ಶ್ರೀನಿವಾಸ್, ಮೃತ ಉದಯ್ ಕಿರಣ್ ಮಾವ ನಾಗರಾಜು ಭಾಗವಹಿಸಿದ್ದರು.

ಇನ್ನೊಂದೆಡೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬೇವಹಳ್ಳಿಯ ಸಂತ್ರಸ್ತ ಯುವಕನ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. 50 ಸಾವಿರ ರೂಗಳ ಪರಿಹಾರದ ಚೆಕ್ ವಿತರಿಸಲಾಗಿದೆ.

ಇದನ್ನೂ ಓದಿ: ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...