Homeಕರ್ನಾಟಕಬೆಂಗಳೂರು: ಡ್ರಾಪ್‌ ಮಾಡುವುದಾಗಿ ಕರೆದೋಯ್ದು ಮಹಿಳೆ ಮೇಲೆ ಅತ್ಯಾಚಾರ; ಬಸ್ ಚಾಲಕ ಅರೆಸ್ಟ್

ಬೆಂಗಳೂರು: ಡ್ರಾಪ್‌ ಮಾಡುವುದಾಗಿ ಕರೆದೋಯ್ದು ಮಹಿಳೆ ಮೇಲೆ ಅತ್ಯಾಚಾರ; ಬಸ್ ಚಾಲಕ ಅರೆಸ್ಟ್

- Advertisement -
- Advertisement -

ಪಶ್ಚಿಮ ಬೆಂಗಳೂರಿನ ನಾಯಂಡಹಳ್ಳಿ ಬಳಿ ಖಾಸಗಿ ಶಾಲಾ ಬಸ್ಸಿನ ಚಾಲಕ ತನ್ನ ವಾಹನದೊಳಗೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಂಗಳವಾರ ನಡೆದಿದೆ.

ಆರೋಪಿ, ನಾಯಂಡಹಳ್ಳಿ ನಿವಾಸಿ ಶಿವಕುಮಾರ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಾಗರಭಾವಿಯಲ್ಲಿ ವಾಸವಾಗಿರುವ ಅತ್ಯಾಚಾರ ಸಂತ್ರಸ್ತೆ, ಖಾಸಗಿ ಶಾಲೆಯೊಂದರಲ್ಲಿ ಆಯಾ (ಪ್ಯೂನ್) ಆಗಿ ಕೆಲಸ ಮಾಡುತ್ತಿದ್ದಾರೆ.

ಕೆಲಸ ಮುಗಿಸಿ ನಾಯಂಡಹಳ್ಳಿ ಜಂಕ್ಷನ್ ಬಳಿ ಬಸ್‌ಗಾಗಿ ಮಹಿಳೆ ಕಾಯುತ್ತಿದ್ದಾಗ ಶಿವಕುಮಾರ್ ಬಸ್‌ ಚಲಾಯಿಸಿಕೊಂಡು ಆ ಮಹಿಳೆ ಇರುವತ್ತ ಬಂದಿದ್ದನು. ಮಹಿಳೆ ಡ್ರಾಪ್ ಗಾಗಿ ಬಸ್ಸಿನತ್ತ ಕೈಬೀಸಿದ್ದರು. ಶಿವಕುಮಾರ್ ಬಸ್ ನಿಲ್ಲಿಸಿ, “ನಾನೂ ನಾಗರಭಾವಿ ಕಡೆಗೆ ಹೋಗುತ್ತಿದ್ದೇನೆ” ಎಂದು ಹೇಳಿ ಮಹಿಳೆಯನ್ನು ಬಸ್‌ನಲ್ಲಿ ಕೂರಿಸಿಕೊಂಡಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಜೆ 5.30ರ ಸುಮಾರಿಗೆ ಮಹಿಳೆ ವಾಹನವನ್ನು ಹತ್ತಿದ ಕೂಡಲೇ ಶಿವಕುಮಾರ್ ನಾಯಂಡಹಳ್ಳಿ ಜಂಕ್ಷನ್‌ನಿಂದ ಮೂರು ಕಿ.ಮೀ ಆಸುಪಾಸಿನಲ್ಲಿರುವ ಕೈಲಾಸಗಿರಿಯ ಮಲೆ ಮಹದೇಶ್ವರ ದೇವಸ್ಥಾನದ ಕಡೆಗೆ ಹೋಗಿ ಬಸ್ಸನ್ನು ರಸ್ತೆಬದಿಯಲ್ಲಿ ನಿಲ್ಲಿಸಿದ್ದನು. ಮಹಿಳೆಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಬಸ್ಸಿನೊಳಗೆ ಅತ್ಯಾಚಾರ ಎಸಗಿದ್ದಾನೆ. “ಪೊಲೀಸರನ್ನು ಸಂಪರ್ಕಿಸಬೇಡ ಅಥವಾ ಘಟನೆಯ ಬಗ್ಗೆ ಯಾರಿಗೂ ಹೇಳಬೇಡ” ಎಂದು ಬೆದರಿಸಿದ ನಂತರ ಆತ ಸಂಜೆ 7 ಗಂಟೆ ಸುಮಾರಿಗೆ ಮಹಿಳೆಯನ್ನು ಡ್ರಾಪ್ ಮಾಡಿದ್ದಾನೆ.

ಬಸ್‌ನಿಂದ ಇಳಿದ ನಂತರ ಸಂತ್ರಸ್ತ ಮಹಿಳೆಯು ನೋಂದಣಿ ಸಂಖ್ಯೆಯೊಂದಿಗೆ ವಾಹನದ ಚಿತ್ರವನ್ನು ಕ್ಲಿಕ್ ಮಾಡಿಕೊಂಡರು. ಅದನ್ನು ತನ್ನ 20 ವರ್ಷದ ಮಗನಿಗೆ ತಲುಪಿಸಿದರು. ಚಾಲಕ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಗನಿಗೆ ತಿಳಿಸಿದರು.

ನಾಯಂಡಹಳ್ಳಿಯಲ್ಲಿ ವಾಹನ ಮತ್ತು ಚಾಲಕನನ್ನು ಕೆಲವು ಬಾರಿ ನೋಡಿರುವುದಾಗಿ ತಾಯಿ ತಿಳಿಸಿದ್ದರಿಂದ, ಸಂತ್ರಸ್ತೆಯ ಮಗ ತನ್ನ ಸ್ನೇಹಿತರ ಜೊತೆಗೂಡಿ ಬಸ್ ಹುಡುಕಲು ಹೊರಟನು.

ಇದನ್ನೂ ಓದಿರಿ: ಬೆಂಗಳೂರು ಸುತ್ತಮುತ್ತ ಚಿರತೆಗಳ ಪ್ರತ್ಯಕ್ಷ; ಮುಂಜಾಗ್ರತೆ ವಹಿಸಲು ಸೂಚನೆ

ರಾತ್ರಿ 8.30ರ ಸುಮಾರಿಗೆ ನಾಯಂಡಹಳ್ಳಿಯಲ್ಲಿ ಬಸ್ ಪತ್ತೆ ಹಚ್ಚಲಾಯಿತು. ಆ ವೇಳೆಗೆ ಚಾಲಕ ಕಂಠಪೂರ್ತಿ ಕುಡಿದಿದ್ದ. ಸಂತ್ರಸ್ತೆಯ ಮಗ ಮತ್ತು ಆತನ ಸ್ನೇಹಿತರು ಚಾಲಕನನ್ನು ಬಸ್‌ನಿಂದ ಹೊರಕ್ಕೆ ಎಳೆದುಕೊಂಡು ಬಂದು ಜಗಳವಾಡಿದರು. ಇವರಿಬ್ಬರ ಜಗಳ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಚಾಲಕ ಏನು ಮಾಡಿದ್ದಾನೆಂದು ಜನರಿಗೆ ತಿಳಿದಿರಲಿಲ್ಲ. ಅತ್ಯಾಚಾರ ನಡೆದಿರುವ ಕುರಿತು ಚಂದ್ರಾ ಲೇಔಟ್ ಪೊಲೀಸರಿಗೆ ಮಾಹಿತಿ ನೀಡಲಾಯಿತು.

“ನಾವು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದೇವೆ. ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ತಂಡವು ಬಸ್‌ನಿಂದ ಮತ್ತು ಸಂತ್ರಸ್ತೆಯಿಂದ ಸಾಕ್ಷ್ಯವನ್ನು ಸಂಗ್ರಹಿಸಿದೆ. ಅತ್ಯಾಚಾರ, ಕೊಲೆ ಯತ್ನ ಇತರ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದೇವೆ” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಲಕ್ಷ್ಮಣ ಬಿ ನಿಂಬರಗಿ ತಿಳಿಸಿದ್ದಾರೆ.

“ಶಿವಕುಮಾರ್ ಪ್ರತಿನಿತ್ಯ ಇದೇ ರಸ್ತೆಯಲ್ಲಿ ಹೋಗುತ್ತಿದ್ದರಿಂದ ಕೆಲವು ಬಾರಿ ಆತನನ್ನು ನೋಡಿದ್ದೆ, ಆದರೆ ನಾವು ಪರಿಚಯಸ್ಥರಲ್ಲ” ಎಂದು ಮಹಿಳೆ ಪೊಲೀಸರಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...